• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

JMI ನಲ್ಲಿ ವಿದ್ಯಾರ್ಥಿಗಳ ಹಕ್ಕು ಕಿತ್ತುಕೊಂಡ ವಿವಿ

by
February 2, 2020
in ದೇಶ
0
JMI ನಲ್ಲಿ ವಿದ್ಯಾರ್ಥಿಗಳ ಹಕ್ಕು ಕಿತ್ತುಕೊಂಡ ವಿವಿ
Share on WhatsAppShare on FacebookShare on Telegram

ಬಿಜೆಪಿ ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಸಿಎಎ ಮತ್ತು ಎನ್ಆರ್ ಸಿ ವಿರುದ್ಧ ಪ್ರತಿಭಟನೆ ನಡೆಸಿದವರ ಹಕ್ಕನ್ನು ಕಿತ್ತುಕೊಂಡಾಯ್ತು. ದೇಶದ ಪ್ರತಿಷ್ಠಿತ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ರಾಜಕೀಯ ಪ್ರವೇಶ ಮಾಡುವಂತೆ ಮಾಡಿ ಅಲ್ಲಿ ಅಲ್ಲೋಲಕಲ್ಲೋಲದ ವಾತಾವರಣವನ್ನೇ ನಿರ್ಮಾಣ ಮಾಡಿ, ವಿದ್ಯಾರ್ಥಿಗಳು, ಬೋಧಕ -ಬೋಧಕೇತರ ಸಿಬ್ಬಂದಿ ಸೇರಿದಂತೆ ಪ್ರಾಣವನ್ನು ಕೈಲಿಡಿದು ವಿವಿಯೊಳಗೆ ಪ್ರವೇಶ ಮಾಡುವಂತಹ ವಾತಾವರಣ ನಿರ್ಮಾಣ ಮಾಡಿದೆ.

ADVERTISEMENT

ಇನ್ನು ಇತ್ತೀಚೆಗೆ ಮತ್ತೊಂದು ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ (ಜೆಎಂಐ) ಆವರಣದೊಳಗೆ ಪೊಲೀಸರನ್ನು ನುಗ್ಗಿಸಿ ದಾಂಧಲೆ ಮಾಡಿದ್ದಲ್ಲದೇ, ಓದುತ್ತಾ ಕುಳಿತ್ತಿದ್ದ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ದೌರ್ಜನ್ಯ ನಡೆಯುವಂತೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ನೋಡಿಕೊಂಡಿತ್ತು.

ಕಳೆದ ಹಲವು ದಿನಗಳಿಂದ ಇಲ್ಲಿನ ವಿದ್ಯಾರ್ಥಿಗಳು ಪೊಲೀಸರು ತಮ್ಮ ಮೇಲೆ ನಡೆಸಿದ ದೌರ್ಜನ್ಯ ಮತ್ತು ಸಿಎಎ-ಎನ್ಆರ್ ಸಿ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಇಲ್ಲಿಯೂ ತನ್ನ ಅಧಿಕಾರವನ್ನು ಬಳಸುತ್ತಿರುವ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಪ್ರತಿಭಟನೆಯ ಹಕ್ಕನ್ನು ಕಿತ್ತುಕೊಳ್ಳಲು ಹೊರಟಿದೆ.

ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಮೂಲಕ ಸರ್ಕಾರ ವಿವಿ ಆವರಣದೊಳಗೆ ಯಾವುದೇ ಪ್ರತಿಭಟನೆ, ವಿದ್ಯಾರ್ಥಿ ಸಮುದಾಯದ ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ. ಒಂದು ವೇಳೆ ಹಾಗೇನಾದರೂ ಸಭೆ ಅಥವಾ ಪ್ರತಿಭಟನೆಯನ್ನು ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಈ ಬಗ್ಗೆ ಟ್ವೀಟ್ ಮಾಡಿ ಸುತ್ತೋಲೆ ಹೊರಡಿಸಿರುವ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯವು, “ಯಾವುದೇ ರೀತಿಯ ಪ್ರತಿಭಟನೆ, ಹೋರಾಟ, ಸಭೆ, ಭಾಷಣ ಅಥವಾ ವಿದ್ಯಾರ್ಥಿಗಳು ಗುಂಪು ಕಟ್ಟಿಕೊಂಡು ಚರ್ಚೆ ನಡೆಸುವುದನ್ನು ನಿಷೇಧಿಸಲಾಗಿದೆ. ಇಂತಹ ಯಾವುದೇ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಾರದು. ಒಂದು ವೇಳೆ ಪಾಲ್ಗೊಂಡಿದ್ದೇ ಆದಲ್ಲಿ ನಿಮ್ಮ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಎಚ್ಚರಿಕೆಯನ್ನು ನೀಡಿದೆ.

ಈ ಸುತ್ತೋಲೆಯನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಹೊರಡಿಸಿದ್ದು, ಇದಕ್ಕೆ ವಿದ್ಯಾರ್ಥಿ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ವಿಶ್ವವಿದ್ಯಾಲಯದ ದೈನಂದಿನ ಚಟುವಟಿಕೆಗಳು, ಶೈಕ್ಷಣಿಕ ಚಟುವಟಿಕೆಗಳು ಸೇರಿದಂತೆ ಇನ್ನಿತರೆ ಚಟುವಟಿಕೆಗಳಿಗೆ ತೊಂದರೆಯಾಗುವ ಕಾರಣದಿಂದ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಅಥವಾ ವಿವಿಗೆ ಸಂಬಂಧಿಸಿದ ಯಾವುದೇ ಸ್ಥಳದಲ್ಲಿ ವಿದ್ಯಾರ್ಥಿಗಳು ಗುಂಪು ಕಟ್ಟಿಕೊಂಡು ನಿಲ್ಲುವುದು, ಸಭೆಗಳನ್ನು ನಡೆಸುವುದು, ಭಾಷಣ ಮಾಡುವುದು, ಪ್ರತಿಭಟನೆ ಮಾಡುವುದು ಸೇರಿದಂತೆ ಇನ್ನಿತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಒಂದು ವೇಳೆ ಈ ರೀತಿಯ ಚಟುವಟಿಕೆಗಳನ್ನು ನಡೆಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಪಠ್ಯ ಚಟುವಟಿಕೆಗಳು ಸುಗಮವಾಗಿ ನಡೆಯುವ ರೀತಿಯಲ್ಲಿ ವಿದ್ಯಾರ್ಥಿ ಸಮುದಾಯ ಸಹಕರಿಸಬೇಕು. ಸದ್ಯದಲ್ಲೆ ಪರೀಕ್ಷೆಗಳು ನಡೆಯುತ್ತಿದ್ದು, ಅವುಗಳಿಗೆ ಪೂರಕವಾಗಿ ವಿದ್ಯಾರ್ಥಿಗಳಿಂದ ನೆರವು ಇರಬೇಕು ಮತ್ತು ತರಗತಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಬೆಂಬಲ ನೀಡಬೇಕೆಂದು ಅವರು ಕೋರಿದ್ದಾರೆ.

ಪರೀಕ್ಷೆಗಳು ಮತ್ತು ತರಗತಿಗಳು ಸುಗಮವಾಗಿ ನಡೆಯುವಂತೆ ವಿದ್ಯಾರ್ಥಿಗಳು ಸಹಕರಿಸುತ್ತಾರೆ ಎಂಬ ನಿರೀಕ್ಷೆಯನ್ನು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಹೊಂದಿದೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಯಾವುದೇ ದುಷ್ಟಶಕ್ತಿಗಳು ಹರಡುವ ವದಂತಿಗಳಿಗೆ ಕಿವಿಗೊಡಬಾರದು. ಅಲ್ಲದೇ, ವಿಶ್ವವಿದ್ಯಾಲಯದ ಕ್ಯಾಂಪಸ್ ನೊಳಗೆ ಹೊರಗಿವರು/ಅನಧಿಕೃತ ವ್ಯಕ್ತಿಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.

ಒಂದು ವೇಳೆ ಇಂತಹ ಯಾವುದೇ ಚಟುವಟಿಕೆಗಳಲ್ಲಿ ತೊಡಗಿದರೆ ಅಥವಾ ಇಂತಹ ಚಟುವಟಿಕೆಗಳಿಗೆ ಬೆಂಬಲ ನೀಡುವುದು ಕಂಡುಬಂದರೆ ಅಂತಹವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಿಜಿಸ್ಟ್ರಾರ್ ತಿಳಿಸಿದ್ದಾರೆ.

ಆದರೆ, ಈ ಹಿಂದೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಪ್ರಚೋದಿಸಿ ಹಿಂಸಾಚಾರ ಆಗುವಂತೆ ಪೊಲೀಸರು ಮಾಡಿದ್ದರು. ಇಷ್ಟೇ ಅಲ್ಲದೇ, ಯಾವುದೇ ಒಂದು ಶಿಕ್ಷಣ ಸಂಸ್ಥೆಯ ಆವರಣದೊಳಗೆ ಪ್ರವೇಶಿಸುವ ಮುನ್ನ ಆ ಸಂಸ್ಥೆಯ ಅನುಮತಿಯನ್ನು ಪಡೆಯಬೇಕೆಂಬ ಕನಿಷ್ಠ ಪ್ರಜ್ಞೆಯೂ ಇಲ್ಲದೇ ಜಾಮಿಯಾ ವಿವಿ ಆವರಣದೊಳಗೆ ನುಗ್ಗಿ ದಾಂಧಲೆ ಮಾಡಿದ್ದರು. ಹಾಗಾದರೆ, ಯಾವುದೇ ಪೂರ್ವಾನುಮತಿ ಪಡೆಯದೇ ವಿವಿಯೊಳಗೆ ನುಗ್ಗಿದ್ದ ಪೊಲೀಸರು ಸಹ ಅನಧಿಕೃತ ವ್ಯಕ್ತಗಳೇ ಆಗುತ್ತಾರೆ. ಅವರ ವಿರುದ್ಧ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಧ್ವನಿ ಎತ್ತಲಿಲ್ಲ ಏಕೆ?

ತಮ್ಮ ಪಾಡಿಗೆ ತಾವು ಗ್ರಂಥಾಲಯದಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳನ್ನು ಹೊರ ಎಳೆದು ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದನ್ನು ಖಂಡಿಸದಿರುವುದಕ್ಕೆ ಏನು ಕಾರಣ? ಪೊಲೀಸರು ದೌರ್ಜನ್ಯ ನಡೆಸಿದ್ದನ್ನು ಮೌನವಾಗಿ ನೋಡಿಕೊಂಡು ಕುಳಿತ್ತಿದ್ದ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಈಗ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿರುವುದನ್ನು ಸಹಿಸಿಕೊಳ್ಳದಿರುವುದು ಏಕೆ? ಕೇಂದ್ರ ಸರ್ಕಾರದ ಮೂಗಿನ ನೇರಕ್ಕೆ ಸುತ್ತೋಲೆ ಹೊರಡಿಸಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹತ್ತಿಕ್ಕುವಂತಹ ಪ್ರಯತ್ನವನ್ನು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಮಾಡುತ್ತಿದೆ.

ಕಳೆದ ಒಂದು ತಿಂಗಳಿಂದ ಜಾಮಿಯಾ ವಿವಿಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಿ ಆವರಣದ ಹೊರಗೆ ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ಸಿಎಎ ವಿರುದ್ಧ ಪ್ರತಿಭಟನೆ ಕೈಗೊಂಡಿದ್ದು, ದುರುಳನೊಬ್ಬ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿ ಓರ್ವನನ್ನು ಗಾಯಗೊಳಿಸಿದ್ದಾನೆ. ವಿಶ್ವ ವಿದ್ಯಾಲಯದ ಆಡಳಿತ ಮಂಡಳಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಿದ ದಿನವೇ ಎಚ್ಚರಗೊಳ್ಳಬೇಕಿತ್ತು. ತನ್ನ ವಿವಿಯ ವಿದ್ಯಾರ್ಥಿಗಳಿಗೆ ಸೂಕ್ತ ಭದ್ರತೆ ಒದಗಿಸುವ ಕೆಲಸವನ್ನು ಮಾಡಬೇಕಿತ್ತು. ಆದರೆ, ಆ ಬಗ್ಗೆ ತಲೆ ಕೆಡಿಸಿಕೊಳ್ಳದ ವಿವಿ ಈಗ ವಿದ್ಯಾರ್ಥಿಗಳ ಪ್ರತಿಭಟನೆಯ ಹಕ್ಕನ್ನೇ ಕಿತ್ತುಕೊಳ್ಳಲು ಹೊರಟಿರುವುದು ದುರ್ದೈವದ ಸಂಗತಿ.

Tags: agitationJamia Millia Islamia Universitymeetingnotificationprohibitingprotestಕಾನೂನು ಬಾಹಿರ ಚಟುವಟಿಕೆಗಳುಕ್ಯಾಂಪಸ್ಚಳವಳಿಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯನಿಷೇಧಪ್ರತಿಭಟನಾ ಸಭೆಭಾಷಣಸುತ್ತೋಲೆ
Previous Post

IBM ಮುಖ್ಯಸ್ಥರಾಗಿ ಭಾರತೀಯನ ನೇಮಕ: ಒಂದಷ್ಟು ಖುಷಿ, ಒಂದಷ್ಟು ಹೆಮ್ಮೆ… 

Next Post

ಸುಳ್ಳು ಕೇಸು ಹಾಕಿ ಬೇಸ್ತು ಬೀಳುತ್ತಿರುವ ಯುಪಿ ಪೊಲೀಸರು!

Related Posts

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ
ದೇಶ

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

by ಪ್ರತಿಧ್ವನಿ
November 18, 2025
0

  ದೆಹಲಿ: ಬಿಜೆಪಿಯು ಮತಕಳ್ಳತನಕ್ಕಾಗಿ ಎಸ್‌ಐಆ‌ರ್ ಪ್ರಕ್ರಿಯೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ‌‌‌ ವಿಶೇಷ ಮತ ಪರಿಷ್ಕರಣೆ ನಡೆಯುತ್ತಿರುವ 12 ರಾಜ್ಯಗಳು...

Read moreDetails
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

November 17, 2025
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

November 17, 2025
ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

November 17, 2025
ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

November 17, 2025
Next Post
ಸುಳ್ಳು ಕೇಸು ಹಾಕಿ ಬೇಸ್ತು ಬೀಳುತ್ತಿರುವ ಯುಪಿ ಪೊಲೀಸರು!

ಸುಳ್ಳು ಕೇಸು ಹಾಕಿ ಬೇಸ್ತು ಬೀಳುತ್ತಿರುವ ಯುಪಿ ಪೊಲೀಸರು!

Please login to join discussion

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada