• Home
  • About Us
  • ಕರ್ನಾಟಕ
Saturday, July 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

JNU ಹಿಂಸಾಚಾರದ ಎಲ್ಲಾ ದೃಶ್ಯಾವಳಿ ರಕ್ಷಿಸಿಡುವಂತೆ ನ್ಯಾಯಾಲಯ ತಾಕೀತು

by
January 13, 2020
in ದೇಶ
0
JNU ಹಿಂಸಾಚಾರದ ಎಲ್ಲಾ ದೃಶ್ಯಾವಳಿ ರಕ್ಷಿಸಿಡುವಂತೆ ನ್ಯಾಯಾಲಯ ತಾಕೀತು
Share on WhatsAppShare on FacebookShare on Telegram

ಅಂತೂ ಜನವರಿ 5 ರ ಸಂಜೆ ಜೆಎನ್ ಯು ವಿಶ್ವವಿದ್ಯಾಲಯದ ಸಾಬರಮತಿ ಹಾಸ್ಟೆಲ್ ಮೇಲಿನ ದಾಳಿ ಮತ್ತು ವಿದ್ಯಾರ್ಥಿಗಳ ಮೇಲೆ ನಡೆದ ಮಾರಣಾಂತಿಕ ಹಲ್ಲೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯ ಮಧ್ಯಪ್ರವೇಶಿಸಿದೆ.

ADVERTISEMENT

ಜನವರಿ 5 ರಂದು ಘಟನೆಗೆ ಸಂಬಂಧಿಸಿದಂತೆ ಎರಡು ವಾಟ್ಸಪ್ ಗ್ರೂಪ್ ಗಳಲ್ಲಿ ನಡೆದಿರುವ ಸಂಭಾಷಣೆಗಳು, ಹಂಚಿಕೆಯಾಗಿರುವ ಫೋಟೋಗಳು, ವಿಡೀಯೋಗಳೆಲ್ಲವನ್ನೂ ರಕ್ಷಿಸಿಡುವಂತೆ ದೆಹಲಿ ಹೈಕೋರ್ಟ್ ದೆಹಲಿ ಪೊಲೀಸರಿಗೆ ಕಟ್ಟಪ್ಪಣೆ ಮಾಡಿದೆ.

ಜೆಎನ್ ಯು ಪ್ರೊಫೆಸರ್ ಗಳಾದ ಅಮಿತ್ ಪರಮೇಶ್ವರನ್, ಅತುಲ್ ಸೂದ್ ಮತ್ತು ಶುಕ್ಲಾ ವಿನಾಯಕ್ ಸಾವಂತ್ ಅವರು, ಹೈಕೋರ್ಟಿಗೆ ಅರ್ಜಿ ಸಲ್ಲಿಸಿ ಜೆಎನ್ ಯುನಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಕಡಿವಾಣ ಹಾಕುವಂತೆ ದೆಹಲಿ ಪೊಲೀಸರಿಗೆ ಮತ್ತು ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿಕೊಂಡಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್, ಪ್ರಕರಣದ ಗಂಭೀರತೆಯನ್ನು ಅರಿತು ಜೆಎನ್ ಯು ಕ್ಯಾಂಪಸ್ ನಲ್ಲಿರುವ ಸಿಸಿ ಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿರುವ ಎಲ್ಲಾ ದೃಶ್ಯಗಳನ್ನು ಸಂರಕ್ಷಿಸಿ ಇಡಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದೆ.

ನ್ಯಾಯಮೂರ್ತಿ ಬ್ರಿಜೇಶ್ ಸೇಥಿ ಅವರು ಈ ಅರ್ಜಿಯ ವಿಚಾರಣೆ ನಡೆಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಜೆಎನ್ ಯು ಆಡಳಿತ ಮಂಡಳಿಯಿಂದ ಇದುವರೆಗೆ ಪೊಲೀಸರಿಗೆ ಮಾಹಿತಿ ಏಕೆ ಬಂದಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಇದಕ್ಕೆ ಉತ್ತರಿಸಿರುವ ದೆಹಲಿ ಸರ್ಕಾರದ ಪರ ವಕೀಲ ರಾಹುಲ್ ಮೆಹ್ರಾ, ದೆಹಲಿ ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಎಲ್ಲಾ ವಾಟ್ಸಪ್ ಸಂದೇಶಗಳು, ಫೋಟೋಗಳು ಮತ್ತು ವಿಡೀಯೋ ದೃಶ್ಯಾವಳಿಗಳನ್ನು ಸಂರಕ್ಷಿಸಿ ಇಡುವಂತೆ ವಾಟ್ಸಪ್ ಸಂಸ್ಥೆಗೆ ಪತ್ರ ಬರೆದಿದ್ದಾರೆ. ವಿಶೇಷವಾಗಿ ಎರಡು ವಾಟ್ಸಪ್ ಗುಂಪುಗಳಾದ ‘Unity Against Left’ ಮತ್ತು ‘Friends of RSS’ ಗಳಲ್ಲಿ ಶೇರ್ ಮಾಡಲಾಗಿರುವ ಸಂದೇಶಗಳು, ವಿಡೀಯೋ ದೃಶ್ಯಾವಳಿಗಳನ್ನು ಸಂಗ್ರಹಿಸಿಡಬೇಕೆಂದು ವಾಟ್ಸಪ್ ಕಂಪನಿಗೆ ಮನವಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಜನವರಿ 5 ರಂದು ಸಂಜೆ ಕೆಲವು ಕಿಡಿಗೇಡಿಗಳು ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶ್ ಘೋಷ್ ಸೇರಿದಂತೆ ಹಲವಾರು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಅಲ್ಲದೇ, ಹಾಸ್ಟೆಲ್ ಗೆ ನುಗ್ಗಿ ದಾಂಧಲೆ ನಡೆಸಿ ಅಲ್ಲಿದ್ದ ವಸ್ತುಗಳನ್ನು ನಾಶಗೊಳಿಸಿದ್ದರು. ಈ ಘಟನೆ ದೇಶಾದ್ಯಂತ ವಿದ್ಯಾರ್ಥಿ ಸಮೂಹದಲ್ಲಿ ತಲ್ಲಣ ಮೂಡಿಸಿತ್ತು. ಅಲ್ಲದೇ, ವಿಶ್ವದಾದ್ಯಂತ ತೀವ್ರ ಟೀಕೆಗೆ ಗುರಿಯಾಗಿತ್ತು.

ಆರಂಭದಲ್ಲಿ ಈ ದುಷ್ಕೃತ್ಯವನ್ನು ಸಂಘಪರಿವಾರದ ಅಂಗಸಂಸ್ಥೆಯಾದ ಎಬಿವಿಪಿ ನಡೆಸಿದೆ ಎಂದು ವಿದ್ಯಾರ್ಥಿ ಸಂಘ ಮತ್ತು ಇತರೆ ಸಂಘಟನೆಗಳು ಆರೋಪಿಸಿದ್ದರೆ, ಎಡಪಕ್ಷಗಳ ಕಾರ್ಯಕರ್ತರೇ ಈ ಕೃತ್ಯವೆಸಗಿದ್ದಾರೆ ಎಂದು ಎಬಿವಿಪಿ ಆರೋಪಿಸಿತ್ತು. ಈ ಮಧ್ಯೆ, ಹಿಂದೂ ಸಂಘಟನೆಯೊಂದು ಇದರ ಜವಾಬ್ದಾರಿ ವಹಿಸಿಕೊಂಡಿತ್ತು. ಆದರೆ, ಅಂತಿಮವಾಗಿ ಎಬಿವಿಪಿಯ ಇಬ್ಬರು ಕಾರ್ಯಕರ್ತರು ಈ ಕೃತ್ಯವನ್ನು ನಾವೇ ನಡೆಸಿದ್ದಾಗಿ ಖಾಸಗಿ ಟಿವಿ ಚಾನೆಲ್ ವೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಒಪ್ಪಿಕೊಂಡಿದ್ದರು.

ಘಟನೆ ನಡೆದು ನಾಲ್ಕೈದು ದಿನಗಳಾದರೂ ದೆಹಲಿ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಾಗಲಿ ಅಥವಾ ಅವರ ವಿರುದ್ಧ ದೂರು ಸಲ್ಲಿಸುವ ಪ್ರಯತ್ನವನ್ನೇ ಮಾಡಿರಲಿಲ್ಲ. ಈ ಬಗ್ಗೆ ದೇಶವಿಡೀ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ನಾಮಕೇವಾಸ್ಥೆಗೆಂಬಂತೆ ಎಫ್ಐಆರ್ ದಾಖಲಿಸಿದ್ದಾರಾದರೂ ಯಾವುದೇ ಆರೋಪಿಯನ್ನು ಗುರಿಯಾಗಿರಿಸಿ ಎಫ್ಐಆರ್ ದಾಖಲಿಸಿಲ್ಲ.

Tags: Apple IncCCTV footageDelhi GovernmentDelhi High CourtGoogle IncJNU professorsPoliceresponseWhatsApp Incಆ್ಯಪಲ್ ಇಂಕ್ಗೂಗಲ್ ಇಂಕ್ಜೆಎನ್ ಯುದೆಹಲಿ ಸರ್ಕಾರದೆಹಲಿ ಹೈಕೋರ್ಟ್ಪ್ರತಿಕ್ರಿಯೆವಾಟ್ಸಪ್ ಇಂಕ್ಸಿಸಿಟಿವಿ ದೃಶ್ಯಾವಳಿಗಳು
Previous Post

JNU ತೊರೆಯಲು ಮುಂದಾಗುತ್ತಿರುವ ಪ್ರೊಫೆಸರ್ ಗಳು!

Next Post

ಮುಖ್ಯಮಂತ್ರಿ ಬಿ‌ ಎಸ್ ಯಡಿಯೂರಪ್ಪ ವೇಗಕ್ಕೆ ಹೈಕಮಾಂಡ್ ಬ್ರೇಕ್?

Related Posts

ಅಂಕಣ

DK Shivakumar: ಖುರ್ಚಿ ಸಿಗುವುದೇ ಕಷ್ಟ. ಸಿಕ್ಕಾಗ ತೆಪ್ಪಗೆ ಕುಳಿತುಕೊಳ್ಳಬೇಕು..

by ಪ್ರತಿಧ್ವನಿ
July 11, 2025
0

ವಕೀಲರ ಸಂಘಕ್ಕೆ ರೂ.5 ಕೋಟಿ ರೂ. ಅನುದಾನ, ಕೆಂಪೇಗೌಡ ಜಯಂತಿಗೆ ವಾರ್ಷಿಕ ರೂ. 5 ಲಕ್ಷ, ಇಬ್ಬರು ವಕೀಲರಿಗೆ ಕೆಂಪೇಗೌಡ ಪ್ರಶಸ್ತಿ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ “ವಕೀಲರ...

Read moreDetails

HD Kumarswamy: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

July 11, 2025
ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025
Next Post
ಮುಖ್ಯಮಂತ್ರಿ ಬಿ‌ ಎಸ್ ಯಡಿಯೂರಪ್ಪ ವೇಗಕ್ಕೆ ಹೈಕಮಾಂಡ್ ಬ್ರೇಕ್?

ಮುಖ್ಯಮಂತ್ರಿ ಬಿ‌ ಎಸ್ ಯಡಿಯೂರಪ್ಪ ವೇಗಕ್ಕೆ ಹೈಕಮಾಂಡ್ ಬ್ರೇಕ್?

Please login to join discussion

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ
Top Story

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

by ನಾ ದಿವಾಕರ
July 12, 2025
Top Story

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

by ಪ್ರತಿಧ್ವನಿ
July 11, 2025
Top Story

HD Kumarswamy: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
July 11, 2025
ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ
Top Story

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

by ಪ್ರತಿಧ್ವನಿ
July 11, 2025
ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.
Top Story

ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.

by ಪ್ರತಿಧ್ವನಿ
July 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

July 12, 2025

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada