• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನವೀಕರಿಸಬಹುದಾದದ ಇಂಧನ ವಲಯದಿಂದ ಉದ್ಯೋಗ ಸೃಷ್ಟಿ: ಗೌರವ್‌ಗುಪ್ತಾ

ಪ್ರತಿಧ್ವನಿ by ಪ್ರತಿಧ್ವನಿ
June 5, 2024
in ಕರ್ನಾಟಕ
0
ನವೀಕರಿಸಬಹುದಾದದ ಇಂಧನ ವಲಯದಿಂದ ಉದ್ಯೋಗ ಸೃಷ್ಟಿ: ಗೌರವ್‌ಗುಪ್ತಾ
Share on WhatsAppShare on FacebookShare on Telegram

ADVERTISEMENT
  • ವಿಶ್ವ ಪವನ ದಿನದ ಅಂಗವಾಗಿ ಪೂರ್ವಭಾವಿ ಕಾರ್ಯಕ್ರಮ
  • ಕ್ರೆಡಲ್‌ನಿಂದ ‘ರನ್‌ ವಿತ್‌ ದ ವಿಂಡ್‌’ ಮ್ಯಾರಥಾನ್‌

ಬೆಂಗಳೂರು, ಜೂನ್ 6,2024: ವಿದ್ಯುತ್‌ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವತ್ತ ರಾಜ್ಯ ಸರ್ಕಾರ ಗಮನಹರಿಸಿದ್ದು, ಇದರಿಂದ ರಾಜ್ಯದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯೂ ಆಗುತ್ತಿದೆ ಎಂದು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ಗುಪ್ತಾ ಹೇಳಿದ್ದಾರೆ.

ಪ್ರತಿ ವರ್ಷ ಜೂನ್‌ 15ರಂದು ವಿಶ್ವ ಪವನ ದಿನ ಆಚರಿಸಲಾಗುತ್ತಿದ್ದು, ಅದಕ್ಕೆ ಪೂರ್ವಭಾವಿಯಾಗಿ ಬುಧವಾರ ನಾಗರಬಾವಿಯ ಕ್ರೆಡಲ್‌ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೀಡಿಯೋ ಕಾನ್ಫರೆನ್ಸ್‌ ಮೂಲಕ ಪಾಲ್ಗೊಂಡು ಮಾತನಾಡಿದರು.

“ಇಂಗಾಲದ ಹೊರಸೂಸುವಿಕೆಯ ಪ್ರಮಾಣ ಕಡಿಮೆ ಮಾಡುವುದರ ಜತೆಗೆ ಗಾಳಿಯ ಗುಣಮಟ್ಟ ಸುಧಾರಿಸುವ ಪರಿಸರ ಸ್ನೇಹಿ ಕ್ರಮಗಳ ಹೊರತಾಗಿಯೂ ಪವನ ವಿದ್ಯುತ್‌ ಸುಸ್ಥಿರ ಆರ್ಥಿಕತೆ ಸಾಧಿಸಲು ನೆರವಾಗುತ್ತದೆ. ರಾಜ್ಯಕ್ಕೆ ಬಂಡವಾಳ ಹೂಡಿಕೆ ಆಕರ್ಷಿಸುವ ಜತೆಗೆ ಉದ್ಯೋಗ ಸೃಷ್ಟಿ ಸಾಧ್ಯವಾಗಿಸುತ್ತಿದೆ,”ಎಂದು ಅವರು ವಿವರಿಸಿದರು.

“ಮಾನ್ಯ ಇಂಧನ ಸಚಿವರಾದ ಕೆ.ಜೆ. ಜಾರ್ಜ್‌ ಅವರ ಮಾರ್ಗದರ್ಶನದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಕರ್ನಾಟಕದ ಗಮನಾರ್ಹ ಸಾಧನೆ ಮಾಡುತ್ತಿದೆ. ಶುದ್ಧ ಇಂಧನ ಉತ್ಪಾದನೆ ಹಾಗೂ ನವೀನ ಇಂಧನ ಸಂಪನ್ಮೂಲಗಳ ಅಭಿವೃದ್ಧಿಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಸಾಂಪ್ರದಾಯಿಕ ಇಂಧನ ಮೂಲಗಳಿಗಿಂತ ಪವನ ವಿದ್ಯುತ್‌ ಕಡಿಮೆ ಖರ್ಚಿನ ಪರ್ಯಾಯ ಇಂಧನ ಮೂಲವಾಗಿದೆ,” ಎಂದು ಅವರು ಹೇಳಿದರು.

“ಪವನ ವಿದ್ಯುತ್‌ ಸಾಮರ್ಥ್ಯದಲ್ಲಿ ಭಾರತವು ನಾಲ್ಕನೇ ಸ್ಥಾನದಲ್ಲಿದ್ದು, 2024ರ ಏಪ್ರಿಲ್‌ ವೇಳೆಗೆ 46 ಗಿಗಾ ವ್ಯಾಟ್ ಪವನ ವಿದ್ಯುತ್‌ ಉತ್ಪಾದನೆ ಆಗಿದೆ. ಕರ್ನಾಟಕವು 124 ಗಿ.ವ್ಯಾ. ಪವನ ವಿದ್ಯುತ್‌ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, 5.3 ಗಿ.ವ್ಯಾ. ಸಾಮರ್ಥ್ಯದ ಪವನ ವಿದ್ಯುತ್ ಯೋಜನೆಗಳನ್ನು ಸ್ಥಾಪಿಸಲಾಗಿದೆ. ಅಲ್ಲದೇ, 15.4 ಗಿ.ವ್ಯಾ. ಪವನ ಯೋಜನೆಗಳು ಶೀಘ್ರದಲ್ಲೇ ಅನುಷ್ಠಾನಗೊಳ್ಳಲಿವೆ. ಬೀದರ್, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ವಿಜಯಪುರ, ತುಮಕೂರಿನಲ್ಲಿ ಉತ್ಪಾದನೆಯಾಗುವ ನವೀಕರಿಸಬಹುದಾದ ಇಂಧನವನ್ನು ಕೇಂದ್ರ ಜಾಲಕ್ಕೆ ಪಡೆಯಲು ಸಿಟಿಯುನಿಂದ ಯೋಜನೆ ಸಿದ್ಧಗೊಂಡಿದೆ. ಪವನ ವಿದ್ಯುತ್‌ ಯೋಜನೆ ಅನುಷ್ಠಾನಕ್ಕೆ ಕರ್ನಾಟಕವು ಅನುಕೂಲಕರ ನೀತಿ ಹೊಂದಿರುವುದರಿಂದ ಇವೆಲ್ಲಾ ಸಾಧ್ಯವಾಗಿದೆ,” ಎಂದು ಅವರು ವಿವರಿಸಿದರು.

“ಪವನ ವಿದ್ಯುತ್‌ ಯೋಜನೆಗಳ ಅನುಮೋದನೆಗಳನ್ನು ಸರಳೀಕರಿಸುವ ಮೂಲಕ ಭೂ ಸ್ವಾಧೀನ ಪ್ರಕ್ರಿಯೆ ಸಗುಮಗೊಳಿಸಿದ್ದೇವೆ. ಇಂಥ ಸುಧಾರಣಾ ಕ್ರಮಗಳ ಮೂಲಕ ನವೀಕರಿಸಬಹುದಾದದ ಇಂಧನ ವಲಯದಲ್ಲಿ ಕರ್ನಾಟಕವನ್ನು ನಂಬರ್‌ ಒನ್‌ ರಾಜ್ಯವನ್ನಾಗಿಸುವ ಪ್ರಯತ್ನ ನಡೆದಿದೆ. ಇದಕ್ಕೆ ಉದ್ಯಮದ ನಾಯಕರ ಸಹಕಾರವೂ ಅಗತ್ಯ,”ಎಂದರು.

“2030ರ ವೇಳೆಗೆ ನವೀಕರಿಸಬಹುದಾದ ಇಂಧನ ಮೂಲಗಳಿಂದ ಶೇ. 50 ರಷ್ಟು ವಿದ್ಯುತ್ ಉತ್ಪಾದನೆಯ ಸಾಮರ್ಥ್ಯವನ್ನು ಸಾಧಿಸುವ ಮತ್ತು 2070ರ ವೇಳೆಗೆ ತಟಸ್ಥ ಇಂಗಾಲದ ಗುರಿ ಸಾಧಿಸುವಲ್ಲಿ ಪವನ ಶಕ್ತಿಯು ಪ್ರಮುಖವಾಗಿದೆ. ಸುಸ್ಥಿರ ಭವಿಷ್ಯಕ್ಕಾಗಿ ಪವನ ಶಕ್ತಿಯ ಉತ್ಪಾದನೆಗೆ ಒತ್ತು ನೀಡಲು ಬದ್ಧವಾಗಿ ವಿಶ್ವ ಪವನ ದಿನವನ್ನು ಅರ್ಥಪೂರ್ಣವಾಗಿಸೋಣ,”ಎಂದರು

ಕ್ರೆಡಲ್‌ನಿಂದ ಗ್ರೀನ್‌ ಹೈಡ್ರೋಜನ್‌ ವಲಯದಲ್ಲಿ ಇಂಟರ್ನ್‌ಶಿಪ್‌

ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ರುದ್ರಪ್ಪಯ್ಯ ಅವರು ಮಾತನಾಡಿ, “ಎಂಜನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಇಂಟರ್ನ್‌ಶಿಪ್‌, ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕ್ರೆಡಲ್‌ ಯಶಸ್ವಿಯಾಗಿ ನಡೆಸಿಕೊಂಡು ಬಂದಿದೆ.ಮುಂಬರುವ ದಿನಗಳಲ್ಲಿ ಗ್ರೀನ್‌ ಹೈಡ್ರೋಜನ್‌ ವಲಯದಲ್ಲಿ ಇಂಟರ್ನ್‌ಶಿಪ್‌ ನಡೆಸಲು ಉದ್ದೇಶಿಸಲಾಗಿದೆ. ನಮ್ಮಲ್ಲಿ ಇಂಟರ್ನ್‌ಶಿಪ್‌ ಮಾಡಿದ ಎಲ್ಲರಿಗೂ ಉದ್ಯೋಗ ದೊರೆತಿದೆ ಎಂಬ ಹೆಮ್ಮೆ ಇದೆ,” ಎಂದು ತಿಳಿಸಿದರು.

“ಪವನ ದಿನದ ಪ್ರಯುಕ್ತ ಇತ್ತೀಚೆಗೆ ಆಯೋಜಿಸಿದ್ದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಗಳಲ್ಲಿ ನೂರಾರು ಕಾಲೇಜುಗಳಿಂದ 170 ಕ್ಕೂ ಹೆಚ್ಚು ಪ್ರಬಂಧಗಳು ಮತ್ತು 100ಕ್ಕೂ ಹೆಚ್ಚು ಚಿತ್ರಗಳು ಬಂದಿದ್ದು, ಅತ್ಯುತ್ತಮ ಚಿತ್ರ ಹಾಗೂ ಪ್ರಬಂಧಕ್ಕೆ ಪ್ರಶಸ್ತಿ ನೀಡಲಾಗಿದೆ,” ಎಂದರು.

“ವಿಶ್ವ ಪವನದ ಪ್ರಯುಕ್ತ ಇಂಡಿಯನ್‌ ವಿಂಡ್‌ ಪವರ್ ಅಸೋಸಿಯೇಷನ್‌ ಸಹಯೋಗದಲ್ಲಿ ಆಯೋಜಿಸಿದ್ದ ‘ರನ್‌ ವಿತ್‌ ದ ವಿಂಡ್‌’ ಮ್ಯಾರಥಾನ್‌ ಯಶಸ್ವಿಯಾಗಿದೆ. ನವೀಕರಿಸಬಹುದಾದ ಇಂಧನಕ್ಕೆ ಒತ್ತು ನೀಡಿ, ಪರಿಸರ ಸಂರಕ್ಷಣೆಗಾಗಿ ನಮ್ಮ ಓಟ ಮುಂದುವರಿಸೋಣ,” ಎಂದು ರುದ್ರಪ್ಪಯ್ಯ ಹೇಳಿದರು.

ಕ್ರೆಡಲ್‌ನ ಪ್ರಧಾನ ವ್ಯವಸ್ಥಾಪಕ (ತಾಂತ್ರಿಕ) ಎನ್‌. ಅಮರನಾಥ್‌, ವಿಜ್ಞಾನಿ ಎಂ.ಪಿ ರಮೇಶ್‌, ಐಡಬ್ಲ್ಯುಪಿಎನ ಉಪಾಧ್ಯಕ್ಷ ಯು.ಬಿ.ರೆಡ್ಡಿ ಹಾಗೂ ಪ್ರಧಾನ ಕಾರ್ಯದರ್ಶಿ ಅಜಯ್‌ ದೇವರಾಜ್‌, ಉಪಸ್ಥಿತರಿದ್ದರು.

Previous Post

ಕಲ್ಕಿ 2898 AD ದರ್ಶನಕ್ಕೆ ಸಿದ್ಧರಾಗಿ; ಜೂನ್ 10ರಂದು ಪ್ರಭಾಸ್‌ ಸಿನಿಮಾದ ಟ್ರೇಲರ್‌ ಬಿಡುಗಡೆ

Next Post

ಚಾರಣಿಗರ ಸುರಕ್ಷಿತ ರಕ್ಷಣೆ ಮತ್ತು ಮೃತ ದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

Related Posts

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕಠಿಣ ಶ್ರಮಕ್ಕೆ ಸೂಕ್ತ ಪ್ರತಿಫಲ ಪಡೆಯಲಿದ್ದೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಶ್ರಮವನ್ನು ಮೇಲಾಧಿಕಾರಿಗಳು ಗುರುತಿಸುವ ಸಾಧ್ಯತೆ ಇದೆ. ಇಂಜಿನಿಯರಿಂಗ್ ಕ್ಷೇತ್ರದಲ್ಲಿರುವವರಿಗೆ ಹೊಸ...

Read moreDetails
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
Next Post
ಚಾರಣಿಗರ ಸುರಕ್ಷಿತ ರಕ್ಷಣೆ ಮತ್ತು ಮೃತ ದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಚಾರಣಿಗರ ಸುರಕ್ಷಿತ ರಕ್ಷಣೆ ಮತ್ತು ಮೃತ ದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

Please login to join discussion

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ
Top Story

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada