• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಾರತದಲ್ಲಿ ಕರೋನಾ ವಿರುದ್ಧದ ಹೋರಾಟಕ್ಕೆ ಮತ್ತೊಂದು ಬಲ: ಜಾನ್ಸನ್ ಲಸಿಕೆ ತುರ್ತು ಬಳಕೆಗೆ ಒಪ್ಪಿಗೆ

ಪ್ರತಿಧ್ವನಿ by ಪ್ರತಿಧ್ವನಿ
August 8, 2021
in ದೇಶ
0
ಭಾರತದಲ್ಲಿ ಕರೋನಾ ವಿರುದ್ಧದ ಹೋರಾಟಕ್ಕೆ ಮತ್ತೊಂದು ಬಲ: ಜಾನ್ಸನ್ ಲಸಿಕೆ ತುರ್ತು ಬಳಕೆಗೆ ಒಪ್ಪಿಗೆ
Share on WhatsAppShare on FacebookShare on Telegram

ಭಾರತದಲ್ಲಿ ಕರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆ ಮತ್ತೊಂದು ಲಸಿಕೆಯ ಸೇರ್ಪಡೆಯಾಗಿದೆ. ಅಮೆರಿಕಾ ಮೂಲದ ಜಾನ್ಸನ್ ಅಂಡ್ ಜಾನ್ಸನ್ ತನ್ನ ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿ ಆಗಸ್ಟ್ 5 ರಂದು ಅರ್ಜಿ ಸಲ್ಲಿಸಿತ್ತು. ಅರ್ಜಿ ಸಲ್ಲಿಸಿದ್ದ ಎರಡೇ ದಿನದಲ್ಲಿ ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಲಸಿಕೆಯ ತುರ್ತು ಬಳಕೆಗೆ ಒಪ್ಪಿಗೆ ನೀಡಲಾಗಿದೆ.

ADVERTISEMENT

ಜಾನ್ಸನ್ ಅಂಡ್ ಜಾನ್ಸನ್ (Johnson and Johnson) ಕಂಪನಿಯ ಸಿಂಗಲ್ ಡೋಸ್ ಲಸಿಕೆಯಾದ ಜಾನಸಿನ್ ಲಸಿಕೆಯ (janssen vaccine) ತುರ್ತು ಬಳಕೆಗೆ ಭಾರತದ ಡಿಸಿಜಿಐ ಒಪ್ಪಿಗೆ ನೀಡಿದೆ.

ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಲಸಿಕೆಯು ಅಮೆರಿಕಾದ ಎಫ್‌ಡಿಐ ಒಪ್ಪಿಗೆ ಪಡೆದಿರುವುದರಿಂದ ಭಾರತದ ಡಿಸಿಜಿಐ ಬ್ರಿಡ್ಜ್ ಪ್ರಯೋಗ ಇಲ್ಲದೆಯೇ ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಲಸಿಕೆಗೆ ಒಪ್ಪಿಗೆ ನೀಡಿದೆ. ಅಮೆರಿಕಾದ FDA, ಇಂಗ್ಲೆಂಡ್‌ನ MHRA, ಯೂರೋಪ್ ಮೆಡಿಕಲ್ ಏಜೆನ್ಸಿ, ಜಪಾನ್ ಡ್ರಗ್ಸ್ ರೆಗ್ಯುಲೇಟರ್ ಗಳಿಂದ ಒಪ್ಪಿಗೆ ಪಡೆದ ಲಸಿಕೆಗಳಿಗೆ ಭಾರತದಲ್ಲಿ ಬ್ರಿಡ್ಜ್ ಪ್ರಯೋಗ ನಡೆಸದೇ, ಒಪ್ಪಿಗೆ ನೀಡಲಾಗುವುದು ಎಂದು ಡಿಸಿಜಿಐ ಈ ಹಿಂದೆ ಆದೇಶ ಹೊರಡಿಸಿತ್ತು. ಹಾಗಾಗಿ, ಎರಡೇ ದಿನದಲ್ಲಿ ಜಾನ್ಸನ್‌ ಕಂಪೆನಿ ಲಸಿಕೆ ಭಾರತದಲ್ಲಿ ಒಪ್ಪಿಗೆ ದೊರೆತಿದೆ.

‘‘ಭಾರತದ ಕರೋನಾ ಲಸಿಕೆಯ ಬಾಸ್ಕೆಟ್ ವಿಸ್ತರಣೆಗೊಂಡಿದೆ. ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಸಿಂಗಲ್ ಡೋಸ್ ಲಸಿಕೆಗೆ ಭಾರತದಲ್ಲಿ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ. ಈಗ ಭಾರತದಲ್ಲಿ ತುರ್ತು ಬಳಕೆಗೆ ಅನುಮೋದನೆಗೊಂಡ ಐದು ಲಸಿಕೆಗಳಿವೆ. ಇದರಿಂದ ಕರೋನಾ ವೈರಸ್ ವಿರುದ್ಧದ ನಮ್ಮ ಸಾಮೂಹಿಕ ಹೋರಾಟಕ್ಕೆ ಮತ್ತಷ್ಟು ಬಲ ಸಿಗಲಿದೆ” ಎಂದು ಕೇಂದ್ರದ ಆರೋಗ್ಯ ಸಚಿವ ಮನಸುಖ್ ಮಾಂಡವೀಯಾ ಟ್ವೀಟ್ ಮಾಡಿದ್ದಾರೆ.‌

India expands its vaccine basket!

Johnson and Johnson’s single-dose COVID-19 vaccine is given approval for Emergency Use in India.

Now India has 5 EUA vaccines.

This will further boost our nation's collective fight against #COVID19

— Dr Mansukh Mandaviya (मोदी का परिवार) (@mansukhmandviya) August 7, 2021

ಆಮೆರಿಕಾದ ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯು ಭಾರತದ ಹೈದರಾಬಾದ್‌ನ ಬಯೋಲಾಜಿಕಲ್ ಇ ಕಂಪನಿಯೊಂದಿಗೆ ತನ್ನ ಜಾನಸಿನ್ ಸಿಂಗಲ್ ಡೋಸ್ ಲಸಿಕೆಯ ಉತ್ಪಾದನೆಗೆ ಒಪ್ಪಂದ ಮಾಡಿಕೊಂಡಿದ್ದು, ಬಯೋಲಾಜಿಕಲ್ ಇ ಕಂಪನಿಯು ಭಾರತದಲ್ಲಿ ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಜಾನಸಿನ್ ಲಸಿಕೆಯನ್ನು ಉತ್ಪಾದಿಸಲಿದೆ.

ಜಾನಸಿನ್ ಸಿಂಗಲ್ ಡೋಸ್ ಕರೊನಾ ಲಸಿಕೆಗೆ ಈ ವರ್ಷದ ಫೆಬ್ರವರಿ ತಿಂಗಳಲ್ಲೇ ಆಮೆರಿಕಾದ ಎಫ್.ಡಿ.ಎ ತುರ್ತು ಬಳಕೆಗೆ ಒಪ್ಪಿಗೆ ನೀಡಿತ್ತು. ಯೂರೋಪಿಯನ್ ಮೆಡಿಕಲ್ ಏಜೆನ್ಸಿಯು ಈ ವರ್ಷದ ಮಾರ್ಚ್ ತಿಂಗಳಲ್ಲಿ ಜಾನಸಿನ್ ಸಿಂಗಲ್ ಡೋಸ್ ಲಸಿಕೆಯ ತುರ್ತು ಬಳಕೆಗೆ ಒಪ್ಪಿಗೆ ನೀಡಿತ್ತು.

ಅಲ್ಲದೆ, ಅಮೆರಿಕಾದ ಸಿಡಿಸಿ ಕೂಡ ಜಾನಸಿನ್ ಲಸಿಕೆಯು ಕರೊನಾದಿಂದ ಉಂಟಾಗುವ ಸಾವು, ಆಸ್ಪತ್ರೆಗೆ ದಾಖಲಾಗುವುದರ ವಿರುದ್ಧ ಹೆಚ್ಚಿನ ಪರಿಣಾಮಕಾರಿ ಎಂದು ಹೇಳಿದೆ. ಜಾನಸಿನ್ ಲಸಿಕೆಯು ಲಕ್ಷಣ ರಹಿತ ಕರೊನಾ ರೋಗಿಗಳಿಗೂ ರಕ್ಷಣೆ ನೀಡುತ್ತೆ ಎಂದು ಸಿಡಿಸಿ ಹೇಳಿದೆ.

ಭಾರತದಲ್ಲಿ ಈಗಾಗಲೇ ಕೊವಿಶೀಲ್ಡ್, ಕೊವ್ಯಾಕ್ಸಿನ್, ರಷ್ಯಾದ ಸ್ಪುಟ್ನಿಕ್, ಆಮೆರಿಕಾದ ಮಾಡೆರ್ನಾ ಕಂಪನಿಯ ಲಸಿಕೆಗಳಿಗೆ ತುರ್ತು ಬಳಕೆಗೆ ಒಪ್ಪಿಗೆ ನೀಡಲಾಗಿದೆ. ಈಗ ಐದನೇ ಲಸಿಕೆಯಾಗಿ ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಜಾನಸಿನ್ ಲಸಿಕೆಗೆ ತುರ್ತು ಬಳಕೆಗೆ ಒಪ್ಪಿಗೆ ಸಿಕ್ಕಿದೆ.

Tags: Covid 19ಕೋವಿಡ್-19
Previous Post

ಜನವಿರೋಧಿ ವಿದ್ಯುತ್ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸದಂತೆ ಪ್ರಧಾನಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

Next Post

ಟೋಕಿಯೋ ಒಲಿಂಪಿಕ್ಸ್: ದಾಖಲೆ ನಿರ್ಮಿಸಿದ ಭಾರತದ ಕ್ರೀಡಾಪಟುಗಳು

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಜಿಲ್ಲಾ ಉಸ್ತುವಾರಿ ಸಚಿವ ಖಂಡನೆ

December 22, 2025
Next Post
ಟೋಕಿಯೋ ಒಲಿಂಪಿಕ್ಸ್: ದಾಖಲೆ ನಿರ್ಮಿಸಿದ ಭಾರತದ ಕ್ರೀಡಾಪಟುಗಳು

ಟೋಕಿಯೋ ಒಲಿಂಪಿಕ್ಸ್: ದಾಖಲೆ ನಿರ್ಮಿಸಿದ ಭಾರತದ ಕ್ರೀಡಾಪಟುಗಳು

Please login to join discussion

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

December 24, 2025

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada