ಹುಬ್ಬಳ್ಳಿಯಲ್ಲಿ ರಾಜಕೀಯ ಪ್ರವೇಶದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಟ ಶಿವರಾಜ್ ಕುಮಾರ್ ನಾನು ರಾಜಕೀಯಕ್ಕೆ ಬರಲ್ಲ ಎಂದು ಹೇಳಿದ್ದಾರೆ.
ಹುಬ್ಬಳ್ಳಿ : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ವೇದ ಚಿತ್ರದ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಇಂದು ಪತ್ನಿ ಗೀತಾ ಜೊತೆ ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ರು.
ಗುರು ಸಿದ್ಧಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. 10 ನಿಮಿಷಗಳ ಸಿದ್ಧಾರೂಡರ ಗದ್ದುಗೆಯ ಬಳಿ ಶಿವಣ್ಣ ದಂಪತಿ ಧ್ಯಾನ ಮಾಡಿದ್ರು.
ವೇದ ಸಿನಿಮಾ ಪ್ರೀ ರಿಲೀಸ್ ಈವೆಂಟ್
ಶಿವರಾಜ್ ಕುಮಾರ್ ಅಭಿನಯದ 125 ನೇ ಚಿತ್ರ ವೇದ ಸಿನಿಮಾ ಪ್ರೀ ರಿಲೀಸ್ ಈವೆಂಟ್ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮ ನಿಮಿತ್ತ ಶಿವರಾಜ್ ಕುಮಾರ್ ಜಿಲ್ಲೆಗೆ ಆಗಮಿಸಿದ್ದರು. ಇದೇ ವೇಳೆ ಮಾಧ್ಯಮದ ಜೊತೆ ಮಾತಾಡಿ ಶಿವಣ್ಣ ,
ರಾಜಕೀಯ ಸೇರ್ತಿರಾ? ಪ್ರಶ್ನೆಗೆ ಶಿವಣ್ಣ ಹೀಗಂದ್ರು
ಅಸೆಂಬ್ಲಿ ಎಲೆಕ್ಷನ್ ಹತ್ತಿರವಾಗುತ್ತಿದ್ದು, ಎಲ್ಲರ ಚಿತ್ತ ರಾಜ್ಯ ರಾಜಕೀಯದತ್ತ ನೆಟ್ಟಿದೆ. ಇನ್ನು ಸಿನಿಮಾ ನಟ-ನಟಿಯರು ಸಹ ರಾಜಕೀಯದಲ್ಲಿ ಭಾಗಿಯಾಗೋದು ಸಾಮಾನ್ಯ, ಚುನಾವಣೆ ಸಮಯದಲ್ಲಿ ಅಭ್ಯರ್ಥಿಗಳ ಪರ ಕೂಡ ನಟ-ನಟಿಯರು ಪ್ರಚಾರ ಮಾಡ್ತಾರೆ. ಆದ್ರೆ ಸ್ಯಾಂಡಲ್ವುಡ್ನ ದೊಡ್ಮನೆ ಅಂತಾನೆ ಕರೆಸಿಕೊಳ್ಳುವ ರಾಜ್ ಕುಟುಂಬ ಮಾತ್ರ ರಾಜಕೀಯದಿಂದ ದೂರ ಉಳಿದಿದೆ.
ನಾನು ರಾಜಕೀಯಕ್ಕೆ ಬರಲ್ಲ
ಹುಬ್ಬಳ್ಳಿಯಲ್ಲಿ ರಾಜಕೀಯ ಪ್ರವೇಶದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಟ ಶಿವರಾಜ್ ಕುಮಾರ್ ನಾನು ರಾಜಕೀಯಕ್ಕೆ ಬರಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಗೀತಾ ಶಿವರಾಜ್ ಕುಮಾರ್ ಕೂಡ ಚುನಾವಣೆಗೆ ಸ್ಪರ್ಧಿಸಲ್ಲ, ನಾವು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇವೆ ಈ ಮೂಲಕ ಜನಸೇವೆ ಮಾಡುವುದಾಗಿ ಶಿವಣ್ಣ ಹೇಳಿದ್ದಾರೆ.






