• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಸ್‌.ಎಂ ಕೃಷ್ಣ ಪತ್ನಿಗೆ ಪ್ರಧಾನಿ ಕಳುಹಿಸಿದ ಶೋಕ ಸಂದೇಶ ಪತ್ರ ತಲುಪಿಸಿದ ಜೋಶಿ..

ಪ್ರತಿಧ್ವನಿ by ಪ್ರತಿಧ್ವನಿ
December 11, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ S.M ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ. ಆ ಬಳಿಕ ಮಾತನಾಡಿರುವ ಪ್ರಹ್ಲಾದ್ ಜೋಶಿ, ರಾಜ್ಯದ ಹಿಂದಿನ ಸಿಎಂ, ವಿದೇಶಾಂಗ ಸಚಿವರಾಗಿ ದೇಶ ಮತ್ತು ರಾಜ್ಯಕ್ಕೆ ಅಪ್ರತಿಮ ಸೇವೆ ಸಲ್ಲಿಸಿದ್ದಾರೆ.ಇಂದು ಎಸ್ ಎಂ ಕೃಷ್ಣ ಸ್ವರ್ಗಸ್ಥರಾಗಿದ್ದಾರೆ.ಪ್ರಧಾನಮಂತ್ರಿಗಳು ಇಂದು ನನ್ನನ್ನ ಕರೆದು ಶೋಕ ಸಂದೇಶ ಪತ್ರ ಕಳುಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ADVERTISEMENT

ಎಸ್‌.ಎಂ ಕೃಷ್ಣ ಅವರ ನಿಧನಕ್ಕೆ ಪ್ರಧಾನ ಮಂತ್ರಿಗಳು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಅವರ ಶೋಕ ಸಂದೇಶ ಪತ್ರವನ್ನ ಕೃಷ್ಣ ಅವರ ಪತ್ನಿ ಪ್ರೇಮಾ ಅವರಿಗೆ ತಲುಪಿಸಿದ್ದೇನೆ. ಅವರು ಅತ್ಯಂತ ಪ್ರೀತಿ ಆತ್ಮೀಯತೆಯಿಂದ ಮಾತಾಡಿಸುತ್ತಿದ್ರು. ನಾವು ಬಿಜೆಪಿಯಲ್ಲಿದ್ರು, ಅವರಿಗೆ ಮನವಿ ಕೊಟ್ಟ ಕೂಡಲೇ ಕೆಲಸ ಮಾಡಿ ಕೊಡ್ತಿದ್ರು. ಹುಬ್ಬಳ್ಳಿಯಲ್ಲಿ ಪಾಸ್ ಪೋರ್ಟ್ ಕಚೇರಿ ಮಾಡಿಕೊಟ್ರು ಎಂದು ನೆನಪಿಸಿಕೊಂಡಿದ್ದಾರೆ.

ಉದಾರತೆಯ ವ್ಯಕ್ತಿತ್ವ, ಶ್ರೀ ಶಕ್ತಿ ಯೋಜನೆ, ಯಶಸ್ವಿನಿ ಯೋಜನೆ ರಾಜ್ಯದಲ್ಲಿ ಪ್ರಾರಂಭಿಸಿದವರು ಎಸ್‌.ಎಂ ಕೃಷ್ಣ ಎಂದಿರುವ ಪ್ರಹ್ಲಾದ್‌ ಜೋಶಿ, ಕಲೆ ಸಾಹಿತ್ಯ, ಸಂಗೀತ, ಕ್ರೀಡೆಯಲ್ಲಿ ಅಪಾರ ಆಸಕ್ತಿ ಇಟ್ಕೊಂಡಿದ್ದರು. ಟೆನ್ನಿಸ್‌ನಲ್ಲಿ ಆಸಕ್ತಿ ಹೊಂದಿದ್ದರು. ಡಿಸೆಂಟ್ ರಾಜಕಾರಣಿ. ಧ್ವನಿ ಜೋರು ಮಾಡಲಿಲ್ಲ, ಅಡ್ಮಿನಿಸ್ಟ್ರೇಟಿವ್ ರಾಜಕಾರಣಿ. ಯಾರಿಗೂ ಏಕವಚನದಲ್ಲಿ ಮಾತಾಡುತ್ತಿರಲಿಲ್ಲ ಎಂದು ನೆನಪಿಸಿಕೊಂಡಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಈ ದೇಶದ ನಾಲ್ಕು ಪ್ರಮುಖ ಶಾಸಕಾಂಗ ಸಭೆಗಳಲ್ಲಿ ಎಸ್‌.ಎಂ ಕೃಷ್ಣ ಭಾಗವಹಿಸಿದ್ದು ವಿಶೇಷ ಎಂದಿರುವ ಪ್ರಹ್ಲಾದ್‌ ಜೋಶಿ, ಸ್ಪೀಕರ್ ಆಗಿ ಮಾಡಿದ ಕೆಲಸ ದಾಖಲಾರ್ಹ. ಅವರು ಸಿಎಂ ಆಗಿದ್ದಾಗ ಹಲವಾರು ಸವಾಲುಗಳನ್ನ ಎದುರಿಸಿದ್ದಾರೆ. ಸುದೀರ್ಘವಾದ ಬರಗಾಲ, ಸುಮಾರು ಮೂರು ವರ್ಷಗಳ ಕಾಲ ಬರಗಾಲ ಇತ್ತು. ಕಾವೇರಿ ನೀರಿಗಾಗಿ ಪಾದಯಾತ್ರೆ ಮಾಡಿದ್ರು ಎಂದು ನೆನಪು ಮಾಡಿಕೊಂಡಿದ್ದಾರೆ.

ಬೆಂಗಳೂರನ್ನ ಐಟಿ ಬಿಟಿ ಹಬ್ ಆಗಿ ಮಾಡಿದ್ರು. ಭಾರತದ ಸಿಲಿಕಾನ್ ಸಿಟಿ ಮಾಡಿದ್ರು. ಇದು ಕನ್ನಡಿಗರಿಗೆ ಭಾರತ ದೇಶಕ್ಕೆ ಲಾಭವಾಗಿದೆ. ಮಹಾರಾಷ್ಟ್ರ ಗವರ್ನರ್ ಆಗಿದ್ದಾಗ ವಿದರ್ಭ ಪ್ರದೇಶದ ಅಭಿವೃದ್ಧಿಗೆ ಪ್ರತ್ಯೇಕ ಒತ್ತು ನೀಡಿದ್ದರು. ಹಿಲರಿ ಕ್ಲಿಂಟನ್ ಜೊತೆಗೆ ವಿಶೇಷ ಸಂಬಂಧ ಇದ್ದಿದ್ದರಿಂದ, ಎರಡು ದೇಶಗಳ ನಡುವೆ ಸಂಬಂಧ ಬೆಳೆಯೋದಕ್ಕೆ ಕಾರಣವಾಗಿದೆ ಎಂದಿದ್ದಾರೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ.

Tags: former CM Basavaraja Bommai.Joshi delivered the condolence letterPM Modisent by the Prime MinisterSM Krishna DeathSM Krishna's wife.Union Minister Prahlad Joshiunparalleled
Previous Post

S.M ಕೃಷ್ಣ ನಡೆದು ಬಂದ ಹಾದಿ ಹೇಗಿತ್ತು..? ರಾಜಕೀಯ ಸಾಧನೆಗಳು ಏನು..?

Next Post

ಇವಿಎಂ ದುರ್ಬಳಕೆ ಆರೋಪ ; ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಲಿರುವ ಇಂಡಿಯಾ ಬಣ

Related Posts

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..
Top Story

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..

by ಪ್ರತಿಧ್ವನಿ
May 17, 2026
0

ಬೆಂಗಳೂರು : ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದ ಐಪಿಎಲ್​ 2026ರ 61ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವಿನ ರಣಕೇಕೆ ಹಾಕಿದೆ...

Read moreDetails
ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

May 17, 2026
ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

May 17, 2026
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
Next Post

ಇವಿಎಂ ದುರ್ಬಳಕೆ ಆರೋಪ ; ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಲಿರುವ ಇಂಡಿಯಾ ಬಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada