• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಚೀನಾಕ್ಕೆ ರಹಸ್ಯ ಮಾಹಿತಿ ರವಾನೆ: ದೆಹಲಿ ಮೂಲದ ಹವ್ಯಾಸಿ ಪತ್ರಕರ್ತನ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
July 5, 2021
in ದೇಶ, ರಾಜಕೀಯ, ವಿದೇಶ
0
Share on WhatsAppShare on FacebookShare on Telegram

ಚೀನಾದ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ ಮಾಡಿದ ಆರೋಪ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ದೆಹಲಿ ಮೂಲದ ಹವ್ಯಾಸಿ ಪತ್ರಕರ್ತನನ್ನು ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ.

ADVERTISEMENT

ಬಂಧಿತ ಹವ್ಯಾಸಿ ಪತ್ರಕರ್ತ ರಾಜೀವ್ ಶರ್ಮಾನನ್ನು ಜುಲೈ 1ರಂದು ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆಯ (ಪಿಎಂಎಲ್ಎ) ಕ್ರಿಮಿನಲ್ ಸೆಕ್ಷನ್ಗಳ ಅಡಿಯಲ್ಲಿ ಬಂಧಿಸಲಾಗಿದ್ದು, ಸ್ಥಳೀಯ ನ್ಯಾಯಾಲಯಕ್ಕೆ ಶುಕ್ರವಾರ ಹಾಜರುಪಡಿಸಲಾಯಿತು. ನ್ಯಾಯಾಲಯವು ಶರ್ಮಾನನ್ನು ಏಳು ದಿನಗಳವರೆಗೆ ಇ.ಡಿ ಕಸ್ಟಡಿಗೆ ನೀಡಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

‘ಚೀನಾದ ಗುಪ್ತಚರ ಅಧಿಕಾರಿಗಳಿಗೆ ಗೋಪ್ಯ ಮತ್ತು ಸೂಕ್ಷ್ಮ ಮಾಹಿತಿ ಒದಗಿಸಿದ್ದಕ್ಕಾಗಿ, ಚೀನಾ ಮೂಲದ ಶೆಲ್ ಕಂಪನಿಯೊಂದರ ಮೂಲಕ ಹವಾಲ ಹಣವನ್ನು ಶರ್ಮಾ ಮತ್ತು ಇತರ ಅಪರಿಚಿತ ವ್ಯಕ್ತಿಗಳು ಸಂಭಾವನೆಯಾಗಿ ಪಡೆದಿದ್ದಾರೆ’ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ರಾಜೀವ್ ಶರ್ಮಾ ಜೊತೆ ಚೀನಾದ ಮಹಿಳೆ ಕಿನ್ ಶಿ ಮತ್ತು ಅವರ ನೇಪಾಳದ ಸಹವರ್ತಿ ಶೇರ್ ಸಿಂಗ್ ಜೊತೆಗೆ ಬಂಧಿಸಲಾಗಿದೆ.

ಪ್ರಕರಣವನ್ನು ಪೊಲೀಸ್ ಉಪ ಆಯುಕ್ತ (ವಿಶೇಷ ತನಿಖಾ ದಳ) ಸಂಜೀವ್ ಯಾದವ್ ತನಿಖೆ ನಡೆಸುತ್ತಿದ್ದಾರೆ. ಶೆಲ್ ಕಂಪೆನಿಗಳ ಮೂಲಕ ಶರ್ಮಾ ದೊಡ್ಡ ಮೊತ್ತದ ಹಣವನ್ನು ಪಾವತಿಸಿದ್ದಕ್ಕಾಗಿ ಚೀನಾದ ಮಹಿಳೆ ಮತ್ತು ಅವಳ ನೇಪಾಳದ ಸಹಾಯಕನನ್ನು ಸಹ ಬಂಧಿಸಲಾಗಿದೆ “ಎಂದು ಡಿಸಿಪಿ ಸಂಜೀವ್ ಯಾದವ್ ಹೇಳಿದ್ದಾರೆ.

ಚೀನಾದ ಗುಪ್ತಚರ ಸಂಸ್ಥೆಗಳು ಶರ್ಮಾ ಅವರಿಂದ ‘ಸೂಕ್ಷ್ಮ ಮಾಹಿತಿ’ ಕೇಳಿದ್ದವು ಮತ್ತು ದೊಡ್ಡ ಮೊತ್ತದ ಹಣವನ್ನು ನೀಡಿವೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಹೆಚ್ಚಿನ ಸಂಖ್ಯೆಯ ಮೊಬೈಲ್ ಫೋನ್ಗಳು, ಲ್ಯಾಪ್ಟಾಪ್ಗಳು ಮತ್ತು ಇತರ ದೋಷಾರೋಪಣೆ ಮತ್ತು ಸೂಕ್ಷ್ಮ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಾಯುವ್ಯ ದೆಹಲಿಯ ಪಿತಾಂಪುರ ನಿವಾಸಿ ಶರ್ಮಾ ಅವರನ್ನು ವಿಶೇಷ ತನಿಖಾ ದಳ ಸೆಪ್ಟೆಂಬರ್ 14 ರಂದು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಧಿಕೃತ ರಹಸ್ಯ ಕಾಯ್ದೆ ಪ್ರಕರಣದಲ್ಲಿ ಎಫ್ಐಆರ್ (230/2020) ದಾಖಲಿಸಲಾಗಿದೆ.

“ಶರ್ಮಾ ಕೆಲವು ರಕ್ಷಣಾ ಸಂಬಂಧಿತ ವರ್ಗೀಕೃತ ದಾಖಲೆಗಳನ್ನು ಹೊಂದಿದ್ದಾರೆಂದು ಕಂಡುಬಂದಿದ್ದು ಪ್ರಕರಣದ ತನಿಖೆ ಇನ್ನೂ ಮುಂದುವರೆದಿದೆ” ಎಂದು ಅನಾಮಧೇಯತೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ಬಗ್ಗೆ ತಿಳಿಸಿದ್ದಾರೆ ಎಂದು ದಿ ಟಮ್ಸ್ ನೌ.ಕಾಂ ವರದಿ ಮಾಡಿದೆ.

ಶರ್ಮಾ ವಿರುದ್ಧದ ಇ.ಡಿ ಪ್ರಕರಣ ಆಧರಿಸಿ ದೆಹಲಿ ಪೊಲೀಸರು ಅಧಿಕೃತ ರಹಸ್ಯ ಕಾಯ್ದೆ (ಒಎಸ್ಎ) ಮತ್ತು ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿ ಕಳೆದ ವರ್ಷವೇ ಎಫ್ಐಆರ್ ದಾಖಲಿಸಿದ್ದರು. ಕಳೆದ ವರ್ಷದ ಸೆಪ್ಟೆಂಬರ್ 14ರಂದು ದೆಹಲಿ ಪೊಲೀಸರು ಈತನನ್ನು ಬಂಧಿಸಿದ್ದರು. ಭಾರತೀಯ ಸೇನೆಯ ನಿಯೋಜನೆ ಮತ್ತು ದೇಶದ ಗಡಿ ಕಾರ್ಯತಂತ್ರದ ಬಗ್ಗೆ ಚೀನಾದ ಗುಪ್ತಚರ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ ಆರೋಪ ಶರ್ಮಾ ಮೇಲೆ ಇದೆ.

ಬಂಧನಕ್ಕೊಳಗಾದ 60 ದಿನಗಳಲ್ಲಿ ಚಾರ್ಜ್ಶೀಟ್ ಸಲ್ಲಿಸಿಲ್ಲ ಎಂಬ ಕಾರಣಕ್ಕೆ ಪತ್ರಕರ್ತನಿಗೆ 2020ರ ಡಿಸೆಂಬರ್ನಲ್ಲಿ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು.

ಶರ್ಮಾ ಸಾವಿರಾರು ಅನುಯಾಯಿಗಳನ್ನು ಹೊಂದಿರುವ ‘ರಾಜೀವ್ ಕಿಷ್ಕಿಂಧಾ’ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದಾರೆ. ಬಂಧನದ ದಿನ ಅವರು ಎರಡು ವೀಡಿಯೊಗಳನ್ನು ಯೂಟ್ಯೂಬ್ಗೆ ಅಪ್ಲೋಡ್ ಮಾಡಿದ್ದಾರೆ. ಒಂದು ಗಡಿ ಉದ್ವಿಗ್ನತೆ ಬಗ್ಗೆ ಇದ್ದರೆ, ಇನ್ನೊಂದರಲ್ಲಿ ಸದ್ಯದ ಪತ್ರಿಕೋದ್ಯಮದ ಸ್ಥಿತಿಯ ಕುರಿತು ವಿವರಗಳಿವೆ.

Tags: Chinachina-india border disputeGovernment of Indiaministry of defence
Previous Post

‘ಶಿವ ಸೇನೆ’ಯು‌ ನಮ್ಮ ಶತ್ರುವಲ್ಲ: ಫಡ್ನವಿಸ್ ಹೇಳಿಕೆ ಹೊಸ ರಾಜಕೀಯ ಸಾಧ್ಯತೆಗಳಿಗೆ ನಾಂದಿ ಹಾಡಲಿದೆಯೇ?

Next Post

ಕೊನೆಗೂ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಪಡೆದ ನಲಪಾಡ್; ಹಿರಿಯ ನಾಯಕರ ಸಂಧಾನ ಯಶಸ್ವಿ

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
Next Post
ಕೊನೆಗೂ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಪಡೆದ ನಲಪಾಡ್; ಹಿರಿಯ ನಾಯಕರ ಸಂಧಾನ ಯಶಸ್ವಿ

ಕೊನೆಗೂ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಪಡೆದ ನಲಪಾಡ್; ಹಿರಿಯ ನಾಯಕರ ಸಂಧಾನ ಯಶಸ್ವಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada