• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತದ ವಿಚಾರಣೆ ಆರಂಭಿಸಿದ ನ್ಯಾಯಾಂಗ ಆಯೋಗ ; ಮೈಸೂರಿನಲ್ಲಿ ಆಯೋಗದ ಕಚೇರಿ ತೆರೆದಿದ್ದಕ್ಕೆ ಸಂತ್ರಸ್ಥರ ಆಕ್ರೋಶ

Any Mind by Any Mind
June 11, 2021
in ಕರ್ನಾಟಕ
0
ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತದ ವಿಚಾರಣೆ ಆರಂಭಿಸಿದ ನ್ಯಾಯಾಂಗ ಆಯೋಗ ; ಮೈಸೂರಿನಲ್ಲಿ ಆಯೋಗದ ಕಚೇರಿ ತೆರೆದಿದ್ದಕ್ಕೆ ಸಂತ್ರಸ್ಥರ ಆಕ್ರೋಶ
Share on WhatsAppShare on FacebookShare on Telegram

ಚಾಮರಾಜನಗರ ಜಿಲ್ಲಾ ಕೋವಿಡ್ಆಸ್ಪತ್ರೆಯಲ್ಲಿ ಮೇ 2ರ ರಾತ್ರಿ ಸಂಭವಿಸಿದ ಆಮ್ಲಜನಕ ದುರಂತ
ಪ್ರಕರಣದ ತನಿಖೆಗಾಗಿ ಸರ್ಕಾರ ನೇಮಿಸಿರುವ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ
ಬಿ.ಎ.ಪಾಟೀಲ ನೇತೃತ್ವದ ಏಕ ಸಮಿತಿ ಆಯೋಗದ ಕಚೇರಿಯನ್ನು ಮೈಸೂರಿನಲ್ಲಿ
ತೆರೆದಿರುವುದಕ್ಕೆ ಸಂತ್ರಸ್ತರ ಕುಟುಂಬದ ಸದಸ್ಯರು ಹಾಗೂ ಸಾರ್ವಜನಿಕರು ಆಕ್ರೋಶ
ವ್ಯಕ್ತಪಡಿಸಿದ್ದಾರೆ.ದುರ್ಘಟನೆ ನಡೆದಿರುವುದು ಚಾಮರಾಜನಗರದಲ್ಲಿ, ಮೈಸೂರಿನಲ್ಲಿ
ಕಚೇರಿ ತೆರೆದಿರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ. ಚಾಮರಾಜನಗರದಲ್ಲೇ
ಕಚೇರಿ ತೆರೆಯಬೇಕು ಎಂದು ಒತ್ತಾಯಿಸಿದ್ದಾರೆ. ಮೈಸೂರಿನ ಹುಣಸೂರು ರಸ್ತೆಯಲ್ಲಿರುವ
ಜಲದರ್ಶಿನಿ ಅತಿಥಿಗೃಹದ ಆವರಣದಲ್ಲಿ ಆಯೋಗದ ಕಚೇರಿ ಕೆಲವು ದಿನಗಳ ಕಾರ್ಯಾರಂಭ
ಮಾಡಿದೆ.

ADVERTISEMENT

ಎರಡು ದಿನಗಳ ಹಿಂದೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಆಯೋಗದ ಕಾರ್ಯದರ್ಶಿ ಅವರು,
‘ಪ್ರಕರಣದಲ್ಲಿ ಮರಣಹೊಂದಿರುವ ರೋಗಿಗಳ ವಾರಸುದಾರರು, ಹಿತಾಸಕ್ತಿವುಳ್ಳವರು ಹಾಗೂ
ಸಂಸ್ಥೆಗಳು ತಮ್ಮಲ್ಲಿರುವ ದಾಖಲೆಗಳನ್ನು ಪ್ರಮಾಣಪತ್ರದ ಜೊತೆಗೆ ಸಾರ್ವಜನಿಕ ಪ್ರಕಟಣೆ
ಪ್ರಕಟವಾದ 15 ದಿನಗಳ ಒಳಗಾಗಿ, ವಿಚಾರಣಾ ಆಯೋಗಕ್ಕೆ ಕಚೇರಿ ಸಮಯದಲ್ಲಿ ಅಥವಾ
ನೋಂದಾಯಿತ ಅಂಚೆ (ರಿಜಿಸ್ಟರ್ಪೋಸ್ಟ್) ಮೂಲಕ ದೃಢೀಕೃತ ಪ್ರಮಾಣಪತ್ರದೊಂದಿಗೆ
ಸಲ್ಲಿಸಬೇಕು. ಮುಂದೆ ನಿಗದಿಪಡಿಸಿದ ದಿನಾಂಕದಂದು ವಿಚಾರಣೆಗೆ ವ್ಯಕ್ತಿಗತವಾಗಿ
ಹಾಜರಾಗಬೇಕು’ ಎಂದು ಹೇಳಿದ್ದಾರೆ.   ‘ದುರಂತದಲ್ಲಿ ಮೃತಪಟ್ಟ 24 ಮಂದಿಯಲ್ಲಿ
ಬಹುತೇಕರು ಗ್ರಾಮೀಣ ಭಾಗದ ಜನರು. ಬಡ ಕುಟುಂಬದವರೇ ಹೆಚ್ಚಾಗಿದ್ದಾರೆ.
ಚಾಮರಾಜನಗರಕ್ಕೆ ಅಪರೂಪದಲ್ಲಿ ಬರುವ ಅವರು, ಮೈಸೂರಿಗೆ ಹೋಗಿ ಆಯೋಗಕ್ಕೆ ದಾಖಲೆಗಳನ್ನು
ಸಲ್ಲಿಸುವುದು, ನಂತರ ವಿಚಾರಣೆಗೆ ಹಾಜರಾಗುವುದಕ್ಕೆ ಪ್ರಯಾಸ ಪಡಬೇಕಾಗುತ್ತದೆ.
ಲಾಕ್ಡೌನ್ಅವಧಿಯಲ್ಲಿ ಸಾರಿಗೆ ವ್ಯವಸ್ಥೆಯೂ ಸರಿಯಾಗಿಲ್ಲ. ಇಂತಹ ಸಂದರ್ಭದಲ್ಲಿ
ಪ್ರಯಾಣ ಮಾಡುವುದೂ ಕಷ್ಟ. ಅಂಚೆ ಮೂಲಕ ದಾಖಲೆಗಳನ್ನು ಈಗ ಕಳುಹಿಸಬಹುದಾದರೂ ವಿಚಾರಣೆಸಂದರ್ಭದಲ್ಲಿ ಖುದ್ದಾಗಿ ಹಾಜರಾಗಬೇಕಾಗುತ್ತದೆ. ಚಾಮರಾಜನಗರದಲ್ಲೇ ಕಚೇರಿ
ತೆರೆದಿದ್ದರೆ ಅನುಕೂಲವಾಗುತ್ತಿತ್ತು’ ಎಂದು ರೈತ  ಮುಖಂಡ ಶ್ರೀನಿವಾಸ ನಾಯಕ ಅವರು
ತಿಳಿಸಿದರು.

ಆಕ್ಸಿಜನ್‌ ಸರಬರಾಜು ಕುರಿತ ಐದು ಆಡಿಯೋ ಕ್ಲಿಪ್ಪಿಂಗ್ ಕುರಿತು ಸಾಮಾಜಿಕ ತಾಣಗಳಲ್ಲಿ ನಡೆದಿದೆ ಭಾರೀ ಚರ್ಚೆ


‘ಜಿಲ್ಲೆಯ ಹನೂರು ಭಾಗದಿಂದ ಚಾಮರಾಜನಗರಕ್ಕೆ ಬರುವುದಕ್ಕೇ 100 ಕಿ.ಮೀ ಇದೆ.
ಮೈಸೂರಿಗೆ ಮತ್ತೂ 60 ಕಿ.ಮೀ ಸಾಗಬೇಕು. ಮೈಸೂರಿಗೆ ಹೋಗಬೇಕಲ್ಲ ಎಂದುಕೊಂಡು ಪ್ರಕರಣದ
ಬಗ್ಗೆ ಮಾಹಿತಿ ಇರುವವರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ದಾಖಲೆಗಳನ್ನು ಸಲ್ಲಿಸಲು
ಹಾಗೂ ವಿಚಾರಣೆಗೆ ಹೋಗದೆ ಇರುವ ಸಾಧ್ಯತೆಯೂ ಇದೆ. ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ
ನಡೆಯಬೇಕು ಎಂದಿದ್ದರೆ ಚಾಮರಾಜನಗರದಲ್ಲೇ ಆಯೋಗದ ಕಚೇರಿ ಇರಬೇಕು’ ಎಂದು ಅವರು
ಒತ್ತಾಯಿಸಿದರು.   ‘ಮೈಸೂರಿನಲ್ಲಿ ಕಚೇರಿ ತೆರೆಯುವ ಸರ್ಕಾರದ ನಿರ್ಧಾರ ತಪ್ಪು.
ಬಹುತೇಕ ಸಂತ್ರಸ್ತರು ಹಳ್ಳಿಯವರು. ಅವರಿಗೆ ಮೈಸೂರಿಗೆ ಓಡಾಡುವುದು ಕಷ್ಟ. ದುರಂತ
ನಡೆದು ಈಗಾಗಲೇ ತುಂಬಾ ದಿನಗಳಾಗಿವೆ. ಸಂತ್ರಸ್ತರ ಕುಟುಂಬದವರು, ಪ್ರಕರಣದ ಬಗ್ಗೆ
ಮಾಹಿತಿ ಉಳ್ಳವರು, ಇದರ ಬಗ್ಗೆ ಆಸಕ್ತಿ ಕಳೆದುಕೊಳ್ಳುವ ಸಾಧ್ಯತೆ ಇದೆ. ನಿರಾಸಕ್ತಿ
ಬಂದರೆ ಜನರು ಮೈಸೂರಿಗೆ ಹೋಗುವುದಕ್ಕೆ ಹಿಂದೇಟು ಹಾಕಬಹುದು. ಹೀಗಾದರೆ ಇಡೀ ತನಿಖೆಯೇ
ಹಳ್ಳ ಹಿಡಿಯುವ ಸಾಧ್ಯತೆ ಇದೆ’ ಎಂದು ರಂಗಕರ್ಮಿ ಕೆ.ವೆಂಕಟರಾಜು ಅವರು ಕಳವಳ
ವ್ಯಕ್ತಪಡಿಸಿದರು. ಈ   ಬಗ್ಗೆ ಪ್ರತಿಕ್ರಿಯಿಸಿದ, ದುರಂತದಲ್ಲಿ ಮೃತಪಟ್ಟ ಕೊಳ್ಳೇಗಾಲ
ತಾಲ್ಲೂಕಿನ ತಿಮ್ಮರಾಜಿಪುರ ಗ್ರಾಮದ ಕೀರ್ತನಾ ಎಂಬ ಯುವತಿಯ ಮಾವ ಸುರೇಶ್ಅವರು,
‘ತನಿಖಾ ಆಯೋಗದ ಕಚೇರಿಯನ್ನು ಉದ್ದೇಶ ಪೂರ್ವಕವಾಗಿ ಮೈಸೂರಿನಲ್ಲಿ ಮಾಡಿದ್ದಾರೆ.
ಮೈಸೂರು ನಮಗೆ ಸರಿಯಾಗಿ ಗೊತ್ತಿಲ್ಲ. ಈಗ ಬಸ್ ವ್ಯವಸ್ಥೆಯೂ ಇಲ್ಲ. ಹೀಗಾದರೆ ನಾವು
ಏನು ಮಾಡಬೇಕು? ಜಿಲ್ಲೆಯಲ್ಲೇ ತನಿಖಾ ಕಚೇರಿ ತೆರೆದರೆ ಹೋರಾಟ ಮಾಡುತ್ತಾರೆ ಎಂದು
ಕಾರಣಕ್ಕೆ ಸಂಚು ರೂಪಿಸಿದ್ದಾರೆ. ಇದು ರಾಜಕೀಯದ ಷಡ್ಯಂತ್ರ. ಈ ದುರಂತಕ್ಕೆ
ಕಾರಣರಾದವರನ್ನು ಪತ್ತೆಹಚ್ಚಿ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು’ ಎಂದು
ಒತ್ತಾಯಿಸಿದರು.


ಎಲ್ಲಾ ಸಂತ್ರಸ್ಥ ಕುಟುಂಬಗಳೂ ಕೂಡ  ಚಾಮರಾಜನಗರದ ಗ್ರಾಮಾಂತರ ಪ್ರದೇಶದಲ್ಲಿದ್ದು
ಇಂದು ಲಾಕ್ಡೌನ್ನಿಂದಾಗಿ  ಊಟಕ್ಕೂ ಪರದಾಡುತ್ತಿವೆ. ಇನ್ನು ಹಳ್ಳಿಗಳಿಂದ  ಮೈಸೂರಿಗೆ
ಬಂದು  ವಿಚಾರಣೆಗೆ ಹಾಜರಾಗಿ ಹೋಟೆಲಿನಲ್ಲಿ ಊಟ ಮಾಡಿ ಮನೆಗೆ ಹಿಂತಿರುಗಲು ಅಪಾರ ಹಣ
ಬೇಕು. ಕೂಲಿಯೇ ಇಲ್ಲದೆ ಬಸ್ಛಾರ್ಜಿಗೆ ಹಣ ಎಲ್ಲಿಂದ ತರೋದು ಎಂದು  ಮೃ ತ ಆಟೋ ಚಾಲಕ
ಪುಟ್ಟ ರಾಜು ಎಂಬುವವರ ತಾಯಿ ಪ್ರಶ್ನಿಸಿದರು. ಮೃತರೆಲ್ಲರೂ ಬಡ ರೈತರು ಮತ್ತು ಕೂಲಿ
ಕಾರ್ಮಿಕ ಕುಟುಂಬಗಳು. ಬಹುತೇಕ ಕುಟುಂಬಗಳು ದುಡಿಯುವ  ವ್ಯಕ್ತಿಗಳನ್ನು ಕಳೆದುಕೊಂಡು
ಕಣ್ಣೀರಿನಲ್ಲಿ ಕೈ ತೊಳೆಯುತ್ತಿವೆ. ಇನ್ನು ಪರಿಹಾರ ಪಡೆಯಲು ಹಣ ಖರ್ಚು ಮಾಡಿಕೊಂಡು
ಮೈಸೂರಿಗೆ ಬರಬೇಕಲ್ಲ ಎಂಬ ಚಿಂತೆ  ಅವರನ್ನು ಕಾಡುತ್ತಿದೆ.

ಚಾಮರಾಜನಗರ ಆಕ್ಸಿಜನ್ ದುರಂತ : ಈವರೆಗೂ ಮನೆಗೆ ತೆರಳಿ ಸಾಂತ್ವನ ಹೇಳದ ರಾಜ್ಯ ಸರ್ಕಾರ


ಈ ಕುರಿತು ಮಾತನಾಡಿದ    ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರು   , ‘ಈ
ದುರಂತಕ್ಕೆ ಸರ್ಕಾರವೇ ನೇರ ಕಾರಣ. ಅದು ತಪ್ಪಿತಸ್ಥ ಪರ ನಿಂತಿದೆ. ಪ್ರಭಾವಿಗಳಿಂದಲೂ
ಅವರಿಗೆ ರಕ್ಷಣೆ ಸಿಗುತ್ತಿದೆ. ಆದರೆ, ಇದು ತಾತ್ಕಾಲಿಕ ರಕ್ಷಣೆ ಅಷ್ಟೆ. 36 ಜನರ
ಸಾವಿಗೆ ಯಾರು ಕಾರಣ ಎಂದು ಹೈಕೋರ್ಟ್ನೇಮಿಸಿರುವ ಸಮಿತಿ ಈಗಾಗಲೇ ತನಿಖೆ ನಡೆಸಿ
ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ಅಲ್ಲಿ ವಿಚಾರಣೆ ನಡೆಯುತ್ತಿದೆ. ನ್ಯಾಯಮೂರ್ತಿಗಳು
ಖಂಡಿತವಾಗಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿದ್ದಾರೆ ಎಂಬ ವಿಶ್ವಾಸ ಇದೆ’ ಎಂದರು.
‘ಘಟನೆ ನಡೆದ ಬಳಿಕ ಮುಖ್ಯಮಂತ್ರಿ ಅವರು ಸ್ವತಃ ಚಾಮರಾಜನಗರಕ್ಕೆ ಬಂದು ನೊಂದವರಿಗೆ
ಪರಿಹಾರ ವಿತರಿಸಿ ಸಾಂತ್ವನ ಹೇಳಬೇಕಿತ್ತು. ತಪ್ಪಿತಸ್ಥರಿಗೆ ಶಿಕ್ಷೆ ಕೊಡಬೇಕಿತ್ತು.
36 ಜನರು ಮೃತಪಟ್ಟಿದ್ದರೂ ಇವರಿಗೆ ಮಾನವೀಯತೆಯೇ ಇಲ್ಲ. ಸರ್ಕಾರದಲ್ಲಿ ಯಾರಿಗೂ
ಮನುಷ್ವತ್ವವೇ ಇಲ್ಲ’ ಎಂದು ವಾಗ್ದಾಳಿ ನಡೆಸಿದರು.‘ಜಿಲ್ಲೆಯ ಆಸ್ಪತ್ರೆಗೆ ಆಮ್ಲಜನಕ ಪೂರೈಕೆ ಸಂಬಂಧ ಜಿಲ್ಲಾಡಳಿತ ಹಾಗೂ ಮೈಸೂರಿನ ಸದರ್ನ್ಮತ್ತು ಪದಕಿ ಏಜೆನ್ಸಿಗಳ ನಡುವೆ ಒಪ್ಪಂದ ಆಗಿದೆ. ಅಲ್ಲಿಂದ ಆಮ್ಲಜನಕ ತರಿಸಿಕೊಳ್ಳಬೇಕಾಗಿದ್ದು ಚಾಮರಾಜನಗರ ಜಿಲ್ಲಾಧಿಕಾರಿ ಹಾಗೂ ನೋಡೆಲ್ಅಧಿಕಾರಿಗಳ
ಜವಾಬ್ದಾರಿ. ನನ್ನ, ಪ್ರಕಾರ ಇದರಲ್ಲಿ ಬೇರೆಯವರ ಪಾತ್ರ ಇಲ್ಲ’ ಎಂದು  ಅವರು
ಹೇಳಿದರು.

ಆಮ್ಲಜನಕ ದುರಂತ ಪ್ರಕರಣದ ತನಿಖೆಗೆ ಸರ್ಕಾರ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ
ಬಿ.ಎ.ಪಾಟೀಲ ನೇತೃತ್ವದ ತನಿಖಾ ಆಯೋಗದ ಕಚೇರಿಯನ್ನು ಮೈಸೂರಿನಲ್ಲಿ ತೆರೆದಿರುವುದಕ್ಕೆ
ಧ್ರುವನಾರಾಯಣ ಅವರು ವಿರೋಧ ವ್ಯಕ್ತಪಡಿಸಿದರು. ‘ಹೈಕೋರ್ಟ್ತನಿಖೆ ನಡೆಸುತ್ತಿರುವಾಗ
ಮತ್ತೊಂದು ತನಿಖೆ ಅಗತ್ಯವಿಲ್ಲ. ಸರ್ಕಾರ ಈ ಆಯೋಗವನ್ನು ವಾಪಸ್ಪಡೆಯಬೇಕು ಎಂಬುದು
ನಮ್ಮ ಆಗ್ರಹ. ಘಟನೆ ನಡೆದಿರುವುದು ಚಾಮರಾಜನಗರದಲ್ಲಿ, ಆಯೋಗ ಕಚೇರಿ ಮೈಸೂರಿನಲ್ಲಿ
ತೆರೆಯಲಾಗಿದೆ. ಇದು ಇಡೀ ಪ್ರರಕಣವನ್ನು ಮುಚ್ಚಿಹಾಕುವ ತಂತ್ರ. ಸಂತ್ರಸ್ತರಿಗೆ
ಮೈಸೂರಿಗೆ ಹೋಗಿ ದೂರು ಸಲ್ಲಿಸಲು ಸಾಧ್ಯವಿಲ್ಲ’ ಎಂದರು. ‘ರಾಜ್ಯದಲ್ಲಿ ಇದುವರೆಗೆ
ನಡೆದಿರುವ ನ್ಯಾಯಾಂಗ ತನಿಖೆಗಳು ಹಳ್ಳ ಹಿಡಿದಿವೆ. ನೀಡಿರುವ ವರದಿಗಳು ದೂಳು
ತಿನ್ನುತ್ತಿವೆ. ಈ ಪ್ರಕರಣವೂ ಅದೇ ಹಾದಿ ಹಿಡಿಯಲಿದೆ. ದುರಂತಕ್ಕೆ ಸರ್ಕಾರವೇ
ಕಾರಣವಾಗಿರುವುದರಿಂದ ಪ್ರಕರಣ ಮುಚ್ಚಿಹಾಕುವ ಸಂಶಯ ಇದೆ’ ಎಂದು ಧ್ರುವನಾರಾಯಣ
ಹೇಳಿದರು.

Previous Post

ಮೋದಿ ಬೆಲೆ ಏರಿಕೆ ಮಾಡಿ ಜನರ ರಕ್ತ‌ ಕುಡಿಯುವ ತಿಗಣೆಯಂತಾಗಿದ್ದಾರೆ -ಸಿದ್ದರಾಮಯ್ಯ

Next Post

ಕರೋನಾ ಸೋಂಕಿಗೆ ಕವಿ ಡಾ. ಸಿದ್ದಲಿಂಗಯ್ಯ ಬಲಿ

Related Posts

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
0

ನಟ ದರ್ಶನ್ (Darshan) ಅಭಿನಯದ ಮುಂದಿನ ಸಿನಿಮಾ ಡೆವಿಲ್ (Devil) ಶೂಟಿಂಗ್ ಭರದಿಂದ ಸಾಗಿದೆ. ಈಗಾಗಲೇ ಚಿತ್ರತಂಡ ಸಂಪೂರ್ಣ ಟಾಕಿ ಪೋರ್ಷನ್ (Talking portion) ಶೂಟಿಂಗ್ ಮುಗಿಸಿದೆ...

Read moreDetails
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
Next Post
ಕರೋನಾ ಸೋಂಕಿಗೆ ಕವಿ ಡಾ. ಸಿದ್ದಲಿಂಗಯ್ಯ ಬಲಿ

ಕರೋನಾ ಸೋಂಕಿಗೆ ಕವಿ ಡಾ. ಸಿದ್ದಲಿಂಗಯ್ಯ ಬಲಿ

Please login to join discussion

Recent News

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada