• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನ್ಯಾಯದ ಬಾಹು ಬಲಿಷ್ಠವಾಗಿದೆ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಚಾಟಿ

Shivakumar by Shivakumar
May 31, 2021
in ದೇಶ
0
ನ್ಯಾಯದ ಬಾಹು ಬಲಿಷ್ಠವಾಗಿದೆ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಚಾಟಿ
Share on WhatsAppShare on FacebookShare on Telegram

ಈ ಮೊದಲು ಆಮ್ಲಜನಕದ ತೀವ್ರ ಹಾಹಾಕಾರದ ವೇಳೆ ಕೂಡ ಇದೇ ಪೀಠ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡು, ದೇಶದ ಆಮ್ಲಜನಕ ಬಿಕ್ಕಟ್ಟು ನಿರ್ವಹಣೆಗಾಗಿ ದ್ವಿಸದಸ್ಯ ಟಾಸ್ಕ್ ಫೋರ್ಸ್ ರಚಿಸಿತ್ತು. ಇದೀಗ ಮುಂದುವರಿದ ವಿಚಾರಣೆಯ ಭಾಗವಾಗಿ ಲಸಿಕಾ ಬೆಲೆ ಮತ್ತು ಸರಬರಾಜು ವಿಷಯದಲ್ಲಿ ಕೇಂದ್ರ ಸರ್ಕಾರದ ಹೊಣೆಗೇಡಿ ವರಸೆಯನ್ನು ತರಾಟೆಗೆ ತೆಗೆದುಕೊಂಡಿದೆ.

ADVERTISEMENT

“ಕೇಂದ್ರ ಸರ್ಕಾರ ಎಂಬ ಕಾರಣಕ್ಕೆ ನೀವು ಹೇಳಿದ್ದೆಲ್ಲಾ ಸರಿ ಎಂದೇನಲ್ಲ. ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ನಿರ್ಧರಿಸಲು ಮತ್ತು ನಿಮ್ಮ ವಾದಗಳನ್ನು ತಲೆಕೆಳಗು ಮಾಡಲು ನ್ಯಾಯಾಂಗದ ಬಾಹುಗಳು ಬಲಿಷ್ಠವಾಗಿವೆ” ಎಂದು ಸುಪ್ರೀಂಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದೆ.

ಲಸಿಕೆ ದರ ಮತ್ತು ಖರೀದಿ ವಿಷಯದಲ್ಲಿ ತನ್ನ ಹೊಣೆಗಾರಿಕೆಯನ್ನು ರಾಜ್ಯ ಸರ್ಕಾರಗಳ ಹೆಗಲಿಗೆ ದಾಟಿಸಿ ಕೈತೊಳೆದುಕೊಂಡಿರುವ ಕೇಂದ್ರ ಸರ್ಕಾರದ ಧೋರಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಈ ಕಟು ಪ್ರತಿಕ್ರಿಯೆ ನೀಡಿದೆ.

ಕೋವಿಡ್ ಲಸಿಕೆಗೆ ಕೇಂದ್ರ ಸರ್ಕಾರದ ಖರೀದಿಗೆ ಒಂದು ದರ ಮತ್ತು ವಿವಿಧ ರಾಜ್ಯ ಸರ್ಕಾರಗಳಿಗೆ ಒಂದು ದರ ವಿಧಿಸಿರುವ ಕ್ರಮದ ವಿರುದ್ಧ ಸುಪ್ರೀಂಕೋರ್ಟ್ ನಡೆಸುತ್ತಿರುವ ಸು-ಮೋಟೋ ಪ್ರಕರಣದ ವಿಚಾರಣೆ ವೇಳೆ, ನ್ಯಾ. ಡಿ ವೈ ಚಂದ್ರಚೂಡ್, ಎಲ್ ನಾಗೇಶ್ವರರಾವ್ ಹಾಗೂ ರವೀಂದ್ರ ಭಟ್ ಅವರನ್ನೊಳಗೊಂಡ ಪೀಠ, ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ಕಿಡಿಕಾರಿದೆ. ನ್ಯಾ. ಚಂದ್ರಚೂಡ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ದಿನಗಳ ಮಟ್ಟಿಗೆ ಸ್ಥಗಿತಗೊಂಡಿದ್ದ ಈ ಪ್ರಕರಣದ ವಿಚಾರಣೆ ಸೋಮವಾರದಿಂದ ಮತ್ತೆ ಆರಂಭಗೊಂಡಿದೆ.

ದೇಶದ ಎಲ್ಲರಿಗೂ ಉಚಿತ ಲಸಿಕೆ ನೀಡುವುದು ಯಾಕೆ ಸಾಧ್ಯವಿಲ್ಲ? ಯಾವ ಕಾರಣದ ಮೇಲೆ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೇಂದ್ರ ಸರ್ಕಾರ ಉಚಿತ ಲಸಿಕೆ ಸರಬರಾಜು ಮಾಡುವುದು, ಉಳಿದವರಿಗೆ ಆಯಾ ರಾಜ್ಯ ಸರ್ಕಾರಗಳೇ ಲಸಿಕೆ ಖರೀದಿಸಿ ನೀಡಬೇಕು ಎಂಬ ನೀತಿ ಅನುಸರಿಸಲಾಗುತ್ತಿದೆ? ಅದಕ್ಕೆ ಯಾವ ವೈಜ್ಞಾನಿಕ ತಳಹದಿ ಇದೆ? ಎಂದು ಪ್ರಶ್ನಿಸಿದ ಸುಪ್ರೀಂಕೋರ್ಟ್, ನೀವು ಒದಗಿಸುವ ಪ್ರಮಾಣಪತ್ರಗಳನ್ನು ನಂಬಿ ಎಲ್ಲವನ್ನೂ ತೀರ್ಮಾನಿಸಲಾಗದು. ಲಸಿಕೆ ವಿಷಯದಲ್ಲಿ ನಿಮ್ಮ ನೀತಿ ಏನೆಂಬ ಬಗ್ಗೆ ಅಧಿಕೃತ ದಾಖಲೆ ಸಲ್ಲಿಸಿ ಎಂದು ಕೇಂದ್ರಕ್ಕೆ ತಾಕೀತು ಮಾಡಿತು.

ಒಂದೇ ಬಗೆಯ ಲಸಿಕೆಗಳಿಗೆ ರಾಜ್ಯಗಳಿಗೆ ಒಂದು ದರ, ಕೇಂದ್ರಕ್ಕೆ ಒಂದು ದರ ನಿಗದಿ ಮಾಡಲಾಗದು. ಡ್ರಗ್ಸ್ ಅಂಡ್ ಕಾಸ್ಮೆಟಿಕ್ಸ್ ಕಾಯ್ದೆಯಡಿ ಏಕರೀತಿಯ ಲಸಿಕೆ ದರ ನಿಗದಿ ಮಾಡುವ ಎಲ್ಲಾ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ. ಹಾಗಿರುವಾಗ ಲಸಿಕೆ ತಯಾರಿಕಾ ಕಂಪನಿಗಳಿಗೆ ದರ ನಿಗದಿಯ ಸಂಪೂರ್ಣ ಅಧಿಕಾರ ನೀಡುವುದು ಯಾಕೆ ಎಂದು ಪ್ರಶ್ನಿಸಿದ ಕೋರ್ಟ್, ಲಸಿಕೆಗಾಗಿ ಗ್ರಾಮೀಣ ಜನರು ಕೂಡ ಆನ್ ಲೈನ್ ನೋಂದಣಿ ಮಾಡಿಕೊಳ್ಳಬೇಕು ಎಂಬ ನೀತಿಯ ವಿರುದ್ಧವೂ ಕಿಡಿಕಾರಿತು. ದೇಶದಲ್ಲಿ ಡಿಜಿಟಲ್ ಸಾಕ್ಷರತೆ ಎಂಬುದು ಯಾವ ಮಟ್ಟದಲ್ಲಿದೆ ಎಂಬುದು ಗೊತ್ತಿರುವ ವಿಷಯ. ಗ್ರಾಮೀಣ ಭಾರತದ ಬಹಳಷ್ಟು ಮಂದಿ ಲಸಿಕೆಯಿಂದ ದೂರ ಉಳಿಯಲಿದ್ದಾರೆ. ಇಂತಹ ಕಟು ವಾಸ್ತವಗಳನ್ನು ಕೇಂದ್ರ ಸರ್ಕಾರ ಯಾವ ಕಾರಣಕ್ಕಾಗಿ ಉಪೇಕ್ಷಿಸುತ್ತಿದೆ ಎಂದೂ ಪ್ರಶ್ನಿಸಿದೆ.

ಈ ನಡುವೆ, ಕೇಂದ್ರ ಸರ್ಕಾರದ ಪರ ಹಾಜರಿದ್ದ ಹಿರಿಯ ವಕೀಲರು, 2021ರ ಅಂತ್ಯದ ಒಳಗೆ ದೇಶದ ಎಲ್ಲಾ ಅರ್ಹ ನಾಗರಿಕರಿಗೆ ಲಸಿಕೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು. ಆದರೆ, ಅದಕ್ಕೆ ಪ್ರತಿಕ್ರಿಯಿಸಿದ ಪೀಠ, ತಿಂಗಳಿಗೆ ಕೇವಲ 15 ಕೋಟಿ ಮಂದಿಗೆ ಮಾತ್ರ ಲಸಿಕೆ ನೀಡುವುದು ಸಾಧ್ಯ  ಎಂದಾದರೆ, ದೇಶದ ಒಟ್ಟೂ ಜನಸಂಖ್ಯೆಗೆ ವರ್ಷಾಂತ್ಯದ ಒಳಗೆ ಲಸಿಕೆ ನೀಡುವುದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿತು.

ಇದೇ ವೇಳೆ, ಕೋವಿಡ್ ಎರಡನೇ ಅಲೆಯಲ್ಲಿ 45 ವರ್ಷದೊಳಗಿನವರೇ ಹೆಚ್ಚು ಸೋಂಕಿಗೆ ತುತ್ತಾಗಿದ್ದಾರೆ. ಸರ್ಕಾರದ ಅಧಿಕೃತ ಅಂಕಿಅಂಶಗಳೇ ಅದನ್ನು ಹೇಳುತ್ತಿವೆ. ಪರಿಸ್ಥಿತಿ ಹಾಗಿರುವಾಗ 45 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ನಾವು ನೀಡುತ್ತೇವೆ. ಅದರೊಳಗಿನ ವಯೋಮಾನದವರಿಗೆ ರಾಜ್ಯಗಳು ಲಸಿಕಾ ಕಂಪನಿಗಳು ನಿಗದಿಪಡಿಸಿದ ಬೆಲೆ ತೆತ್ತು ಖರೀದಿಸಿ ಲಸಿಕೆ ನೀಡಬೇಕು ಎಂಬುದಕ್ಕೆ ಅರ್ಥವೇನು ಎಂದೂ ಪೀಠ ಪ್ರಶ್ನಿಸಿತು.

ಇದೇ ವೇಳೆ ಲಸಿಕೆಗಳಿಗೆ ದೇಶಾದ್ಯಂತ ಏಕ ರೀತಿಯ ದರ ನಿಗದಿಯಾಗಬೇಕು ಮತ್ತು ಕೇಂದ್ರ ಸರ್ಕಾರವೇ ಲಸಿಕೆ ಸರಬರಾಜು ಹೊಣೆ ವಹಿಸಿಕೊಳ್ಳಬೇಕು ಎಂಬುದು ತನ್ನ ಅಭಿಪ್ರಾಯ. ಸರ್ಕಾರದ ನೀತಿ ನಿರೂಪಣೆ ವಲಯಕ್ಕೆ ತಾನು ಮೂಗು ತೂರಿಸುವುದಿಲ್ಲ. ಆದರೆ, ಕರೋನಾದಂತಹ ಪರಿಸ್ಥಿತಿಯ ವಿಷಯದಲ್ಲಿ ಜನರ ಜೀವ ಕಾಯುವುದು ಮತ್ತು ಎಲ್ಲರಿಗೂ ಸಮಾನ ಅವಕಾಶ ಮತ್ತು ಬದುಕುವ ಹಕ್ಕು ಇದೆ ಎಂಬುದನ್ನು ಖಾತರಿಪಡಿಸುವುದು ತಮ್ಮ ಕರ್ತವ್ಯ ಎಂಬುದನ್ನು ಪೀಠ ಕೇಂದ್ರ ಸರ್ಕಾರಕ್ಕೆ ಮೌಖಿಕವಾಗಿ ತಿಳಿಸಿತು.

ಈ ಮೊದಲು ಆಮ್ಲಜನಕದ ತೀವ್ರ ಹಾಹಾಕಾರದ ವೇಳೆ ಕೂಡ ಇದೇ ಪೀಠ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡು, ದೇಶದ ಆಮ್ಲಜನಕ ಬಿಕ್ಕಟ್ಟು ನಿರ್ವಹಣೆಗಾಗಿ ದ್ವಿಸದಸ್ಯ ಟಾಸ್ಕ್ ಫೋರ್ಸ್ ರಚಿಸಿತ್ತು. ಇದೀಗ ಮುಂದುವರಿದ ವಿಚಾರಣೆಯ ಭಾಗವಾಗಿ ಲಸಿಕಾ ಬೆಲೆ ಮತ್ತು ಸರಬರಾಜು ವಿಷಯದಲ್ಲಿ ಕೇಂದ್ರ ಸರ್ಕಾರದ ಹೊಣೆಗೇಡಿ ವರಸೆಯನ್ನು ತರಾಟೆಗೆ ತೆಗೆದುಕೊಂಡಿದೆ.

Previous Post

ಕಲಾಪ ಯೂಟೂಬ್ ಲೈವ್ ಪ್ರಸಾರ: ರಾಜ್ಯ ಹೈಕೋರ್ಟ್ ಐತಿಹಾಸಿಕ ಹೆಜ್ಜೆ

Next Post

ಕೇಂದ್ರ ಬಿಜೆಪಿ ಸರ್ಕಾರಕ್ಕೆ ಏಳು ವರ್ಷ: ತಮ್ಮ‌ಬೆನ್ನು ತಾವೇ ಕಟ್ಟಿಕೊಳ್ಳುತ್ತಿರುವ ಬಿಜೆಪಿ ನಾಯಕರು – ಸಿದ್ದರಾಮಯ್ಯ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ಕೇಂದ್ರ ಬಿಜೆಪಿ ಸರ್ಕಾರಕ್ಕೆ ಏಳು ವರ್ಷ: ತಮ್ಮ‌ಬೆನ್ನು ತಾವೇ ಕಟ್ಟಿಕೊಳ್ಳುತ್ತಿರುವ ಬಿಜೆಪಿ ನಾಯಕರು – ಸಿದ್ದರಾಮಯ್ಯ

ಕೇಂದ್ರ ಬಿಜೆಪಿ ಸರ್ಕಾರಕ್ಕೆ ಏಳು ವರ್ಷ: ತಮ್ಮ‌ಬೆನ್ನು ತಾವೇ ಕಟ್ಟಿಕೊಳ್ಳುತ್ತಿರುವ ಬಿಜೆಪಿ ನಾಯಕರು - ಸಿದ್ದರಾಮಯ್ಯ

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada