• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸೈಬರ್ ಅಪರಾಧವನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕಾನೂನು ಜಾರಿಗೆ ಕರೆ ನೀಡಿದ ಜಸ್ಟಿಸ್ ಅರುಣ್ ಮಿಶ್ರಾ

ಫಾತಿಮಾ by ಫಾತಿಮಾ
February 3, 2023
in ದೇಶ
0
ಸೈಬರ್ ಅಪರಾಧವನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕಾನೂನು ಜಾರಿಗೆ ಕರೆ ನೀಡಿದ ಜಸ್ಟಿಸ್ ಅರುಣ್ ಮಿಶ್ರಾ
Share on WhatsAppShare on FacebookShare on Telegram

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) ಅಧ್ಯಕ್ಷರಾಗಿರುವ  ನಿವೃತ್ತ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ‘ಕಾನೂನುಬಾಹಿರ ಇಂಟರ್ನೆಟ್ ನಡವಳಿಕೆ ಮತ್ತು ಸೈಬರ್ ಅಪರಾಧಗಳಿಗೆ’ ದಂಡ ವಿಧಿಸಲು ‘ಕಠಿಣ ಕಾನೂನು’ ಜಾರಿಗೆ ತರಲು ಕರೆ ನೀಡಿದ್ದಾರೆ.

ADVERTISEMENT

ಅಹಮದಾಬಾದ್‌ನಲ್ಲಿ ನಡೆದ 25 ನೇ ಅಖಿಲ ಭಾರತ ವಿಧಿವಿಜ್ಞಾನ ಸಮ್ಮೇಳನದಲ್ಲಿ ಮಾತನಾಡಿದ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರು, ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರಂಗಳು ಮತ್ತು ಸೈಬರ್‌ಸ್ಪೇಸ್‌ನಲ್ಲಿನ ಅಭಿವ್ಯಕ್ತಿ ಸ್ವಾತಂತ್ರ್ಯವು ಸಂವಿಧಾನದ 19 ನೇ ಪರಿಚ್ಛೇದದ ಅಡಿಯಲ್ಲಿ ನೀಡಲಾಗಿರುವ ಸ್ವಾತಂತ್ರಕ್ಕಿಂತ ‘ದೊಡ್ಡದಲ್ಲ’ ಎಂದು ಹೇಳಿದ್ದಾರೆ. 

“ತಂತ್ರಜ್ಞಾನಗಳು ಹೊಸ ರೀತಿಯ ಅಸ್ತ್ರಗಳಾಗಿದ್ದು ಅಪರಾಧ ಎಸಗುವಲ್ಲಿನ ವಿಧಾನದಲ್ಲಿ ಬದಲಾವಣೆಗಳಾಗಿವೆ” ಎಂದು ಮಿಶ್ರಾ ಅಭಿಪ್ರಾಯ ಪಟ್ಟಿದ್ದಾರೆ. “ಕಳೆದ ದಶಕದಲ್ಲಿ ಇಂಟರ್ನೆಟ್ ಬಳಕೆದಾರರ ಅಸಾಮಾನ್ಯ ಏರಿಕೆಗೆ ನಾವು ಸಾಕ್ಷಿಯಾಗಿದ್ದೇವೆ.  ವ್ಯಕ್ತಿಗಳ ಗೌಪ್ಯತೆ ಸೇರಿದಂತೆ ನಾಗರಿಕ ಮತ್ತು ಮಾನವ ಹಕ್ಕುಗಳನ್ನು ದೊಡ್ಡ ಪ್ರಮಾಣದಲ್ಲಿ ಉಲ್ಲಂಘಿಸಲು ಸೈಬರ್‌ಸ್ಪೇಸ್ ಅನ್ನು ಬಳಸಲಾಗುತ್ತಿದೆ.  ಮಾನವ ಹಕ್ಕುಗಳ ಸಂರಕ್ಷಣೆಗಾಗಿ ಸೈಬರ್ ಅಪರಾಧಗಳ ವಿರುದ್ಧ ಹೋರಾಡುವಲ್ಲಿ ಸೈಬರ್ ಸುರಕ್ಷತೆಯು ಅತ್ಯಂತ ಪ್ರಾಮುಖ್ಯತೆ ಉಳ್ಳದ್ದಾಗಿದೆ” ಎಂದೂ ಅವರು ಹೇಳಿದ್ದಾರೆ.

ಸೈಬರ್ ಬೆದರಿಕೆಗಳನ್ನು ಪತ್ತೆಹಚ್ಚುವಲ್ಲಿ ಮತ್ತು ಸೈಬರ್ ಉದ್ದೇಶಿತ ದಾಳಿಗಳನ್ನು ಸಮರ್ಥವಾಗಿ ಎದುರಿಸುವ ವಿಚಾರದಲ್ಲಿ ಭಾರತವು ಅತ್ಯಂತ ದುರ್ಬಲ ರಾಷ್ಟ್ರಗಳಲ್ಲಿ ಒಂದು ಎಂಬುವುದನ್ನು ಗೃಹ ವ್ಯವಹಾರಗಳ ಸಚಿವಾಲಯದ ಪೋರ್ಟಲೇ ತೋರಿಸುತ್ತದೆ ಎಂದು ಮಾಜಿ ನ್ಯಾಯಾಧೀಶರು ವಿಷಾದ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಭಾರತದಲ್ಲಿ ಕೆಳಸ್ತರದಲ್ಲಿರುವ ಜನಗಳೇ ಹೆಚ್ಚಾಗಿ ಕಳ್ಳತನ ಮತ್ತು ವಂಚನೆಗಳಂತಹ ಸೈಬರ್ ಅಪರಾಧಗಳಿಗೆ ಗುರಿಯಾಗುತ್ತಾರೆ ಎಂದೂ ಅವರು ಹೇಳಿದ್ದಾರೆ

“ಕಾನೂನುಬಾಹಿರ ಇಂಟರ್ನೆಟ್ ನಡವಳಿಕೆ ಮತ್ತು ಸೈಬರ್ ಅಪರಾಧಗಳಿಗೆ ದಂಡ ವಿಧಿಸಲು ಮತ್ತು ಶಿಕ್ಷಿಸಲು ಸೈಬರ್-ನಡಾವಳಿ ಮತ್ತು ಕಟ್ಟುನಿಟ್ಟಾದ ಶಾಸನವನ್ನು ಸರ್ಕಾರವು ಉತ್ತೇಜಿಸುವುದು ಅಗತ್ಯವಾಗಿದೆ.  ಹೊಸ ರೀತಿಯ ಅಪರಾಧಗಳ ಆಗಮನದೊಂದಿಗೆ ಸೈಬರ್ ಅಪರಾಧಗಳನ್ನು ಎದುರಿಸಲು ನಿರ್ದಿಷ್ಟವಾಗಿ ವಿನ್ಯಾಸಗೊಳಿಸಲಾದ ಕಾನೂನನ್ನು ಅನೇಕ ದೇಶಗಳು ತಿದ್ದುಪಡಿ ಮಾಡಿವೆ.  ಹೆಚ್ಚಿನ ಗಣಕೀಕೃತ ವಿಧಿವಿಜ್ಞಾನ ಪ್ರಯೋಗಾಲಯಗಳು, ಮಾಹಿತಿ ತಂತ್ರಜ್ಞಾನದ ಮೇಲಿನ  ಕೇಂದ್ರಗಳು, ಭದ್ರತಾ ಶಿಕ್ಷಣ ಮತ್ತು ತರಬೇತಿ ತನಿಖಾಧಿಕಾರಿಗಳು, ವಕೀಲರು ಮತ್ತು ನ್ಯಾಯಾಧೀಶರ ಅಗತ್ಯ ದೇಶಕ್ಕಿದೆ ”ಎಂದು ಅವರು ಹೇಳಿದ್ದಾರೆ.

ವಿಶ್ವಾದ್ಯಂತ ಮಾನವ ಹಕ್ಕುಗಳ ಗುರುತಿಸುವಿಕೆ ಮತ್ತು ಸಂರಕ್ಷಣೆಗೆ ನ್ಯಾಯ ವಿಜ್ಞಾನವು ಅತ್ಯಗತ್ಯ ಎಂದು ಒತ್ತಿಹೇಳುತ್ತಾ “ವಿಧಿ ವಿಜ್ಞಾನವು ಭಾರತದಲ್ಲಿ ಕೌಟಿಲ್ಯನ ಅರ್ಥಶಾಸ್ತ್ರದಷ್ಟು ಹಿಂದಿನದು,  ಸುಮಾರು 2,300 ವರ್ಷಗಳ ಹಿಂದೆ ಬರೆಯಲಾಗಿರುವ  ‘ತಾರಿಜಾ’ ಎಂದು ಕರೆಯಲ್ಪಡುವ ಹಸ್ತಮುದ್ರೆಗಳನ್ನು ಸಹಿಯ ಇನ್ನೊಂದು ರೂಪವೆಂದು ಪರಿಗಣಿಸಲಾಗಿದೆ.  ಫಿಂಗರ್‌ಪ್ರಿಂಟ್‌ನ ಮೂಲಕ ಮಾಡುವ ಗುರುತಿಸುವಿಕೆ ಎಂದಿಗೂ ತಪ್ಪಾಗುವುದಿಲ್ಲ ಎಂಬುವುದು ವೈಜ್ಞಾನಿಕವಾಗಿ ಸಾಬೀತಾಗಿದೆ” ಎಂದೂ ಅವರು ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

Previous Post

ವಿಶ್ವೇಶ್ವರಯ್ಯಾ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ಸೂಲಿಬೆಲೆ

Next Post

ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67
ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನೆ

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನೆ

ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67
ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada