• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗುಜರಾತ್ ಗಲಭೆ, ಸಿಖ್ ವಿರೋಧಿ ದಂಗೆಯ ತನಿಖಾ ಆಯೋಗದ ನೇತೃತ್ವ ವಹಿಸಿದ್ದ ನ್ಯಾಯಮೂರ್ತಿ ಜಿ.ಟಿ. ನಾನಾವತಿ ನಿಧನ

Any Mind by Any Mind
December 18, 2021
in ದೇಶ
0
ಗುಜರಾತ್ ಗಲಭೆ, ಸಿಖ್ ವಿರೋಧಿ ದಂಗೆಯ ತನಿಖಾ ಆಯೋಗದ ನೇತೃತ್ವ ವಹಿಸಿದ್ದ ನ್ಯಾಯಮೂರ್ತಿ ಜಿ.ಟಿ. ನಾನಾವತಿ ನಿಧನ
Share on WhatsAppShare on FacebookShare on Telegram

2002ರ ಗುಜರಾತ್ ಗಲಭೆ ಮತ್ತು 1984ರ ಸಿಖ್ ವಿರೋಧಿ ದಂಗೆಯ ತನಿಖಾ ಆಯೋಗದ ನೇತೃತ್ವ ವಹಿಸಿದ್ದ ನ್ಯಾಯಮೂರ್ತಿ (ನಿವೃತ್ತ) ಜಿ ಟಿ ನಾನಾವತಿ (೮೬) ಅವರು ಶನಿವಾರ ಬೆಳಗ್ಗೆ ಅಹಮದಾಬಾದ್ ನಿವಾಸದಲ್ಲಿ ನಿಧನರಾಗಿದ್ದಾರೆ.

ADVERTISEMENT

ನ್ಯಾಯಮೂರ್ತಿ ನಾನಾವತಿ ಅವರನ್ನು ಶನಿವಾರ ಸಂಜೆ 5:15 ರ ಸುಮಾರಿಗೆ ಥಾಲ್ತೇಜ್ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಗುಜರಾತ್ ಹೈಕೋರ್ಟ್ ವಕೀಲರ ಸಂಘ ತಿಳಿಸಿದೆ.

ಗೋಧ್ರಾ ರೈಲು ದುರಂತ ಮತ್ತು ನಂತರ ಗುಜರಾತ್‌ನಲ್ಲಿ ಸುಮಾರು 1,200 ಜನರ ಸಾವಿಗೆ ಕಾರಣವಾದ ಗಲಭೆಗಳ ತನಿಖೆಗೆ ನೇಮಕಗೊಂಡ ನ್ಯಾಯಮೂರ್ತಿ ನಾನಾವತಿ ಆಯೋಗವು ಈಗಿನ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿ ಮಂಡಳಿಗೆ, ಪೊಲೀಸರಿಗೆ ಹಾಗೂ ಬಿಜೆಪಿ, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳಕ್ಕೆ 2019 ಸಲ್ಲಿಸಿದ ಅಂತಿಮ ವರದಿಯಲ್ಲಿ ಕ್ಲೀನ್ ಚಿಟ್ ನೀಡಿತ್ತು. ಜೊತೆಗೆ ಆಯೋಗವು ತನ್ನ ವಿಚಾರಣೆಯ ಸಂದರ್ಭದಲ್ಲಿ ಗುಜರಾತ್‌ನ ಆಗಿನ ಸಿಎಂ ಮೋದಿಯವರಿಗೆ ಯಾವುದೇ ಸಮನ್ಸ್ ನೀಡಿರಲಿಲ್ಲ.

ನ್ಯಾಯಮೂರ್ತಿ ನಾನಾವತಿ ಅವರು 1958 ರಲ್ಲಿ ಬಾಂಬೆ ಹೈಕೋರ್ಟಿನಲ್ಲಿ ವಕೀಲರಾಗಿ ವೃತ್ತಿ ಆರಂಭಿಸಿದರು. ಜುಲೈ 1979 ರಿಂದ ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ನೇಮಕಗೊಂಡರು. 1993 ರಲ್ಲಿ ಒರಿಸ್ಸಾ ಹೈಕೋರ್ಟ್‌ಗೆ ನಾನಾವತಿ ಅವರನ್ನು ವರ್ಗಾಯಿಸಲಾಯಿತು.

1994 ರ ಜನವರಿಯಲ್ಲಿ ಒರಿಸ್ಸಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾದರು. ಸೆಪ್ಟೆಂಬರ್ 1994 ರಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾವಣೆಗೊಂಡರು. ನಂತರ ಅವರು ಮಾರ್ಚ್ 1995 ರಲ್ಲಿ ಭಾರತದ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡು, 2000 ರಲ್ಲಿ ನಿವೃತ್ತರಾದರು.

Tags: BJPCongress PartyCovid 19ಗುಜರಾತ್ ಗಲಭೆಗೋಧ್ರಾ ರೈಲು ದುರಂತಜಿ.ಟಿ. ನಾನಾವತಿನರೇಂದ್ರ ಮೋದಿಬಜರಂಗ ದಳಬಿಜೆಪಿವಿಶ್ವ ಹಿಂದೂ ಪರಿಷತ್ಸಿಖ್ ವಿರೋಧಿ ದಂಗೆ
Previous Post

ಬೆಳಗಾವಿ: ರಾಯಣ್ಣ ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ – DCP ವಿಕ್ರಮ್ ಆಮ್ಟೆ

Next Post

ಮಾರಲ್‌ ಪೊಲೀಸಿಂಗ್‌ ಅನ್ನು ಪ್ರೋತ್ಸಾಹಿಸಿದ ಪರಿಣಾಮ ಇಂದು ಪಶ್ಚಾತಾಪ : DK Shivakumar

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ಮಾರಲ್‌ ಪೊಲೀಸಿಂಗ್‌ ಅನ್ನು ಪ್ರೋತ್ಸಾಹಿಸಿದ ಪರಿಣಾಮ ಇಂದು ಪಶ್ಚಾತಾಪ : DK Shivakumar

ಮಾರಲ್‌ ಪೊಲೀಸಿಂಗ್‌ ಅನ್ನು ಪ್ರೋತ್ಸಾಹಿಸಿದ ಪರಿಣಾಮ ಇಂದು ಪಶ್ಚಾತಾಪ : DK Shivakumar

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada