• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
April 4, 2026
in Top Story
0
ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ
Share on WhatsAppShare on FacebookShare on Telegram

ಬೆಂಗಳೂರು (ಏ.03):

ADVERTISEMENT

ಸ್ಕೌಟ್ಸ್ ಅಂಡ್ ಗೈಡ್ಸ್ ಕಾರ್ಯಕ್ರಮದ ವೇಳೆ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದುಬಿದ್ದ ಮಾಜಿ ಲೋಕಾಯುಕ್ತ, ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರ ಆರೋಗ್ಯ ಈಗ ಸ್ಥಿರವಾಗಿದೆ. ಆರಂಭದಲ್ಲಿ ಆತಂಕ ಮೂಡಿಸಿದ್ದ ಘಟನೆಗೆ ವೈದ್ಯಕೀಯ ತಪಾಸಣೆಯ ಬಳಿಕ ನಿರಾಳತೆ ದೊರೆತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಪಿ.ಜಿ.ಆರ್. ಸಿಂಧ್ಯಾ ಅವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದ ವೇಳೆ ಸಂತೋಷ್ ಹೆಗ್ಡೆ ಅವರಿಗೆ ಏಕಾಏಕಿ ಅಸ್ವಸ್ಥತೆ ಕಾಣಿಸಿಕೊಂಡಿತು. ಎರಡು ಬಾರಿ ವಾಂತಿ ಆಗಿ ತೀವ್ರ ದೌರ್ಬಲ್ಯ ಅನುಭವಿಸಿದ ಅವರು ಮನೆಗೆ ತೆರಳಲು ವೇದಿಕೆಯಿಂದ ಇಳಿಯುವ ವೇಳೆ ಅಚಾನಕ್ ಕುಸಿದುಬಿದ್ದರು. ಸ್ಥಳದಲ್ಲಿದ್ದ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದರು.

ಘಟನೆಯ ಸಮಯದಲ್ಲಿ ಆಂಬ್ಯುಲೆನ್ಸ್ ಲಭ್ಯವಿರದ ಹಿನ್ನೆಲೆಯಲ್ಲಿ, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಮ್ಮ ಸರ್ಕಾರಿ ವಾಹನದಲ್ಲೇ ಅವರನ್ನು ಮಿಲರ್ಸ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಸಾಗಿಸಿದರು. ತಕ್ಷಣ ಚಿಕಿತ್ಸೆ ನೀಡಲಾಗಿದ್ದು, ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ್ದಾರೆ.ಆಸ್ಪತ್ರೆಯ ವೈದ್ಯರ ಪ್ರಕಾರ, ಸಂತೋಷ್ ಹೆಗ್ಡೆ ಅವರಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಉಂಟಾಗಿಲ್ಲ. ಸುಸ್ತು ಮತ್ತು ತಲೆಸುತ್ತಿನಿಂದ ಅವರು ಕುಸಿದುಬಿದ್ದಿದ್ದು, ಹೃದಯಾಘಾತದಂತಹ ಅಪಾಯಕರ ಸ್ಥಿತಿ ಕಂಡುಬಂದಿಲ್ಲ. ಬಿಪಿ ಮತ್ತು ಶುಗರ್ ಮಟ್ಟ ಸಹ ಸಾಮಾನ್ಯವಾಗಿದ್ದು, ಶೀಘ್ರದಲ್ಲೇ ಅವರನ್ನು ಡಿಸ್ಚಾರ್ಜ್ ಮಾಡುವುದಾಗಿ ತಿಳಿಸಿದ್ದಾರೆ.

Davangere By Election: ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರು ಗೆದ್ದೇ ಗೆಲ್ತಾರೆ..! #pratidhvani

ಸಂತೋಷ್ ಹೆಗ್ಡೆ ಅವರ ಆರೋಗ್ಯ ಸುಧಾರಿಸಿದೆ ಎಂಬ ಮಾಹಿತಿ ತಿಳಿದ ನಂತರ ಕುಟುಂಬಸ್ಥರು ಹಾಗೂ ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Tags: bengaluru newsBreaking NewsFormer LokayuktaHealth Newshealth updatekarnataka newsManipal HospitalMedical emergencypratidavaniPublic EventSantosh HegdeScouts and GuidesU T Khader
Previous Post

40 ವರ್ಷ ಮೇಲ್ಪಟ್ಟವರಿಗೆ ಇಲ್ಲಿದೆ ಗುಡ್ ನ್ಯೂಸ್:ಕರ್ನಾಟಕ ಸರ್ಕಾರದ ಮಹತ್ವದ ಯೋಜನೆ ಆರಂಭ

Next Post

ಇರಾನ್–ಇಸ್ರೇಲ್ ಉದ್ವಿಗ್ನತೆ: ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ನಷ್ಟ, ಶಾಂತಿಗೆ ಒತ್ತಾಯ

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಇರಾನ್–ಇಸ್ರೇಲ್ ಉದ್ವಿಗ್ನತೆ: ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ನಷ್ಟ, ಶಾಂತಿಗೆ ಒತ್ತಾಯ

ಇರಾನ್–ಇಸ್ರೇಲ್ ಉದ್ವಿಗ್ನತೆ: ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ನಷ್ಟ, ಶಾಂತಿಗೆ ಒತ್ತಾಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada