
ಕೃಷ್ಣಾ ಮೇಲ್ದಂಡೆ ಯೋಜನೆಗೆ ಸರ್ಕಾರ ನಿರ್ಲಕ್ಷ ತೋರುತ್ತಿದೆ ಎಂದು ಆರೋಪಿಸಿ ಬಾಗಲಕೋಟೆಯಲ್ಲಿ ಅಹೋರಾತ್ರಿ ಹೋರಾಟ ನಡೆಯುತ್ತಿದೆ. ಈ ಹೋರಾಟದ ಮುಂಚೂಣಿಯಲ್ಲಿ ಕಾಂಗ್ರೆಸ್ ನಾಯಕರೇ ಇರುವುದು ವಿಶೇಷ. ರಾಜ್ಯದಲ್ಲಿ ತಮ್ಮದೇ ಕಾಂಗ್ರೆಸ್ ಪಕ್ಷದ ಸರ್ಕಾರ ಇದ್ದರೂ ಕಾಂಗ್ರೆಸ್ ನಾಯಕರು ಹೋರಾಟದ ಮುಂಚೂಣಿ ನಾಯಕತ್ವ ವಹಿಸಿಕೊಂಡಿದ್ದಾರೆ. ಮಾಜಿ ಸಚಿವ ಎಸ್.ಆರ್ ಪಾಟೀಲ್ ಹಾಗು ಅಜಯ್ ಕುಮಾರ್ ಸರನಾಯಕ ನಾಯಕತ್ವದಲ್ಲಿ ಹೋರಾಟ ನಡೆಯುತ್ತಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಹೋರಾಟ ರೂಪಿಸಿ ನೇತೃತ್ವದ ವಹಿಸಲು ಕಾರಣ ಏನು..? ಅನ್ನೋ ಬಗ್ಗೆ ಭಾರೀ ಚರ್ಚೆ ಹುಟ್ಟುಹಾಕಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಮುಜುಗರ ಉಂಟು ಮಾಡಲು..? ಹೋರಾಟ ಮಾಡುತ್ತಿದ್ದಾರಾ..? ಅನ್ನೋ ಚರ್ಚೆಯ ಜೊತೆಗೆ ಪರಿಷತ್ ಸ್ಥಾನದ ಟಿಕೆಟ್ ಪಡೆಯಲು ಲೆಕ್ಕಾಚಾರ ಮಾಡಿಕೊಂಡು ಯೋಜನೆ ರೂಪಿಸಿದ್ದಾರಾ..? ಅನ್ನೋ ಬಗ್ಗೆ ಕಾಂಗ್ರೆಸ್ ಪಕ್ಷದ ಒಳಗೇ ಚರ್ಚೆ ಶುರುವಾಗಿದೆ.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಆಗಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಯೋಜನೆ ಮಾಡಿದ್ದಾರೆ ಎನ್ನಲಾಗ್ತಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಅಜಯಕುಮಾರ್ ಸರನಾಯಕ್ ಹಾಗು ಸಿಎಂ ಸಿದ್ದರಾಮಯ್ಯ ಜೊತೆಗೆ ಅಷ್ಟಕಷ್ಟೇ ಎನ್ನುವಂತೆ ಇರುವ ಮಾಜಿ ಸಚಿವ ಎಸ್.ಆರ್ ಪಾಟೀಲರು ಹೋರಾಟಕ್ಕೆ ಧುಮುಕಿದ್ದು, ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ.
ಈಗಾಗಲೇ ಸಂತ್ರಸ್ತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬುಧವಾರ ಸಭೆ ಕರೆದಿದೆ. ಬಾಗಲಕೋಟೆಯ ಜಿಲ್ಲಾಡಳಿ ಭವನದ ಮುಂಭಾಗ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಯುತ್ತಿದ್ದು, ಸರ್ಕಾರದ ನಿರ್ಧಾರದ ಬಳಿಕ ಹೋರಾಟದ ಭವಿಷ್ಯ ನಿರ್ಧಾರ ಆಗಲಿದೆ. ಆದರೆ ಕಾಂಗ್ರೆಸ್ ಸರ್ಕಾರದಲ್ಲೇ ಒಳಗೊಳಗೆ ಮತ್ತೊಂದು ಲೆಕ್ಕಾಚಾರ ನಡೆಯುತ್ತಿದೆ ಅನ್ನೋದು ಮಾತ್ರ ಸತ್ಯ.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಸರ್ಕಾರ ನಿರ್ಲಕ್ಷ ತೋರುತ್ತಿದೆ ಎಂದು ಆರೋಪಿಸಿ ಬಾಗಲಕೋಟೆಯಲ್ಲಿ ಅಹೋರಾತ್ರಿ ಹೋರಾಟ ನಡೆಯುತ್ತಿದೆ. ಈ ಹೋರಾಟದ ಮುಂಚೂಣಿಯಲ್ಲಿ ಕಾಂಗ್ರೆಸ್ ನಾಯಕರೇ ಇರುವುದು ವಿಶೇಷ. ರಾಜ್ಯದಲ್ಲಿ ತಮ್ಮದೇ ಕಾಂಗ್ರೆಸ್ ಪಕ್ಷದ ಸರ್ಕಾರ ಇದ್ದರೂ ಕಾಂಗ್ರೆಸ್ ನಾಯಕರು ಹೋರಾಟದ ಮುಂಚೂಣಿ ನಾಯಕತ್ವ ವಹಿಸಿಕೊಂಡಿದ್ದಾರೆ. ಮಾಜಿ ಸಚಿವ ಎಸ್.ಆರ್ ಪಾಟೀಲ್ ಹಾಗು ಅಜಯ್ ಕುಮಾರ್ ಸರನಾಯಕ ನಾಯಕತ್ವದಲ್ಲಿ ಹೋರಾಟ ನಡೆಯುತ್ತಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಹೋರಾಟ ರೂಪಿಸಿ ನೇತೃತ್ವದ ವಹಿಸಲು ಕಾರಣ ಏನು..? ಅನ್ನೋ ಬಗ್ಗೆ ಭಾರೀ ಚರ್ಚೆ ಹುಟ್ಟುಹಾಕಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಮುಜುಗರ ಉಂಟು ಮಾಡಲು..? ಹೋರಾಟ ಮಾಡುತ್ತಿದ್ದಾರಾ..? ಅನ್ನೋ ಚರ್ಚೆಯ ಜೊತೆಗೆ ಪರಿಷತ್ ಸ್ಥಾನದ ಟಿಕೆಟ್ ಪಡೆಯಲು ಲೆಕ್ಕಾಚಾರ ಮಾಡಿಕೊಂಡು ಯೋಜನೆ ರೂಪಿಸಿದ್ದಾರಾ..? ಅನ್ನೋ ಬಗ್ಗೆ ಕಾಂಗ್ರೆಸ್ ಪಕ್ಷದ ಒಳಗೇ ಚರ್ಚೆ ಶುರುವಾಗಿದೆ.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಆಗಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಯೋಜನೆ ಮಾಡಿದ್ದಾರೆ ಎನ್ನಲಾಗ್ತಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಅಜಯಕುಮಾರ್ ಸರನಾಯಕ್ ಹಾಗು ಸಿಎಂ ಸಿದ್ದರಾಮಯ್ಯ ಜೊತೆಗೆ ಅಷ್ಟಕಷ್ಟೇ ಎನ್ನುವಂತೆ ಇರುವ ಮಾಜಿ ಸಚಿವ ಎಸ್.ಆರ್ ಪಾಟೀಲರು ಹೋರಾಟಕ್ಕೆ ಧುಮುಕಿದ್ದು, ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ.
ಈಗಾಗಲೇ ಸಂತ್ರಸ್ತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬುಧವಾರ ಸಭೆ ಕರೆದಿದೆ. ಬಾಗಲಕೋಟೆಯ ಜಿಲ್ಲಾಡಳಿ ಭವನದ ಮುಂಭಾಗ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಯುತ್ತಿದ್ದು, ಸರ್ಕಾರದ ನಿರ್ಧಾರದ ಬಳಿಕ ಹೋರಾಟದ ಭವಿಷ್ಯ ನಿರ್ಧಾರ ಆಗಲಿದೆ. ಆದರೆ ಕಾಂಗ್ರೆಸ್ ಸರ್ಕಾರದಲ್ಲೇ ಒಳಗೊಳಗೆ ಮತ್ತೊಂದು ಲೆಕ್ಕಾಚಾರ ನಡೆಯುತ್ತಿದೆ ಅನ್ನೋದು ಮಾತ್ರ ಸತ್ಯ.