• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಲಬುರಗಿ ‌| ಪ್ರತಿಮೆಗೆ ಅಲಂಕಾರ ಮಾಡದೆ ಅಗೌರವ; ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
July 7, 2024
in Top Story, ಜೀವನದ ಶೈಲಿ, ದೇಶ, ರಾಜಕೀಯ, ವಿಶೇಷ, ಶೋಧ
0
ಕಲಬುರಗಿ ‌| ಪ್ರತಿಮೆಗೆ ಅಲಂಕಾರ ಮಾಡದೆ ಅಗೌರವ; ಆರೋಪ
Share on WhatsAppShare on FacebookShare on Telegram

ಕಲಬುರಗಿ: ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 38ನೇ ಪುಣ್ಯಸ್ಮರಣೆ ಅಂಗವಾಗಿ ಟೌನ್‌ಹಾಲ್‌ ಆವರಣದ ಬಾಬೂಜಿ ಅವರ ಪ್ರತಿಮೆಗೆ ಅಲಂಕಾರ ಮಾಡದೆ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಬಾಬೂಜಿ ಅಭಿಮಾನಿಗಳು, ದಲಿತ ಸಂಘರ್ಷ ಸಮಿತಿಯ ಮುಖಂಡರು ಶನಿವಾರ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಪ್ರತಿಮೆಗೆ ಮಾಲಾರ್ಪಣೆ ಮಾಡಲು ಬಂದಿದ್ದ ಶಾಸಕ ಅಲ್ಲಮಪ್ರಭು ಪಾಟೀಲ ಅವರನ್ನು ತಡೆದ ಮುಖಂಡರು, ತಮ್ಮ ಅಳಲು ತೋಡಿಕೊಂಡರು. ಪುಣ್ಯಸ್ಮರಣೆಯ ಹಿಂದಿನ ದಿನ ಜಿಲ್ಲಾಡಳಿತವು ಪ್ರತಿಮೆಯ ಸುತ್ತ ಹೂ ಗುಚ್ಛಗಳನ್ನು ಇರಿಸಿ ಅಲಂಕಾರ ಮಾಡಿಲ್ಲ. ಜಿಲ್ಲಾ ಮಟ್ಟದ ಅಧಿಕಾರಿಗಳು, ಪಾಲಿಕೆಯ ಅಧಿಕಾರಿಗಳು ಬೆಳಿಗ್ಗೆ 9ಕ್ಕೆ ಬರುವ ಬದಲು ತಡವಾಗಿ ಬಂದು ಕಾಟಾಚಾರಕ್ಕೆ ಸಣ್ಣದೊಂದು ಹೂವಿನ ಮಾಲೆ ಹಾಕಿದ್ದಾರೆ ಎಂದು ಶಾಸಕರ ಗಮನಕ್ಕೆ ತಂದರು.

ಶಾಸಕರು ಪಾಲಿಕೆಯ ಅಧಿಕಾರಿಗಳಿಗೆ ಫೋನ್ ಕರೆ ಮಾಡಿ, ಲೋಪ ಆಗದಂತೆ ಕ್ರಮ ವಹಿಸುವಂತೆ ಸೂಚಿಸಿದರು. ಇಷ್ಟಕ್ಕೆ ಸಮ್ಮನಾಗದ ಮುಖಂಡರು ಪಾಲಿಕೆಯ ಕಚೇರಿಗೆ ತೆರಳಿ, ಅಲ್ಲಿನ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು. ಪಾಲಿಕೆ ಆಯುಕ್ತ ಭುವನೇಶ ಪಾಟೀಲ ಅವರನ್ನು ಭೇಟಿಯಾದರು.

ರಾಷ್ಟ್ರ ನಾಯಕರ ಪ್ರತಿಮೆ ಸುತ್ತ ಅಲಂಕಾರ ಮಾಡದೆ ಅಪಮಾನ ಮಾಡಲಾಗಿದೆ. ಹತ್ತಾರು ಕರೆ ಮಾಡಿದರೂ ಯಾವೊಬ್ಬ ಅಧಿಕಾರಿಯೂ ಸ್ವೀಕರಿಸಲಿಲ್ಲ. ಜಯಂತಿ ಆಚರಣೆಗೂ ಸಮುದಾಯದ ಮುಖಂಡರನ್ನು ಕರೆಯಿಸಿ, ಕಾರ್ಯಕ್ರಮ ಆಯೋಜನೆ ಬಗ್ಗೆ ಮಾತನಾಡಲಿಲ್ಲ. ಈಗ ಪುಣ್ಯಸ್ಮರಣೆಗೂ ಅದೇ ಚಾಳಿ ಮುಂದುವರಿಸಿದ್ದಾರೆ. ಸಮುದಾಯದ ಮುಖಂಡರು ಸಭೆ ನಡೆಸಿ, ಜಿಲ್ಲಾಡಳಿತದ ವಿರುದ್ಧ ಹೋರಾಟ ಮಾಡುತ್ತೇವೆ’ ಎಂದು ದಲಿತ ಸಂಘರ್ಷ ಸಮಿತಿಯ ಕಾರ್ಯಾಧ್ಯಕ್ಷ ದಶರಥ ಕಲಗುರ್ತಿ ಹೇಳಿದರು.

ಸಮಾಜದ ಮುಖಂಡರಾದ ರಾಜು ಕಟ್ಟಿಮನಿ, ರಮೇಶ ವಾಡೇಕರ, ಮಲ್ಲಿ ಸರಡಗಿ, ಮಲ್ಲಿಕಾರ್ಜುನ ಜಿನಕೇರಿ, ಸಚಿನ್ ಕಟ್ಟಿಮನಿ, ಚಂದಪ್ಪ ಕಟ್ಟಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೀದರ್ | ಶುದ್ಧ ನೀರಿಗಾಗಿ ಪರದಾಟ

Next Post

ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ನಡುರಸ್ತೆಯಲ್ಲೇ ವ್ಯಕ್ತಿಯನ್ನು ಹೊಡೆದು ಕೊಂದ ಜನ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ರಾಜಕೀಯ

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ರಾಜ್ಯಸಭೆ ಸ್ಥಾನ ಸ್ವೀಕರಿಸಲು ಆಸಕ್ತಿ ತೋರಿಲ್ಲ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಅವರಿಗೆ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
Next Post

ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ನಡುರಸ್ತೆಯಲ್ಲೇ ವ್ಯಕ್ತಿಯನ್ನು ಹೊಡೆದು ಕೊಂದ ಜನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada