ಮೇಕೆದಾಟು ಪಾದಯಾತ್ರೆಯ ಬಳಿಕ ಕಾಂಗ್ರೆಸ್ ಕಲ್ಯಾಣ ಕರ್ನಾಟಕ ಯಾತ್ರೆ ನಡೆಸಲು ಮುಂದಾಗಿದ್ದು, ಶೀಘ್ರವೇ ಕಾಂಗ್ರೆಸ್ ನಿಂದ ಕಲ್ಯಾಣ ಕರ್ನಾಟಕ ಯಾತ್ರೆ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಸಮತೋಲನ ಖಂಡಿಸಿ ಕಲ್ಯಾಣ ಕರ್ನಾಟಕ ಯಾತ್ರೆ ನಡೆಸಲಾಗುವುದು. ಕಲ್ಯಾಣ ಕರ್ನಾಟಕ ಯಾತ್ರೆಗೆ ರೂಪರೇಷೆ ಸಿದ್ಧಗೊಳಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
![](https://pratidhvani.com/wp-content/uploads/2022/03/4-1024x768.jpg)
ಪ್ರಾದೇಶಿಕ ಅಸಮತೋಲನ ಖಂಡಿಸಿ ಏಪ್ರಿಲ್ ನಲ್ಲಿ ಕಲ್ಯಾಣ ಕರ್ನಾಟಕ ಯಾತ್ರೆ ನಡೆಸುತ್ತೇವೆ. ಈಗಾಗಲೇ ಎರಡು ಬಾರಿ ಸಭೆ ಕರೆದು ಚರ್ಚೆ ಮಾಡಿದ್ದೇವೆ. ಬಿಜೆಪಿ ಸರ್ಕಾರದಿಂದ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ ಆಗಿದೆ. ಬಜೆಟ್ ನಲ್ಲಿ ಮೂರು ಸಾವಿರ ಕೋಟಿ ನೀಡಿದ್ದಾರೆ. ಆದ್ರೆ ಈ ಹಿಂದೆ ನೀಡಿದ್ದ ಹಣವನ್ನೇ ಇನ್ನು ಖರ್ಚು ಮಾಡಿಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.