• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

KalyanaKarnataka Minister Post : ಸಚಿವ ಸ್ಥಾನಕ್ಕಾಗಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಲಾಬಿ : ಯಾರಿಗೆ ಸಿಗಲಿದೆ ಸಚಿವ ಭಾಗ್ಯ?

Any Mind by Any Mind
May 16, 2023
in Top Story, ಇತರೆ / Others, ಇದೀಗ, ರಾಜಕೀಯ
0
KalyanaKarnataka Minister Post : ಸಚಿವ ಸ್ಥಾನಕ್ಕಾಗಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಲಾಬಿ : ಯಾರಿಗೆ ಸಿಗಲಿದೆ ಸಚಿವ ಭಾಗ್ಯ?
Share on WhatsAppShare on FacebookShare on Telegram

ಕಲಬುರಗಿ : ಮುಖ್ಯಮಂತ್ರಿ ಯಾರೆಂದು ಇಂದು ಸಂಜೆ ಒಳಗೆ ಫೈನಲ್‌ ಆಗುತ್ತದೆ.  ನಂತರ ಕಾಂಗ್ರೆಸ್ ಸರ್ಕಾರ (Congress Govt) ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯುತ್ತದೆ.. CM ಪ್ರಮಾಣ ವಚನ ಸಮಾರಂಭಕ್ಕೆ  ಕ್ಷಣಗಣನೆ ಆರಂಭವಾಗಿದೆ. ಇದ್ರ ನಡುವೆ ಸಚಿವಸ್ಥಾನಕ್ಕಾಗಿ ಹಲವು ನಾಯಕರು ಪಟ್ಟು ಹಿಡಿದಿದ್ದಾರೆ. ಹೌದು, ಕಲ್ಯಾಣ ಕರ್ನಾಟಕ (Kalyana Karnataka) ಭಾಗದ ಎಷ್ಟು ಜನ ಸಚಿವ ಸ್ಥಾನ ನೀಡುವಂತೆ ಲಾಬಿ ನಡೆಸುತ್ತಿದ್ದಾರೆ ಎಂಬುದರ ಬಗ್ಗೆ ಫುಲ್‌ ಡಿಟೇಲ್ಸ್‌ ಇಲ್ಲಿದೆ ನೋಡಿ.

ADVERTISEMENT

41 ಕ್ಷೇತ್ರಗಳ ಪೈಕಿ 26 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು

ಕಲ್ಯಾಣ ಕರ್ನಾಟಕ ಭಾಗದ  ಒಟ್ಟು 41 ಕ್ಷೇತ್ರಗಳ ಪೈಕಿ 26 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಸರ್ಕಾರ ರಚನೆಗೆ ಈ ಭಾಗದ ಶಾಸಕರ ಕೊಡುಗೆ ಅಪಾರವಾಗಿದೆ. ಅದನ್ನ ಕಾಂಗ್ರೆಸ್ ಸರ್ಕಾರ ಮರೆಯಬಾರು. ಈ ಭಾಗದಲ್ಲಿ ಶಾಸಕರು, ಸಚಿವರಾಗಿ ಆಡಳಿತ ನಡೆಸಿದ ಅನುಭಾವಿಗಳಿದ್ದು, ಅವರೆಲ್ಲರೂ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಯುತ್ತಿದ್ದಾರೆ. ಕಲಬುರಗಿ ಜಿಲ್ಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರೂ ಜಿಲ್ಲೆ.  ಈಗಾಗಿ ಈ ಜಿಲ್ಲೆಗೆ ಮಹತ್ವದ ಆದ್ಯತೆ ನೀಡಲೇ ಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಈ ಭಾಗದಲ್ಲಿ ಹೆಚ್ಚಿನ ಶಾಸಕರಿಗೆ ಸಚಿವರಾಗುವ ಆಸೆ ಯಲ್ಲಿದ್ದಾರೆ.

ಬೀದರ್ : ಬೀದರ್ ಜಿಲ್ಲೆಯಲ್ಲಿ ಭಾಲ್ಕಿ ಕ್ಷೇತ್ರದಿಂದ ಈಶ್ವರ ಖಂಡ್ರೆ ಮತ್ತು ಬೀದರ್ ಕ್ಷೇತ್ರದಿಂದ ರಹೀಂ ಖಾನ್ ಶಾಸಕರಾಗಿ ಆಯ್ಕೆಯಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ. ಈ ಹಿಂದೆ ಸಿಎಂ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಅವರೂ ಸಹ ಸಚಿವರಾಗುವ ಆಕಾಂಕ್ಷಿಯಾಗಿದ್ದಾರೆ. ಬೀದರ್ ಕ್ಷೇತ್ರದ ಶಾಸಕ ರಹೀಂ ಖಾನ್ ಸಹ ಸಚಿವರಾಗುವ ಆಕಾಂಕ್ಷಿಯಾಗಿದ್ದಾರೆ.

ರಾಯಚೂರು: ಐದು ಸಲ ಶಾಸಕರಾಗಿರುವ ರಾಯಚೂರು ಜಿಲ್ಲೆಯ ಸಿಂಧನೂರ ಕ್ಷೇತ್ರದ ಹಂಪನಗೌಡ ಬಾದರ್ಲಿ, ಮಾನ್ವಿಯ ಹಂಪಯ್ಯ ನಾಯಕ ಅವರ ಹೆಸರು ಮುಂಚೂಣಿಯಾಗಿ ಕೇಳಿ ಬರುತ್ತಿದೆ. ಬಸವರಾಜ ದದ್ದಲ್‌, ಬಸವರಾಜ ತುರವಿಹಾಳ ಇನ್ನಿಬ್ಬರು ಕಾಂಗ್ರೆಸ್‌ ಶಾಸಕರಿದ್ದಾರೆ.

ಕಲಬುರಗಿ : ಈ ಜಿಲ್ಲೆಯಲ್ಲಿ 9 ಸ್ಥಾನಗಳ ಪೈಕಿ 7 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಸೇಡಂನಲ್ಲಿ ಡಾ.ಶರಣಪ್ರಕಾಶ ಪಾಟೀಲ್, ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ, ಜೇವರ್ಗಿ – ಡಾ.ಅಜಯಸಿಂಗ್, ಅಫಜಲಪುರ – ಎಂ.ವೈ.ಪಾಟೀಲ್, ಆಳಂದ –  ಬಿ.ಆರ್.ಪಾಟೀಲ್, ಕಲಬುರಗಿ ಉತ್ತರ – ಕನೀಜಾ ಫಾತೀಮಾ ಪ್ರಬಲ ಸಚಿವರಾಗಲು ಲಾಭಿ ನಡೆಸುತ್ತಿದ್ದಾರೆ.

ಈ ಬಾರಿ ಜಿಲ್ಲೆಯಿಂದ ಕಾಂಗ್ರೆಸ್ನ 7 ಶಾಸಕರಲ್ಲಿ ಅಲ್ಲಮಪ್ರಭು ಪಾಟೀಲ್ ಮಾತ್ರ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದು, ಉಳಿದಂತೆ ಎಂ.ವೈ.ಪಾಟೀಲ್, ಬಿ.ಆರ್.ಪಾಟೀಲ್, ಡಾ.ಶರಣಪ್ರಕಾಶ ಪಾಟೀಲ್ ತಲಾ ನಾಲ್ಕು ಬಾರಿ ಗೆದ್ದು ಹಿರಿಯ ಶಾಸಕರೆನಿಸಿಕೊಂಡಿದ್ದಾರೆ. ಇದೇ ರೀತಿ ಡಾ. ಅಜಯಸಿಂಗ್ ಮತ್ತು ಪ್ರಿಯಾಂಕ್ ಖರ್ಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರೆ, ಕನೀಜಾ ಫಾತಿಮಾ ಎರಡನೇ ಬಾರಿಗೆ ಶಾಸಕರಿಯಾಗಿದ್ದಾರೆ.

ಬಳ್ಳಾರಿ: ಬಳ್ಳಾರಿ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಒಂದೂ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿಲ್ಲ. ಬಿಜೆಪಿಯನ್ನು ಧೂಳಿಪಟ ಮಾಡಿದ ಕಾಂಗ್ರೆಸ್‌ ಶಾಸಕರಿಗೆ ಈ ಬಾರಿ ಹೆಚ್ಚಿನ ಸಚಿವ ಸ್ಥಾನ ಸಿಗಬಹುದು ಎನ್ನಲಾಗುತ್ತಿದೆ. ನಾಲ್ಕು ಬಾರಿ ಗೆದ್ದಿರುವ ಬಿ.ನಾಗೇಂದ್ರ ಹಾಗೂ ಈ ಹಿಂದೆ ಸಚಿವರಾಗಿ ಕಾರ್ಯನಿರ್ವಹಿಸಿರುವ ಇ.ತುಕಾರಾಮ ಅವರ ಹೆಸರು ಪ್ರಮುಖವಾಗಿ ಸಚಿವ ಸ್ಥಾನಕ್ಕೆ ಕೇಳಿ ಬರುತ್ತಿದೆ.

ಕೊಪ್ಪಳ: ಕೊಪ್ಪಳದಿಂದ ಬಸವರಾಜ ರಾಯರೆಡ್ಡಿ ಸಚಿವಾರುಗುವುದರಲ್ಲಿ ಮೊದಲ ಹೆಸರಾದರೆ, ಇವರ ಜತೆಗೆ ಶಿವರಾಜ ತಂಗಡಗಿ ಹೆಸರು ಮುಂಚೂಣಿಯಲ್ಲಿದೆ. ಇಬ್ಬರಿಗೂ ಅವಕಾಶ ಸಿಕ್ಕರೂ ಅಚ್ಚರಿ ಇಲ್ಲ.

ವಿಜಯನಗರ: ನೂತನ ಜಿಲ್ಲೆಯಾಗಿರುವ ವಿಜಯನಗರ ಕ್ಷೇತ್ರದಲ್ಲಿ ಏಕೈಕ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಹಿಂದಿನ ಶಾಸಕ ಆನಂದ ಸಿಂಗ್‌ ಅವರನ್ನು ಸೋಲಿಸಿರುವ ಎಚ್.ಆರ್.ಗವಿಯಪ್ಪ ಅವರು ಸಹ ಸಚಿವ ಆಕಾಂಕ್ಷಿಯಾಗಿದ್ದಾರೆ.

ಯಾದಗಿರಿ: ಈ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಯಾದಗಿರಿ, ಶಹಾಪುರ, ಸುರಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದು, ಶಹಾಪುರದಲ್ಲಿ ಕಾಂಗ್ರೆಸ್ ನಿಂದ ಶರಣಬಸಪ್ಪಗೌಡ ದರ್ಶನಾಪುರ 5 ನೇ ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ ಈ ಬಾರಿ ಇವರಿಗೂ ಸಚಿವ ಸ್ಥಾನ ಸಿಗಬಹುದು ಎಂಬ ಚರ್ಚೆಗಳು ಜಿಲ್ಲೆಯಲ್ಲಿ ನಡೆಯುತ್ತಿವೆ.

ಕಲ್ಯಾಣ ಕರ್ನಾಟಕ 7 ಜಿಲ್ಲೆಗಳಲ್ಲಿ ಕಲಬುರಗಿ ಜಿಲ್ಲೆಗೆ ಮೂರು, ಒಂದು ಸ್ವೀಕರ್‌ ಸ್ಥಾನ ಸಿಗಬಹುದು, ಯಾದಗಿರಿ ಜಿಲ್ಲೆಗೆ ಒಂದು, ಬೀದರ್‌ ಜಿಲ್ಲೆಗೆ ಒಂದು, ರಾಯಚೂರು ಜಿಲ್ಲೆಗೆ ಒಂದು ಸಚಿವ ಸ್ಥಾನ, ಬಳ್ಳಾರಿ ಜಿಲ್ಲೆಗೆ ಎರಡು ಸಚಿವ ಸ್ಥಾನ, ಸೇರಿ ಒಟ್ಟು ಏಳರಿಂದ ಎಂಟು ಸಚಿವ ಸ್ಥಾನಗಳು ಸಿಗಬಹುದು ಎಂಬ ಚರ್ಚೆಗಳು ನಡೆಯುತ್ತಿದೆ. ಮುಂದೆ ಏನಾಗುತ್ತೆ ಎಂದು ಕಾದು ನೋಡಬೇಕಿದೆ.

Tags: BJPCongress PartyDKShivakumarKalyanaKarnatakaKarnataka PoliticslatestnewsMinister PostMinisterssiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಸಿದ್ದರಾಮಯ್ಯ
Previous Post

Basavaraja Bommai Meeting | ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜತೆ ಅನೌಪಚಾರಿಕ ಮಾತುಕತೆ ನಡೆಸಿದ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌

Next Post

Basavaraja Bommai | ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ್ದೇವೆ ; ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
Basavaraja Bommai | ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ್ದೇವೆ ; ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌

Basavaraja Bommai | ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ್ದೇವೆ ; ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada