• Home
  • About Us
  • ಕರ್ನಾಟಕ
Wednesday, July 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಮಲ್​ ಕ್ಷಮೆ ಕೇಳಿಲ್ಲ.. ಸಿನಿಮಾ ರಿಲೀಸ್​ ಆಗಲ್ಲ.. ಕೋರ್ಟ್​ ಏನ್​ ಹೇಳುತ್ತೆ..?

ಕೃಷ್ಣ ಮಣಿ by ಕೃಷ್ಣ ಮಣಿ
June 2, 2025
in Top Story, ಕರ್ನಾಟಕ, ದೇಶ, ಸಿನಿಮಾ
0
ಕಮಲ್​ ಕ್ಷಮೆ ಕೇಳಿಲ್ಲ.. ಸಿನಿಮಾ ರಿಲೀಸ್​ ಆಗಲ್ಲ.. ಕೋರ್ಟ್​ ಏನ್​ ಹೇಳುತ್ತೆ..?
Share on WhatsAppShare on FacebookShare on Telegram

ಕನ್ನಡ ಭಾಷೆಗೆ ಅಪಮಾನ ಮಾಡಿದ್ದ ತಮಿಳು ನಟ ಕಮಲ್ ಹಾಸನ್​ ನಟಿಸಿರುವ ಥಗ್​ ಲೈಫ್ ಸಿನಿಮಾ ಬ್ಯಾನ್ ರಾಜ್ಯದಲ್ಲಿ ಬಹುತೇಕ ಫಿಕ್ಸ್ ಎಂದು ಹೇಳಲಾಗ್ತಿದೆ. ಇಂದು ಫಿಲಂ ಚೇಂಬರ್​ನಲ್ಲಿ ಸಭೆ ನಡೆಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ. ಕಮಲ್ ಹಾಸನ್ ವಿರುದ್ಧ ಕನ್ನಡಪರ ಸಂಘಟನೆಗಳು ಈಗಾಗಲೇ ಕಿಡಿ ಕಾರಿದೆ. ರಾಜ್ಯದೆಲ್ಲೆಡೆ ಕಮಲ್ ಹಾಸನ್ ವಿರುದ್ಧ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತವಾಗ್ತಿದ್ದು, ಇದೀಗ ಥಗ್ ಲೈಫ್ ಸಿನಿಮಾದ ಮುಂಗಡ ಬುಕಿಂಗ್​ಗೆ ಅವಕಾಶ ಕೊಡದಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಈಗಾಗಲೇ ಮೌಖಿಕ ಸೂಚನೆ ನೀಡಿದೆ ಎನ್ನಲಾಗಿದೆ. ಕ್ಷಮೆ ಕೇಳುವವರೆಗೂ ಥಗ್ ಲೈಫ್ ಸಿನಿಮಾ ರಿಲೀಸ್ ಮಾಡದಿರಲು ನಿರ್ಧಾರ ಮಾಡಲಾಗಿದೆ.

ADVERTISEMENT
#watch Viral Reels: ತನ್ನಂತೆ ಯಾರೂ ರೀಲ್‌ಗಳನ್ನು ಮಾಡಬೇಡಿ ಎಂದು ವಿಡಿಯೋ ಬಿಡುಗಡೆ ಮಾಡಿದ ಯುವತಿ.! #reels #train

ಈ ಮಧ್ಯೆ, ರಾಜ್ಯದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಹಾಗೂ ಪ್ರದರ್ಶನಕ್ಕೆ ಭಾರೀ ವಿರೋಧ ಹಿನ್ನಲೆ‌, ನಟ ಕಮಲ್ ಹಾಸನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಿತ್ರ ಪ್ರದರ್ಶನ ತಡೆಯದಂತೆ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಿರ್ದೇಶಿಸಬೇಕೆಂದು ಅರ್ಜಿ ಹಾಕಿದ್ದಾರೆ. ಇದೇ ವೇಳೆ, ಸಿನಿಮಾ ಪ್ರದರ್ಶನಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚಿಸಿ ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ರಾಜ್ ಕಮಲ್ ಫಿಲ್ಮ್ ಇಂಟರ್ ನ್ಯಾಷನಲ್ ಸಂಸ್ಥೆಯ ಸಿಇಒ ಮೂಲಕ ಕಮಲ್ ಹಾಸನ್ ಅರ್ಜಿ ಸಲ್ಲಿಸಿದ್ದಾರೆ.

ಕಮಲ್​ ಹಾಸನ್​ ಕೋರ್ಟಿಗೆ ಹೋದ್ರು ನಾವು ಜಗ್ಗಲ್ಲ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಮ್ಮ ಎಲ್ಲಾ ವಿತರಕರು, ಪ್ರದರ್ಶಕರು ನಮ್ಮ ಜೊತೆ ಇದ್ದಾರೆ. ಅವರು ಕೋರ್ಟ್​ಗೆ ಹೋಗಲಿ ನಾವು ಕೇವಿಟ್ ಹಾಕ್ತಿವಿ.. ನಾವು ಕಾನೂನ ಬಾಹಿರವಾಗಿ ಏನು ಮಾಡ್ತಿಲ್ಲ. ಕ್ಷಮೆ ಕೇಳದಿದ್ರೆ ಥಗ್ ಲೈಫ್​ ಸಿನಿಮಾ ರಿಲೀಸ್ ಮಾಡಲ್ಲ ಎಂದಿದ್ದಾರೆ.

ಕಮಲ್ ಹಾಸನ್ ಕೋರ್ಟ್ ಗೆ ಹೋಗಿರುವ ವಿಚಾರದ ಬಗ್ಗೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ನಾನು ಸರ್ಕಾರದ ಪ್ರತಿನಿಧಿಯಾಗಿ ಪತ್ರ ಬರೆದಿದ್ದೆ. ವಾಣಿಜ್ಯ ಮಂಡಳಿ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. ಕೋರ್ಟ್​​​ ಏನು ಮಾಡುತ್ತೆ ನೋಡೋಣ. ನಮ್ಮ ನಿಲುವನ್ನ ನಾವು ಕೋರ್ಟ್​​​ಗೆ ತಿಳಿಸುತ್ತೇವೆ. ಮುಂದೆ ಏನು ಆಗುತ್ತೆ ನೋಡೋಣ ಎಂದಿದ್ದಾರೆ. ಇನ್ನು ಇದೇ ವಿಚಾರವಾಗಿ ಶಾಸಕ ಗಣಿಗ ರವಿಕುಮಾರ್ ಕೂಡ ಪ್ರತಿಕ್ರಿಯಿಸಿ ಕಮಲ್ ಹಾಸನ್ ಕ್ಷಮೆ ಕೇಳಲೇಬೇಕು ಎಂದು ಆಗ್ರಹಿಸಿದ್ದಾರೆ.

ಕಮಲ್ ಹಾಸನ್ ಕನ್ನಡ ವಿರೋಧಿ ಹೇಳಿಕೆ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾನು ಈ ವಿಚಾರದ ಬಗ್ಗೆ ಮಾತಾಡಲ್ಲ.. ಯಾಕೆಂದ್ರೆ ನನಗೆ ಇತಿಹಾಸ ಗೊತ್ತಿಲ್ಲ. ನಾನು ವಾಸ್ತವಾಂಶ ಏನಿದೆ ಅಂತ ತಿಳಿದುಕೊಂಡು ಪ್ರತಿಕ್ರಿಯಿಸ್ತೇನೆ. ಆದ್ರೆ ನಾವು ಮತ್ತು ತಮಿಳರು ನೆರೆಹೊರೆಯವರು.. ನಾವು ಸೌಹಾರ್ದತೆಯಿಂದ ಬಾಳಬೇಕು.. ನಾವು ಅವರಿಗೆ ಕಾವೇರಿ ನೀರು ಕೊಡ್ತೇವೆ. ತಮಿಳುನಾಡಿನಿಂದ ತುಂಬಾ ಜನ ಇಲ್ಲಿ ಬಂದು ಕೆಲಸ ಮಾಡ್ತಿದ್ದಾರೆ. ನಾವೆಲ್ಲರೂ ಶಾಂತಿ ಕಾಪಾಡಿಕೊಳ್ಳೋದು ಮುಖ್ಯ.. ಯಾವುದು ಶಾಶ್ವತ ಅಲ್ಲ ಎಂದಿದ್ದಾರೆ.

Tags: KAMAL HAASANkamal haasan about kannadakamal haasan controversykamal haasan kannada controversykamal haasan kannada remarkkamal haasan language rowkamal haasan newskamal haasan speechkamal haasan statementkamal haasan tamil and kannadakamal haasan thug lifekamal hassankamal hassan kannadakamal hassan kannada statementpro kannada groups condemn kamal haasan statementvatal nagaraj on kamal haasan
Previous Post

RCB ಅಭಿಮಾನಿಗಳಿಗೆ ನಾಳೆ ಹಬ್ಬ.. ಏನೆಲ್ಲಾ ಸಿದ್ಧತೆ ಆಗ್ತಿದೆ ಗೊತ್ತಾ..?

Next Post

ಕೋಮುವಾದ ಮಾಡುತ್ತಿದ್ದವರ ಗಡಿಪಾರಿಗೆ 26 ಮಂದಿ ಗೆ ಕಟ್ಟು ನಿಟ್ಟಿನ ಕ್ರಮ

Related Posts

Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
0

ಸ್ಪೇಸ್‌ ಪಾರ್ಕ್‌ ಸಹಿತ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹನಾ ನೀತಿ, ವಾರದಲ್ಲಿ ಸಿಎಂ ಜತೆ ಚರ್ಚೆ ಉದ್ದೇಶಿತ ಬಾಹ್ಯಾಕಾಶ ಪಾರ್ಕ್‌, ವಿದ್ಯುನ್ಮಾನ ಬಿಡಿಭಾಗಗಳ ತಯಾರಿಕೆ ಪಾರ್ಕ್‌ ಮುಂತಾದ...

Read moreDetails

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

July 30, 2025

UNTOLD STORY Of Lawyer Jagadish ಜಗದೀಶ್‌ ನೀವು ʻಫೇಕ್‌ʼ ಲಾಯರಾ..?

July 30, 2025
Next Post
ಕೋಮುವಾದ ಮಾಡುತ್ತಿದ್ದವರ ಗಡಿಪಾರಿಗೆ 26 ಮಂದಿ ಗೆ ಕಟ್ಟು ನಿಟ್ಟಿನ ಕ್ರಮ

ಕೋಮುವಾದ ಮಾಡುತ್ತಿದ್ದವರ ಗಡಿಪಾರಿಗೆ 26 ಮಂದಿ ಗೆ ಕಟ್ಟು ನಿಟ್ಟಿನ ಕ್ರಮ

Recent News

Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,
Top Story

ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

by ನಾ ದಿವಾಕರ
July 30, 2025
Top Story

UNTOLD STORY Of Lawyer Jagadish ಜಗದೀಶ್‌ ನೀವು ʻಫೇಕ್‌ʼ ಲಾಯರಾ..?

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada