ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ರಾಜ್ಯ ಸರಕಾರ ದಿಢೀರನೆ ವರ್ಗಾವಣೆ ಮಾಡಿದ್ದು, ಸಿಎಚ್ ಪ್ರತಾಪ್ ರೆಡ್ಡಿ ಅವರನ್ನು ನೇಮಿಸಲಾಗಿದೆ.
ಪಿಎಸ್ ಐ ನೇಮಕಾತಿ ಅಕ್ರಮ ಸೇರಿದಂತೆ ಹಲವು ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ೫ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಭಾಸ್ಕರ್ ರಾವ್ ನಂತರ ಬೆಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದ ಕಮಲ್ ಪಂತ್ ಅವರನ್ನು ನೇಮಕಾತಿವಿಭಾಗದ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಸಿಎಚ್. ಪ್ರತಾಪ್ ರೆಡ್ಡಿ ಅವರನ್ನು ಬೆಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಇದೇ ವೇಳೆ ಕಾನೂನು ಸುವ್ಯುವಸ್ಥೆ ವಿಭಾಗದ ಎಡಿಜಿಪಿಯಾಗಿ ಅಲೋಕ್ ಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ಅವರನ್ನು ಸಿಐಡಿ ಎಸ್ ಆಗಿ ವರ್ಗಾವಣೆ ಮಾಡಲಾಗಿದೆ.






