• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಂಬಳಕ್ಕೆ ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷನ್ ಸಿಂಗ್ ಸರಿಯಾದ ಆಯ್ಕೆ !

ನವೀನ್‌ ಸೂರಿಂಜೆ by ನವೀನ್‌ ಸೂರಿಂಜೆ
November 21, 2023
in ಕರ್ನಾಟಕ
0
ಕಂಬಳಕ್ಕೆ ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷನ್ ಸಿಂಗ್ ಸರಿಯಾದ ಆಯ್ಕೆ !
Share on WhatsAppShare on FacebookShare on Telegram

ADVERTISEMENT

ಕಂಬಳವೂ ಕೂಡಾ ಬ್ರಿಜ್ ಭೂಷನ್ ಸಿಂಗ್ ನಂತದ್ದೇ ಇತಿಹಾಸ ಹೊಂದಿದೆ. ಹಾಗಾಗಿಯೇ ಬೆಂಗಳೂರು ಕಂಬಳದಲ್ಲಿ ಸಾಧಕರನ್ನು ಸನ್ಮಾನಿಸಲು ಕುಸ್ತಿ ಫೆಡರೇಷನ್ ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷನ್ ಸಿಂಗ್ ರನ್ನು ಆಯ್ಕೆ ಮಾಡಿರಬಹುದು. ನವೆಂಬರ್ 26 ರಂದು ರವಿವಾರ 1 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬ್ರಿಜ್ ಭೂಷನ್ ಸಿಂಗ್ ಪ್ರಧಾನ ಅತಿಥಿಯಾಗಿದ್ದಾರೆ.

ಭಾರತೀಯ ಕುಸ್ತಿ ಫೆಡರೇಷನ್ (WFI) ಮಾಜಿ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಅವಕಾಶ ಸಿಕ್ಕಾಗಲೆಲ್ಲಾ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ. ಅದಕ್ಕೆ ಸಾಕಷ್ಟು ಪುರಾವೆಗಳಿವೆ ಎಂದು ಕಳೆದ ಜೂನ್ 15 ರಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಲೈಂಗಿಕ ಕಿರುಕುಳದ ಘೋಷಿತ ಆರೋಪಿಯನ್ನು ಕಂಬಳದ ಕಾರ್ಯಕ್ರಮಕ್ಕೆ ಕರೆಯುವ ಉದ್ದೇಶವೇನು ?

ಬ್ರಿಜ್ ಭೂಷನ್ ಸಿಂಗ್ ನ ಕ್ರೀಡಾ ಇತಿಹಾಸಕ್ಕೂ ಕಂಬಳದ ಕ್ರೀಡಾ ಇತಿಹಾಸಕ್ಕೂ ಸಾಮ್ಯತೆ ಇದೆ. ಒಂದು ಕಾಲದಲ್ಲಿ ಕಂಬಳಕ್ಕಿಂತ ಮುಂಚಿನ ದಿನ ರಾತ್ರಿ ಕಂಬಳದ ಗದ್ದೆಯ ಪಕ್ಕದ ಗದ್ದೆಯಲ್ಲಿ ಅತ್ಯಂತ ಹಿಂದುಳಿದ, ಸೂಕ್ಷ್ಮ ಸಮುದಾಯವೊಂದರ ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಶೋಷಿಸಲಾಗುತ್ತಿತ್ತು. ಇದಕ್ಕೆ ಸಾಂಸ್ಕೃತಿಕ, ಧಾರ್ಮಿಕ ಆಯಾಮವನ್ನೂ ನೀಡಲಾಗಿತ್ತು. ತುಳುನಾಡಿನ ಜಾತಿ ವ್ಯವಸ್ಥೆಯಲ್ಲಿ ಬಹಿರಂಗವಾಗಿ ನಡೆಯುತ್ತಿದ್ದ ಈ ಲೈಂಗಿಕ ಶೋಷಣೆ ಈಗ ಸಂವಿಧಾನದ ಭಯದಿಂದ ನಿಂತಿದೆಯಷ್ಟೆ. ಇಂತವೆಲ್ಲಾ ಕಂಬಳದ ಭಾಗವಾಗಿತ್ತು ಎಂಬ ಕನಿಷ್ಠ ಪಶ್ಚಾತಾಪವೂ ಇಲ್ಲದೇ ಕಂಬಳವು ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯ ಪ್ರತೀಕ ಎಂದು ಹೇಳುವವರ ವೇದಿಕೆಗೆ ಬ್ರಿಜ್ ಭೂಷನ್ ಸಿಂಗ್ ಸೂಕ್ತ ವ್ಯಕ್ತಿ !

ಹಾಗೆ ನೋಡಿದರೆ, ಕಂಬಳ ಪ್ರಾರಂಭವಾಗಿದ್ದೇ ಒಕ್ಕಲು ರೈತರನ್ನು ಸುಲಿಯಲು ಮತ್ತು ಕೆಳ ಸಮುದಾಯಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಸಲುವಾಗಿ !. ತುಳುನಾಡಿನಲ್ಲಿ ಜಾತಿ ಶ್ರೇಣೀಕರಣದ ಉಳಿವು ಮತ್ತು ಮುಂದುವರಿಕೆಯಲ್ಲಿ ಕಂಬಳದ ಪಾತ್ರ ಗಣನೀಯವಾಗಿದೆ.

ಕಂಬಳ ಜಾತಿ ಶ್ರೇಣೀಕರಣದ ಅಸಮಾನ ಮತ್ತು ಶೋಷಕ ಸ್ವರೂಪದೊಂದಿಗೆ ಅವಿಭಾಜ್ಯ ಸಂಬಂಧವನ್ನು ಹೊಂದಿದೆ. ಹಲವು ಅಮಾನವವೀಯ ಅಸ್ಪೃಶ್ಯತಾ ಆಚರಣೆಗಳು ಮತ್ತು ಅಜಲು ಪದ್ದತಿ ಈ ಕಂಬಳ ಕ್ರೀಡೆಯ ಮೂಲಕ ತೀರಾ ಇತ್ತಿಚ್ಚಿನವರೆಗೂ ನಡೆಯುತ್ತಿದ್ದವು. ಕಂಬಳ ಅನ್ನೋದು ಹಲವು ಊರಿನ ಗುತ್ತು ಮನೆತನಗಳ ನಡುವೆ ನಡೆಯುತ್ತಿದ್ದ ಪ್ರತಿಷ್ಟಿತ ಸ್ಪರ್ಧೆಯಾಗಿದ್ದರಿಂದ ಪ್ರತಿಸ್ಪರ್ಧಿ ಗುತ್ತಿನ ಜನರು ಬಂದು ಕಂಬಳದ ಗದ್ದೆಯನ್ನು ಹಾಳು ಮಾಡಬಹುದು ಎಂಬ ಕಾರಣಕ್ಕಾಗಿ ಕೊರಗ ಎಂಬ ಅತಿ ಶೋಷಿತ ಸಮುದಾಯ ‘ಪನಿ ಕುಲ್ಲುನು’ ಎಂಬ ಸಂಪ್ರದಾಯವನ್ನು ಆಚರಿಸಬೇಕಿತ್ತು.

‘ಪನಿ ಕುಲ್ಲುನು’ ಅಂದರೆ ಕೊರಗರು ತಮ್ಮ ಹೆಂಡತಿ ಮಕ್ಕಳ ಜೊತೆ ಇಡೀ ರಾತ್ರಿ ಕಂಬಳ ಗದ್ದೆಯನ್ನು ಕಾಯಬೇಕು. ಇದಕ್ಕಿಂತಲೂ ಅಮಾನುಷವೆಂದರೆ, ಕಂಬಳ ನಡೆಯುವ ಒಂದೆರಡು ಗಂಟೆಗಳ ಮೊದಲು ಕಂಬಳ ಗದ್ದೆಯಲ್ಲಿ ಕೊರಗರು ಓಡಬೇಕು. ಕಂಬಳ ಗದ್ದೆಯಲ್ಲಿ ಗುತ್ತಿನ ಮನೆಯ ವೈರಿಗಳು ಗಾಜು, ಕಲ್ಲುಗಳನ್ನು ಹಾಕಿರುವ ಸಾಧ್ಯತೆ ಹಿನ್ನಲೆಯಲ್ಲಿ ಕೊರಗರು ಓಡಿ ಪರಿಶೀಲನೆಯನ್ನು ಮಾಡಬೇಕು. ಗುತ್ತಿನ ಕೊಣಗಳಿಗೆ ಗಾಜು ಚುಚ್ಚುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗುತ್ತದೆ. ಜಮೀನ್ದಾರಿ ಕುಟುಂಬಗಳ ಮಧ್ಯೆ ನಡೆಯುವ ಪಕ್ಕಾ ಫ್ಯೂಡಲ್ ಕ್ರೀಡೆಯಾಗಿರುವ ಕಂಬಳ ಈಗ ಸ್ವರೂಪದಲ್ಲಿ ಸ್ವಲ್ಪ ಮಾರ್ಪಾಡುಗಳನ್ನು ಹೊಂದಿದೆಯಾದರೂ ಆಳದಲ್ಲಿ ಫ್ಯೂಡಲ್ ವ್ಯವಸ್ಥೆಯನ್ನು ಜಾರಿಯಲ್ಲಿಡುವ ತಂತ್ರವೇ ಆಗಿದೆ.

ಕಂಬಳ ಎಂಬುದು ಕೇವಲ ಕ್ರೀಡೆಯಾಗಿ ಪ್ರಾರಂಭವೂ ಆಗಿಲ್ಲ.‌ ಮುಂದುವರಿಕೆಯೂ ಅಲ್ಲ. ಕಂಬಳ ಎಂಬುದು ಜಮೀನ್ದಾರಿಗಳ ಐಶಾರಾಮಿ ಬದುಕಿನ ಪಳಿಯುಳಿಕೆಯಾಗಿ ಮುಂದುವರೆಯುತ್ತಿದೆ. ಕಂಬಳ ಎಂಬುದು ಬಹುಜನರ ಸಂಸ್ಕೃತಿಯೂ ಅಲ್ಲ. ಜನಪದ ಕ್ರೀಡೆಯೂ ಅಲ್ಲ. ಕಂಬಳ ಎಂಬುದು ಪಕ್ಕಾ ಬಹುಜನ ವಿರೋಧಿ ಫ್ಯೂಡಲ್ ವರ್ಗದ ಮೋಜಿನ ಆಟವಷ್ಟೆ. ಹಾಗಾಗಿ ಕಂಬಳದ ಅತಿಥಿಗಳ ಆಯ್ಕೆಯೂ ಸರಿಯಾಗಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ತಲೆ ಶ್ರೇಷ್ಠ, ಕಾಲು ಕನಿಷ್ಠವೇ? ವಿವಿಧ ಆಯಾಮಗಳ ಚರ್ಚೆಗೆ ಕಾರಣವಾದ ʼಮಿಚೆಲ್‌ʼ ಚಿತ್ರ.!

Next Post

ಉತ್ತರಾಖಂಡ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ಉತ್ತರಾಖಂಡ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆ

ಉತ್ತರಾಖಂಡ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada