• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕನಕಪುರ | ಭೋವಿ ಸಮುದಾಯದವರ ಮೇಲೆ ಹಲ್ಲೆ: ಮೂವರ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
July 18, 2024
in Top Story, ಇತರೆ / Others, ಕರ್ನಾಟಕ, ಜೀವನದ ಶೈಲಿ, ರಾಜಕೀಯ
0
ಕನಕಪುರ | ಭೋವಿ ಸಮುದಾಯದವರ ಮೇಲೆ ಹಲ್ಲೆ: ಮೂವರ ಬಂಧನ
Share on WhatsAppShare on FacebookShare on Telegram

ಕನಕಪುರ: ತಾಲ್ಲೂಕಿನ ತಾಮಸಂದ್ರ ವೃತ್ತದಲ್ಲಿ ಬುಧವಾರ ಮೇಲ್ಜಾತಿ ತಿಗಳ ಸಮುದಾಯದ ಗುಂಪೊಂದು ಭೋವಿ ಸಮುದಾಯದವರ ವಾಸ ಸ್ಥಳಕ್ಕೆ ನುಗ್ಗಿ, ಲಾಂಗು ಮತ್ತು ಮಚ್ಚುಗಳಿಂದ ಮಹಿಳೆಯರು ಸೇರಿದಂತೆ ಸುಮಾರು 12 ಮಂದಿ ಮೇಲೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದೆ.

ADVERTISEMENT

ಘಟನೆಯಿಂದ ಬೆಚ್ಚಿ ಬಿದ್ದಿರುವ ಗ್ರಾಮಸ್ಥರು ಕನಕಪುರ-ರಾಮನಗರ ರಸ್ತೆಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಕನಕಪುರ ಗ್ರಾಮಾಂತರ ಠಾಣೆ ಪೊಲೀಸರು, ಎಸ್.ಸಿ ಮತ್ತು ಎಸ್‌.ಟಿದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಕಲಂಗಳಡಿ 16 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪೈಕಿ ಮೂವರು ಆರೋಪಿಗಳಾದ ಪ್ರಸಾದ್ ಅಲಿಯಾಸ್ ಕರಿಯಪ್ಪ, ನಾಗೇಂದ್ರ ಹಾಗೂ ಆಟೋ ಮಹದೇವ ಎಂಬಾತನನ್ನು ಘಟನೆ ನಡೆದ ಕೆಲವೇ ತಾಸಿನಲ್ಲಿ ಬಂಧಿಸಿದ್ದಾರೆ.

ತಲೆ ಮರೆಸಿಕೊಂಡಿರುವ ಮೇಗಳ ಬೀದಿಯ ಮಂಜು, ಕೀರ್ತಿ, ಶರತ್, ನಾಗೇಂದ್ರ ತಂದೆ ನಾಗಲಿಂಗಯ್ಯ ಸೇರಿದಂತೆ ಉಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯಲ್ಲಿ ಭರತ್ ಎಂಬುವರ ತಲೆಗೆ ಗಾಯವಾಗಿದ್ದು, ಅವರ ಪತ್ನಿ ಶಶಿಕಲಾಗೂ ಪೆಟ್ಟು ಬಿದ್ದಿದೆ. ಹೆಚ್ಚು ಗಾಯವಾಗಿರುವವರು ಆಸ್ಪತ್ರೆಗೆ ದಾಖಲಾಗಿದ್ದು, ಸಣ್ಣಪುಟ್ಟ ಗಾಯವಾಗಿರುವವರು ಪ್ರಾಥಮಿಕ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ ಎಂದು ಪೊಲೀಸರು ಹೇಳಿದರು.

ಶಾಮಿಯಾನ ವಿಷಯಕ್ಕೆ ಜಗಳ: ತಾಮಸಂದ್ರ ವೃತ್ತದಲ್ಲಿ ಬೋವಿ ಸಮುದಾಯದ 50ಕ್ಕೂ ಹೆಚ್ಚು ಕುಟುಂಬಗಳು ನೆಲೆಸಿವೆ. ಈ ವೃತ್ತದ ಮುಂದೆ ಸ್ವಲ್ಪ ದೂರದಲ್ಲಿರುವ ಹೊಸಕೋಟೆ ಎಂಬ ಊರಿನಲ್ಲಿ ತಿಗಳ ಸಮುದಾಯದವರಿದ್ದಾರೆ. ಜುಲೈ 11ರಂದು ತಾಮಸಂದ್ರ ವೃತ್ತದ ಶ್ರೀನಿವಾಸ್ ಎಂಬುವರ ಹೊಸ ಮನೆಯ ಗೃಹ ಪ್ರವೇಶವಿತ್ತು.

ಅದಕ್ಕಾಗಿ, ಗ್ರಾಮದ ರಸ್ತೆಯಲ್ಲಿ ಶಾಮಿಯಾನ ಹಾಕಿದ್ದರು.ಇದೇ ಮಾರ್ಗದಲ್ಲಿ ಬಂದ ತಿಗಳ ಸಮುದಾಯದ ನಾಗಲಿಂಗಯ್ಯ, ಪ್ರಸಾದ್ ಹಾಗೂ ಸಹಚರರು ಶಾಮಿಯಾನ ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಜಗಳ ತೆಗೆದರು. ಕಾರ್ಯಕ್ರಮ ಮುಗಿದ ಬಳಿಕ ಶಾಮಿಯನಾ ತೆಗೆಯುತ್ತೇವೆ ಎಂದ ಶ್ರೀನಿವಾಸ್ ಮೇಲೆ ಹಲ್ಲೆ ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ಶ್ರೀನಿವಾಸ್ ಅವರು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ಆಗ ಸ್ಥಳೀಯ ಮುಖಂಡರು ಮಧ್ಯಪ್ರವೇಶಿಸಿ, ಮತ್ತೆ ಜಗಳ ಮಾಡಿಕೊಳ್ಳದಂತೆ ಎರಡೂ ಕಡೆಯವರಿಗೆ ಹೇಳಿದ್ದರು ಎಂದು ಗ್ರಾಮಸ್ಥರು ತಿಳಿಸಿದರು.

Tags: g prameshwarGovernment of KarnatakaHome Minister Amit ShahPolice department
Previous Post

ಚೆಲುವಣ್ಣ ಅಬ್ಬರಕ್ಕೆ ತತ್ತರಿಸಿದ ಬಿಜೆಪಿ ನಾಯಕರು..! 

Next Post

ಡೊನಾಲ್ಡ್ ಟ್ರಂಪ್ ಹತ್ಯೆ ಯತ್ನವನ್ನು ಮರುಸೃಷ್ಟಿಸಿದ ಮಕ್ಕಳು. ವೀಡಿಯೊ ವೈರಲ್

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post

ಡೊನಾಲ್ಡ್ ಟ್ರಂಪ್ ಹತ್ಯೆ ಯತ್ನವನ್ನು ಮರುಸೃಷ್ಟಿಸಿದ ಮಕ್ಕಳು. ವೀಡಿಯೊ ವೈರಲ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada