ಇತ್ತೀಚೆಗೆ ಚಿತ್ರರಂಗದಲ್ಲಿನ ಹಲವಾರು ದಿಗ್ಗಜರು ಹಠಾತ್ ಆಗಿ ಮರಣ ಹೊಂದುತ್ತಿದ್ದು, ಇಂದು ಬೆಳಗ್ಗೆ ಹಿರಿಯ ನಟ ಅಶ್ವತ್ ನಾರಾಯಣ ವಯೋಸಹಜ ಕಾಯಿಲೆಯಿಂದ ದಿವಂಗತರಾಗಿದ್ದಾರೆ.
ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರಗಳ ಮೂಲಕ ಗುರುತಿಸಿಕೊಂಡ ಇವರು ದಿಗ್ಗಜರ ಜೊತೆ ತೆರೆ ಮೇಲೆ ಕಾಣಿಸಿಕೊಂಡಿದ್ದರು. ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳ ಹಿಂದಷ್ಟೇ, ನನ್ನ ಕುಟುಂಬಸ್ಥರು ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ನನ್ನ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೂ ದೂರು ನೀಡಿದ್ದರು.
ತಮ್ಮ ಎರಡನೇ ಪುತ್ರಿ ಜೊತೆಗೆ ಬಸವೇಶ್ವರ ನಗರ ಠಾಣೆಗೆ ತೆರಳಿ, ಕುಟುಂಬಸ್ಥರು ನನಗೆ ಬಂದ ಹಣವನ್ನುನನಗೆ ಕೊಟ್ಟಿಲ್ಲ. ಕೇಳಿದ್ರೆ ಹಲ್ಲೆ ಮಾಡುತ್ತಾರೆ. ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂಬುದಾಗಿ ದೂರು ನೀಡಿದ್ದರು ಎನ್ನಲಾಗಿದೆ.