• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಪ್ಯಾನ್‍ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಕನ್ನಡಿಗ

ಪ್ರತಿಧ್ವನಿ by ಪ್ರತಿಧ್ವನಿ
March 15, 2025
in ಸಿನಿಮಾ
0
ಪ್ಯಾನ್‍ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಕನ್ನಡಿಗ
Share on WhatsAppShare on FacebookShare on Telegram

ಬಹುಭಾಷಾ ಚಿತ್ರಗಳಲ್ಲಿ ‘ಕೆಜಿಎಫ್‍’ ಖ್ಯಾತಿಯ ಅವಿನಾಶ್‍ ನಟನೆ

ADVERTISEMENT

ಮುಂದೊಂದು ದಿನ ನಟನಾಗಬಹುದು, ಬಹುಭಾಷೆಯ ಚಿತ್ರಗಳಲ್ಲಿ ನಟಿಸಬಹದು ಎಂದು ಕನಸನ್ನೂ ಕಂಡಿರದ ಅವಿನಾಶ್‍ ಇವತ್ತು ಕನ್ನಡವಲ್ಲದೆ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬೇಡಿಕೆಯ ನಟರಾಗಿದ್ದಾರೆ. ಕಡಿಮೆ ಸಮಯದಲ್ಲಿ ಬೇರೆ ಭಾಷೆಯ ಜನಪ್ರಿಯ ನಟರೊಂದಿಗೆ ತೆರೆ ಹಂಚಿಕೊಂಡು ಛಾಪು ಮೂಡಿಸಿದ್ದಾರೆ. ಇವರು ಯಾವ ಅವಿನಾಶ್‍ ಎಂಬ ಪ್ರಶ್ನೆ ಬರಬಹುದು. ‘ಕೆಜಿಎಫ್‍’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಿತರಾಗಿ, ಆ ನಂತರ ಹಲವು ಚಿತ್ರಗಳಲ್ಲಿ ನಟಿಸುತ್ತಿರುವ ನಟನ ಕಥೆ ಇದು.

ನೀವು ‘ಕೆಜಿಎಫ್‍’ ಚಿತ್ರಗಳನ್ನು ನೋಡಿದ್ದರೆ, ಅದರಲ್ಲಿ ಆ್ಯಂಡ್ರೂ ಪಾತ್ರ ಖಂಡಿತಾ ಗಮನಸೆಳೆದಿರುತ್ತದೆ. ಆ ಪಾತ್ರ ಮಾಡಿದವರು ಅದೇ ಅವಿನಾಶ್. ಮೂಲತಃ ಬೆಂಗಳೂರಿನವರಾದ ಅವಿನಾಶ್‍, ಬೇರೆ ಉದ್ಯಮದಲ್ಲಿ ತೊಡಗಿಸಿಕೊಂಡವರು. ನಟಿಸಬೇಕು ಎಂಬ ಆಸೆ ಇದ್ದಿದ್ದು ಬಿಟ್ಟರೆ, ಯಾವತ್ತೂ ಅವರು ಸ್ಟೇಜ್‍ ಹತ್ತಿರಲಿಲ್ಲ. ಚಿರಂಜೀವಿ ಸರ್ಜಾ ಸ್ನೇಹ ಬಿಟ್ಟರೆ, ಚಿತ್ರರಂಗದವರ ಪರಿಚಯವೂ ಇರಲಿಲ್ಲ. ಒಮ್ಮೆ ತಮ್ಮ ಆಸೆಯನ್ನು ಚಿರು ಬಳಿ ಹೇಳಿಕೊಂಡಾಗ, ಅವರು ಪನ್ನಗಾಭರಣರನ್ನು ಪರಿಚಯ ಮಾಡಿಸಿದರಂತೆ. ಪನ್ನಗ, ಛಾಯಾಗ್ರಾಹಕ ಭುವನ್‍ ಗೌಡ ಅವರನ್ನು ಪರಿಚಯಿಸಿದ್ದಾರೆ. ಆಗ ‘ಕೆಜಿಎಫ್‍’ ಚಿತ್ರದ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಭುವನ್‍, ಅವಿನಾಶ್ ಅವರನ್ನು ನಿರ್ದೇಶಕ ಪ್ರಶಾಂತ್‍ ನೀಲ್‍ಗೆ ಭೇಟಿ ಮಾಡಿಸಿದ್ದಾರೆ. ತಮ್ಮ ಚಿತ್ರಕ್ಕೆ ಸೂಕ್ತ ಪಾತ್ರಧಾರಿಗಳ ಹುಡುಕಾಟದಲ್ಲಿದ್ದ ಪ್ರಶಾಂತ್‍, ಒಂದು ಪಾತ್ರಕ್ಕೆ ಅವಿನಾಶ್‍ ಅವರನ್ನು ಆಯ್ಕೆ ಮಾಡಿದ್ದಾರೆ.

ಪಾತ್ರವೇನೋ ಸಿಕ್ಕಿದೆ. ಆದರೆ, ಅವಿನಾಶ್ ಅವರಿಗೆ ನಟನೆ ಗೊತ್ತಿಲ್ಲ. ಕ್ಯಾಮೆರಾ ಹೇಗೆ ಎದುರಿಸಬೇಕು ಎಂದು ತಿಳಿದಿಲ್ಲ. ಸುಮಾರು ಒಂದು ವರ್ಷ ಪ್ರಶಾಂತ್ ನೀಲ್‍, ಕಾರ್ಯಾಗಾರ ಮಾಡಿ ಅವಿನಾಶ್‍ ಅವರನ್ನು ತಿದ್ದಿ-ತೀಡಿ ಕ್ಯಾಮೆರಾ ಮುಂದೆ ನಿಲ್ಲಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಅವಿನಾಶ್‍ ಮೊದಲ ಚಿತ್ರದಲ್ಲೇ ಗಮನಸೆಳೆದಿದ್ದಾರೆ. ‘ಕೆಜಿಎಫ್‍ 1’ ಮತ್ತು ‘ಕೆಜಿಎಫ್‍ 2’ ಚಿತ್ರಗಳ ಜೊತೆಗೆ ‘ಗುರುದೇವ್‍ ಹೊಯ್ಸಳ’ ಚಿತ್ರದಲ್ಲೂ ತಮ್ಮ ಅಭಿನಯದ ಮೂಲಕ ಗಮನಸೆಳೆದಿದ್ದಾರೆ.

ಕನ್ನಡವಲ್ಲದೆ, ತೆಲುಗಿನ ‘ವೀರ ಸಿಂಹ ರೆಡ್ಡಿ’, ‘ವಾಲ್ಟರ್ ವೀರಯ್ಯ’, ತಮಿಳಿನ ‘ವೆಟ್ಟಯಾನ್‍’, ‘ಕಂಗುವಾ’, ‘ಕಾದರ್ ಭಾಷ ಎಂದ್ರ ಮುತ್ತುರಾಮಲಿಂಗಂ’, ಮಲಯಾಳಂನ ‘ಒರು ಪೆರುಂ ಕಲಿಯಟ್ಟಂ’, ಹಿಂದಿಯ ‘ಬೇಬಿ ಜಾನ್‍’ ಚಿತ್ರಗಳಲ್ಲಿ ಈಗಾಗಲೇ ನಟಿಸಿರುವ ಅವಿನಾಶ್‍, ಮುಂಬರುವ ವಿಜಯ್ ಸೇತುಪತಿ ಅಭಿನಯದ “ಏಸ್”, ‘ಗುಡ್‍ ಬ್ಯಾಡ್‍ ಅಗ್ಲಿ’, ‘ಕಿಂಗ್ಡಮ್‍’, ‘ಬುಲೆಟ್’, ‘ನಾಗಬಂಧಂ’ ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದು, ಆ ಚಿತ್ರಗಳ ಬಿಡುಗಡೆಗೆ ಕಾಯುತ್ತಿದ್ದಾರೆ.

ಒಳ್ಳೆಯ ಪೋಷಕ ನಟನಾಗಿ ಗುರುತಿಸಿಕೊಳ್ಳುವ ಆಸೆ ಎನ್ನುವ ಅವಿನಾಶ್‍, ‘ಒಳ್ಳೆಯ ವಿಲನ್‍ ಪಾತ್ರಗಳು, ಅರ್ಥಪೂರ್ಣ ಪೋಷಕ ಪಾತ್ರಗಳಿಗೆ ಎದುರು ನೋಡುತ್ತಿದ್ದೇನೆ. ಅಭಿನಯಕ್ಕೆ ಪ್ರಾಮುಖ್ಯತೆ ಇರಬೇಕು. ‘ಗುರುದೇವ್‍ ಹೊಯ್ಸಳ’ ಚಿತ್ರದಲ್ಲೊಂದು ಒಳ್ಳೆಯ ಪಾತ್ರ ಸಿಕ್ಕಿತ್ತು. ‘ಕಂಗುವ’ ಚಿತ್ರದಲ್ಲಿ ಸೂರ್ಯ ತಂದೆಯಾಗಿ ಅಭಿನಯಿಸಿದ್ದೇನೆ. ಒಬ್ಬ ಒಳ್ಳೆಯ ಪೋಷಕ ನಟನಾಗಿ ಗುರುತಿಸಿಕೊಳ್ಳುವಾಸೆ ಇದೆ. ಒಳ್ಳೆಯ ಪಾತ್ರಗಳಿಗಾಗಿ ಎದುರುನೋಡುತ್ತಿದ್ದೇನೆ’ ಎನ್ನುತ್ತಾರೆ.

Lakshmi Hebbalkar: ಬಿಜೆಪಿ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಾಗ್ದಾಳಿ..! #narendramodi #bjp #adani

ನಟನೆ ಜೊತೆಗೆ ದೇಹದಾರ್ಢ್ಯದ ಬಗ್ಗೆಯೂ ಜಾಸ್ತಿ ಗಮನಕೊಡುವ ಅವಿನಾಶ್‍ ಕಟ್ಟುಮಸ್ತಾದ ದೇಹವನ್ನು ರೂಪಿಸಿಕೊಂಡಿದ್ದಾರೆ. ವಿಲನ್‍ ಪಾತ್ರಗಳಿಗೆ ಹೇಳಿ ಮಾಡಿಸಿದಂತಿರುವ ಅವಿನಾಶ್‍, ಕನ್ನಡದಲ್ಲಿ ಇನ್ನಷ್ಟು ಚಿತ್ರಗಳಲ್ಲಿ ನಟಿಸುವುದಕ್ಕೆ ಎದುರು ನೋಡುತ್ತಿದ್ದಾರೆ.

Tags: actor avinashandrew avinashandrews avinashatman avinashAvinashavinash life journeyavinash on kgfb. s. avinashb.s avinashbs avinashkgf avinashMalavika Avinashmalavika avinash about kgfmalavika avinash biographymalavika avinash bjpmalavika avinash dancemalavika avinash familymalavika avinash interviewmalavika avinash kgfmalavika avinash life storymalavika avinash net worthmalavika avinash son galv
Previous Post

2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಿ: ಮಹಿಳಾ ಕಾಂಗ್ರೆಸ್ ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

Next Post

ಕಾಂಗ್ರೆಸ್ ಸರ್ಕಾರ ಎಂದಿಗೂ‌ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Related Posts

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?
ಸಿನಿಮಾ

ಕೊನೆಯ ಉಸಿರಿಗಾಗಿ ಜೀವದ ಓಟ!; ದಿಲೀಪ್ ರಾಜ್ ಉಳಿಸಿಕೊಳ್ಳಲು ಪತ್ನಿ ನಡೆಸಿದ ಕಣ್ಣೀರಿನ ಹೋರಾಟ ಹೀಗಿತ್ತು!

by ಪ್ರತಿಧ್ವನಿ
May 14, 2026
0

ಬೆಂಗಳೂರು: ಜನಪ್ರಿಯ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಮೇ 13ರ ಮುಂಜಾನೆ ಹೃದಯಾಘಾತದಿಂದ ಅವರು...

Read moreDetails
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

May 5, 2026
ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

May 5, 2026
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

May 2, 2026
Next Post
ಕಾಂಗ್ರೆಸ್ ಸರ್ಕಾರ ಎಂದಿಗೂ‌ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕಾಂಗ್ರೆಸ್ ಸರ್ಕಾರ ಎಂದಿಗೂ‌ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada