• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿಯವರ ಬೆದರಿಕೆಗೆ ಕನ್ನಡಿಗರು ಹೆದರುವುದಿಲ್ಲ: ಡಿ.ಕೆ. ಶಿವಕುಮಾರ್ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
May 8, 2023
in ರಾಜಕೀಯ
0
ಬಿಜೆಪಿಯವರ ಬೆದರಿಕೆಗೆ ಕನ್ನಡಿಗರು ಹೆದರುವುದಿಲ್ಲ: ಡಿ.ಕೆ. ಶಿವಕುಮಾರ್ ತಿರುಗೇಟು
Share on WhatsAppShare on FacebookShare on Telegram

ಬೆಂಗಳೂರು:‘ಬಿಜೆಪಿಗೆ ಮತ ಹಾಕದಿದ್ದರೆ ರಾಜ್ಯಕ್ಕೆ ಕೇಂದ್ರದ ಯೋಜನೆ ನೀಡುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆಗಳಾಗುತ್ತವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಜನರಿಗೆ ಬೆದರಿಕೆ ಹಾಕಿದ್ದಾರೆ. ಇಂತಹ ಬೆದರಿಕೆಗಳಿಗೆ ಕನ್ನಡಿಗರು ಹೆದರುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ADVERTISEMENT

‘ಬಿಜೆಪಿಯವರು ರಾಜ್ಯದ ಜನರಿಗೆ ಬೆದರಿಕೆ ಹಾಕಿ ಮತ ಪಡೆಯಲು ಮುಂದಾಗಿದ್ದಾರೆ. ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ. ಈ ದೇಶ ಒಕ್ಕೂಟ ವ್ಯವಸ್ಥೆಯಿಂದ ರೂಪುಗೊಂಡಿದೆ. ಕೇಂದ್ರ ಸರ್ಕಾರದ ಆದಾಯದಲ್ಲಿ ಶೇ.41ರಷ್ಟು ಕರ್ನಾಟಕ ರಾಜ್ಯದಿಂದ ಹೋಗುತ್ತಿದೆ. ಇದರಲ್ಲಿ ನಮಗೆ ಮರಳಿ ಬರುತ್ತಿರುವುದು ಬಿಡಿಗಾಸಿನಷ್ಟು ಮಾತ್ರ. ನಡ್ಡಾ ಅವರ ಬೆದರಿಕೆಗೆ ನಾವು ಕನ್ನಡಿಗರು ಹೆದರುವುದಿಲ್ಲ. ಯಾವುದ್ಯಾವುದಕ್ಕೋ ನಾವು ಹೆದರಲಿಲ್ಲ, ಇನ್ನು ಇದಕ್ಕೆ ಹೆದರುತ್ತೇವಾ? ಇನ್ನು ಗೃಹಮಂತ್ರಿಗಳು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಗಲಭೆಗಳಾಗುತ್ತವೆ ಎಂದು ಬೆದರಿಕೆ ಹಾಕಿದ್ದರು. ಈ ರೀತಿ ರಾಜ್ಯದ ಜನರನ್ನು ಹೆದರಿಸುತ್ತಿದ್ದಾರೆ.

ಇದು ಕರ್ನಾಟಕದ ಸ್ವಾಭಿಮಾನದ ಚುನಾವಣೆ. ಮೇಕೆದಾಟು ಪಾದಯಾತ್ರೆ ಸಮಯದಲ್ಲಿ ಬಿಜೆಪಿ ಸರ್ಕಾರ ಈ ಯೋಜನೆಗೆ 1 ಸಾವಿರ ಕೋಟಿ ಅನುದಾನ ಘೋಷಣೆ ಮಾಡಿದರು. ಈ ಡಬಲ್ ಇಂಜಿನ್ ಸರ್ಕಾರ ಇದ್ದಾಗ ನಡ್ಡಾ ಅವರು ಶಿಫಾರಸ್ಸು ಮಾಡಿ ಎಲ್ಲಾ ಇಲಾಖೆ ಅನುಮತಿ ಕೊಡಿಸಿ ಕೆಲಸ ಆರಂಭಿಸಲು ಅವರಿಂದ ಸಾಧ್ಯವಾಗಲಿಲ್ಲ. ಈ ಯೋಜನೆಯಲ್ಲಿ ಆಣೆಕಟ್ಟು ನಿರ್ಮಾಣದ ಕಾಮಗಾರಿಗೆ ಬೇಕಾದ ಭೂಮಿ ವಶಕ್ಕೆ ಪಡೆಯಲು ಸರ್ಕಾರ ಯಾಕೆ ಮುಂದಾಗಲಿಲ್ಲ? ಮಹದಾಯಿ ವಿಚಾರವಾಗಿ ಪ್ರಹ್ಲಾದ್ ಜೋಷಿ ಅವರು ಸಂಭ್ರಮಾಚರಣೆ ಮಾಡಿದರಲ್ಲಾ ಇನ್ನು ಯಾಕೆ ಕೆಲಸ ಆರಂಭಿಸಿಲ್ಲ? ಇವರು ಕೇವಲ ಈ ರೀತಿ ಸುಳ್ಳು ಹಾಗೂ ಬೆದರಿಕೆ ಒಡ್ಡುತ್ತಿದ್ದಾರೆ.

ಕರ್ನಾಟಕವೇ ಕೇಂದ್ರಕ್ಕೆ ಆದಾಯ ನೀಡಿ ಸಹಾಯ ಮಾಡುತ್ತಿದೆ. ಇಲ್ಲಿರುವ ವಿದ್ಯಾವಂತರು, ಪ್ರಜ್ಞಾವಂತರು ದೇಶಕ್ಕೆ ಆದಾಯ ನೀಡುತ್ತಿದ್ದಾರೆ. ವಿಶ್ವವೇ ಕರ್ನಾಟಕ ಹಾಗೂ ಬೆಂಗಳೂರು ಮೂಲಕ ಇಡೀ ದೇಶವವನ್ನು ನೋಡುತ್ತಿದೆ ಎಂದು ವಾಜಪೇಯಿ ಅವರೇ ಹೇಳಿದ್ದಾರೆ. ಇದು ಈ ರಾಜ್ಯದ ಶಕ್ತಿ.’

ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ಕೊನೆ ದಿನವಾಗಿದ್ದು, ಪಕ್ಷದ ಅಧ್ಯಕ್ಷರಾಗಿ ನಿಮ್ಮ ಆತ್ಮವಿಶ್ವಾಸ ಹೇಗಿದೆ ಎಂದು ಕೇಳಿದ ಪ್ರಶ್ನೆಗೆ, ‘ನಾನು ಕೊನೆ ದಿನ ನನ್ನ ಕ್ಷೇತ್ರ ಕನಕಪುರದಲ್ಲಿ ಮತ ಕೇಳಲು ಹೋಗುತ್ತಿದ್ದೇನೆ. ನಾಮಪತ್ರ ಸಲ್ಲಿಸುವಾಗ ಅಲ್ಲಿನ ಜನರಿಗೆ ಕೈಮುಗಿದು ಬಂದಿದ್ದೆ. ಈಗ ಮತ್ತೆ ಹೋಗುತ್ತಿದ್ದೇನೆ. ಅಲ್ಲಿ ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿ ಏನು ಮಾಡಲಿದೆ, ಹೇಗೆ ದಕ್ಷ ಆಡಳಿತ ನೀಡುತ್ತೇವೆ. ಮಹಿಳೆಯರಿಗಾಗಿ ಪ್ರತಿ ತಾಲೂಕಿನಲ್ಲಿ ಹೆರಿಗೆ ಆಸ್ಪತ್ರೆ ಸ್ಥಾಪಿಸಿ ಉಚಿತ ಹೆರಿಗೆ ಮಾಡುವ ವ್ಯವಸ್ಥೆ ನೀಡುತ್ತೇವೆ. ಎಲ್ಲಾ ಸಮಾಜವನ್ನು ಸಮಾನವಾಗಿ ನೋಡಿ, ಶಾಂತಿಯ ತೋಟ ನೀರ್ಮಾಣ ಮಾಡುತ್ತೇವೆ. ಪಂಚಾಯ್ತಿ ಮಟ್ಟದಲ್ಲಿ ಉತ್ತಮ ಶಿಕ್ಷಣ ಸಿಗುವಂತೆ ಮಾಡುತ್ತೇವೆ. 2ನೇ ಹಂತಗಳ ನಗರಗಳಲ್ಲಿ ಉದ್ಯೋಗ ಸೃಷ್ಟಿಸಸಲು ನಮ್ಮದೇ ಆದ ಯೋಜನೆಗಳಿವೆ’ ಎಂದರು.

ನಿಮ್ಮ ಗುರಿ 113 ಮುಟ್ಟುತ್ತದೆಯೇ ಎಂದು ಕೇಳಿದಾಗ, ‘113 ನಿಮ್ಮ ಲೆಕ್ಕ. ನಮ್ಮ ಗುರಿ 141. 13ರಂದು ನೋಡಿ, 15ರಂದು ನಾವು ಸರ್ಕಾರ ರಚನೆ ಮಾಡುತ್ತೇವೆ. ಮೋದಲ ಸಂಪುಟದಲ್ಲೇ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ’ ಎಂದು ತಿಳಿಸಿದರು.

ಈ ಗ್ಯಾರಂಟಿ ಯೋಜನೆ ಜಾರಿ ಮಾಡುವ ಸಚಿವ ಸಂಪುಟ ಯಾರ ನೇತೃತ್ವದ್ದಾಗಿರುತ್ತದೆ ಎಂದು ಕೇಳಿದಾಗ, ‘ಮೇ 15ರಂದು ಮಲ್ಲಿಕಾರ್ಜುನ ಖರ್ಗೆ ಅವರು ಘೋಷಣೆ ಮಾಡಲಿದ್ದಾರೆ’ ಎಂದು ತಿಳಿಸಿದರು.

ಪಕ್ಷದ ಜಾಹೀರಾತಿನ ವಿಚಾರವಾಗಿ ಚುನಾವಣಾ ಆಯೋಗದ ನೋಟೀಸ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಈ ವಿಚಾರವಾಗಿ 24 ತಾಸಿನಲ್ಲಿ ಉತ್ತರ ನೀಡುವಂತೆ ಚುನಾವಣಾ ಆಯೋಗ ನೋಟೀಸ್ ನೀಡಿದ್ದು, ನಾವು ಉತ್ತರ ನೀಡಿದ್ದೇವೆ. ಈ ವಿಚಾರವಾಗಿ ಆಧಆರ ಏನು ಎಂದು ಕಳಿದ್ದು, ಅವರ ರೇಟ್ ಪಟ್ಟಿಯಲ್ಲಿ ಮುಖ್ಯಮಂತ್ರಿ ಹುದ್ದೆ ಹಾಗೂ ಮಂತ್ರಿಗಿರಿ ಹುದ್ದೆಯ ರೇಟ್ ಅನ್ನು ಯತ್ನಾಳ್ ಅವರು ಹೇಳಿದ್ದಾರೆ. ಉಳಿದಂತೆ ಮಾಧ್ಯಮ ವರದಿಗಳು, ಬಿಜೆಪಿ ನಾಯಕರಾದ ವಿಶ್ವನಾಥ್, ಗೂಳಿಹಟ್ಟಿ ಶೇಖರ್ ಅವರ ಹೇಳಿಕೆಗಳೇ ಸಾಕ್ಷಿ. ನೀವು ಕೊಟ್ಟಿರುವ ಸಾಕ್ಷಿ ಆಧಾರದ ಮೇಲೆ ನಾವು ಜಾಹೀರಾತು ನೀಡಿದ್ದೇವೆ. ಆಯೋಗದ ನೋಟೀಸ್ ಗೆ ಉತ್ತರ ನೀಡಿದ್ದೇವೆ. ಅಮಿತ್ ಶಾ ಅವರು ಗಲಭೆ ನಡೆಯಲಿದೆ ಎಂಬ ಬೆದರಿಕೆಗೆ ನೋಟೀಸ್ ನೀಡುವುದಿಲ್ಲವೇ? ನಿಮ್ಮಿಂದ ಸಿಯಾಗಿ ಅಧಿಕಾರ ಮಾಡಲಾಗದೇ, ಪಾಪ ಪ್ರಧಾನಿಗಳನ್ನು ಬೀದಿ ಬೀದಿ ತಿರುಗಿಸುತ್ತಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.

Tags: BJPDK ShivakumarKannadigasPM Modi Road Showಕನ್ನಡಿಗರುಕಾಂಗ್ರೆಸ್​ಡಿ.ಕೆ ಶಿವಕುಮಾರ್​ಪ್ರಧಾನಿ ಮೋದಿ ರೋಡ್ ಶೋಬಿಜೆಪಿ
Previous Post

ಮುಸ್ಲಿಮರ ಮೀಸಲಾತಿ ಹೆಚ್ಚಿಸುತ್ತೇನೆ ಎನ್ನುವ ಸಿದ್ದರಾಮಯ್ಯ ಯಾರ ಮೀಸಲಾತಿ ಕಡಿತಗೊಳಿಸುತ್ತಾರೆಂದು ಸ್ಪಷ್ಟಪಡಿಸಲಿ : ಅಮಿತ್​ ಶಾ

Next Post

ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​ ಅನುಷ್ಠಾನಕ್ಕೆ ಬರೋದು ಅಸಾಧ್ಯ : ಸಂಸದೆ ಸುಮಲತಾ

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post
ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​  ಅನುಷ್ಠಾನಕ್ಕೆ ಬರೋದು ಅಸಾಧ್ಯ : ಸಂಸದೆ ಸುಮಲತಾ

ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​ ಅನುಷ್ಠಾನಕ್ಕೆ ಬರೋದು ಅಸಾಧ್ಯ : ಸಂಸದೆ ಸುಮಲತಾ

Please login to join discussion

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada