ಪಾಕಿಸ್ತಾನದ ಉಗ್ರರನ್ನು ಅಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಭಾರತೀಯ ಸೇನೆ ಸದೆ ಬಡಿದಿದೆ. ಈ ಹಿನ್ನೆಲೆ, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಮಂಡ್ಯ ರಕ್ಷಣಾ ವೇದಿಕೆ ವತಿಯಿಂದ ವಿಜಯೋತ್ಸವ ಆಚರಣೆ ಮಾಡಲಾಗಿದೆ. ರಂಗನಾಥ ದೇಗುಲದಲ್ಲಿ ಸೈನಿಕರಿಗಗೆ ಪೂಜೆ ಸಲ್ಲಿಸಿ.. ಈಡುಗಾಯಿ ಒಡೆದು ಸೈನಿಕರಿಗೆ ಜೈಕಾರ ಹಾಕುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ.

ಇನ್ನು ಶಿವಮೊಗ್ಗದಲ್ಲೂ ರಾಷ್ಟ್ರ ಭಕ್ತ ಬಳಗದ ವತಿಯಿಂದ ಗಣಪತಿ ದೇವರಿಗೆ ಪೂಜೆ ಸಲ್ಲಿಸಿ ನಂತರ ಸಾರ್ವಜನಿಕರಿಗೆ ಪಾನಕ ಹಂಚಿ ಸಂಭ್ರಮಿಸಿದ್ದಾರೆ. ಪಾಪಿ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ಹಿನ್ನೆಲೆ ಶಿವಮೊಗ್ಗದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಶಿವಮೊಗ್ಗ ನಗರದ ರವೀಂದ್ರ ನಗರದ ಗಣಪತಿ ದೇವಸ್ಥಾನದ ಮುಂಭಾಗ ಸಂಭ್ರಮಾಚರಣೆ ಮಾಡಿದ್ದಾರೆ.

ಯಾದಗಿರಿಯಲ್ಲೂ ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಸಂಭ್ರಮಾಚರಣೆ ಮಾಡಲಾಗಿದೆ. ಸೈದಾಪುರ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಭಾರತೀಯ ಸೇನೆ ಪರ ಘೋಷಣೆ ಮಾಡಲಾಗಿದೆ. ಪಾಕ್ ಮೇಲೆ ಭಾರತೀಯ ಸೇನೆ ಏರ್ಸ್ಟ್ರೈಕ್ ಮಾಡಿದ್ದಕ್ಕೆ ಸಾರ್ವಜನಿಕರು ಸಂಭ್ರಮಾಚರಣೆ ಮಾಡಿದ್ದಾರೆರ. ಭಾರತೀಯ ಸೇನೆ, ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.
ಪಾಕಿಸ್ತಾನದ ಮೇಲೆ ಭಾರತ ಏರ್ ಸ್ಟ್ರೈಕ್ ಮಾಡಿದ್ದಕ್ಕೆ ಬಾಗಲಕೋಟೆಯ ರಬಕವಿ ಬನಹಟ್ಟಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಗಿದೆ. ಕೈಯಲ್ಲಿ ಭಾರತದ ತಿರಂಗ ಹಿಡಿದು ಸೈನಿಕರಿಗೆ ಜಯಘೋಷ ಹಾಕಿದ್ದಾರೆ. ಬೀದರ್ನಲ್ಲೂ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಮಾಡಲಾಗಿದೆ. ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಲಾಗಿದೆ.

ಚಿತ್ರದುರ್ಗದಲ್ಲೂ ಹಿಂದೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ನಗರದ ಓಬವ್ವ ವೃತ್ತದಲ್ಲಿ ಭಾರತೀಯ ಸೇನೆ ಜೈಕಾರ ಹಾಕಿ ಹರ್ಷ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಶ್ರೀರಾಮ ಸೇನೆಯಿಂದ ವಿಜಯೋತ್ಸವ ಆಚರಿಸಲಾಗಿದೆ. ನಿವೃತ್ತ ಯೋಧರಿಗೆ ಸಿಂಧೂರ ಹಚ್ಚಿ ವಿಜಯೋತ್ಸವ ಆಚರಣೆ ಮಾಡಲಾಗಿದೆ.
ಪಾಕಿಸ್ತಾನದ ಉಗ್ರರ ನೆಲೆ ಮೇಲೆ ಏರ್ ಸ್ಟ್ರೈಕ್ ಹಿನ್ನೆಲೆ, ಹಾಸನದಲ್ಲಿ ಬಿಜೆಪಿ ಶಾಸಕ ಹೆಚ್.ಕೆ ಸುರೇಶ್ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಲಾಗಿದೆ. ಪಾಕ್ಗೆ ಮೊದಲೇ ಎಚ್ಚರಿಕೆ ಕೊಟ್ರು.. ಎಚ್ಚೆತ್ತುಕೊಳ್ಳಲಿಲ್ಲ. ಅದಕ್ಕೆ ಈಗ ಸ್ಯಾಂಪಲ್ವೊಂದನ್ನ ನೀಡಲಾಗಿದೆ ಎಂದು ಭಾರತೀಯ ಸೇನೆ ಪರ ಘೋಷಣೆ ಹಾಕಿದ್ದಾರೆ. ಇನ್ನು ಉಡುಪಿಯಲ್ಲೂ ಜಿಲ್ಲಾ ನಾಗರಿಕ ಸಮಿತಿಯಿಂದ ಸಂಭ್ರಮಾಚರಣೆ ಮಾಡಿದೆ. ನಗರದ ಪ್ರಮುಖ ಬೀದಿಗಳಲ್ಲಿ ತ್ರಿವರ್ಣ ಧ್ವಜದ ಮೆರವಣಿಗೆ ಮಾಡಲಾಗಿದೆ. ಬಳಿಕ ಜನರಿಗೆ ಲಾಡು ಹಂಚಿ ಸಂಭ್ರಮಿಸಲಾಗಿದೆ.
ಪಾಕಿಸ್ತಾನದ ಉಗ್ರರನ್ನು ಅಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಭಾರತೀಯ ಸೇನೆ ಸದೆ ಬಡಿದಿದೆ. ಈ ಹಿನ್ನೆಲೆ, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಮಂಡ್ಯ ರಕ್ಷಣಾ ವೇದಿಕೆ ವತಿಯಿಂದ ವಿಜಯೋತ್ಸವ ಆಚರಣೆ ಮಾಡಲಾಗಿದೆ. ರಂಗನಾಥ ದೇಗುಲದಲ್ಲಿ ಸೈನಿಕರಿಗಗೆ ಪೂಜೆ ಸಲ್ಲಿಸಿ.. ಈಡುಗಾಯಿ ಒಡೆದು ಸೈನಿಕರಿಗೆ ಜೈಕಾರ ಹಾಕುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ.

ಇನ್ನು ಶಿವಮೊಗ್ಗದಲ್ಲೂ ರಾಷ್ಟ್ರ ಭಕ್ತ ಬಳಗದ ವತಿಯಿಂದ ಗಣಪತಿ ದೇವರಿಗೆ ಪೂಜೆ ಸಲ್ಲಿಸಿ ನಂತರ ಸಾರ್ವಜನಿಕರಿಗೆ ಪಾನಕ ಹಂಚಿ ಸಂಭ್ರಮಿಸಿದ್ದಾರೆ. ಪಾಪಿ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ಹಿನ್ನೆಲೆ ಶಿವಮೊಗ್ಗದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಶಿವಮೊಗ್ಗ ನಗರದ ರವೀಂದ್ರ ನಗರದ ಗಣಪತಿ ದೇವಸ್ಥಾನದ ಮುಂಭಾಗ ಸಂಭ್ರಮಾಚರಣೆ ಮಾಡಿದ್ದಾರೆ.

ಯಾದಗಿರಿಯಲ್ಲೂ ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಸಂಭ್ರಮಾಚರಣೆ ಮಾಡಲಾಗಿದೆ. ಸೈದಾಪುರ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಭಾರತೀಯ ಸೇನೆ ಪರ ಘೋಷಣೆ ಮಾಡಲಾಗಿದೆ. ಪಾಕ್ ಮೇಲೆ ಭಾರತೀಯ ಸೇನೆ ಏರ್ಸ್ಟ್ರೈಕ್ ಮಾಡಿದ್ದಕ್ಕೆ ಸಾರ್ವಜನಿಕರು ಸಂಭ್ರಮಾಚರಣೆ ಮಾಡಿದ್ದಾರೆರ. ಭಾರತೀಯ ಸೇನೆ, ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.
ಪಾಕಿಸ್ತಾನದ ಮೇಲೆ ಭಾರತ ಏರ್ ಸ್ಟ್ರೈಕ್ ಮಾಡಿದ್ದಕ್ಕೆ ಬಾಗಲಕೋಟೆಯ ರಬಕವಿ ಬನಹಟ್ಟಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಗಿದೆ. ಕೈಯಲ್ಲಿ ಭಾರತದ ತಿರಂಗ ಹಿಡಿದು ಸೈನಿಕರಿಗೆ ಜಯಘೋಷ ಹಾಕಿದ್ದಾರೆ. ಬೀದರ್ನಲ್ಲೂ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಮಾಡಲಾಗಿದೆ. ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಲಾಗಿದೆ.

ಚಿತ್ರದುರ್ಗದಲ್ಲೂ ಹಿಂದೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ನಗರದ ಓಬವ್ವ ವೃತ್ತದಲ್ಲಿ ಭಾರತೀಯ ಸೇನೆ ಜೈಕಾರ ಹಾಕಿ ಹರ್ಷ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಶ್ರೀರಾಮ ಸೇನೆಯಿಂದ ವಿಜಯೋತ್ಸವ ಆಚರಿಸಲಾಗಿದೆ. ನಿವೃತ್ತ ಯೋಧರಿಗೆ ಸಿಂಧೂರ ಹಚ್ಚಿ ವಿಜಯೋತ್ಸವ ಆಚರಣೆ ಮಾಡಲಾಗಿದೆ.
ಪಾಕಿಸ್ತಾನದ ಉಗ್ರರ ನೆಲೆ ಮೇಲೆ ಏರ್ ಸ್ಟ್ರೈಕ್ ಹಿನ್ನೆಲೆ, ಹಾಸನದಲ್ಲಿ ಬಿಜೆಪಿ ಶಾಸಕ ಹೆಚ್.ಕೆ ಸುರೇಶ್ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಲಾಗಿದೆ. ಪಾಕ್ಗೆ ಮೊದಲೇ ಎಚ್ಚರಿಕೆ ಕೊಟ್ರು.. ಎಚ್ಚೆತ್ತುಕೊಳ್ಳಲಿಲ್ಲ. ಅದಕ್ಕೆ ಈಗ ಸ್ಯಾಂಪಲ್ವೊಂದನ್ನ ನೀಡಲಾಗಿದೆ ಎಂದು ಭಾರತೀಯ ಸೇನೆ ಪರ ಘೋಷಣೆ ಹಾಕಿದ್ದಾರೆ. ಇನ್ನು ಉಡುಪಿಯಲ್ಲೂ ಜಿಲ್ಲಾ ನಾಗರಿಕ ಸಮಿತಿಯಿಂದ ಸಂಭ್ರಮಾಚರಣೆ ಮಾಡಿದೆ. ನಗರದ ಪ್ರಮುಖ ಬೀದಿಗಳಲ್ಲಿ ತ್ರಿವರ್ಣ ಧ್ವಜದ ಮೆರವಣಿಗೆ ಮಾಡಲಾಗಿದೆ. ಬಳಿಕ ಜನರಿಗೆ ಲಾಡು ಹಂಚಿ ಸಂಭ್ರಮಿಸಲಾಗಿದೆ.