• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

“ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ” – ಜೂನ್ 10 ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಕರವೇ

Any Mind by Any Mind
June 2, 2021
in ಕರ್ನಾಟಕ
0
“ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ” – ಜೂನ್ 10 ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಕರವೇ
Share on WhatsAppShare on FacebookShare on Telegram

ಸರ್ಕಾರ ಕೋವಿಡ್ ಲಸಿಕೆ ವಿತರಣೆಯಲ್ಲಿ ವಿಪಲಗೊಂಡ ಹಿನ್ನಲೆ ಕರ್ನಾಟಕ ರಕ್ಷಣ ವೇದಿಕೆ ಜೂನ್‌ 10 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. “ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ” ಎಂದು ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳನ್ನು ಒತ್ತಾಯಿಸುವುದಾಗಿ ತಿಳಿಸಿದೆ.

ADVERTISEMENT

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರ ಜೂಮ್ ಸಭೆಯಲ್ಲಿ ಈ ಐತಿಹಾಸಿಕ ನಿರ್ಣಯ ಅಂಗೀಕರಿಸಲಾಗಿದ್ದು, ನಾರಾಯಣಗೌಡರ ಜನ್ಮದಿನವೂ ಆಗಿರುವ ಜೂ.10ರಂದು ಲಕ್ಷಾಂತರ ಕರವೇ ಕಾರ್ಯಕರ್ತರು ‘ಪ್ರತಿಭಟನಾ ದಿನ’ವನ್ನಾಗಿ ಆಚರಿಸಿ, ರಾಜ್ಯದ ಸಮಸ್ತ ಜನತೆಯ ಹಕ್ಕೊತ್ತಾಯವನ್ನು ಮಂಡಿಸಲಿದ್ದಾರೆ.

ಕರ್ನಾಟಕದ ಪ್ರತಿಯೊಬ್ಬರಿಗೂ ಜೂನ್ ತಿಂಗಳ ಅಂತ್ಯದೊಳಗೆ ಮೊದಲನೇ ಡೋಸ್ ಕೋವಿಡ್ ಲಸಿಕೆ ಮತ್ತು ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಎರಡನೇ ಡೋಸ್ ಉಚಿತವಾಗಿ ನೀಡಬೇಕು. ಚುನಾವಣಾ ಬೂತ್ ಗಳು, ಪೊಲೀಯೋ ವ್ಯಾಕ್ಸಿನ್ ಬೂತ್ ರಚನೆ ಮಾಡುವ ಹಾಗೆ ನಾಗರಿಕರು ನಡೆದುಹೋಗುವಷ್ಟು ಹತ್ತಿರದಲ್ಲೇ ಲಸಿಕೆ ಬೂತ್ ಸ್ಥಾಪಿಸಿ, ಜನರನ್ನು ಕಾಯಿಸದೆ, ಸತಾಯಿಸದೆ ಲಸಿಕೆಗಳನ್ನು ನೀಡಬೇಕು ಎಂಬುದು ಕರ್ನಾಟಕ ರಕ್ಷಣಾ ವೇದಿಕೆಯ ಹಕ್ಕೊತ್ತಾಯ ಎಂದು ತಿಳಿಸಿದೆ.

2020 ರ ಮಾರ್ಚ್ ತಿಂಗಳಲ್ಲಿ ಕೋವಿಡ್-19 ಭಾರತಕ್ಕೆ ಕಾಲಿಟ್ಟ ನಂತರ ಸಾಮಾನ್ಯ ಜನರ ಬದುಕು ನರಕವಾಗಿ ಹೋಗಿದೆ. ಕೋವಿಡ್ ನಿಂದಾಗಿ ಅಪಾರ ಪ್ರಮಾಣದ ಸಾವುನೋವಾಗಿದೆ. ಮಕ್ಕಳು ಅಪ್ಪ ಅಮ್ಮಂದಿರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಅದರ ಜತೆಗೆ ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಹೇರುತ್ತ ಬಂದಿರುವ ಲಾಕ್ ಡೌನ್ ಇತ್ಯಾದಿ ಕ್ರಮಗಳಿಂದಾಗಿ ಬಡತನ, ನಿರುದ್ಯೋಗ ಹೆಚ್ಚುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ.

ಕಳೆದ ವರ್ಷದಿಂದಲೂ ಸಹ ಸರ್ಕಾರಗಳು ಜನರ ಮೇಲೆ ಜವಾಬ್ದಾರಿಗಳನ್ನು ಹೊರಿಸಿದವೇ ಹೊರತು ಜನರ ಜೀವ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿಲ್ಲ. ಪಶ್ಚಿಮದ ದೇಶಗಳು ಕಳೆದ ವರ್ಷ ಜೂನ್ ತಿಂಗಳಿನಿಂದಲೇ ಕೋವಿಡ್ ಲಸಿಕೆಗಾಗಿ ಸಕಲ ಪ್ರಯತ್ನಗಳನ್ನು ನಡೆಸಿ, ಶೇ.50-60ರಷ್ಟು ಮಂದಿಗೆ ಲಸಿಕೆ ನೀಡಿದ ಪರಿಣಾಮವಾಗಿ ಎರಡನೇ ಅಲೆಯ ಹೊಡೆತದಿಂದ ಪಾರಾದವು. ಆದರೆ ನಮ್ಮಲ್ಲಿ ಮಾತ್ರ, ಒಕ್ಕೂಟ ಸರ್ಕಾರದ ಬೇಜವಾಬ್ದಾರಿ ನೀತಿಗಳಿಂದಾಗಿ ದೇಶದ ಶೇ.5ರಷ್ಟು ನಾಗರಿಕರಿಗೂ ಎರಡು ಡೋಸ್ ಲಸಿಕೆ ನೀಡಲಾಗಿಲ್ಲ. ಬದಲಾಗಿ ಭಾರತೀಯರ ಜೀವ ಕಾಪಾಡಬೇಕಿದ್ದ ಆರುವರೆ ಕೋಟಿ ಡೋಸ್ ಲಸಿಕೆಯನ್ನು ವಿದೇಶಗಳಿಗೆ ಕಳುಹಿಸಲಾಯಿತು ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಲಸಿಕೆಗಳನ್ನು ನೀಡುವ ವಿಷಯದಲ್ಲಿ ಒಕ್ಕೂಟ ಸರ್ಕಾರದ ಬೇಜವಾಬ್ದಾರಿ, ತಾರತಮ್ಯದ ಕುರಿತು ಈಗಾಗಲೇ ದೇಶದ ಸರ್ವೋಚ್ಛ ನ್ಯಾಯಾಲಯ ಕೂಡ ಆಕ್ಷೇಪಗಳನ್ನು ಎತ್ತಿದೆ. ಒಕ್ಕೂಟ ಸರ್ಕಾರ ಡಿಸೆಂಬರ್ ತಿಂಗಳೊಳಗೆ 200 ಕೋಟಿ ಡೋಸ್ ಲಸಿಕೆ ಒದಗಿಸಲಾಗುವುದು ಎಂದು ಹೇಳುತ್ತಿದೆ. ಆದರೆ ಸದ್ಯದ ವಾಸ್ತವಿಕ ಚಿತ್ರಣ ಹಾಗಿಲ್ಲ. ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಮೇಲಿನ ನಂಬಿಕೆ ಈಗಾಗಲೇ ಕುಸಿದು ಹೋಗಿದೆ. ಹೀಗಾಗಿ ನಾವು ಬೀದಿಗಿಳಿದು ಪ್ರತಿಭಟನೆ ನಡೆಸದೆ ಬೇರೆ ದಾರಿ ಕಾಣುತ್ತಿಲ್ಲ. ಕೋವಿಡ್ ಮೂರನೇ ಅಲೆ ಸೆಪ್ಟೆಂಬರ್, ಅಕ್ಟೋಬರ್ ತಿಂಗಳೊಳಗೆ ಅಪ್ಪಳಿಸಿದೆ ಎಂದು ತಜ್ಞರು, ವಿಜ್ಞಾನಿಗಳು ಈಗಾಗಲೇ ಅಂದಾಜು ಮಾಡಿದ್ದಾರೆ. ಅಷ್ಟರೊಳಗೆ ಲಸಿಕೆ ಪಡೆಯದವರ ಜೀವಗಳು ಅಪಾಯಕ್ಕೆ ಸಿಲುಕಲಿವೆ. ಇದಕ್ಕೆ ನಾವು ಅವಕಾಶ ನೀಡಕೂಡದು. ಲಸಿಕೆ ಎಲ್ಲಿಂದ ತರುತ್ತಾರೋ ತರಲಿ, ಕರ್ನಾಟಕದ ಪ್ರತಿಯೊಬ್ಬ ನಾಗರಿಕರಿಗೂ ಸೆಪ್ಟೆಂಬರ್ ತಿಂಗಳೊಳಗೆ ಎರಡೂ ಡೋಸ್ ಸಂಪೂರ್ಣವಾಗಿ ಉಚಿತ ಲಸಿಕೆ ನೀಡಬೇಕು. ಖಾಸಗಿ ಆಸ್ಪತ್ರೆಗಳ ದುಬಾರಿ ಬೆಲೆಯ ಲಸಿಕೆ ದಂಧೆ ನಿಲ್ಲಿಸಬೇಕು. ಪ್ರತಿಯೊಂದು ಡೋಸ್ ಲಸಿಕೆಯನ್ನೂ ಸರ್ಕಾರವೇ ನೀಡಬೇಕು. ಇದು ಸಾಧ್ಯವಿಲ್ಲ ಎನ್ನುವುದಾದರೆ, ಈ ಸರ್ಕಾರಗಳು ರಾಜೀನಾಮೆ ಕೊಟ್ಟು ತೊಲಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

ಪ್ರತಿಭಟನೆ ಸ್ವರೂಪ:
ನಾಡಿನ ಎಲ್ಲ ಜಿಲ್ಲೆ, ತಾಲ್ಲೂಕು, ಹೋಬಳಿ, ಹಳ್ಳಿಗಳಲ್ಲಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮತ್ತು ಈ ಪ್ರತಿಭಟನೆಯನ್ನು ಬೆಂಬಲಿಸುವ ಸಂಘ ಸಂಸ್ಥೆಗಳು, ಸಾಮಾಜಿಕ ಕಾರ್ಯಕರ್ತರು, ಸಾಮಾನ್ಯ ಜನರು ತಾವು ಇರುವ ಸ್ಥಳಗಳಲ್ಲೇ ತಮ್ಮ ತಮ್ಮ ಮನೆಗಳಿಂದ ಹೊರಬಂದು, ಪ್ರಚಾರ ಫಲಕಗಳನ್ನು (ಪ್ಲಕಾರ್ಡ್) ಹಿಡಿದು ಪ್ರತಿಭಟಿಸುತ್ತಾರೆ. ಈ ಸಂದರ್ಭದಲ್ಲಿ ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು. ಮಾಸ್ಕ್ ಧರಿಸಲಾಗುವುದು, ದೈಹಿಕ ಅಂತರ ಕಾಪಾಡಲಾಗುವುದು ಕಡ್ಡಾಯ.


ಒಂದು ಸಾವಿರಕ್ಕೂ ಹೆಚ್ಚು ಪ್ರತಿಭಟನೆಗಳ ಫೊಟೋ, ವಿಡಿಯೋಗಳನ್ನು ಗೂಗಲ್ ಡ್ರೈವ್ ಲಿಂಕ್ ಮೂಲಕ ಸರ್ಕಾರಕ್ಕೆ, ಮಾಧ್ಯಮಗಳಿಗೆ ತಲುಪಿಸಲಾಗುವುದು.
ಕೋವಿಡ್ ಲಸಿಕೆ ಪ್ರತಿಯೊಬ್ಬ ನಾಗರಿಕನ ಹಕ್ಕು. ಸರ್ಕಾರ ಅದನ್ನು ಮಾರಾಟಕ್ಕೆ ಇಡಕೂಡದು. ಪ್ರತಿಯೊಬ್ಬರಿಗೂ ಅದು ಉಚಿತವಾಗಿ ಸಿಗಬೇಕು, ಕಾಲಮಿತಿಯೊಳಗೆ ಸಿಗಬೇಕು ಎಂಬುದು ಕರ್ನಾಟಕ ರಕ್ಷಣಾ ವೇದಿಕೆಯ ಉದ್ದೇಶವಾಗಿದ್ದು, ಈ ಪ್ರತಿಭಟನೆಯಲ್ಲಿ ರಾಜ್ಯದ ಸರ್ವಜನತೆಯೂ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ವಿನಂತಿಸಿದೆ.

Previous Post

ಸರ್ಕಾರದ ಸಲಹೆಗಾರರ ಅಭಿಪ್ರಾಯಕ್ಕೂ ಸರ್ಕಾರದ ನಿರ್ಧಾರಗಳಿಗೂ ತಾಳೆಯಾಗುತ್ತಿಲ್ಲ-ಸರ್ಕಾರ ತನ್ನ ಸಲಹೆಗಾರರ ಮಾತನ್ನುಒಪ್ಪಲು ಸಿದ್ಧವಿದೆಯೇ?’ ಡಿಕೆ ಶಿವಕುಮಾರ್

Next Post

ಕೋವಿಡ್ 2ನೇ ಅಲೆಗೆ ಪ್ರಾಣ ಕಳೆದುಕೊಂಡ ವೈದ್ಯರು 594: ಒಬ್ಬೊಬ್ಬ ವೈದ್ಯರದ್ದೂ ಒಂದೊಂದು ಕಣ್ಣೀರ ಕತೆ

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
Next Post
ಕೋವಿಡ್ 2ನೇ ಅಲೆಗೆ ಪ್ರಾಣ ಕಳೆದುಕೊಂಡ ವೈದ್ಯರು 594: ಒಬ್ಬೊಬ್ಬ ವೈದ್ಯರದ್ದೂ ಒಂದೊಂದು ಕಣ್ಣೀರ ಕತೆ

ಕೋವಿಡ್ 2ನೇ ಅಲೆಗೆ ಪ್ರಾಣ ಕಳೆದುಕೊಂಡ ವೈದ್ಯರು 594: ಒಬ್ಬೊಬ್ಬ ವೈದ್ಯರದ್ದೂ ಒಂದೊಂದು ಕಣ್ಣೀರ ಕತೆ

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada