• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸರ್ಕಾರದ ಎಲ್ಲಾ ಪರೀಕ್ಷೆಗಳು ಸ್ಥಳೀಯ ಭಾಷೆಯಲ್ಲಿ ನಡೆಸುವಂತೆ, ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ಕರವೇ ಅಭಿಯಾನ

Any Mind by Any Mind
October 7, 2021
in ಕರ್ನಾಟಕ
0
ಸರ್ಕಾರದ ಎಲ್ಲಾ ಪರೀಕ್ಷೆಗಳು ಸ್ಥಳೀಯ ಭಾಷೆಯಲ್ಲಿ ನಡೆಸುವಂತೆ, ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ಕರವೇ ಅಭಿಯಾನ
Share on WhatsAppShare on FacebookShare on Telegram

ಯುಪಿಎಸ್ ಸಿ ಪರೀಕ್ಷೆಗಳು ಅಕ್ಟೋಬರ್ 10 ರಂದು ನಡೆಯುತ್ತಿದ್ದು ಈ ಬಾರಿಯೂ ಕನ್ನಡಿಗರಿಗೆ ಕನ್ನಡದಲ್ಲಿ ಪರೀಕ್ಷೆಗಳನ್ನು ಬರೆಯುವ ಅವಕಾಶ ನೀಡದೆ ಕನ್ನಡಿಗರನ್ನು ಎರಡನೇ ದರ್ಜೆ ಪ್ರಜೆಗಳಂತೆ ನೋಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಹಕ್ಕೊತ್ತಾಯದ ಸರಣಿ ಅಭಿಯಾನ ಆರಂಭಿಸಲಿದೆ ಎಂದು ಕರವೇ ರಾಜ್ಯಧ್ಯಕ್ಷ  ಟಿ.ಎ.ನಾರಾಯಣಗೌಡರು ತಿಳಿಸಿದ್ದಾರೆ.

ADVERTISEMENT

ಭಾರತ ಸರಕಾರದ ಎಲ್ಲಾ ಹಂತದ ಉದ್ಯೋಗ ಪರೀಕ್ಷೆಗಳೂ ಕನ್ನಡದಲ್ಲಿ ನಡೆಯಬೇಕು. ಕರ್ನಾಟಕದ ಉದ್ಯೋಗಗಳು ಕರ್ನಾಟಕ ಯುವಕರಿಗೇ ಸಿಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ದಶಕಗಳಿಂದ ಹೋರಾಡುತ್ತ ಬಂದಿದೆ. ಕೆಲವು ಹಂತಗಳಲ್ಲಿ ಚಳವಳಿ ಯಶಸ್ವಿಯಾಗಿದ್ದರೂ ಇನ್ನಷ್ಟು ವಿಷಯಗಳಲ್ಲಿ ಕನ್ನಡಿಗರ ಹಕ್ಕುಗಳಿಗಾಗಿ ಚಳವಳಿ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಸಿಗಬೇಕು.‌ ಇದು ಸಾಧ್ಯವಾಗಬೇಕೆಂದರೆ ಐಎಎಸ್, ಐಪಿಎಸ್ ಸೇರಿದಂತೆ ಎಲ್ಲ ಪರೀಕ್ಷೆಗಳು ಕನ್ನಡದಲ್ಲೂ ನಡೆಯಬೇಕು. ಆದರೆ  ಎಲ್ಲ ಹಂತಗಳಲ್ಲೂ ಕನ್ನಡದಲ್ಲಿ ಪರೀಕ್ಷೆಗಳು ಸಿಗುತ್ತಿಲ್ಲ.  ಆಯಾ ರಾಜ್ಯದ ಹುದ್ದೆಗಳು ಆಯಾ ರಾಜ್ಯದ ಜನರಿಗೆ ಸಿಗಲು ಬೇಕಾದ ನಿಯಮಗಳೂ ಇಲ್ಲವಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತ ಸರಕಾರ A ಮತ್ತು ‌B ಗುಂಪಿನ ಹುದ್ದೆಗಳಿಗೆ UPSC ಮೂಲಕ ಪರೀಕ್ಷೆ ನಡೆಸುತ್ತದೆ. C ಮತ್ತು ‌D ಗುಂಪಿನ ಹುದ್ದೆಗಳಿಗೆ SSC ಮೂಲಕ ಪರೀಕ್ಷೆ ನಡೆಸುತ್ತದೆ, ಇದಲ್ಲದೇ ಸೇನೆ, ಬ್ಯಾಂಕಿಂಗ್, ರೈಲ್ವೇ ಉದ್ಯೋಗಗಳಿಗೆ ಪ್ರತ್ಯೇಕವಾದ ಉದ್ಯೋಗ ಪರೀಕ್ಷೆಗಳನ್ನು ನಡೆಸಲಾಗುತ್ತದೆ.  ಇವುಗಳಲ್ಲಿ UPSC ಯ ಮುಖ್ಯ ಪರೀಕ್ಷೆ(‌Mains) , ರೈಲ್ವೇ ಉದ್ಯೋಗದ ಕೆಲವು ಪರೀಕ್ಷೆಗಳು ಮತ್ತು ಬ್ಯಾಂಕಿನ ಕ್ಲರ್ಕ್ ಹುದ್ದೆಗೆ ಪ್ರಥಮ ಮತ್ತು ಮುಖ್ಯ ಪರೀಕ್ಷೆಗಳು ಮಾತ್ರ ಕನ್ನಡದಲ್ಲಿ ಕೊಡಲಾಗುತ್ತಿದೆ. ಇನ್ನುಳಿದಂತೆ ಎಲ್ಲ  ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಲಾಗುತ್ತಿಲ್ಲ. ಜೊತೆಗೆ ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ನಿಯಮಗಳು ನಿಧಾನವಾಗಿ ಸಡಿಲಗೊಳಿಸಲಾಗುತ್ತಿದೆ. ಇದು ನೇರವಾಗಿ ಕನ್ನಡಿಗರ ಬದುಕುವ ಹಕ್ಕಿನ ದಮನವಾಗಿರುತ್ತದೆ. ಭಾರತ ಸಂವಿಧಾನದ ಸಮಾನತೆಯ ಆಶಯಗಳಿಗೆ ಧಕ್ಕೆ ಬಂದಂತಾಗಿದೆ. ಇದನ್ನು ನಾವು ಇನ್ನೆಷ್ಟು ಕಾಲ ಸಹಿಸುವುದು? ಎಂದು ಅವರು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಉದ್ಯೋಗ ಪಡೆಯುವುದು ಕನ್ನಡಿಗರ ಮೂಲಭೂತ ಹಕ್ಕು. ಅದನ್ನು ಕಿತ್ತುಕೊಳ್ಳುವುದು ಅನೈತಿಕ ಮಾತ್ರವಲ್ಲ ಅಸಾಂವಿಧಾನಿಕ. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯಗಳನ್ನು ಖಂಡಿಸುವವರು ಈ ಚಳವಳಿಯಲ್ಲಿ ಪಾಲ್ಗೊಳ್ಳಲು ಕೋರುತ್ತೇನೆ. ನಾಡಪರವಾದ ಈ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಲು ಮನವಿ ಮಾಡುತ್ತೇನೆ. (8/8)

— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) October 7, 2021

ಈ ಹಿನ್ನೆಲೆಯಲ್ಲಿ ಭಾರತ ಸರಕಾರದಿಂದ ಕರ್ನಾಟಕದ ಜನರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಸಾಮಾನ್ಯ ಜನರಲ್ಲಿ ಮತ್ತು ಜನಪ್ರತಿನಿಧಿಗಳಲ್ಲಿ ಜಾಗೃತಿ ಮೂಡಿಸುವ ಕಾರಣಕ್ಕಾಗಿ ಕರವೇ ಸರಣಿ ಅಭಿಯಾನಗಳನ್ನು ಹಮ್ಮಿಕೊಳ್ಳಲಿದೆ. ಈ ಮೂಲಕ‌ ಕರ್ನಾಟಕದ ಜನಪ್ರತಿನಿಧಿಗಳ ಮೇಲೆ ಒತ್ತಡ ಹೇರುವ ಕಾರ್ಯ ಮಾಡಲಾಗುವುದು.  ಈ ಅಭಿಯಾನದ ಭಾಗವಾಗಿ ಇದೇ ಭಾನುವಾರ, ಅಕ್ಟೋಬರ್ 10ರಂದು ಬೆಳಿಗ್ಗೆ 10.10 ಗಂಟೆಯಿಂದ #ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್ ನಲ್ಲಿ  ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ. ಇದರ ಜೊತೆಗೆ ಭಾರತ ಸರಕಾರದ ಎಲ್ಲಾ ಹಂತದ ಪರೀಕ್ಷೆಗಳೂ ಕನ್ನಡದಲ್ಲಿ ಸಿಗಬೇಕೆಂದು ಒತ್ತಾಯಿಸಿ ವಿಚಾರಸಂಕಿರಣ, ಚಿತ್ರಚಳುವಳಿ, ಪತ್ರ ಚಳವಳಿಗಳನ್ನೂ ಹಮ್ಮಿಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಉದ್ಯೋಗ ಪಡೆಯುವುದು ಕನ್ನಡಿಗರ ಮೂಲಭೂತ ಹಕ್ಕು. ಅದನ್ನು ಕಿತ್ತುಕೊಳ್ಳುವುದು ಅನೈತಿಕ ಮಾತ್ರವಲ್ಲ ಅಸಾಂವಿಧಾನಿಕ. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯಗಳನ್ನು ಖಂಡಿಸುವವರು ಈ ಚಳವಳಿಯಲ್ಲಿ ಪಾಲ್ಗೊಳ್ಳಲು ಕೋರುತ್ತೇನೆ. ನಾಡಪರವಾದ ಈ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಲು ಮನವಿ ಮಾಡಿಕೊಂಡಿದ್ದಾರೆ.

Tags: BJPUPSCಕನ್ನಡಿಗರ ಹಕ್ಕುಕರವೇಕರವೇ ಅಭಿಯಾನಕರ್ನಾಟಕಕರ್ನಾಟಕ ರಕ್ಷಣಾ ವೇದಿಕೆಕರ್ನಾಟಕದ ಉದ್ಯೋಗಟಿ.ಎ.ನಾರಾಯಣಗೌಡನರೇಂದ್ರ ಮೋದಿಬಿಜೆಪಿಬ್ಯಾಂಕಿನ ಕ್ಲರ್ಕ್ ಹುದ್ದೆಭಾರತ ಸರಕಾರರೈಲ್ವೇ ಉದ್ಯೋಗ
Previous Post

ಮಂಗಳೂರು; ಸಂತ ಅಲೋಶಿಯಸ್‌ ಕಾಲೇಜ್‌ ಪಾರ್ಕ್‌ಗೆ Stan swamy ಹೆಸರಿಡಲು ಬಿಡುವುದಿಲ್ಲ – VHP Leader Sharan Pumpwel

Next Post

ಗಾಂಧಿ ತಮ್ಮನ್ನು ತಾವು ವೈಷ್ಣವ ಮತ್ತು ‘ಸನಾತನಿ’ ಹಿಂದೂವಾಗಲು ಹೇಗೆ ರೂಢಿಸಿಕೊಂಡರು?

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
ಗಾಂಧಿ ತಮ್ಮನ್ನು ತಾವು ವೈಷ್ಣವ ಮತ್ತು ‘ಸನಾತನಿ’ ಹಿಂದೂವಾಗಲು ಹೇಗೆ ರೂಢಿಸಿಕೊಂಡರು?

ಗಾಂಧಿ ತಮ್ಮನ್ನು ತಾವು ವೈಷ್ಣವ ಮತ್ತು ‘ಸನಾತನಿ’ ಹಿಂದೂವಾಗಲು ಹೇಗೆ ರೂಢಿಸಿಕೊಂಡರು?

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada