ರಾಜ್ಯದಲ್ಲಿ ಹಿಂದಿ ಸಪ್ತಾಹ, ಹಿಂದಿ ದಿವಸ್ ಆಚರಣೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಕೇಂದ್ರ ಸರ್ಕಾರ ದಕ್ಷಿಣ ಭಾರತದಾದ್ಯಂತ ಹಿಂದಿ ಹೇರಿಕೆಯ ಪ್ರಯತ್ನ ನಡೆಯುತ್ತಿದೆ ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಕನ್ನಡ ಭಾಷೆಗೆ 2500 ವರ್ಷಗಳ ಇತಿಹಾಸವಿದೆ. ಬೇರೆ ಯಾವ ಭಾಷೆಗೂ ಸಿಗದಷ್ಟು, 8 ಜ್ಞಾನಪೀಠ ಪ್ರಶಸ್ತಿಗಳು ಕನ್ನಡ ಭಾಷೆಗೆ ದಕ್ಕಿವೆ. ಹೀಗಿರುವಾಗ ಕನ್ನಡಿಗರಾಗ ಮೇಲೆ ಹಿಂದಿ ಹೇರಿಕೆ ಒಪ್ಪುವಂತದಲ್ಲ ಎಂದು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತದ ಕೆಲವೇ ರಾಜ್ಯಗಳಲ್ಲಿ ಮಾತನಾಡುವ ಹಿಂದಿ ಭಾಷೆಯನ್ನು ಉಳಿದ ಭಾಷಿಕರ ಮೇಲೆ ಬಲವಂತವಾಗಿ ಹೇರುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಹಿಂದಿ ಸಪ್ತಾಹ, ಹಿಂದಿ ದಿವಸ್ ಆಚರಣೆಗೆ ನಮ್ಮ ವಿರೋಧವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.