Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯಲು ಕರವೇ ಮನವಿ, ಒಂದೇ ಬಾರಿ ರಾಜ್ಯ ಬಂದ್​ಗೆ ಪ್ಲಾನ್..?

Prathidhvani

Prathidhvani

September 24, 2023
Share on FacebookShare on Twitter


ಹೆಚ್ಚು ಓದಿದ ಸ್ಟೋರಿಗಳು

Bank: 18 ಕೋಟಿ ರೂಪಾಯಿ ದರೋಡೆ

BIG BREAKING: IT ದಾಳಿಯಲ್ಲಿ ಸಿಕ್ಕ 40 ಕೋಟಿ ರೂ. – ಕರ್ನಾಟಕದ ಪ್ರಭಾವಿ ರಾಜಕಾಣಿಯ ಆಪ್ತರ ವಿಚಾರಣೆ

ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್‌ ಭೀತಿ – ಮುಜಾಹಿದ್ದೀನ್‌ ಹೆಸರಲ್ಲಿ ಬೆದರಿಕೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ಸೆ.26 ರಂದು ಬೆಂಗಳೂರು ಬಂದ್​ಗೆ(Bangalore Bandh) ಕರೆ ನೀಡಲಾಗಿದೆ. ಆದರೆ ಎಲ್ಲರೂ ಒಟ್ಟು ಸೇರಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಎಲ್ಲಾ ಸಂಘಟನೆಗಳು ಸೇರಿಕೊಂಡು ಕರ್ನಾಟಕ ಬಂದ್ (Karnataka Bandh) ನಡೆಸಲು ಕರ್ನಾಟಕ ರಕ್ಷಣಾ ವೇದಿಕೆ ತೀರ್ಮಾನಿಸಿದೆ. ಹೀಗಾಗಿ ಬೆಂಗಳೂರು ಬಂದ್ ಹಿಂಪಡೆಯಲು ಮನವಿ ಮಾಡಿದೆ.

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟು, ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯುವಂತೆ ಮನವಿ ಮಾಡಿದ್ದೇವೆ. ಬೆಂಗಳೂರು ಬಂದ್​, ಕರ್ನಾಟಕ ಬಂದ್​ ಪ್ರತ್ಯೇಕವಾಗಿ ಬೇಡ ಅಂತ ಮನವಿ ಮಾಡಲಾಗಿದೆ. ಎರಡು ಬಾರಿ ಬಂದ್ ಮಾಡುವ ಬದಲು ಒಂದೇ ಬಾರಿ ರಾಜ್ಯ ಬಂದ್ ಮಾಡೋಣ. ಈ ಬಗ್ಗೆ ವಾಟಾಳ್ ನಾಗರಾಜ್ ಸೇರಿ ಎಲ್ಲ ಸಂಘಟನೆಗಳ ಜತೆ ಚರ್ಚಿಸುತ್ತೇವೆ ಎಂದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ರೈತರು, ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಸೆ.26 ರಂದು ಬೆಂಗಳೂರು ಬಂದ್ ನಿಶ್ಚಿತವಾಗಿದೆ. ಬಹುತೇಕ ಸಂಘಟನೆಗಳು ಬೆಂಬಲ ಸೂಚಿಸಿವೆ.

ಇನ್ನೊಂದೆಡೆ, ಅಖಂಡ ಕರ್ನಾಟಕ ಬಂದ್ ನಡೆಸಲು ಒಂದಷ್ಟು ಕನ್ನಡ ಪರ ಸಂಘಟನೆಗಳು ಮುಂದಾಗಿವೆ. ವಾಟಾಳ್ ನಾಗರಾಜ್, ಸೋಮವಾರದಂದು ಬಂದ್ ದಿನಾಂಕ ಘೋಷಣೆ ಮಾಡಲಿದ್ದಾರೆ. ಸೆ. 28 ಅಥವಾ 29 ಅಥವಾ 30 ರಂದು ಅಖಂಡ ಕರ್ನಾಟಕ ಬಂದ್ ನಡೆಸುವ ಸಾಧ್ಯತೆ ಇದೆ. ಈ ಬಗ್ಗೆ ಮಾತನಾಡಿದ ವಾಟಾಳ್, 26 ರಂದು ಬಂದ್​ಗೆ ಕರೆ ನೀಡಿರುವುದಕ್ಕೆ ನನ್ನ ವಿರೋಧ ವಿಲ್ಲ. ಅವರ ಜೊತೆಗೆ ಮಾತಾಡುತ್ತೇವೆ, ಎಲ್ಲರೂ ಒಟ್ಟಿಗೆ ಸೇರಿ ಅಖಂಡ ಕರ್ನಾಟಕ ಬಂದ್ ಮಾಡೋಣ ಅಂತ ಮನವಿ ಮಾಡುವುದಾಗಿ ಹೇಳಿದ್ದರು.

ವಾಟಾಳ್​ ನಾಗರಾಜ್ ಪೊಲೀಸರ ವಶಕ್ಕೆ

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್​ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮೈಸೂರು ಬ್ಯಾಂಕ್​ ಸರ್ಕಲ್​​ ಬಳಿ ಕನ್ನಡ ಒಕ್ಕೂಟದಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ನಾಳೆ ಮಹತ್ವದ ಸಭೆ

ಕರ್ನಾಟಕ ಬಂದ್​​ಗೆ ಕರೆ ನೀಡುವ ಸಂಬಂಧ ಬೆಂಗಳೂರಿನ ಖಾಸಗಿ ಹೊಟೇಲ್​ನಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದೆ. ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಎಲ್ಲಾ ಸಂಘಟನೆಗಳ ಜೊತೆ ಚರ್ಚಿಸಿ ಕರ್ನಾಟಕ ಬಂದ್​ ದಿನಾಂಕ ನಿಗದಿ ಮಾಡಲಾಗುತ್ತಿದೆ.

ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕರವೇ ರಾಜ್ಯಾಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ, ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನಾನಿರತ ವಾಟಾಳ್​ ನಾಗರಾಜ್, ಸಾ.ರಾ.ಗೋವಿಂದು ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳ ಮುಖಂಡರನ್ನು ಪೊಲೀಸ್ ವಶಕ್ಕೆ ಪಡೆದರು.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

SIM Card: ಡಿ.1ರಿಂದ ಹೊಸ ಸಿಮ್‌ ಕಾರ್ಡ್‌ ನಿಯಮಗಳು
Top Story

SIM Card: ಡಿ.1ರಿಂದ ಹೊಸ ಸಿಮ್‌ ಕಾರ್ಡ್‌ ನಿಯಮಗಳು

by ಪ್ರತಿಧ್ವನಿ
November 29, 2023
Bank: 18 ಕೋಟಿ ರೂಪಾಯಿ ದರೋಡೆ
Top Story

Bank: 18 ಕೋಟಿ ರೂಪಾಯಿ ದರೋಡೆ

by Prathidhvani
December 1, 2023
ಮಹಿಷ ದಸರಾ ದಿನವೇ ಚಲೋ ಚಾಮುಂಡಿ ಕಾರ್ಯಕ್ರಮ ನಡೆಯಲಿ:ಪ್ರತಾಪ್ ಸಿಂಹ
ಕರ್ನಾಟಕ

ಲೋಕಸಭಾ ಚುನಾವಣೆ ಎಫೆಕ್ಟ್ : ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಾಯಿಸಿಕೊಂಡ ಪ್ರತಾಪ್ ಸಿಂಹ

by Prathidhvani
November 26, 2023
ಸಂವಿಧಾನ ದಿನದಂದು ‘ಮಂತ್ರ ಮಾಂಗಲ್ಯ’ : ಚಾಮರಾಜನಗರ ಎಡಿಸಿ’ಯಿಂದ ಮಾದರಿ ನಡೆ
ಕರ್ನಾಟಕ

ಸಂವಿಧಾನ ದಿನದಂದು ‘ಮಂತ್ರ ಮಾಂಗಲ್ಯ’ : ಚಾಮರಾಜನಗರ ಎಡಿಸಿ’ಯಿಂದ ಮಾದರಿ ನಡೆ

by Prathidhvani
November 25, 2023
ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌
Top Story

ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌

by Prathidhvani
December 1, 2023
Next Post
ಅದಾನಿ ಸಮೂಹವನ್ನು ಅಲುಗಾಡಿಸಿರುವ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ದಾಖಲೆಗಳು

ಅದಾನಿ ಸಮೂಹವನ್ನು ಅಲುಗಾಡಿಸಿರುವ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ದಾಖಲೆಗಳು

ಬಂದ್‌ಗೆ ವ್ಯಾಪಕ ಬೆಂಬಲ; ನಾಳೆ ಸ್ತಬ್ಧವಾಗಲಿದೆ ರಾಜಧಾನಿ

ಬಂದ್‌ಗೆ ವ್ಯಾಪಕ ಬೆಂಬಲ; ನಾಳೆ ಸ್ತಬ್ಧವಾಗಲಿದೆ ರಾಜಧಾನಿ

ಮಂಡ್ಯದ ಒಬ್ಬ ನಾಗಕರೀಕನಾಗಿ ತಮಿಳುನಾಡಿಗೆ ನೀರು ಹರಿಸುವುದನ್ನು ಸರ್ಕಾರ ನಿಲ್ಲಿಸಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ

ಮಂಡ್ಯದ ಒಬ್ಬ ನಾಗಕರೀಕನಾಗಿ ತಮಿಳುನಾಡಿಗೆ ನೀರು ಹರಿಸುವುದನ್ನು ಸರ್ಕಾರ ನಿಲ್ಲಿಸಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist