• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯಲು ಕರವೇ ಮನವಿ, ಒಂದೇ ಬಾರಿ ರಾಜ್ಯ ಬಂದ್​ಗೆ ಪ್ಲಾನ್..?

Any Mind by Any Mind
September 24, 2023
in ಇದೀಗ
0
ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯಲು ಕರವೇ ಮನವಿ, ಒಂದೇ ಬಾರಿ ರಾಜ್ಯ ಬಂದ್​ಗೆ ಪ್ಲಾನ್..?
Share on WhatsAppShare on FacebookShare on Telegram


ADVERTISEMENT

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ಸೆ.26 ರಂದು ಬೆಂಗಳೂರು ಬಂದ್​ಗೆ(Bangalore Bandh) ಕರೆ ನೀಡಲಾಗಿದೆ. ಆದರೆ ಎಲ್ಲರೂ ಒಟ್ಟು ಸೇರಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಎಲ್ಲಾ ಸಂಘಟನೆಗಳು ಸೇರಿಕೊಂಡು ಕರ್ನಾಟಕ ಬಂದ್ (Karnataka Bandh) ನಡೆಸಲು ಕರ್ನಾಟಕ ರಕ್ಷಣಾ ವೇದಿಕೆ ತೀರ್ಮಾನಿಸಿದೆ. ಹೀಗಾಗಿ ಬೆಂಗಳೂರು ಬಂದ್ ಹಿಂಪಡೆಯಲು ಮನವಿ ಮಾಡಿದೆ.

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟು, ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯುವಂತೆ ಮನವಿ ಮಾಡಿದ್ದೇವೆ. ಬೆಂಗಳೂರು ಬಂದ್​, ಕರ್ನಾಟಕ ಬಂದ್​ ಪ್ರತ್ಯೇಕವಾಗಿ ಬೇಡ ಅಂತ ಮನವಿ ಮಾಡಲಾಗಿದೆ. ಎರಡು ಬಾರಿ ಬಂದ್ ಮಾಡುವ ಬದಲು ಒಂದೇ ಬಾರಿ ರಾಜ್ಯ ಬಂದ್ ಮಾಡೋಣ. ಈ ಬಗ್ಗೆ ವಾಟಾಳ್ ನಾಗರಾಜ್ ಸೇರಿ ಎಲ್ಲ ಸಂಘಟನೆಗಳ ಜತೆ ಚರ್ಚಿಸುತ್ತೇವೆ ಎಂದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ರೈತರು, ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಸೆ.26 ರಂದು ಬೆಂಗಳೂರು ಬಂದ್ ನಿಶ್ಚಿತವಾಗಿದೆ. ಬಹುತೇಕ ಸಂಘಟನೆಗಳು ಬೆಂಬಲ ಸೂಚಿಸಿವೆ.

ಇನ್ನೊಂದೆಡೆ, ಅಖಂಡ ಕರ್ನಾಟಕ ಬಂದ್ ನಡೆಸಲು ಒಂದಷ್ಟು ಕನ್ನಡ ಪರ ಸಂಘಟನೆಗಳು ಮುಂದಾಗಿವೆ. ವಾಟಾಳ್ ನಾಗರಾಜ್, ಸೋಮವಾರದಂದು ಬಂದ್ ದಿನಾಂಕ ಘೋಷಣೆ ಮಾಡಲಿದ್ದಾರೆ. ಸೆ. 28 ಅಥವಾ 29 ಅಥವಾ 30 ರಂದು ಅಖಂಡ ಕರ್ನಾಟಕ ಬಂದ್ ನಡೆಸುವ ಸಾಧ್ಯತೆ ಇದೆ. ಈ ಬಗ್ಗೆ ಮಾತನಾಡಿದ ವಾಟಾಳ್, 26 ರಂದು ಬಂದ್​ಗೆ ಕರೆ ನೀಡಿರುವುದಕ್ಕೆ ನನ್ನ ವಿರೋಧ ವಿಲ್ಲ. ಅವರ ಜೊತೆಗೆ ಮಾತಾಡುತ್ತೇವೆ, ಎಲ್ಲರೂ ಒಟ್ಟಿಗೆ ಸೇರಿ ಅಖಂಡ ಕರ್ನಾಟಕ ಬಂದ್ ಮಾಡೋಣ ಅಂತ ಮನವಿ ಮಾಡುವುದಾಗಿ ಹೇಳಿದ್ದರು.

ವಾಟಾಳ್​ ನಾಗರಾಜ್ ಪೊಲೀಸರ ವಶಕ್ಕೆ

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್​ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮೈಸೂರು ಬ್ಯಾಂಕ್​ ಸರ್ಕಲ್​​ ಬಳಿ ಕನ್ನಡ ಒಕ್ಕೂಟದಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ನಾಳೆ ಮಹತ್ವದ ಸಭೆ

ಕರ್ನಾಟಕ ಬಂದ್​​ಗೆ ಕರೆ ನೀಡುವ ಸಂಬಂಧ ಬೆಂಗಳೂರಿನ ಖಾಸಗಿ ಹೊಟೇಲ್​ನಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದೆ. ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಎಲ್ಲಾ ಸಂಘಟನೆಗಳ ಜೊತೆ ಚರ್ಚಿಸಿ ಕರ್ನಾಟಕ ಬಂದ್​ ದಿನಾಂಕ ನಿಗದಿ ಮಾಡಲಾಗುತ್ತಿದೆ.

ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕರವೇ ರಾಜ್ಯಾಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ, ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನಾನಿರತ ವಾಟಾಳ್​ ನಾಗರಾಜ್, ಸಾ.ರಾ.ಗೋವಿಂದು ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳ ಮುಖಂಡರನ್ನು ಪೊಲೀಸ್ ವಶಕ್ಕೆ ಪಡೆದರು.

Tags: #karnataka politics#karnatraka#praveen shetty#ಕರವೇ
Previous Post

ರಾಕ್ ಲೈನ್ ವೆಂಕಟೇಶ್ ಹಾಗೂ ಸಾಯಿಪ್ರಕಾಶ್ ಅವರಿಂದ “ನಿರ್ಭಯ 2” ಚಿತ್ರದ ಟೀಸರ್ ಅನಾವರಣ

Next Post

ಅದಾನಿ ಸಮೂಹವನ್ನು ಅಲುಗಾಡಿಸಿರುವ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ದಾಖಲೆಗಳು

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಅದಾನಿ ಸಮೂಹವನ್ನು ಅಲುಗಾಡಿಸಿರುವ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ದಾಖಲೆಗಳು

ಅದಾನಿ ಸಮೂಹವನ್ನು ಅಲುಗಾಡಿಸಿರುವ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ದಾಖಲೆಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada