ದೇಶಾದ್ಯಂತ ನಡೆದ ಎರಡನೇ ಸುತ್ತಿನ ರಾಷ್ಟ್ರೀಯ ತನಿಖಾ ದಳದ ದಾಳಿ ವೇಳೆ ಕರ್ನಾಟಕದಲ್ಲಿ 50 ಪಿಎಫ್ ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಮಂಗಳವಾರ ಬೆಳಿಗ್ಗೆ ರಾಜ್ಯದ ಹಲವು ನಗರಗಳ ಮೇಲೆ ದಾಳಿ ನಡೆಸಿದ ಎನ್ ಐಎ ಅಧಿಕಾರಿಗಳು ಪಿಎಫ್ ಐ ಮತ್ತು ಎಸ್ ಡಿಪಿಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ರಾಮನಗರ, ಮಂಗಳೂರು, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ ಮುಂತಾದ ಜಿಲ್ಲೆಗಳಲ್ಲಿ ದಾಳಿ ನಡೆದಿದೆ.

ಸುಮಾರು 50 ಮಂದಿಯನ್ನು ಬಂಧಿಸಿರುವ ಎನ್ ಐಎ ಅವರನ್ನು ವಿಚಾರಣೆಗೆ ಕರೆದೊಯ್ದಿದೆ. ಇದರಲ್ಲಿ ಕೆಲವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸ್ಟ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ದೇಶದಾಂತ್ಯ ಎರಡನೇ ಬಾರಿ ದಾಳಿ ನಡೆದಿರುವುದನ್ನು ಖಂಡಿಸಿ ಪಿಎಫ್ ಐ ಕಾರ್ಯಕರ್ತರು ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.






