• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮೇಕೆದಾಟು ಯೋಜನೆಗೆ ಬಜೆಟ್ನಲ್ಲಿ 1 ಸಾವಿರ ಕೋಟಿ ಅನುದಾನ ಸ್ವಾಗತಾರ್ಹ : ಡಿ.ಕೆ. ಶಿವಕುಮಾರ್

Any Mind by Any Mind
March 4, 2022
in ಇದೀಗ
0
ಮೇಕೆದಾಟು ಯೋಜನೆಗೆ ಬಜೆಟ್ನಲ್ಲಿ 1 ಸಾವಿರ ಕೋಟಿ ಅನುದಾನ ಸ್ವಾಗತಾರ್ಹ : ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಬಜೆಟ್ನಲ್ಲಿ ₹1,000 ಕೋಟಿ ಅನುದಾನ ಘೋಷಿಸಿರುವುದನ್ನು ಕೆಪಿಸಿಸಿ ಅಧ್ಯ ಕ್ಷ ಡಿ.ಕೆ. ಶಿವಕುಮಾರ್ (DK Shivakumar) ಸ್ವಾಗತಿಸಿದ್ದು, ಇದನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ಸಿಎಂ ಬಸವರಾಜ ಬೊಮ್ಮಾಯಿ (CM Bommai), ವಿಧಾನಸಭೆಯಲ್ಲಿ ಶುಕ್ರವಾರ ಮಂಡಿಸಿದ ಚೊಚ್ಚಲ ಬಜೆಟ್ನಲ್ಲಿ ಮೇಕೆದಾಟು ಯೋಜನೆಗೆ ₹1,000 ಕೋಟಿ ಅನುದಾನ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿಕೆಶಿ, ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಬಜೆಟ್ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿರುವುದು ಸ್ವಾಗತಾರ್ಹ. ನೀರಿನ ವಿಷಯದಲ್ಲಿ ಕರ್ನಾಟಕವನ್ನು ಸ್ವಾವಲಂಬಿಯಾಗಿಸುವ ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಮುಂದುವರೆದು, ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಡೆಸಲಾದ ನಮ್ಮ ನೀರು ನಮ್ಮ ಹಕ್ಕು ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬ ಕನ್ನಡಿಗರಿಗೂ ಇದರ ಪ್ರತಿಫಲ ಸಲ್ಲುತ್ತದೆ. ಇದು ನಮ್ಮೆಲ್ಲರ ಗೆಲುವು. ಸಾಮೂಹಿಕ ಹೋರಾಟದಿಂದ ಹಕ್ಕುಗಳನ್ನು ಪಡೆಯಬಹುದು ಎಂಬುದಕ್ಕೆ ಇದೊಂದು ನಿದರ್ಶನ. ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದಿದ್ದಾರೆ.

ಆದರೆ, ಕಳೆದ ಸಾಲಿನ ಬಜೆಟ್ನಲ್ಲಿ ಬೆಂಗಳೂರು ನಗರಕ್ಕೆ ಘೋಷಿಸಿದ್ದ ₹ 7,795 ಕೋಟಿ ವೆಚ್ಚದ ಕಾರ್ಯಕ್ರಮವನ್ನು ಸರ್ಕಾರ ಒಂದು ವರ್ಷ ಕಳೆದರೂ ಈಡೇರಿಸಿಲ್ಲ ಎಂಬುದು ಗಮನಾರ್ಹ. ಹಾಗಾಗಿ ಮಹತ್ವಾಕಾಂಕ್ಷೆಯ ಯೋಜನೆಗೆ ಸಾವಿರ ಕೋಟಿ ರೂಪಾಯಿ ಘೋಷಣೆ ಕೇವಲ ಭರವಸೆಯಾಗಿ ಉಳಿಯದೆ ತ್ವರಿತವಾಗಿ ಕಾರ್ಯಗತಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Tags: BJPcm bommaiCongress PartyCovid 19DK Shivakumarಕರೋನಾಡಿ.ಕೆ. ಶಿವಕುಮಾರ್ಬಸವರಾಜ ಬೊಮ್ಮಾಯಿಬಿಜೆಪಿ
Previous Post

ಚೆನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು : ಕೇಂದ್ರ ಸರ್ಕಾರದ ಸಹಯೋಗ – ಸಿಎಂ ಬೊಮ್ಮಾಯಿ

Next Post

ಭಾರತೀಯ ರಾಯಭಾರ ಕಚೇರಿಯಿಂದ ಯಾವುದೇ ಸಹಾಯ ಸಿಕ್ಕಿಲ್ಲ: ಗಾಯಗೊಂಡ ಭಾರತೀಯ ವಿದ್ಯಾರ್ಥಿ ಅಳಲು

Related Posts

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ
Top Story

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 25, 2026
0

ಬೆಂಗಳೂರು : ಪೆಟ್ರೋಲ್ ಡೀಸೆಲ್ ದರ ಏರಿಕೆ ಮೂಲಕ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ, ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ದರ...

Read moreDetails
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
Next Post
ಭಾರತೀಯ ರಾಯಭಾರ ಕಚೇರಿಯಿಂದ ಯಾವುದೇ ಸಹಾಯ ಸಿಕ್ಕಿಲ್ಲ: ಗಾಯಗೊಂಡ ಭಾರತೀಯ ವಿದ್ಯಾರ್ಥಿ ಅಳಲು

ಭಾರತೀಯ ರಾಯಭಾರ ಕಚೇರಿಯಿಂದ ಯಾವುದೇ ಸಹಾಯ ಸಿಕ್ಕಿಲ್ಲ: ಗಾಯಗೊಂಡ ಭಾರತೀಯ ವಿದ್ಯಾರ್ಥಿ ಅಳಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada