• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

50 ವರ್ಷಗಳಿಂದ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡುತಿದ್ದ ಮುಸ್ಲಿಂ ವ್ಯಾಪಾರಿಯ ಅಂಗಡಿ ಮುಚ್ಚಿಸಿದ ಹಿಂದೂ ಸಂಘಟನೆ!

ಪ್ರತಿಧ್ವನಿ by ಪ್ರತಿಧ್ವನಿ
April 7, 2022
in ಕರ್ನಾಟಕ
0
50 ವರ್ಷಗಳಿಂದ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡುತಿದ್ದ ಮುಸ್ಲಿಂ ವ್ಯಾಪಾರಿಯ ಅಂಗಡಿ ಮುಚ್ಚಿಸಿದ ಹಿಂದೂ ಸಂಘಟನೆ!
Share on WhatsAppShare on FacebookShare on Telegram

ಹಾಸನ ಜಿಲ್ಲೆಯ ಬೇಲೂರಿನ 12ನೇ ಶತಮಾನದ ಚೆನ್ನಕೇಶವ ದೇವಸ್ಥಾನದ ಆಡಳಿತ ಸಮಿತಿಯು ದೇಗುಲದ ಆವರಣದಲ್ಲಿ ದಶಕಗಳಿಂದ ಅಂಗಡಿ ನಡೆಸುತ್ತಿದ್ದ ಹಿಂದೂಯೇತರ ವ್ಯಾಪಾರಿ (ಮುಸ್ಲಿಂ ವ್ಯಾಪಾರಿ) ತೆರವು ನೋಟಿಸ್ ಜಾರಿಗೊಳಿಸಿ ಅಂಗಡಿಯನ್ನು ಮುಚ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ADVERTISEMENT

ದೇವಾಲಯದ ಸಂಕೀರ್ಣವು ಹೋಟೆಲ್, ಹಾಲಿನ ಬೂತ್ ಮತ್ತು ಗೋದಾಮುಗಳನ್ನು ಹೊಂದಿರುವ 17 ವಾಣಿಜ್ಯ ಮಳಿಗೆಗಳನ್ನು ಹೊಂದಿದೆ. 50 ವರ್ಷಗಳಿಂದ ಮಕ್ಕಳ ಆಟಿಕೆಗಳನ್ನು ಮಾರಾಟ ಮಾಡುತ್ತಿರುವ ಮುಸ್ಲಿಂ ವ್ಯಾಪಾರಿಯ ಮೇಲೆ ಮಾರ್ಚ್ 28 ರಂದು ನೋಟಿಸ್ ನೀಡಿ ಅಂಗಡಿಯನ್ನು ಮುಚ್ಚಲಾಗಿದೆ. ಅಂದಿನಿಂದ ಈ ಮುಸ್ಲಿಂ ಕುಟುಂಬದ ಏಕೈಕ ಆದಾಯದ ಮೂಲ ಕಳೆದುಕೊಂಡಂತಾಗಿದೆ. ಈ ದೇವಾಲಯವು ಕರ್ನಾಟಕ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುತ್ತದೆ ಮತ್ತು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿ ಗುರುತಿಸಲ್ಪಟ್ಟಿದೆ.

ಎರಡು ವಾರಗಳ ಹಿಂದೆ ಶಿವಮೊಗ್ಗ ಮಾರಿಕಾಂಬಾ ದೇವಸ್ಥಾನ ವಾರ್ಷಿಕ ಜಾತ್ರೆಯಲ್ಲಿ ಹಿಂದೂಯೇತರರನ್ನು ದೇವಾಲಯದ ಸಂಕೀರ್ಣದಿಂದ ಹೊರಹೋಗುವಂತೆ ಕೇಳಿಕೊಂಡ ನಂತರ ಇದೇ ಮೊದಲ ಭಾರಿಗೆ ಹಳೆ ಮೈಸೂರು ಪ್ರಾಂತ್ಯದ ದೇವಾಲಯದಲ್ಲಿ ಈತರದ ಅಹಿತಕರ ಘಟನೆ ನಡೆದಿದೆ.

ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮಾರ್ಚ್ 28 ರಂದು ಮುಸ್ಲಿಂ ವ್ಯಾಪಾರಿಗೆ ವ್ಯಾಪಾರ ಚಟುವಟಿಕೆಗಳನ್ನು “ತಕ್ಷಣವೇ ನಿಲ್ಲಿಸುವಂತೆ” ಹೇಳಿ ನೋಟಿಸ್ ಜಾರಿ ಮಾಡಿದ್ದರು. ಅದೇ ದಿನ ನೋಟಿಸ್ಗೆ ಉತ್ತರಿಸಿದ ವ್ಯಾಪಾರಿ, ದೇವಾಲಯದ ಅಧಿಕಾರಿಗಳೊಂದಿಗಿನ ಒಪ್ಪಂದವು ಮುಂದಿನ ವರ್ಷ ಕೊನೆಗೊಳ್ಳುವವರೆಗೆ ತನ್ನ ವ್ಯವಹಾರವನ್ನು ಮುಂದುವರಿಸಲು ಅನುಮತಿ ಕೋರಿದ್ದರು.

ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ವಿದ್ಯಾಲತಾ ಅವರು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಕಾಯಿದೆ, 2002ರ ಅಡಿಯಲ್ಲಿ ನೋಟಿಸ್ ನೀಡಿದ್ದು, ಹಿಂದೂಯೇತರರಿಗೆ ದೇವಾಲಯದ ಸಂಕೀರ್ಣದಲ್ಲಿ ನಿವೇಶನಗಳನ್ನು ಭೋಗ್ಯಕ್ಕೆ ಅಥವಾ ಬಾಡಿಗೆಗೆ ನೀಡುವುದನ್ನು ನಿಷೇಧಿಸಲಾಗಿದೆ. ಆದರೆ “ನಾನು ವ್ಯಾಪಾರಿಯ ಉತ್ತರವನ್ನು ನಮ್ಮ ಆಯುಕ್ತರಿಗೆ ಕಳುಹಿಸಿದ್ದೇನೆ” ಎಂದು ಅವರು ಹೇಳಿದ್ದರು. ಆದರೆ ಈಗ ಮುಸ್ಲೀಂ ವ್ಯಾಪಾರಿಯ ಅಂಗಡಿಯನ್ನು ತೆರವುಗೊಳಿಸಲಾಗಿದೆ.

ವಿಎಚ್ಪಿ ಮತ್ತು ಬಜರಂಗದಳ ಕಾರ್ಯಕರ್ತರು ದೇವಸ್ಥಾನದ ಆವರಣದಿಂದ ಹಿಂದೂಯೇತರ ಅಂಗಡಿಕಾರರನ್ನು ಹೊರಹಾಕುವಂತೆ ದೇವಸ್ಥಾನದ ಆಡಳಿತವನ್ನು ಒತ್ತಾಯಿಸಿದ್ದರಿಂದ, ಆಡಳಿತವು ನೋಟಿಸ್ ಜಾರಿ ಮಾಡಿ ಅಂಗಡಿಯನ್ನು ಮುಚ್ಚುವಂತೆ ಆದೇಶಿಸಿದೆ.

ಅಂಗಡಿ ಮಾಲಿಕರಾದ 72 ವರ್ಷದ ನೂರ್ ಜಹಾನ್ ಸುಮಾರು 50 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದರು. ಸದ್ಯ ಅವರ ಮಗ ಈಗ ರೆಹಮಾನ್ ಷರೀಫ್ ಅವರು ಅಂಗಡಿ ಜವಾಬ್ದಾರಿ ವಹಿಸಿಕೊಂಡಿದ್ದರು ಅಂಗಡಿಯ ತೆರವಿನಿಂದ ಈಗ ಈ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದಾರೆ.

ವಾರ್ಷಿಕ ಜಾತ್ರೆಯ ಸಮಯದಲ್ಲಿ ದೇವಾಲಯದ ರಥವನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗುವ ಮೊದಲು ಎರಡು ನಿಮಿಷಗಳ ಕಾಲ ಕುರಾನ್ನ ಪದ್ಯಗಳ ಪಠಣವನ್ನು ಮಾಡಲು ಅನುಮತಿಸುವ ಮೂಲಕ ದೇವಾಲಯವು ಸಿಂಕ್ರೆಟಿಕ್ ಸಂಪ್ರದಾಯವನ್ನು ಆಚರಿಸುತ್ತದೆ. ‘ಸರ್ವ ಧರ್ಮ ಸಮನ್ವಯ’ ಪರಿಕಲ್ಪನೆಯಡಿಯಲ್ಲಿ ಸಂತ ರಾಮಾನುಜಾಚಾರ್ಯರು ಆರಂಭಿಸಿರುವ ಈ ಸಂಪ್ರದಾಯವನ್ನು ಆಯುಕ್ತರ ಗಮನಕ್ಕೆ ತಂದಿರುವುದಾಗಿ ಅಧಿಕಾರಿ ತಿಳಿಸಿದರು. ದೇವಾಲಯದ ಕೈಪಿಡಿಯು ಈ ಅಭ್ಯಾಸವನ್ನು ಉಲ್ಲೇಖಿಸುತ್ತದೆ ಎಂದು ಅವರು ಹೇಳಿದರು. ದೇವಸ್ಥಾನದ ರಥೋತ್ಸವ ಈ ವರ್ಷ ಆ.13 ಮತ್ತು 14ರಂದು ನಡೆಯಲಿದ್ದು, ದೇವಸ್ಥಾನದ ಸಂಕೀರ್ಣದಲ್ಲಿ ಹಿಂದೂಯೇತರ ವ್ಯಾಪಾರಿಗಳನ್ನು ನಿಷೇಧಿಸುವಂತೆ ಕೋರಿ ಭಜರಂಗದಳದ ಬೇಲೂರು ಘಟಕ ತಹಶೀಲ್ದಾರ್ಗೆ ಮನವಿ ಸಲ್ಲಿಸಿತ್ತು.

Tags: BJPCongress PartyCovid 19ದೇವಸ್ಥಾನನರೇಂದ್ರ ಮೋದಿಬಿಜೆಪಿಮುಸ್ಲಿಂ ವ್ಯಾಪಾರಿಹಿಂದೂ ಸಂಘಟನೆ
Previous Post

2024ರ ಚುನಾವಣೆಯಲ್ಲಿ ಪ್ರಧಾನಿ ಮೋದಿ V/s ಅರವಿಂದ್ ಕೇಜ್ರಿವಾಲ್? ದೆಹಲಿ ಸಿಎಂ ಹೇಳಿದ್ದೇನು?

Next Post

ಆಂಧ್ರಪ್ರದೇಶದ ಸಚಿವ ಸಂಪುಟ ವಿಸರ್ಜನೆ: ಎಲ್ಲಾ 24 ಸಚಿವರು ರಾಜೀನಾಮೆ ಪಡೆದ ಸಿಎಂ

Related Posts

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ
ಕರ್ನಾಟಕ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

by ಪ್ರತಿಧ್ವನಿ
February 1, 2026
0

ಬೆಳಗಾವಿ : ರಾಜಕೀಯ ಒತ್ತಡ, ಬೆದರಿಕೆಗಳು, ಗುಂಪು ಗಲಾಟೆಯ ನಡುವೆಯೂ ಅಕ್ರಮ ಗಣಿಗಾರಿಕೆಗೆ ತಲೆಬಾಗದೆ, ಸ್ಥಳದಲ್ಲೇ ಕಠಿಣ ಕ್ರಮ ಕೈಗೊಂಡ ಮಹಿಳಾ ಭೂ ವಿಜ್ಞಾನಿ ಬಿಂದನ್ ಪಾಟೀಲ...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Next Post
ಪ್ರತಿ ವರ್ಷ 120 ಸ್ಯಾನಿಟರಿ ನ್ಯಾಪ್ಕಿನ್ಗಳನ್ನು ವಿದ್ಯಾರ್ಥಿನಿಯರಿಗೆ ಒದಗಿಸಲಿರುವ ಆಂಧ್ರ ಸರ್ಕಾರ

ಆಂಧ್ರಪ್ರದೇಶದ ಸಚಿವ ಸಂಪುಟ ವಿಸರ್ಜನೆ: ಎಲ್ಲಾ 24 ಸಚಿವರು ರಾಜೀನಾಮೆ ಪಡೆದ ಸಿಎಂ

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada