• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

50 ವರ್ಷಗಳಿಂದ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡುತಿದ್ದ ಮುಸ್ಲಿಂ ವ್ಯಾಪಾರಿಯ ಅಂಗಡಿ ಮುಚ್ಚಿಸಿದ ಹಿಂದೂ ಸಂಘಟನೆ!

ಪ್ರತಿಧ್ವನಿ by ಪ್ರತಿಧ್ವನಿ
April 7, 2022
in ಕರ್ನಾಟಕ
0
50 ವರ್ಷಗಳಿಂದ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡುತಿದ್ದ ಮುಸ್ಲಿಂ ವ್ಯಾಪಾರಿಯ ಅಂಗಡಿ ಮುಚ್ಚಿಸಿದ ಹಿಂದೂ ಸಂಘಟನೆ!
Share on WhatsAppShare on FacebookShare on Telegram

ಹಾಸನ ಜಿಲ್ಲೆಯ ಬೇಲೂರಿನ 12ನೇ ಶತಮಾನದ ಚೆನ್ನಕೇಶವ ದೇವಸ್ಥಾನದ ಆಡಳಿತ ಸಮಿತಿಯು ದೇಗುಲದ ಆವರಣದಲ್ಲಿ ದಶಕಗಳಿಂದ ಅಂಗಡಿ ನಡೆಸುತ್ತಿದ್ದ ಹಿಂದೂಯೇತರ ವ್ಯಾಪಾರಿ (ಮುಸ್ಲಿಂ ವ್ಯಾಪಾರಿ) ತೆರವು ನೋಟಿಸ್ ಜಾರಿಗೊಳಿಸಿ ಅಂಗಡಿಯನ್ನು ಮುಚ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ADVERTISEMENT

ದೇವಾಲಯದ ಸಂಕೀರ್ಣವು ಹೋಟೆಲ್, ಹಾಲಿನ ಬೂತ್ ಮತ್ತು ಗೋದಾಮುಗಳನ್ನು ಹೊಂದಿರುವ 17 ವಾಣಿಜ್ಯ ಮಳಿಗೆಗಳನ್ನು ಹೊಂದಿದೆ. 50 ವರ್ಷಗಳಿಂದ ಮಕ್ಕಳ ಆಟಿಕೆಗಳನ್ನು ಮಾರಾಟ ಮಾಡುತ್ತಿರುವ ಮುಸ್ಲಿಂ ವ್ಯಾಪಾರಿಯ ಮೇಲೆ ಮಾರ್ಚ್ 28 ರಂದು ನೋಟಿಸ್ ನೀಡಿ ಅಂಗಡಿಯನ್ನು ಮುಚ್ಚಲಾಗಿದೆ. ಅಂದಿನಿಂದ ಈ ಮುಸ್ಲಿಂ ಕುಟುಂಬದ ಏಕೈಕ ಆದಾಯದ ಮೂಲ ಕಳೆದುಕೊಂಡಂತಾಗಿದೆ. ಈ ದೇವಾಲಯವು ಕರ್ನಾಟಕ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುತ್ತದೆ ಮತ್ತು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿ ಗುರುತಿಸಲ್ಪಟ್ಟಿದೆ.

ಎರಡು ವಾರಗಳ ಹಿಂದೆ ಶಿವಮೊಗ್ಗ ಮಾರಿಕಾಂಬಾ ದೇವಸ್ಥಾನ ವಾರ್ಷಿಕ ಜಾತ್ರೆಯಲ್ಲಿ ಹಿಂದೂಯೇತರರನ್ನು ದೇವಾಲಯದ ಸಂಕೀರ್ಣದಿಂದ ಹೊರಹೋಗುವಂತೆ ಕೇಳಿಕೊಂಡ ನಂತರ ಇದೇ ಮೊದಲ ಭಾರಿಗೆ ಹಳೆ ಮೈಸೂರು ಪ್ರಾಂತ್ಯದ ದೇವಾಲಯದಲ್ಲಿ ಈತರದ ಅಹಿತಕರ ಘಟನೆ ನಡೆದಿದೆ.

ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮಾರ್ಚ್ 28 ರಂದು ಮುಸ್ಲಿಂ ವ್ಯಾಪಾರಿಗೆ ವ್ಯಾಪಾರ ಚಟುವಟಿಕೆಗಳನ್ನು “ತಕ್ಷಣವೇ ನಿಲ್ಲಿಸುವಂತೆ” ಹೇಳಿ ನೋಟಿಸ್ ಜಾರಿ ಮಾಡಿದ್ದರು. ಅದೇ ದಿನ ನೋಟಿಸ್ಗೆ ಉತ್ತರಿಸಿದ ವ್ಯಾಪಾರಿ, ದೇವಾಲಯದ ಅಧಿಕಾರಿಗಳೊಂದಿಗಿನ ಒಪ್ಪಂದವು ಮುಂದಿನ ವರ್ಷ ಕೊನೆಗೊಳ್ಳುವವರೆಗೆ ತನ್ನ ವ್ಯವಹಾರವನ್ನು ಮುಂದುವರಿಸಲು ಅನುಮತಿ ಕೋರಿದ್ದರು.

ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ವಿದ್ಯಾಲತಾ ಅವರು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಕಾಯಿದೆ, 2002ರ ಅಡಿಯಲ್ಲಿ ನೋಟಿಸ್ ನೀಡಿದ್ದು, ಹಿಂದೂಯೇತರರಿಗೆ ದೇವಾಲಯದ ಸಂಕೀರ್ಣದಲ್ಲಿ ನಿವೇಶನಗಳನ್ನು ಭೋಗ್ಯಕ್ಕೆ ಅಥವಾ ಬಾಡಿಗೆಗೆ ನೀಡುವುದನ್ನು ನಿಷೇಧಿಸಲಾಗಿದೆ. ಆದರೆ “ನಾನು ವ್ಯಾಪಾರಿಯ ಉತ್ತರವನ್ನು ನಮ್ಮ ಆಯುಕ್ತರಿಗೆ ಕಳುಹಿಸಿದ್ದೇನೆ” ಎಂದು ಅವರು ಹೇಳಿದ್ದರು. ಆದರೆ ಈಗ ಮುಸ್ಲೀಂ ವ್ಯಾಪಾರಿಯ ಅಂಗಡಿಯನ್ನು ತೆರವುಗೊಳಿಸಲಾಗಿದೆ.

ವಿಎಚ್ಪಿ ಮತ್ತು ಬಜರಂಗದಳ ಕಾರ್ಯಕರ್ತರು ದೇವಸ್ಥಾನದ ಆವರಣದಿಂದ ಹಿಂದೂಯೇತರ ಅಂಗಡಿಕಾರರನ್ನು ಹೊರಹಾಕುವಂತೆ ದೇವಸ್ಥಾನದ ಆಡಳಿತವನ್ನು ಒತ್ತಾಯಿಸಿದ್ದರಿಂದ, ಆಡಳಿತವು ನೋಟಿಸ್ ಜಾರಿ ಮಾಡಿ ಅಂಗಡಿಯನ್ನು ಮುಚ್ಚುವಂತೆ ಆದೇಶಿಸಿದೆ.

ಅಂಗಡಿ ಮಾಲಿಕರಾದ 72 ವರ್ಷದ ನೂರ್ ಜಹಾನ್ ಸುಮಾರು 50 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದರು. ಸದ್ಯ ಅವರ ಮಗ ಈಗ ರೆಹಮಾನ್ ಷರೀಫ್ ಅವರು ಅಂಗಡಿ ಜವಾಬ್ದಾರಿ ವಹಿಸಿಕೊಂಡಿದ್ದರು ಅಂಗಡಿಯ ತೆರವಿನಿಂದ ಈಗ ಈ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದಾರೆ.

ವಾರ್ಷಿಕ ಜಾತ್ರೆಯ ಸಮಯದಲ್ಲಿ ದೇವಾಲಯದ ರಥವನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗುವ ಮೊದಲು ಎರಡು ನಿಮಿಷಗಳ ಕಾಲ ಕುರಾನ್ನ ಪದ್ಯಗಳ ಪಠಣವನ್ನು ಮಾಡಲು ಅನುಮತಿಸುವ ಮೂಲಕ ದೇವಾಲಯವು ಸಿಂಕ್ರೆಟಿಕ್ ಸಂಪ್ರದಾಯವನ್ನು ಆಚರಿಸುತ್ತದೆ. ‘ಸರ್ವ ಧರ್ಮ ಸಮನ್ವಯ’ ಪರಿಕಲ್ಪನೆಯಡಿಯಲ್ಲಿ ಸಂತ ರಾಮಾನುಜಾಚಾರ್ಯರು ಆರಂಭಿಸಿರುವ ಈ ಸಂಪ್ರದಾಯವನ್ನು ಆಯುಕ್ತರ ಗಮನಕ್ಕೆ ತಂದಿರುವುದಾಗಿ ಅಧಿಕಾರಿ ತಿಳಿಸಿದರು. ದೇವಾಲಯದ ಕೈಪಿಡಿಯು ಈ ಅಭ್ಯಾಸವನ್ನು ಉಲ್ಲೇಖಿಸುತ್ತದೆ ಎಂದು ಅವರು ಹೇಳಿದರು. ದೇವಸ್ಥಾನದ ರಥೋತ್ಸವ ಈ ವರ್ಷ ಆ.13 ಮತ್ತು 14ರಂದು ನಡೆಯಲಿದ್ದು, ದೇವಸ್ಥಾನದ ಸಂಕೀರ್ಣದಲ್ಲಿ ಹಿಂದೂಯೇತರ ವ್ಯಾಪಾರಿಗಳನ್ನು ನಿಷೇಧಿಸುವಂತೆ ಕೋರಿ ಭಜರಂಗದಳದ ಬೇಲೂರು ಘಟಕ ತಹಶೀಲ್ದಾರ್ಗೆ ಮನವಿ ಸಲ್ಲಿಸಿತ್ತು.

Tags: BJPCongress PartyCovid 19ದೇವಸ್ಥಾನನರೇಂದ್ರ ಮೋದಿಬಿಜೆಪಿಮುಸ್ಲಿಂ ವ್ಯಾಪಾರಿಹಿಂದೂ ಸಂಘಟನೆ
Previous Post

2024ರ ಚುನಾವಣೆಯಲ್ಲಿ ಪ್ರಧಾನಿ ಮೋದಿ V/s ಅರವಿಂದ್ ಕೇಜ್ರಿವಾಲ್? ದೆಹಲಿ ಸಿಎಂ ಹೇಳಿದ್ದೇನು?

Next Post

ಆಂಧ್ರಪ್ರದೇಶದ ಸಚಿವ ಸಂಪುಟ ವಿಸರ್ಜನೆ: ಎಲ್ಲಾ 24 ಸಚಿವರು ರಾಜೀನಾಮೆ ಪಡೆದ ಸಿಎಂ

Related Posts

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!
Top Story

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

by ಪ್ರತಿಧ್ವನಿ
April 19, 2026
0

ಹಾವೇರಿ : ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು...

Read moreDetails
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
Next Post
ಪ್ರತಿ ವರ್ಷ 120 ಸ್ಯಾನಿಟರಿ ನ್ಯಾಪ್ಕಿನ್ಗಳನ್ನು ವಿದ್ಯಾರ್ಥಿನಿಯರಿಗೆ ಒದಗಿಸಲಿರುವ ಆಂಧ್ರ ಸರ್ಕಾರ

ಆಂಧ್ರಪ್ರದೇಶದ ಸಚಿವ ಸಂಪುಟ ವಿಸರ್ಜನೆ: ಎಲ್ಲಾ 24 ಸಚಿವರು ರಾಜೀನಾಮೆ ಪಡೆದ ಸಿಎಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada