ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕೋಮು ಸೌಹಾರ್ದ ಕಡೆದುವಂತಹ ವಾತಾವರಣ ನಿರ್ಮಾಣವಾಗಿದ್ದು ಬಿಜೆಪಿ ಆಡಳಿತವಿರುವ ಇತರೆ ರಾಜ್ಯಗಳ ತರಹ ಕರ್ನಾಟಕದಲ್ಲು ಸಹ ಬುಲ್ಡೋಜರ್ ಬಳಸಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.
ರಾಮನವಮಿ ಹಾಗೂ ಹನುಮ ಜಯಂತ ಮೆರವಣಿಗೆ ವೇಳೆ ಗಲಭೆಗೆ ಕಾರಣರಾದವರ ಆಸ್ತಿಯನ್ನು ಬುಲ್ಡೋಜರ್ ಬಳಸಿ ಗುಜರಾತ್, ಮಧ್ಯಪ್ರದೇಶ ಹಾಗೂ ಉತ್ತರಪ್ರದೇಶ ಸರ್ಕಾರಗಳು ನಾಶಪಡಿಸಿದ ಹಾಗೆ ಕರ್ನಾಟಕ ಸರ್ಕಾರವು ಸಹ ಅದೇ ಮಾದರಿಯನ್ನು ಅನುಸರಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಇನ್ನು ಈ ಕುರಿತು ಮಾತನಾಡಿರುವ ಆರ್ ಅಶೋಕ್ ಗಲಭೆಕೋರರನ್ನು ದೇಶದ್ರೋಹಿಗಳ ಪಟ್ಟಿಗೆ ಸೇರಿಸಬೇಕು ಎಂದು ಕಿಡಿಕಾರಿದ್ದಾರೆ. ಮುಂದುವರೆದು, ಮುಸ್ಲಿಮರೆಲ್ಲರು ಕೆಟ್ಟವರಲ್ಲ ಅವರಲ್ಲು ಒಳ್ಳೆಯ ಜನರಿದ್ದಾರೆ. ಆದರೆ, ಕೆಲವರು ಉಗ್ರ ಸಂಘಟನೆಗಳಾದ ISI ಜೊತೆ ಸಂಪರ್ಕ ಹೊಂದಿರುವವರು ಈ ರೀತಿ ಕೆಲಸ ಮಾಡುತ್ತಿದ್ದಾರೆ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈ ಮೊದಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಸಂಸದ ಪ್ರತಾಪಸ್ ಸಿಂಹ ಈ ರೀತಿ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು.






