• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಂಪುಟ ರಚನೆ ಮಾತುಕತೆ ಅಂತಿಮ: ಸದ್ಯವೇ ಹೊರಬೀಳಲಿದೆ ಸಚಿವರ ಪಟ್ಟಿ

Shivakumar by Shivakumar
August 3, 2021
in ಕರ್ನಾಟಕ, ರಾಜಕೀಯ
0
ವರಿಷ್ಠರು ಒಪ್ಪಿದರೆ ಬುಧವಾರ ನೂತನ ಸಚಿವ ಸಂಪುಟ – ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ರಚನೆ ಪ್ರಯತ್ನಗಳು ಅಂತಿಮ ಹಂತಕ್ಕೆ ಬಂದಿದ್ದು ಇಂದು ರಾತ್ರಿ ಬಹುತೇಕ ಸಚಿವರ ಮೊದಲ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ.

ADVERTISEMENT

ಸಚಿವ ಸಂಪುಟ ರಚನೆಯ ಒಂದಂಶದ ಅಜೆಂಡಾದ ಮೇಲೆ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಕ್ಷದ ವರಿಷ್ಠರನ್ನು ಒಬ್ಬೊಬ್ಬರಾಗಿ ಭೇಟಿ ಮಾಡಿ ತಮ್ಮ ಪಟ್ಟಿಗೆ ಅನುಮೋದನೆ ಪಡೆಯುತ್ತಿದ್ದು, ಅಂತಿಮವಾಗಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನಿ ಮಂಗಳವಾರ ಭೇಟಿ ಮಾಡಿದ್ದಾರೆ.

ಈ ಭೇಟಿಯ ವೇಳೆ ಸಚಿವ ಸಂಪುಟಕ್ಕೆ ಸೇರಲಿರುವ ಶಾಸಕರ ಪಟ್ಟಿಯ ಕುರಿತು ಬೊಮ್ಮಾಯಿ ಅಂತಿಮ ಹಂತದ ಚರ್ಚೆ ನಡೆಸಿದರು ಎನ್ನಲಾಗಿದೆ.

ಈ ನಡುವೆ ಈಗಾಗಲೇ ಸಾಕಷ್ಟು ಮಂದಿ ಸಂಪುಟ ಆಕಾಂಕ್ಷಿಗಳು ಭಾರಿ ಲಾಬಿ ನಡೆಸುತ್ತಿದ್ದಾರೆ. ಕೆಲವರು ದೆಹಲಿ ಮಟ್ಟದಲ್ಲಿ ಲಾಭಿ ನಡೆಸಿದರೆ ಮತ್ತೆ ಕೆಲವರು ರಾಜ್ಯ ಮಟ್ಟದಲ್ಲಿ ತಮ್ಮೆಲ್ಲಾ ಪ್ರಭಾವ ಬಳಸಿ ಮಂತ್ರಿಗಿರಿ ಗಿಟ್ಟಿಸಲು ಇನ್ನಿಲ್ಲದ ಸಾಹಸ ನಡೆಸುತ್ತಿದ್ದಾರೆ.

ಬಿಜೆಪಿಯ ಹಳಬರು, ಹೊಸಬರು ಮತ್ತು ವಲಸಿಗರು ಎಂಬ ಮೂರು ಗುಂಪಿನ ಪೈಕಿ ಯಾರನ್ನು ಎಷ್ಟು ಪ್ರಮಾಣದಲ್ಲಿ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬ ಕುರಿತು ಒಂದು ಸೂತ್ರ ರಚಿಸಿದ್ದು, ಆ ಸೂತ್ರದ ಪ್ರಕಾರ ವರಿಷ್ಠರು ಈಗಾಗಲೇ ಹಸಿರು ನಿಶಾನೆ ತೋರಿದ್ದಾರೆ. ಹಾಗೇ ರಾಜ್ಯ ಬಿಜೆಪಿ ವರಿಷ್ಠರು, ಬಿ ಎಸ್ ಯಡಿಯೂರಪ್ಪ ಮತ್ತು ಆರ್ ಎಸ್ ಎಸ್ ಪ್ರಮುಖರು ಒಪ್ಪಿಗೆ ನೀಡಿದವರನ್ನೇ ಸಚಿವರನ್ನಾಗಿ ಮಾಡಲಾಗುವುದು ಎಂಬುದು ಬಿಜೆಪಿ ಮೂಲಗಳ ಮಾಹಿತಿ.

ಅಂದರೆ ಒಂದು ಕಡೆ ಮೂಲ ಹಳಬರು, ಹೊಸಬರು ಮತ್ತು ವಲಸಿಗರ ಗುಂಪುಗಳ ಪ್ರಕಾರ ಶಾಸಕರ ಆಯ್ಕೆಯ ಬಳಿಕ ಆ ಮೂರು ಗುಂಪಿನವರಿಗೆ ಮೂರು ವಲಯಗಳಿಂದ- ಬಿಜೆಪಿ, ಸಂಘ ಮತ್ತು ಬಿಎಸ್ ವೈ- ಒಪ್ಪಿಗೆ ಪಡೆಯುವ ಪ್ರಕ್ರಿಯೆ. ಆ ಪ್ರಕ್ರಿಯೆಯ ಭಾಗವಾಗಿಯೇ ಇದೀಗ ಸಿಎಂ ದೆಹಲಿ ಯಾತ್ರೆ ಆರಂಭಿಸಿದ್ದಾರೆ. ಅದು ಬಹುತೇಕ ಅಂತಿಮ ಹಂತಕ್ಕೂ ತಲುಪಿದೆ.

ಮೂಲಗಳ ಪ್ರಕಾರ ಸಂಪುಟ ರಚನೆ ಸಮಾಲೋಚನಾ ಪ್ರಕ್ರಿಯೆ ಬಹುತೇಕ ಮಂಗಳವಾರವೇ ಅಂತಿಮವಾಗುವ ಸಾಧ್ಯತೆ ಇದ್ದು, ಮಂಗಳವಾರ ಸಂಜೆ ವರಿಷ್ಠರ ಸಭೆಯ ಬಳಿಕ ಪಟ್ಟಿ ಅಂತಿಮವಾಗಲಿದೆ.

ಈ ನಡುವೆ, ಒಂದೇ ಹಂತದ ಸಂಪುಟ ರಚನೆಯ ಬದಲಾಗಿ, ಎರಡು ಹಂತದಲ್ಲಿ ನಡೆಸುವುದು ಸಿಎಂ ತಂತ್ರ. ಆ ಮೂಲಕ ಭುಗಿಲೇಳಬಹುದಾದ ಅಸಮಾಧಾನವನ್ನು ಹಂತಹಂತವಾಗಿ ಶಮನ ಮಾಡುವ ಯೋಚನೆ ಅವರದು.

ಮೊದಲ ಹಂತದಲ್ಲಿ 24 ಮಂದಿಗೆ ಅವಕಾಶ ಕೊಡುವ ಸಾಧ್ಯತೆ ಇದ್ದು, ಉಳಿದವರನ್ನು ಎರಡನೇ ಹಂತದಲ್ಲಿ ಸಂಪುಟಕ್ಕೆ ಸೇರ್ಪಡೆ ಮಾಡುವ ಸಾಧ್ಯತೆ ಇದೆ. ಈ ಮೂಲಕ ಒಮ್ಮೆಗೇ ಸಂಪುಟ ರಚನೆ ಪೂರ್ಣಗೊಳಿಸಿದರೆ ಭುಗಿಲೇಳಬಹುದಾದ ಭಾರಿ ಭಿನ್ನಮತ ಶಮನ ಮಾಡುವುದು ಸಿಎಂ ಬೊಮ್ಮಾಯಿ ಅವರ ತಂತ್ರಗಾರಿಕೆ ಎನ್ನಲಾಗಿದೆ.

ಆದರೆ, ಬೊಮ್ಮಾಯಿ ಅವರ ಈ ತಂತ್ರಗಾರಿಕೆಗೆ ಹೈಕಮಾಂಡ್ ಹಸಿರು ನಿಶಾನೆ ತೋರಿದ್ದಾರೆ ಎನ್ನಲಾಗಿದೆ. ಇಂದು ಸಂಜೆ ಸಚಿವ ಸಂಪುಟ ರಚನೆಯ ಕುರಿತ ಸಿಎಂ ಅವರು ವರಿಷ್ಠರೊಂದಿಗೆ ನಡೆಸುವ ಮಾತುಕತೆಗಳು ಮುಗಿದಿದ್ದು ಸಚಿವ ಸಂಪುಟ ರಚನೆಗೆ ಗ್ರೀನ್‌ ಸಿಗ್ನಲ್ ಸಿಕ್ಕಿದೆ. ನಾಳೆ ಸಂಜೆ ಐದು ಗಂಟೆಗೆ ಸಚಿವವರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ, ರಾತ್ರಿ ಅಥವಾ ಬುಧವಾರ ಬೆಳಗ್ಗೆ ಸಂಪುಟದ ಗಾತ್ರ ಮತ್ತು ಸೇರ್ಪಡೆಯಾಗಲಿರುವ ಸಚಿವರ ಹೆಸರುಗಳು ಹೊರಬೀಳಲಿವೆ.

Tags: Basavaraj BommaiBJPKarnataka Politicsಅರುಣ್ ಸಿಂಗ್ಬಿ ಎಸ್ ಯಡಿಯೂರಪ್ಪಬಿಜೆಪಿಸಂಪುಟ ವಿಸ್ತರಣೆ
Previous Post

NEET ಮೀಸಲಾತಿ: ಇದು ಬಿಜೆಪಿಯ ರಾಜಕೀಯ ಷಡ್ಯಂತ್ರವೋ? ಸಾಮಾಜಿಕ ನ್ಯಾಯದ ಬದ್ಧತೆಯೊ?

Next Post

ಪೆಗಸಸ್ ಬೇಹುಗಾರಿಕೆ ಪಟ್ಟಿಯಲ್ಲಿರುವ ಐವರು ಪತ್ರಕರ್ತರಿಂದ ಸುಪ್ರೀಂ ಕೋರ್ಟ್ ಗೆ ಅರ್ಜಿ : ತನಿಖೆಗೆ ಆದೇಶಿಸುವಂತೆ ಮನವಿ!

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025
Next Post
ಪೆಗಸಸ್ ಬೇಹುಗಾರಿಕೆ ಪಟ್ಟಿಯಲ್ಲಿರುವ ಐವರು ಪತ್ರಕರ್ತರಿಂದ ಸುಪ್ರೀಂ ಕೋರ್ಟ್ ಗೆ ಅರ್ಜಿ : ತನಿಖೆಗೆ ಆದೇಶಿಸುವಂತೆ ಮನವಿ!

ಪೆಗಸಸ್ ಬೇಹುಗಾರಿಕೆ ಪಟ್ಟಿಯಲ್ಲಿರುವ ಐವರು ಪತ್ರಕರ್ತರಿಂದ ಸುಪ್ರೀಂ ಕೋರ್ಟ್ ಗೆ ಅರ್ಜಿ : ತನಿಖೆಗೆ ಆದೇಶಿಸುವಂತೆ ಮನವಿ!

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada