ರಸ್ತೆಗಳ ಕಳಪೆ ಕಾಮಗಾರಿ ಬಗ್ಗೆ ವರದಿ ತಯಾರಿಸಲು ಟಾಸ್ಕ್ ಪೋರ್ಸ್ ರಚನೆ ಮಾಡಿದ್ದೇನೆ. ಯಾವ ಅವಧಿಯಲ್ಲಿ ರಸ್ತೆ ಆಗಿದೆ. ರಸ್ತೆ ಗುಣಮಟ್ಟದಿಂದ ಮಾಡಲಾಗಿದೆಯೋ ಇಲ್ಲವೋ ಎಂಬುದರ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ. ಕಳಪೆ ಕಾಮಗಾರಿಯಿಂದ ರಸ್ತೆಯಲ್ಲಿ ಗುಂಡಿ ಬಿದ್ದಿದ್ದರೆ ಗುತ್ತಿಗೆದಾರನ ಮೇಲೆ ಕ್ರಮ ನಿಶ್ಚಿತ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಮಳೆ ಬಂದಾಗ ಮಾತ್ರ ಈ ವಿಚಾರ ಚರ್ಚೆ ಮಾಡಿ ನಂತರ ಸುಮ್ಮನಾಗುವುದಿಲ್ಲ.
ಈ ವಿಚಾರದಲ್ಲಿ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮಳೆ ಬಂದಾಗ ನಿರಂತರ ನೀರು ತುಂಬುವ ಪ್ರದೇಶ ಗುರುತು ಮಾಡಿ, ಅವಕ್ಕೆ ಶಾಸ್ವತ ಪರಿಹಾರ ಕಂಡು ಹಿಡಿಯಲಾಗುತ್ತದೆ ಎಂದು ಹೇಳಿದ್ದಾರೆ.
ಚಾಮರಾಜನಗರ ಜಿಲ್ಲೆಗೆ ನಾಳೆ ಭೇಟಿ ಕೊಡುವ ವಿಚಾರದ ಬಗ್ಗೆ ಮಾತನಾಡಿದ ಅವರು, ನಾಳೆ ಮಾತ್ರ ಅಲ್ಲ ಇನ್ನೂ ಹಲವು ಬಾರಿಯೂ ನಾನು ಚಾಮರಾಜ ನಗರಕ್ಕೆ ಭೇಟಿ ನೀಡುತ್ತೇನೆ. ಸಿಎಂಗೆ ಎಲ್ಲಾ ಜಿಲ್ಲೆಗಳೂ ಒಂದೇ. ಅಲ್ಲಿ ಹೋದ್ರೆ ಅಧಿಕಾರ ಹೋಗುತ್ತದೆ ಎಂಬುದು ಸರಿಯಲ್ಲ. ಅಲ್ಲಿ ಹೋಗದೆ ಇದ್ದವ್ರಿಗೆ ಅಧಿಕಾರ ಶಾಸ್ವತವಾಗಿ ಉಳಿದಿದ್ಯಾ, ಎಂದು ಮುಖ್ಯಮಂತ್ರಿ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ನನಗೆ ಬೇರೆಯವರ ರೀತಿ ಯಾವುದೇ ಭಯ ಇಲ್ಲ, ಇದು ನಂಬಿಕೆ ಅಪನಂಬಿಕೆ ಪ್ರಶ್ನೆ ಅಲ್ಲ. ಇದು ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯದ ಪ್ರಶ್ನೆ ಆ ಕರ್ತವ್ಯವನ್ನ ನಾನು ಈಗ ಮಾಡುತ್ತಿದ್ದೇನೆ ಎಂದು ಚಾಮರಾಜನಗರ ಜಿಲ್ಲಾ ಪ್ರವಾಸದ ಬಗ್ಗೆ ಹೇಳಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ 2021. ಕೊರೋನಾ ಹಿನ್ನಲೆ ಸರಳ ದಸರಾ ಆಚರಣೆ ಮಾಡುತ್ತಿರೋದು ನೋವಿದೆ. ಸರಳ ದಸರಾ ಆಚರಣೆ ಮಾಡೋದ್ರಿಂದ ನಾಡಹಬ್ಬ ಆಗೋದಿಲ್ಲ. ರಾಜ್ಯದ ಉತ್ತರ ಕರ್ನಾಟಕದಿಂದ ಮಂದಿ ಬರಬೇಕು, ಬೇರೆ ಬೇರೆ ಜಿಲ್ಲೆಗಳಿಂದ ಜನ ಬರಬೇಕು ಅದು ಖುಷಿ ಕೊಡುತ್ತದೆ ಎಂದು ಹೇಳಿದ್ದಾರೆ.
ನಾಡ ಹಬ್ಬ ದಸರಾದಲ್ಲಿ ನಾನು ಸಾಮಾನ್ಯನಾಗಿ ಭಾಗವಹಿಸುವುದು ಖುಷಿ ತಂದಿದೆ.
ಕೊರೋನಾ ಸಂದರ್ಭದಲ್ಲಿಯೂ ಯಾವುದೇ ಸಂಪ್ರದಾಯ,ಪರಂಪರೆಗೆ ದಕ್ಕೆಯಾಗದ ರೀತಿ ಆಚರಣೆ ಮಾಡಲಾಗುತ್ತಿದೆ.
ನಾಡು ಸುಭಿಕ್ಷವಾಗಿ ಇರಬೇಕು ಎಂದು ನಾಡ ದೇವಿಯಲ್ಲಿ ನಮ್ಮ ಪ್ರಾರ್ಥನೆ.
ಮುಂದಿನ ವರ್ಷ ಅದ್ದೂರಿ ವಿಜೃಂಭಣೆಯಿಂದ ದಸರಾ ಆಚರಿಸುವಂತಾಗಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.