• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಖರ್ಗೆ ಮೈಬಣ್ಣ ಅವಹೇಳನ | ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್‌ ದೂರು

ಪ್ರತಿಧ್ವನಿ by ಪ್ರತಿಧ್ವನಿ
August 2, 2023
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಆರಗ ಜ್ಞಾನೇಂದ್ರ
Share on WhatsAppShare on FacebookShare on Telegram

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಅವರ ವಿರುದ್ಧ ಕರ್ನಾಟಕ ಕಾಂಗ್ರೆಸ್‌ ಬುಧವಾರ (ಆಗಸ್ಟ್‌ 2) ಸಂಜೆ ದೂರು ನೀಡಿದೆ.

ADVERTISEMENT

ಇದಕ್ಕೂ ಮುನ್ನ ಆರಗ ಅವರು ಬಹಿರಂಗ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು. ಈಗ ಹೈಗ್ರೌಂಡ್ಸ್‌ ಠಾಣೆಯಲ್ಲಿ ದೂರು ನೀಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿದ ಹೇಳಿಕೆ ಖಂಡಿಸಿ ತೀರ್ಥಹಳ್ಳಿ ತಾಲ್ಲೂಕು ಕಚೇರಿ ಮುಂಭಾಗ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅರಗ ಜ್ಞಾನೇಂದ್ರ ಅವರು ಮಾತನಾಡಿದ್ದರು. ಈ ವೇಳೆ ಸಚಿವ ಈಶ್ವರ್ ಖಂಡ್ರೆ ಮತ್ತು ಮಲ್ಲಿಕಾರ್ಜುನ ಖರ್ಗೆಗೆ ಅವಹೇಳನ ಮಾಡಿದ್ದರು.

ಆರಗ ಜ್ಞಾನೇಂದ್ರ ಅವರ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಟ್ವೀಟ್‌ ಮೂಲಕ ಕಿಡಿಕಾರಿತ್ತು. ಬಿಜೆಪಿಗೆ ದಲಿತರ ಬಗ್ಗೆ ಅಸಹನೆ ಇದೆ ಎಂದು ಹೇಳಿತ್ತು.

ಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಜ್ಞಾನೇಂದ್ರರನ್ನು ಉಚ್ಚಾಟನೆ ಮಾಡಬೇಕು. ಜ್ಞಾನೇಂದ್ರ ಅವರು ಖರ್ಗೆ ಹಾಗೂ ದಲಿತರ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿತ್ತು.

ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ, ಮಂಗಳವಾರ ತೀರ್ಥಹಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು.

ಇಲ್ಲಿ ಮಾತನಾಡಿದ್ದ ಆರಗ ಜ್ಞಾನೇಂದ್ರ, “ಅರಣ್ಯ ಸಚಿವರಿಗೆ ಪಶ್ಚಿಮಘಟ್ಟದ ಜನರ ಜೀವನಕ್ರಮ, ಗಿಡ- ಮರಗಳ ಕುರಿತು ತಿಳಿವಳಿಕೆ ಇಲ್ಲ. ಪಶ್ಚಿಮ ಘಟ್ಟಗಳ ಬಗ್ಗೆ ವರದಿ ನೀಡಿರುವ ವಿಜ್ಞಾನಿ ಕಸ್ತೂರಿರಂಗನ್ ಪರಿಸರ ತಜ್ಞ ಅಲ್ಲ” ಎಂದು ಟೀಕಿಸಿದ್ದರು.

ಈ ಸುದ್ದಿ ಓದಿದ್ದೀರಾ? ಪ್ರೀತಿಯಿಂದ ಮಾತ್ರ ದೇಶದಲ್ಲಿ ಈ ದ್ವೇಷದ ಬೆಂಕಿಯನ್ನು ನಂದಿಸಲು ಸಾಧ್ಯ; ರಾಹುಲ್ ಗಾಂಧಿ

“ಅರಣ್ಯವೇ ಇಲ್ಲದ ಪ್ರದೇಶದವರು ಅರಣ್ಯ ಸಚಿವರಾಗಿರುವುದು ನಮ್ಮ ದುರದೃಷ್ಟ. ಬೀದರ್ ಮೂಲದ ಅವರಿಗೆ ಮರ- ಗಿಡ ಅಂದರೆ ಏನು, ಅದರ ನೆರಳು ಅಂದರೆ ಏನು ಎಂಬುದೇ ಗೊತ್ತಿಲ್ಲ. ಅವರಿಗೆ ಮಲೆನಾಡಿನವರ ಬದುಕು, ಪಶ್ಚಿಮ ಘಟ್ಟದವರ ಸಮಸ್ಯೆಗಳ ಬಗ್ಗೆ ಗೊತ್ತಿಲ್ಲ. ಆ ಭಾಗದವರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ ಅವರನ್ನು ನೋಡಿದರೇ ಅಲ್ಲಿನವರ ಸ್ಥಿತಿ ಗೊತ್ತಾಗುತ್ತದೆ. ಪಾಪ ಅವರ ತಲೆಕೂದಲು ಮುಚ್ಚಿಕೊಂಡಿದ್ದರಿಂದ ಸ್ವಲ್ಪ ಉಳಕೊಂಡಿದ್ದಾರೆ. ಅದೇ ಅವರ ನೆರಳು. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳ ಬೇಕು” ಎಂದು ಹೇಳಿದ್ದರು.

“ಮೂಲ ನಿವಾಸಿಗಳಿಲ್ಲದಿದ್ದರೆ ಸಹ್ಯಾದ್ರಿಯ ಅರಣ್ಯ ಶ್ರೇಣಿ ಉಳಿಯುತ್ತಿರಲಿಲ್ಲ. ದೆಹಲಿಯಲ್ಲಿ ಕುಳಿತು ಉಪಗ್ರಹ ಚಿತ್ರಗಳನ್ನು ಅವಲೋಕಿಸಿ ಅವೈಜ್ಞಾನಿಕವಾಗಿ ಸಮೀಕ್ಷೆ ನಡೆಸಲಾಗಿದೆ. ಈಗಾಗಲೇ ಹಲವು ಕಾಯ್ದೆಗಳಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿಯಾದರೆ ಸಮಸ್ಯೆ ಬಿಗಡಾಯಿಸಲಿದೆ” ಎಂದು ಆರಗ ಜ್ಞಾನೇಂದ್ರ ಹೇಳಿದ್ದರು.

Tags: Araga JnanendraKarnataka CongressMallikarjun Khargeಆರಗ ಜ್ಞಾನೇಂದ್ರಕರ್ನಾಟಕ ಕಾಂಗ್ರೆಸ್‌ಮಲ್ಲಿಕಾರ್ಜುನ ಖರ್ಗೆ
Previous Post

ಗ್ಯಾರೆಂಟಿ ಯೋಜನೆಗಳ ಬಗ್ಗೆ ಟೀಕಿಸಿದ ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

Next Post

ಗ್ಯಾರಂಟಿಗಳ ಯಶಸ್ವಿ ಜಾರಿಯಿಂದ ಕರ್ನಾಟಕ ಮಾದರಿ ಅಭಿವೃದ್ಧಿಗೆ ಹೈಕಮಾಂಡ್ ಮೆಚ್ಚುಗೆ

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post
ದೆಹಲಿಯಲ್ಲಿ ಹೈಕಮಾಂಡ್‌ ಜೊತೆ ಕರ್ನಾಟಕದ ಕೈ ನಾಯಕರ ಚರ್ಚೆ

ಗ್ಯಾರಂಟಿಗಳ ಯಶಸ್ವಿ ಜಾರಿಯಿಂದ ಕರ್ನಾಟಕ ಮಾದರಿ ಅಭಿವೃದ್ಧಿಗೆ ಹೈಕಮಾಂಡ್ ಮೆಚ್ಚುಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada