• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

Covid ಬಿಕ್ಕಟ್ಟು: ನಿರ್ದಿಷ್ಟ ಕ್ರಮಗಳಿಗೆ ಆಗ್ರಹಿಸಿ ಕರ್ನಾಟಕ ಜನಾರೋಗ್ಯ ಚಳವಳಿ ಬಹಿರಂಗ ಪತ್ರ

by
April 23, 2021
in ಕರ್ನಾಟಕ
0
Covid ಬಿಕ್ಕಟ್ಟು: ನಿರ್ದಿಷ್ಟ ಕ್ರಮಗಳಿಗೆ ಆಗ್ರಹಿಸಿ ಕರ್ನಾಟಕ ಜನಾರೋಗ್ಯ ಚಳವಳಿ ಬಹಿರಂಗ ಪತ್ರ
Share on WhatsAppShare on FacebookShare on Telegram

ರಾಜ್ಯದ ಜನತೆ ಕೋವಿಡ್‌ ಬಿಕ್ಕಟ್ಟಿನ ಸಮಸ್ಯೆ ಎದುರಿಸುತ್ತಿದ್ದು, ಈ ವೇಳೆ ಜನರ ಪರ ಪ್ರತಿಧ್ವನಿಸಲು ಕರ್ನಾಟಕ ಜನಾರೋಗ್ಯ ಚಳವಳಿ ಹುಟ್ಟಿಕೊಂಡಿದೆ. ಇದೀಗಾ ಸಿ.ಎಂ ಬಿಎಸ್‌ ಯಡಿಯೂರಪ್ಪ ಸರ್ಕಾರಕ್ಕೆ ಕೋವಿಡ್ ಮರಣಗಳನ್ನು ತಡೆಗಟ್ಟುವ ಕುರಿತು ಕಾಲನಿಗದಿತವಾಗಿ ನಿರ್ದಿಷ್ಟ ಕ್ರಮಗಳಿಗೆ ಆಗ್ರಹಿಸಿ ರಾಜ್ಯದ ಜನರ ಒತ್ತಾಯ ಪತ್ರ ನೀಡಿದೆ.

ADVERTISEMENT

ತಜ್ಞರ ಹಾಗೂ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವವರ ಜೊತೆಗಿನ ಸಮಾಲೋಚನೆಯಿಂದ ಸಿದ್ಧಪಡಿಸಲಾಗಿದ್ದು, ಇವಿಷ್ಟನ್ನು ರಾಜ್ಯ ಸರ್ಕಾರವು ಜಾರಿಗೆ ತರಲೇಬೇಕು ಮತ್ತು ಪ್ರತಿದಿನ ಈ ಕುರಿತು ಕೋವಿಡ್ ಪಾಸಿಟಿವ್ ಮತ್ತು ಸಾವುಗಳ ಸಂಖ್ಯೆ ಪ್ರಕಟಿಸಿದ ರೀತಿಯಲ್ಲೇ ವರದಿ ನೀಡಬೇಕೆಂದು ಒತ್ತಾಯಿಸಿದೆ.

ಪ್ರತಿದಿನ ಕೋವಿಡ್ ರೋಗಿಗಳ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಆಕ್ಸಿಜನ್ ಇರುವ ಹಾಸಿಗೆಗಳ ಮತ್ತು ವೆಂಟಿಲೇಟರ್ ಇರುವ ಐಸಿಯು ಹಾಸಿಗೆಗಳ ಕೊರತೆಯಿಂದ ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ. ಮೇ ಮೊದಲ ವಾರದ ಹೊತ್ತಿಗೆ ಸ್ಫೋಟಕ ಪರಿಸ್ಥಿತಿ ಉಂಟಾಗಲಿದೆ ಎಂದು ತಜ್ಞರು ಹೇಳಿರುವುದು ಈಗಾಗಲೇ ವರದಿಯಾಗಿದೆ. ಜೊತೆಗೆ ರೋಗಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ಭಾರೀ ದೊಡ್ಡ ಭೀತಿ ಉಂಟಾಗಿದೆ. ಇದನ್ನು ನಿಭಾಯಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಕೆಳಗಿನ ಕ್ರಮಗಳನ್ನು ಸರ್ಕಾರ ಈ ತಕ್ಷಣ ಕೈಗೊಳ್ಳಲೇಬೇಕೆಂದು ಆಗ್ರಹಿಸುತ್ತೇವೆ ಮತ್ತು ಪ್ರತಿದಿನ ಈ ಸಂಬಂಧ ವರದಿಯನ್ನು ರಾಜ್ಯದ ಜನರ ಮುಂದೆ ಇಡಬೇಕೆಂದು ಒತ್ತಾಯಿಸಿದೆ.

1. ಈಗಿಂದೀಗಲೇ ಸರ್ಕಾರವು ಬೆಂಗಳೂರು ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜೆನ್ ಇರುವ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಬೆಂಗಳೂರಿನಲ್ಲಿ ದಿನಕ್ಕೆ ಕನಿಷ್ಠ 200 ಮತ್ತು ಜಿಲ್ಲಾ ಕೇಂದ್ರಗಳಲ್ಲಿ ದಿನಕ್ಕೆ 25 ಸಂಖ್ಯೆಯನ್ನು ಹೆಚ್ಚಿಸಬೇಕು.

2. ಪ್ರತಿದಿನ ಸರ್ಕಾರವು ಎಷ್ಟು ಆಕ್ಸಿಜನ್ ಬೆಡ್ʼಗಳನ್ನು ಹೊಸದಾಗಿ ಎಲ್ಲಿ ಹೆಚ್ಚು ಮಾಡಿದ್ದೇವೆ ಎಂಬುದನ್ನು ಪ್ರಕಟಿಸಬೇಕು.

3. ಬೆಂಗಳೂರಿನಲ್ಲಿ ಪ್ರತಿ ದಿನ ಕನಿಷ್ಠ 5೦೦ ಮತ್ತು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ತಲಾ 5೦ ರಷ್ಟು ವೆಂಟಿಲೇಟರ್ಗಳನ್ನು ಇನ್ನೊಂದು ವಾರ ಕಾಲ ಹೆಚ್ಚಿಸಲು ಸಮರೋಪಾದಿ ಕ್ರಮಗಳನ್ನು ತೆಗೆದುಕೊಳ್ಳಬೇಕು.

4. ಆಕ್ಸಿಜನ್ ಕೊರತೆ ಇಲ್ಲವೆಂದು ಸರ್ಕಾರವು ಹೇಳಿರುವುದು ವರದಿಯಾಗಿದೆ. ಅದರ ಮೇಲೆ ವಿಶ್ವಾಸವಿಟ್ಟು, ಸರಬರಾಜಿನಲ್ಲಿ ಸಮಸ್ಯೆ ಆಗದಂತೆ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚಿನ ಸೋಂಕು ಆದಾಗಲೂ ಪರಿಸ್ಥಿತಿ ಗಂಭೀರವಾಗದಂತೆ ನೋಡಿಕೊಳ್ಳಲು ಬೇಕಾದ ವ್ಯವಸ್ಥೆ ಮಾಡಬೇಕು. ಇದಕ್ಕೆ ಸಂಬಂಧಿಸಿದ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು.

5. ಆಸ್ಪತ್ರೆಗಳಲ್ಲಿ ಸಿಬ್ಬಂದಿಯ ಕೊರತೆ ಮೊದಲೇ ಇತ್ತು; ಅದರ ಜೊತೆಗೆ ಈಗ ಕೆಲಸದ ಒತ್ತಡ ಹೆಚ್ಚಾಗಿದೆ; ಸ್ವತಃ ಕೋವಿಡ್ ಸೋಂಕಿನಿಂದ ಬಳಲಿ ವಿಶ್ರಾಂತಿಗೆ ತೆರಳುವವರೂ ಇರಬಹುದು. ಹಾಗಾಗಿ ಹೆಚ್ಚಿನ ಜನರನ್ನು ನೇಮಕಾತಿ ಮಾಡಿಕೊಳ್ಳಬೇಕು. ಇದು ವಿಶೇಷ ಪರಿಸ್ಥಿತಿಯಾಗಿದ್ದು, ಮೂವತ್ತು ಸಾವಿರದಷ್ಟು ಇರುವ ಗುತ್ತಿಗೆ ನೌಕರರನ್ನು ಈಗಲಾದರೂ ಗೌರವಯುತವಾಗಿ ನಡೆಸಿಕೊಳ್ಳಬೇಕೆಂದಿದೆ.

6. ರಾಜ್ಯದ ಪ್ರತಿಯೊಂದು ಪಾಲಿಕೆ, ನಗರಸಭೆ, ಪುರಸಭೆ, ಪಂಚಾಯ್ತಿ ಸೇರಿದಂತೆ ಜನಪ್ರತಿನಿಧಿಗಳು ತುರ್ತು ಸಂದರ್ಭದಲ್ಲಿ ಯಾರನ್ನು ಸಂಪರ್ಕಿಸಬೇಕು ಎಂಬ ವಿವರಗಳನ್ನು ನೀಡಿ ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಬೇಕು.

7. ಚಿಕಿತ್ಸೆಗೆ ಸಂಬಂಧಿಸಿದಂತೆ ಐಸಿಎಂಆರ್( ICMR) ಅಥವಾ ವಿಶ್ವ ಆರೋಗ್ಯ ಸಂಸ್ಥೆಗಳೂ ಅನುಮೋದಿಸಿರದ ರೆಮೆಡಿಸಿವಿರ್ ತರದ ಸಂಗತಿಗಳಿಗೆ ಒತ್ತು ನೀಡದಂತೆ ಕ್ರಮ ಕೃಗೊಳ್ಳಬೇಕು.

8. ಯಾರಿಗೆ ಆಕ್ಸಿಜನ್ ಬೆಡ್ ಅಥವಾ ಐಸಿಯು ಬೆಡ್ ಅಗತ್ಯವಿದೆಯೋ ಅವರಿಗೇ ಆದ್ಯತೆಯ ಮೇರೆಗೆ ಸಿಗುವಂತೆ ಮತ್ತು ಈ ವಿಚಾರದಲ್ಲಿ ವಿಐಪಿ ಶಿಫಾರಸ್ಸುಗಳಿಗೆ ಮಣಿಯದಂತೆ ನಿಯಮಾವಳಿಗಳನ್ನು ರೂಪಿಸಿ ಅದರ ಉಸ್ತುವಾರಿಯನ್ನು ಕಟ್ಟುನಿಟ್ಟಾಗಿ ಮಾಡಬೇಕು.

ಬೆಂಗಳೂರು ಬಹಳ ಮುಖ್ಯವೇ. ಆದರೆ ಯಾವ ಕಾರಣಕ್ಕೂ ಉಳಿದ ಜಿಲ್ಲಾ ಕೇಂದ್ರಗಳನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಮಹಾರಾಷ್ಟ್ರದಲ್ಲಿ ಮುಂಬಯಿಯ ಆಚೆ ಇತರ ನಗರ ಪಟ್ಟಣಗಳಲ್ಲೂ ದೊಡ್ಡ ಸಮಸ್ಯೆ ಉಂಟಾಗಿದ್ದನ್ನು ಕಾಣುತ್ತಿದ್ದೇವೆ. ಆಕ್ಸಿಜನ್ ಹಾಗೂ ಆಕ್ಸಿಜನ್ ಇರುವ ಹಾಸಿಗೆಗಳು ಎಲ್ಲಾ ಕಡೆ (ತಾಲೂಕು ಮಟ್ಟದವರೆಗೆ) ಇರುವಂತೆ ನೋಡಿಕೊಳ್ಳುವುದು ಅಗತ್ಯ ಎಂದು ಸರ್ಕಾರಕ್ಕೆ ಸಲಹೆ ನೀಡಿದೆ.

Previous Post

ಕೋವಿಡ್‌ ಸಂಕಷ್ಟದಲ್ಲಿದ್ದರೂ ಸರ್ಕಾರ ಪ್ರಧಾನಿ ಮೋದಿಯ ಪ್ರಚಾರದಲ್ಲಿ ನಿರತವಾಗಿದೆ –ಹೆಚ್‌ಡಿಕೆ

Next Post

Covid ಬಿಕ್ಕಟ್ಟು: ಸರ್ಕಾರದ ನೀತಿ ತಾರತಮ್ಯದ ಕುರಿತು ಪಿ.ಚಿದಂಬರಂ ಸಾಲು ಸಾಲು ಪ್ರಶ್ನೆ

Related Posts

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
0

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್( Ajith Pawar) ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟದ ಡಿಸಿಎಂ ಡಿ.ಕೆ ಶಿವಕುಮಾರ್ (D.K....

Read moreDetails
ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

January 28, 2026
Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
Next Post
Covid ಬಿಕ್ಕಟ್ಟು: ಸರ್ಕಾರದ ನೀತಿ ತಾರತಮ್ಯದ ಕುರಿತು ಪಿ.ಚಿದಂಬರಂ ಸಾಲು ಸಾಲು ಪ್ರಶ್ನೆ

Covid ಬಿಕ್ಕಟ್ಟು: ಸರ್ಕಾರದ ನೀತಿ ತಾರತಮ್ಯದ ಕುರಿತು ಪಿ.ಚಿದಂಬರಂ ಸಾಲು ಸಾಲು ಪ್ರಶ್ನೆ

Please login to join discussion

Recent News

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

January 28, 2026
ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada