• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಒಟ್ಟು 34 JN.1 ಸೋಂಕಿತ ಪ್ರಕರಣ; ನಾಳೆ ಸಂಪುಟ ಉಪ ಸಮಿತಿ ಸಭೆ – ಸಚಿವ ದಿನೇಶ್ ಗುಂಡೂರಾವ್

Any Mind by Any Mind
December 25, 2023
in ಕರ್ನಾಟಕ
0
ಕೋಮುದ್ವೇಷಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ : ದಿನೇಶ್​ ಗುಂಡೂರಾವ್​ ಗುಡುಗು
Share on WhatsAppShare on FacebookShare on Telegram

ADVERTISEMENT

ರಾಜ್ಯದಲ್ಲಿ ಕೋವಿಡ್ ಸೊಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನಡೆಸಿದ ಜಿನೋಮೊ ಸಿಕ್ವೇನ್ಸಿಂಗ್ ನಲ್ಲಿ ಒಮೆಕ್ರಾನ್ ವೈರಾಣು ಉಪತಳಿ JN.1 ಪತ್ತೆಯಾಗಿದೆ. ಸುಮಾರು 34 ಕೋವಿಡ್ ಸೊಂಕಿತರಿಗೆ JN.1 ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮದವರಿಗೆ ಈ ಕುರಿತು ಪ್ರತಿಕ್ರಿಯಿಸಿದ ಸಚಿವರು, JN.1 ವೈರಾಣು ರಾಜ್ಯದಲ್ಲಿ ಇರಬಹುದು ಎಂದು ಮೊದಲೇ ನಿರೀಕ್ಷಿಸಲಾಗಿತ್ತು. ಆದರೆ ಅದು ಜಿನೋಮೊ ಸಿಕ್ವೆನ್ಸಿಂಗ್ ನಲ್ಲೇ ನಮಗೆ ಸ್ಪಷ್ಟವಾಗಿ ಗೊತ್ತಾಗೊದು. ಹೀಗಾಗಿ ಜಿನೋಮೊ ಸಿಕ್ವೆನ್ಸಿಂಗ್ ಗೆ ಕಳಿಸಿದ್ವಿ.‌ ಇದೀಗ ವರದಿ ಬಂದಿದ್ದು, ರಾಜ್ಯದಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿದೆ ಎಂದರು.

ಆದರೆ ರಾಜ್ಯದ ಜನರು ಕೋವಿಡ್ ಸಂಬಂಧ ಆತಂಕ ಪಡುವ ಅಗತ್ಯವಿಲ್ಲ. JN.1 ಉಪತಳಿ ಅಪಾಯಕಾರಿ ಅಲ್ಲ ಎಂಬುದನ್ನ ತಜ್ಞರು ಈಗಾಗಲೇ ಹೇಳಿದ್ದಾರೆ. ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಹರಡದಂತೆ ನಾವು ಎಚ್ಚರಿಕೆ ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸ್ಬಲ್ಪ ಎಚ್ಚರಿಕೆ ವಹಿಸಬೇಕು. ಆರೋಗ್ಯ ಇಲಾಖೆಯಿಂದ ಕೂಡ ಈಗಾಗಲೇ ಎಲ್ಲ ರೀತಿಯ ತಯಾರಿಗಳನ್ನ ಮಾಡಿಕೊಳ್ಳಲಾಗಿದೆ. ಕೋವಿಡ್ ಎದುರಿಸಲು ಸನ್ನದ್ದರಾಗುವಂತೆ ಎರಡು ಮೂರು ಬಾರಿ ಸಭೆ ನಡೆಸಿ ಆಸ್ಪತ್ರೆಗಳಿಗೆ ಹಾಗೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಜೆ.ಎನ್.1 ಪ್ರಕರಣಗಳ ಸಂಬಂಧ ಯಾರು ಹೊಸದಾಗಿ ಗಾಬರಿಪಡುವ ಅಗತ್ಯವಿಲ್ಲ.‌ ಬಹುತೇಕ ಜೆ.ಎನ್ 1 ಪ್ರಕರಣಗಳು ಬೆಂಗಳೂರಿನಲ್ಲೇ ಪತ್ತೆಯಾಗಿವೆ. ಬೆಂಗಳೂರಿನಲ್ಲಿ – 20, ಮೈಸೂರು – 4, ಮಂಡ್ಯ – 3 ಸೇರಿದಂತೆ ರಾಮನಗರದಲ್ಲಿ – 1 ಒಮೆಕ್ರಾನ್ ಉಪತಳಿ JN.1 ಪತ್ತೆಯಾಗಿದ್ದು, ಇಲ್ಲಿಯ ವರೆಗೆ ಕೋವಿಡ್ ಬಂದವರಲ್ಲಿ ಮೂವರು ಸಾವನ್ನಪ್ಪಿರುವುದು ವರದಿಯಾಗಿದೆ. ಸಾವನ್ನಪ್ಪಿದವರಲ್ಲೂ JN.1 ಪಾಜಿಟಿವ್ ಇದ್ದಿದ್ದು ವರದಿಯಲ್ಲಿ ಬೆಳಕಿಗೆ ಬಂದಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಕೋವಿಡ್ ಸಂಬಂಧ ರಚಿಸಲಾಗಿರುವ ಕ್ಯಾಬಿನೆಟ್ ಉಪಸಮಿತಿ ಸಭೆ ನಾಳೆ ನಡೆಯಲಿದೆ. ನಾಳೆಯ ಸಭೆಯಲ್ಲಿ ಜೆ.ಎನ್ 1 ಪ್ರಕರಣಗಳು ಸೇರಿದಂತೆ, ಕೋವಿಡ್ ನಿಯಂತ್ರಣ ಹಾಗೂ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು.‌ ಸದ್ಯಕ್ಕೆ ಯಾವುದೇ ಹೊಸ ನಿರ್ಬಂಧವಿಲ್ಲ. ಈಗಾಗಲೇ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿಯನ್ನ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲರು ಮಾಸ್ಕ್ ಧರಿಸುವುದು ಉತ್ತಮ ಎಂಬುದು ನಮ್ಮ ಸಲಹೆ. ಇನ್ನು 60 ವರ್ಷ ಮೇಲ್ಪಟ್ಟವರು, ಇತರ ಕಾಯಿಲೆ ಹೊಂದಿದವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.‌

ಜೆ.ಎನ್ .1 ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಯಾವುದು ಮಾರ್ಗಸೂಚಿ ಇಲ್ಲ. ಹೊಸ ವರ್ಷಾಚರಣೆಗೆ ನಿರ್ಭಂದ ಹೇರುವು ಬಗ್ಗೆ ಯಾವುದೇ ಚಿಂತನೆಗಳಲ್ಲ.. ನಾಳೆಯ ಸಭೆಯಲ್ಲಿ Tac ಸಮಿತಿಯ ತಜ್ಞರೊಂದಿಗೂ ಚರ್ಚಿಸಿ ಮುಂದೆ ಯಾವ ಕ್ರಮಗಳ ಬಗ್ಗೆ ತೀರ್ಮಾನಿಸ್ತೇವೆ. ಜನ‌ಸೇರಬಾರದು, ಕಾರ್ಯಕ್ರಮ ಮಾಡಬಾರದು ಎಂದು ನಿಯಮ ಜಾರಿ ಮಾಡ್ತಿಲ್ಲ.‌ಆ ಮಟ್ಟಕ್ಕೆ ಪ್ಯಾನಿಕ್ ಆಗುವ ಅಗತ್ಯವಿಲ್ಲ. ಪಾಸಿಟಿವ್ ಬಂದವರು ಐಸೊಲೇಷನ್ ನಲ್ಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Tags: BJPCongress PartyCovid -19Covid 19Dinesh Gundu RaoVarientಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕರ್ನಾಟಕದಲ್ಲಿ 8 ಮಂದಿಗೆ ಜೆಎನ್‌.1 ಸೋಂಕು!

Next Post

ಸಂಸ್ಕೃತಿ ವಾಹಕ ಮಹಿಳೆಯೇ ಶೋಷಿತಳೂ ಹೌದು! : ನಾ ದಿವಾಕರ ಅವರ ಬರಹ

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
Next Post
ಸಂಸ್ಕೃತಿ ವಾಹಕ ಮಹಿಳೆಯೇ ಶೋಷಿತಳೂ ಹೌದು! : ನಾ ದಿವಾಕರ ಅವರ ಬರಹ

ಸಂಸ್ಕೃತಿ ವಾಹಕ ಮಹಿಳೆಯೇ ಶೋಷಿತಳೂ ಹೌದು! : ನಾ ದಿವಾಕರ ಅವರ ಬರಹ

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada