• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಕೋವಿಡ್‌ ಮೊದಲ ಡೋಸ್‌ ಪಡೆದವರಿಗೆ ಎರಡನೇ ಡೋಸ್‌ ಪಡೆಯಲು ಕೊರತೆ ಎದುರಾಗಿದೆ.

Any Mind by Any Mind
May 9, 2021
in ಕರ್ನಾಟಕ
0
ರಾಜ್ಯದಲ್ಲಿ ಕೋವಿಡ್‌ ಮೊದಲ ಡೋಸ್‌ ಪಡೆದವರಿಗೆ ಎರಡನೇ ಡೋಸ್‌ ಪಡೆಯಲು ಕೊರತೆ ಎದುರಾಗಿದೆ.
Share on WhatsAppShare on FacebookShare on Telegram

ADVERTISEMENT

ರಾಜ್ಯದಲ್ಲಿ ಮೊದಲ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿತ್ತು. ಮೊದಲ ಸುತ್ತಿನಲ್ಲಿ ಹಿರಿಯರಿಗೆ ಹಾಗೂ ಕರೋನಾ ವಾರಿಯರ್ಸ್ ಪಟ್ಟಿಯಲ್ಲಿದ್ದ ಪೊಲೀಸರು ನರ್ಸ್, ವೈದ್ಯರು, ಆಸ್ಪತ್ರೆ ಸಿಬ್ಬಂದಿಗೆ ಕೊಡಲಾಗಿದೆ. ಇದೀಗ ರಾಜ್ಯದಲ್ಲಿ ಕೋವ್ಯಾಕ್ಸಿನ್ ಲಸಿಕೆ ಲಭ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸದ್ದಿಲ್ಲದೇ ಕೋವಿಶೀಲ್ಡ್ ಬಳಕೆಗೆ ಅವಕಾಶ ನೀಡಲಾಗಿದೆ. ಕೋವ್ಯಾಕ್ಸಿನ್ ಅಗತ್ಯಕ್ಕೆ ತಕ್ಕಂತೆ ಕೇಂದ್ರ ಸರ್ಕಾರ ಪೂರಕೆ ಮಾಡದ ಹಿನ್ನೆಲೆಯಲ್ಲಿ ಇದೀಗ ರಾಜ್ಯದಲ್ಲಿ ಕರೋನಾ ಮಹಾಮಾರಿ ವಿರುದ್ಧ ಆರಂಭವಾಗಿದ್ದ ಲಸಿಕೆ ಅಭಿಯಾನಕ್ಕೆ ಬಹುದೊಡ್ಡ ತೊಡಕು ಎದುರಾಗಿದೆ.

 ರಾಜ್ಯದಲ್ಲಿ ಈವರೆಗೆ 84,06, 980 ಮಂದಿ ಮೊದಲನೇ ಡೋಸ್ ವ್ಯಾಕ್ಸಿನೇಷನ್ ಪಡೆದುಕೊಂಡಿದ್ದಾರೆ. ಎರಡನೇ ಡೋಸ್ ಪಡೆದುಕೊಂಡವರು 18,45,420. ಮಂದಿ ಮೊದಲನೇ ಹಂತದ ಲಸಿಕೆ ಅಭಿಯಾನದಲ್ಲಿ ಜನರು ಪಡೆದಿರುವುದು ಕೋವ್ಯಾಕ್ಸಿನ್ ಮಾತ್ರ. ಮೊದಲನೇ ಡೋಸ್ ಕೋವ್ಯಾಕ್ಸಿನ್ ಪಡೆದವರು 28 ದಿನದೊಳಗೆ ವ್ಯಾಕ್ಸಿನ್ ಪಡೆಯುವುದು ಅಸಾಧ್ಯ ಎಂಬಂತಾಗಿದೆ. ಹೀಗಾಗಿ ಮೊದಲ ಡೋಸ್ ಕೋವ್ಯಾಕ್ಸಿನ್ ಪಡೆದವರು ಎರಡನೇ ಡೋಸ್ ಕಾಲಮಿತಿಯಲ್ಲಿ ಪಡೆಯಲಾಗದೇ ಗಾಬರಿಯಾಗಿದ್ದಾರೆ.

 ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶುಕ್ರವಾರ ಲಸಿಕೆ ಅಭಿಯಾನ ನಡೆದಿದ್ದು, ಮೊದಲ ಸುತ್ತಿನಲ್ಲಿ ಕೋವ್ಯಾಕ್ಸಿನ್ ಪಡೆದಿದ್ದ ಮಂದಿ ಇವತ್ತು ಎರಡನೇ ಸುತ್ತಿನ ವ್ಯಾಕ್ಸಿನ್‌ಗಾಗಿ ಬಂದಿದ್ದರು. ಮೊದಲ ಡೋಸ್ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಬಂದವರಿಗೆ ಕೋವಿಶೀಲ್ಡ್ ನೀಡಲಾಗುತಿತ್ತು. ಈ ವೇಳೆ ಕೋವ್ಯಾಕ್ಸಿನ್ ಲಸಿಕೆ ಖಾಲಿಯಾಗಿದೆ ಎಂದು ವೈದ್ಯರು ವಾಸ್ತವ ಸಂಗತಿಯನ್ನು ಬಿಚ್ಚಿಟ್ಟರು.

ಇದರ ಬಗ್ಗೆ ಮತ್ತಷ್ಟು ಮಾಹಿತಿ ಸಂಗ್ರಹಿಸಿದಾಗ ರಾಜ್ಯದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈವರೆಗೂ ನಡೆಸಿದ ಲಸಿಕೆ ಅಭಿಯಾನದಲ್ಲಿ ಕೋವ್ಯಾಕ್ಸಿನ್ ನೀಡಲಾಗಿದೆ. ಇದೀಗ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವ್ಯಾಕ್ಸಿನ್ ಲಭ್ಯವಾಗುತ್ತಿಲ್ಲ. ಹೀಗಾಗಿ ಹೊಸದಾಗಿ ವ್ಯಾಕ್ಸಿನ್ ಪಡೆದುಕೊಳ್ಳವರಿಗೆ ಕೋವಿಶೀಲ್ಡ್ ನೀಡಲಾಗುತ್ತಿದೆ. ಮೊದಲ ಡೋಸ್ ಯಾವ ವ್ಯಾಕ್ಸಿನ್ ಪಡೆಯುತ್ತೇವೆಯೋ ಎರಡನೇ ಡೋಸ್ ಕೂಡ ಅದೇ ವ್ಯಾಕ್ಸಿನ್ ಪಡೆಯಬೇಕು. ಮೊದಲ ಡೋಸ್ ಪಡೆದ ನಾಲ್ಕನೇ ವಾರ ಕೋವ್ಯಾಕ್ಸಿನ್ ಎರಡನೇ ಡೋಸ್ ಪಡೆಯಬೇಕು. ಕೋವಿಶೀಲ್ಡ್ ಆಗಿದ್ದಲ್ಲಿ ಎರಡನೇ ಡೋಸ್ ಐದನೇ ವಾರ ಪಡೆಯಬೇಕು. ಮೊದಲ ಡೋಸ್ ಕೋವ್ಯಾಕ್ಸಿನ್ ಪಡೆದವರು ಇದೀಗ ಎರಡನೇ ಡೋಸ್ ಕಾಲಮಿತಿಯಲ್ಲಿ ಪಡೆಯಲಾಗದ ಸ್ಥಿತಿ ನಿರ್ಮಾಣವಾಗಿದೆ.

ತಾಲೂಕು ಮಟ್ಟದ ಆರೋಗ್ಯ ಕೇಂದ್ರಗಳಲ್ಲಿ ಈವರೆಗೂ ಕೋವ್ಯಾಕ್ಸಿನ್ ನೀಡಲಾಗಿದೆ. ರಾಜ್ಯದಲ್ಲಿ ಇನ್ನೂ 60 ಲಕ್ಷ ಮಂದಿಗೆ ಕೋವ್ಯಾಕ್ಸಿನ್ ಎರಡನೇ ಡೋಸ್ ಹತ್ತು ದಿನದಲ್ಲಿ ಪಡೆಯಬೇಕಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಕೋವ್ಯಾಕ್ಸಿನ್‌ಗಾಗಿ ಜನರು ಪರದಾಡುವಂತಾಗಿದೆ. ಖಾಸಗಿಯಾಗಿ ಕೋವ್ಯಾಕ್ಸಿನ್ ಲಭ್ಯವಿಲ್ಲದ ಕಾರಣ ಇದೀಗ ಎರಡನೇ ಡೋಸ್ ಪಡೆಯಲು ಸರ್ಕಾರಿ ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ. ಕೋವ್ಯಾಕ್ಸಿನ್ ಇಲ್ಲದ ಕಾರಣ ಇದೀಗ ಕೋವಿಶೀಲ್ಡ್ ಕೂಡ ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಲಾಗುತ್ತಿದೆ. ಇದರಿಂದ ಲಕ್ಷಾಂತರ ಮಂದಿ ಎರಡನೇ ಡೋಸ್ ಪಡೆಯಲು ಆಗುತ್ತಿಲ್ಲ. ಹೀಗಾಗಿ ಅವರು ಪಡೆದ ಮೊದಲನೇ ಡೋಸ್ ಕೂಡ ನಿಷ್ಪ್ರಯೋಜಕ ಆಗಬಹುದು.

ಕೋವ್ಯಾಕ್ಸಿನ್ ಎರಡು ಡೋಸ್ ಕೊಡಬೇಕು. ಅದರಲ್ಲೂ ಕಾಲಮಿತಿಯಲ್ಲಿ ಕೊಡಬೇಕು ಎಂಬ ಸಾಮಾನ್ಯ ಜ್ಞಾನ ಇದ್ದಿದ್ದರೆ ಮೊದಲ ಡೋಸ್ ಕೋವ್ಯಾಕ್ಸಿನ್ ಪಡೆದವರಿಗೆ ಕಾಲಮಿತಿಯಲ್ಲಿ ಎರಡನೇ ಡೋಸ್ ಕೊಡುವ ಬಗ್ಗೆ ಕೋವ್ಯಾಕ್ಸಿನ್ ಮೀಸಲಿಡಬೇಕಿತ್ತು. ಮೊದಲ ಡೋಸ್ ಯಾವ ವ್ಯಾಕ್ಸಿನ್ ಪಡೆಯುತ್ತಾರೋ ಎರಡನೇ ಡೋಸ್ ಅದೇ ಕೊಡಬೇಕಲ್ಲವೇ ? ಈ ಸೂಕ್ಷ್ಮತೆ ಮರೆತ ಕಾರಣ ಇದೀಗ ಮೊದಲ ಡೋಸ್ ಪಡೆದು, ಎರಡನೇ ಡೋಸ್ ಪಡೆಯಲಾಗದೇ ಒದ್ದಾಡುತ್ತಿದ್ದಾರೆ. ಮಾನ್ಯ ಆರೋಗ್ಯ ಸಚಿವರು ಈ ಸಮಸ್ಯೆ ಪರಿಹರಿಸಲು ಯಾವ ಮೊರೆ ಹೋಗುತ್ತಾರೋ ಕಾದು ನೋಡಬೇಕು.

 ಈ ಕುರಿತು ಮಾತನಾಡಿದ ಆರೋಗ್ಯ ತಜ್ಞರು ರೋಗದ ವಿರುದ್ಧ ಗರಿಷ್ಠ ರಕ್ಷಣೆಗಾಗಿ ಲಸಿಕೆಗಳ ಎರಡೂ ಪ್ರಮಾಣಗಳು ಕಡ್ಡಾಯವಾಗಿದೆ ಎಂದು  ಹೇಳಿದ್ದಾರೆ. ಹಾಗಾದರೆ ಒಬ್ಬರು ತಮ್ಮ ಲಸಿಕೆಯ ಎರಡನೇ ಪ್ರಮಾಣವನ್ನು ತಪ್ಪಿಸಿಕೊಂಡಾಗ ಏನಾಗುತ್ತದೆ? ತಕ್ಷಣದ ಆತಂಕಕ್ಕೆ ಯಾವುದೇ ಕಾರಣವಿಲ್ಲ ಎಂದು ಖ್ಯಾತ ಭಾರತದ ವೈರಾಲಜಿಸ್ಟ್ ಡಾ.ಗಗನ್‌ದೀಪ್ ಕಾಂಗ್ ಹೇಳುತ್ತಾರೆ. ಡೋಸೇಜ್ ಅನ್ನು ಕಳೆದುಕೊಂಡಿರುವುದು ಪ್ರತಿಕಾಯಗಳ ವರ್ಧನೆಯನ್ನು ವಿಳಂಬಗೊಳಿಸುತ್ತದೆ ಮತ್ತು ಅಲ್ಪಾವಧಿಯಲ್ಲಿ ವೈರಸ್ ವಿರುದ್ಧ ಯಾವುದೇ ಗಮನಾರ್ಹವಾದ ರಕ್ಷಣೆಯ ನಷ್ಟಕ್ಕೆ ಕಾರಣವಾಗುವುದಿಲ್ಲ ಎಂದು ಅವರು  ತಿಳಿಸಿದರು. ನಿಮ್ಮ ಮೊದಲ ಡೋಸ್ ಅನ್ನು ನೀವು ಪಡೆದರೆ ಮತ್ತು ಒಂದೆರಡು ವರ್ಷಗಳವರೆಗೆ ನೀವು ಎರಡನೇ ಡೋಸ್ ಅನ್ನು ಪಡೆಯದಿದ್ದರೆ, ನೀವು ಬಹುಶಃ ನಿಮ್ಮ ಮೊದಲ ಡೋಸ್ ಅನ್ನು ಪುನರಾವರ್ತಿಸಬೇಕಾಗುತ್ತದೆ. ಇದು ವಾರಗಳ ವಿಷಯವಾಗಿದ್ದರೆ, ನೀವು ಖಂಡಿತವಾಗಿಯೂ ಚಿಂತಿಸಬೇಕಾಗಿಲ್ಲ. ಆದರೆ ತಿಂಗಳು, ವರ್ಷಗಳೇ ಆದರೆ ಪುನಃ ಮೊದಲ ಡೋಸ್‌ಪಡೆಯಬೇಕಾಗುತ್ತದೆ ಎಂದು ಡಾ. ಕಾಂಗ್ ಹೇಳಿದರು.

ಈಗಾಗಲೇ ಎರಡೂ ಡೋಸ್‌ಪಡೆದಿರುವವರೂ ಕೋವಿಡ್‌ ಸೋಂಕಿಗೆ ಬಲಿಯಾಗಿ ಮೃತರಾಗಿದ್ದಾರೆ. ಇನ್ನು ಒಂದು ಕೋವ್ಯಾಕ್ಸಿನ್‌ ಡೋಸ್‌ಪಡೆದವರಿಗೆ ಎರಡನೇ ಡೋಸ್‌ಪಡೆಯಲು ವಿಳಂಬ ಅದರೆ ಅದರ ಕಾರ್ಯಕ್ಷಮತೆಯ ಮೇಲೆ ಪ್ರತಿಕೂಲ ಪರಿಣಾಮ ಆಗಬಹುದು. ಮೊದಲೇ ಲಸಿಕೆ ಕೊರತೆ ಎದುರಾಗಿರುವಾಗ ಮೊದಲು ಪಡೆದವರಿಗೂ ಮತ್ತೆ ಲಸಿಕೆ ನೀಡಲು ಸಾದ್ಯವೇ ? ಇದರಿಂದ ಬೊಕ್ಕಸಕ್ಕೆ ಹೊರೆ ಆಗಲಿದೆ . ರಾಜ್ಯ ಸರ್ಕಾರ ಇದನ್ನು ಗಂಭಿರವಾಗಿ ಪರಿಗಣಿಸಬೇಕಾಗಿದೆ.

Previous Post

ಕೇಂದ್ರ ಕಳೆದ 6 ತಿಂಗಳು ಕೆಲಸ ಮಾಡಿಲ್ಲ, ಹಾಗಾಗಿಯೇ ಭಾರತ ಕರೋನ ಬಿಕ್ಕಟ್ಟಿಗೆ ಸಿಲುಕಿದೆ: ಮಮತಾ ಬ್ಯಾನರ್ಜಿ ಆರೋಪ

Next Post

ಅಂಗಡಿಗಳನ್ನು ತೆರೆಯಲು ಅವಕಾಶ ಕೊಟ್ಟು ವಾಹನ ಸಂಚಾರ ನಿಷೇಧಿಸುವುದು ಸರ್ಕಾರದ ಮೂರ್ಖತನ: ಸಿದ್ದರಾಮಯ್ಯ

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
ಕೇಂದ್ರದಿಂದ ಆಕ್ಸಿಜನ್‌ ಪೂರೈಕೆ:   ರಾಜ್ಯದ ಸಹಸ್ರಾರು ರೋಗಿಗಳ‌ ಪ್ರಾಣವನ್ನು ಸುಪ್ರೀಂ ಕೋರ್ಟ್ ಉಳಿಸಿದೆ -ಸಿದ್ದರಾಮಯ್ಯ

ಅಂಗಡಿಗಳನ್ನು ತೆರೆಯಲು ಅವಕಾಶ ಕೊಟ್ಟು ವಾಹನ ಸಂಚಾರ ನಿಷೇಧಿಸುವುದು ಸರ್ಕಾರದ ಮೂರ್ಖತನ: ಸಿದ್ದರಾಮಯ್ಯ

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada