• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಿಜಾಬ್ ವಿವಾದ | ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಸಚಿವ ಬಿ.ಸಿ.ನಾಗೇಶ್ಗೆ ಲೀಗಲ್ ನೋಟಿಸ್!

ಪ್ರತಿಧ್ವನಿ by ಪ್ರತಿಧ್ವನಿ
April 1, 2022
in ಕರ್ನಾಟಕ
0
ಹಿಜಾಬ್ ವಿವಾದ | ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಸಚಿವ ಬಿ.ಸಿ.ನಾಗೇಶ್ಗೆ ಲೀಗಲ್ ನೋಟಿಸ್!
Share on WhatsAppShare on FacebookShare on Telegram

ADVERTISEMENT

ಒಂದೆಡೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶವಿಲ್ಲದಕ್ಕಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯದೆ ವಾಪಾಸಾಗುತ್ತಿದ್ದರೆ ಇನ್ನೊಂದೆಡೆ ಕರ್ನಾಟಕದ ಶಿಕ್ಷಣ ಸಚಿವರು ಪ್ರಚೋದನಾತ್ಮಕ ಹೇಳಿಕೆ ನೀಡುತ್ತಲೇ ಇದ್ದಾರೆ. ಈ ಮಧ್ಯೆ ವಕೀಲರು ಮತ್ತು ಕಾನೂನು ವಿದ್ಯಾರ್ಥಿಗಳ ಸಂಘಟನೆಯಾದ ಅಖಿಲ ಭಾರತ ವಕೀಲರ ಸಂಘವು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಲೀಗಲ್ ನೊಟೀಸ್ ಕಳುಹಿಸಿದ್ದು, ಸಮವಸ್ತ್ರ ನಿಯಮಗಳು ಮತ್ತು ಉಡುಪಿನ ಕುರಿತು ಕರ್ನಾಟಕ ಹೈಕೋರ್ಟ್‌ನ ಆದೇಶದ ಕುರಿತು ತಪ್ಪು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದೆ . ಬೋರ್ಡ್ ಪರೀಕ್ಷೆ ಬರೆಯುವಾಗ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಬಿಡುವುದಿಲ್ಲ ಎಂದು ಮಾರ್ಚ್ 28 ರಂದು ಸಚಿವರು ನೀಡಿದ್ದ ಹೇಳಿಕೆಯು ಮಾರ್ಚ್ 25 ರಂದು ಸರ್ಕಾರವೇ ಹೊರಡಿಸಿದ್ದ ಖಾಸಗಿ ಅಥವಾ ಸರ್ಕಾರಿ ಶಾಲೆಗಳು ನಿಗದಿಪಡಿಸಿದ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕು ಎಂಬ ಆದೇಶಕ್ಕೆ ವಿರುದ್ಧವಾಗಿದೆ ಎಂದು ಸಂಘ ಹೇಳಿದೆ. ಇದರರ್ಥ ಶಾಲೆ ಅಥವಾ ಕಾಲೇಜು ಹಿಜಾಬ್ ಧರಿಸಲು ಅನುಮತಿಸಿದರೆ, ಆ ವಿದ್ಯಾರ್ಥಿಗಳು ಹಿಜಾಬ್ ಧರಿಸಬಹುದು. ಆದರೆ, ಸಚಿವ ಬಿ.ಸಿ.ನಾಗೇಶ್, ಯಾವುದೇ ಪರೀಕ್ಷಾ ಹಾಲ್‌ಗಳಲ್ಲಿ ಹಿಜಾಬ್‌ಗಳನ್ನು ಅನುಮತಿಸಲಾಗುವುದಿಲ್ಲ ಮತ್ತು ಹಿಜಾಬ್‌ಗಳನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಹಾಲ್‌ಗೆ ಪ್ರವೇಶಿಸಲು ಬಿಡುವುದಿಲ್ಲ ಎಂದು ಹೇಳಿದ್ದರು.

ಸಚಿವರ ಹೇಳಿಕೆಯು ಸರ್ಕಾರದ ಆದೇಶವನ್ನು ಉಲ್ಲಂಘಿಸುವುದಲ್ಲದೆ ಹಿಜಾಬ್ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶಕ್ಕೆ‌ ವಿರುದ್ಧವಾಗಿದೆ ಎಂದು ಸಂಘ ಹೇಳಿದೆ. “ತೀರ್ಪು ಹಿಜಾಬ್ ಮೇಲೆ ಪೂರ್ತಿ ನಿಷೇಧ ಹೇರಿಲ್ಲ. 05.02.2022ರ G.O. ಅನ್ನು ತೀರ್ಪು ಎತ್ತಿಹಿಡಿದಿದೆ, ಇದರ ಪ್ರಕಾರ ಸರ್ಕಾರ ಅಥವಾ ಖಾಸಗಿ ಶಾಲೆಗಳು ನಿಗದಿಪಡಿಸಿದ ಯಾವುದೇ ಸಮವಸ್ತ್ರಕ್ಕೆ ವಿದ್ಯಾರ್ಥಿಗಳು ಬದ್ಧವಾಗಿರಬೇಕು ಎಂದು ಮಾತ್ರ ನಿರ್ದಿಷ್ಟಪಡಿಸಿದೆ” ಎಂದು ಬಿ.ಸಿ.ನಾಗೇಶ್ ಅವರಿಗೆ ಕಳುಹಿಸಿರುವ ಕಾನೂನು ನೋಟಿಸ್‌ನಲ್ಲಿ ತಿಳಿಸಲಾಗಿದೆ. “ಹೆಚ್ಚುವರಿಯಾಗಿ, ತೀರ್ಪು ತರಗತಿಗೆ ಸೀಮಿತವಾಗಿದೆ, ಮತ್ತು ಗೌರವಾನ್ವಿತ ಹೈಕೋರ್ಟ್ ‘ಇದು ಮಹಿಳೆಯರ ಸ್ವಾಯತ್ತತೆಯನ್ನು ಅಥವಾ ಅವರ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುವುದಿಲ್ಲ’ ಮತ್ತು ತರಗತಿಯ ಹೊರಗೆ ಅವರ ಆಯ್ಕೆಯ ಉಡುಪು ಧರಿಸಬಹುದು” ಎಂದೂ ನೋಟಿಸಿ‌ನಲ್ಲಿ ಉಲ್ಲೇಖಿಸಲಾಗಿದೆ.

ಪತ್ರದಲ್ಲಿ, AILAJ ನಾಗೇಶ್ ಅವರ ಹೇಳಿಕೆಯನ್ನು ‘ಬೇಜವಾಬ್ದಾರಿ ಮತ್ತು ತಪ್ಪುದಾರಿಗೆಳೆಯುವ’ ಹೇಳಿಕೆ ಎಂದು ಕರೆದಿದೆ ಮತ್ತು ಅದು ಅವರ ಸಾಂವಿಧಾನಿಕ ಪ್ರತಿಜ್ಞೆಯನ್ನು ಉಲ್ಲಂಘಿಸುತ್ತದೆ ಮತ್ತು ಕೋಮು ಸಂಘರ್ಷವನ್ನು ಉತ್ತೇಜಿಸುವಂತಿದೆ ಎಂದು ಹೇಳಿದೆ. “ನಿಮ್ಮ ಹೇಳಿಕೆಗಳು ಅನಗತ್ಯ ಪರಿಣಾಮಗಳಿಗೆ ಕಾರಣವಾಗಿವೆ” ಎಂದು AILAJ ಹೇಳಿದ್ದು ಹಿಜಾಬ್‌ಧಾರಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಬರೆಯಲು ಅವಕಾಶ ನೀಡಿದ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದೂ ಹೇಳಿದೆ. “ನಿಮ್ಮ ಹೇಳಿಕೆಗಳು ಹೈಕೋರ್ಟ್ ನೀಡಿದ್ದ ಆದೇಶದ ವ್ಯಾಪ್ತಿಯನ್ನು ಮೀರಿವೆ ಮತ್ತು ಮುಸ್ಲಿಂ ಹೆಣ್ಣು ಮಕ್ಕಳ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಿವೆ”ಎಂದು ಹೇಳಿದೆ.

‘ಕರ್ನಾಟಕ ಹೈಕೋರ್ಟಿನ ತೀರ್ಪು ಮತ್ತು ಸರ್ಕಾರಿ ಆದೇಶಗಳನ್ನು ಉಲ್ಲಂಘಿಸುವುದರಿಂದ’ ತಮ್ಮ ಹೇಳಿಕೆಗಳನ್ನು ತಕ್ಷಣವೇ ಹಿಂಪಡೆಯುವಂತೆ AILAJ ಸಚಿವರನ್ನು ಕೇಳಿದೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆಯೂ ಸಚಿವರನ್ನು ಸಂಘ ಕೇಳಿಕೊಂಡಿದೆ.

Tags: BJPCongress PartyCovid 19ಕರೋನಾಕರ್ನಾಟಕ ಹೈಕೋರ್ಟ್ಬಿಜೆಪಿಬಿಸಿ ನಾಗೇಶ್‌ಹಿಜಾಬ್ ಪ್ರಕರಣಹಿಜಾಬ್ ವಿವಾದ
Previous Post

ರಂಜಾನ್ ವೇಳೆ ಹಿಂದೂ ವ್ಯಾಪಾರಿಗಳಿಗೆ ಅಡ್ಡಿಪಡಿಸಬೇಡಿ : ಮುಸ್ಲಿಂ ಧರ್ಮಗುರು ಸುತ್ತೊಲೆ!

Next Post

ಶ್ರೀಲಂಕಾದಲ್ಲಿ ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದ ಪ್ರತಿಭಟನೆ; ಕರ್ಫ್ಯೂ ಜಾರಿ

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
Next Post
ಶ್ರೀಲಂಕಾದಲ್ಲಿ ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದ ಪ್ರತಿಭಟನೆ; ಕರ್ಫ್ಯೂ ಜಾರಿ

ಶ್ರೀಲಂಕಾದಲ್ಲಿ ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದ ಪ್ರತಿಭಟನೆ; ಕರ್ಫ್ಯೂ ಜಾರಿ

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada