• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೃಷಿ ಕಾನೂನು ವಾಪಸ್; ಭಾಗಶಃ ಗೆಲುವು ಎಂದ ಕರ್ನಾಟಕದ ರೈತ ಮುಖಂಡರು

Any Mind by Any Mind
November 19, 2021
in ದೇಶ, ರಾಜಕೀಯ
0
ಕೃಷಿ ಕಾನೂನು ವಾಪಸ್; ಭಾಗಶಃ ಗೆಲುವು ಎಂದ ಕರ್ನಾಟಕದ ರೈತ ಮುಖಂಡರು
Share on WhatsAppShare on FacebookShare on Telegram

ಒಂದು ವರ್ಷದ ಬಳಿಕ ಕೇಂದ್ರ ಸರ್ಕಾರವು ರೈತರ ಹೋರಾಟಕ್ಕೆ ಮಣಿದಿದೆ. ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧರಿಸಿದೆ. ಮುಂಬರುವ ಸಂಸತ್ ಅಧಿವೇಶನದಲ್ಲಿ ಈ ಕಾಯ್ದೆಗಳನ್ನು ವಾಪಸ್ ಪಡೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ADVERTISEMENT

ಶುಕ್ರವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೃಷಿ ಕ್ಷೇತ್ರಕ್ಕೆ ಸರ್ಕಾರ ನೀಡಿರುವ ಅನುದಾನಗಳ ಕುರಿತಾಗಿ ವಿವರ ನೀಡಿದರು. ನೀರಾವರಿ, ಬೆಂಬಲ ಬೆಲೆ, ಕೃಷಿ ಉತ್ಪನ್ನ ಖರೀದಿ ಕೇಂದ್ರಗಳ ಸ್ಥಾಪನೆಯ ಕುರಿತಾಗಿ ಮಾತನಾಡದರು. ಆ ಬಳಿಕ ಸರ್ಕಾರವು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲು ನಿರ್ಧರಿಸಿರುವ ಕುರಿತು ಮಾಹಿತಿ ನೀಡಿದರು.

“ಶ್ರೀ ಗುರು ನಾನಕ್ ದೇವ್ ಅವರ ಪ್ರಕಾಶ್ ಪೂರಬ್ ದಿನದಂದು, ಎಲ್ಲ ಪ್ರತಿಭಟನಾ ನಿರತ ರೈತರು ತಮ್ಮ ಮನೆಗಳಿಗೆ ತೆರಳಬೇಕಾಗಿ ವಿನಂತಿಸುತ್ತೇನೆ,” ಎಂದು ಅವರ ಹೇಳಿದರು.

ಹೋರಾಟಕ್ಕೆ ಭಾಗಶಃ ಯಶಸ್ಸು- ಪ್ರಕಾಶ್ ಕಮ್ಮರಡಿ

ಕರ್ನಾಟಕದಲ್ಲಿ ತಿದ್ದುಪಡಿ ಮಾಡಿರುವ ಭೂ ಸುಧಾರಣೆ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳು ಈಗಾಗಲೇ ಅನುಷ್ಠಾನಗೊಂಡಿದೆ. ಶೇಕಡಾ 70 ರಿಂದ 80ರಷ್ಟು ಬೆಳೆಗಳಿಗೆ ಎಪಿಎಂಸಿಯಲ್ಲಿ ಸ್ಥಾನ ಇಲ್ಲದಂತಾಗಿದೆ, ಎಂದು ಕರ್ನಾಟಕದ ರೈತ ಹೋರಾಟದ ಮುಂಚೂಣಿ ನಾಯಕರಾಗಿರುವ ಪ್ರಕಾಶ್ ಕಮ್ಮರಡಿಯವರು ಪ್ರತಿಧ್ವನಿಯೊಂದಿಗೆ ತಮ್ಮ ಮಾಹಿತಿ ಹಂಚಿಕೊಂಡಿದ್ದಾರೆ.

“ಹಾಗೆಯೇ ಭೂಮಿ ವ್ವಹಾರ ಶೇ. 60 ಏರಿಕೆ ಕಂಡಿದೆ. ಕರ್ನಾಟಕದಲ್ಲಿ ಈ ಕಾಯ್ದೆಗಳು ವಾಪಾಸು ಬಂದಾಗ ಮಾತ್ರ ನಾವೆಲ್ಲ ಯಶಸ್ಸು ಅಂತ ಭಾವಿಸಬಹುದು. ಸದ್ಯಕ್ಕೆ ದೊರೆತಿರುವುದು ಭಾಗಶಃ ಯಶಸ್ಸು ಮಾತ್ರ,” ಎಂದು ಹೇಳಿದ್ದಾರೆ.

ರಾತ್ರೋರಾತ್ರಿ ಬಿಜೆಪಿಯು ತಾನು ರೈತಪರ ಅಂತ ತನ್ನ ಮುಖವಾಡ ಬದಲಾಯಿಸಿ ಚುನಾವಣಾ ರಾಜಕೀಯದ ಲಾಭ ಪಡೆಯಲು ಎಲ್ಲ ಪ್ರಯತ್ನಿಸಲಿದೆ. ಇದರಲ್ಲಿ ಅನುಮಾನವೇ ಇಲ್ಲ. ಹಾಗೆ ಶೀಘ್ರ ತೋರುಗಾಣಿಕೆಗೆ ಬೆಂಬಲ ಬೆಲೆ ನೀಡುವ ಕಾನೂನನ್ನು ತರಬಹುದು. ಜೊತೆಗೆ ಪ್ರಭಾವಿ ಕೆಲ ಮುಖಂಡರುಗಳನ್ನು, ಸೆಳೆದುಕೊಳ್ಳುವುದುಬಹುದು. ಇವೆಲ್ಲದರ ಕುರಿತು ರೈತ ಸಂಘಟನೆಗಳು ಎಚ್ಚರವಹಿಸಬೇಕು, ಎಂದು ಪ್ರಕಾಶ್ ಕಮ್ಮರಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿಯೂ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಲು ಹೋರಾಟ ಮುಂದುವರೆಸಲೇ ಬೇಕು, ಎಂದೂ ಅವರು ಹೇಳಿದ್ದಾರೆ.

ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ನಿರ್ಧಾರ:

ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವ ಕುರಿತು ಮಾಧ್ಯಮಗಳು ವರದಿ ಮಾಡುತ್ತಿವೆಯಾದರೂ, ದೆಹಲಿ ಗಡಿಗಳ ರೈತ ಹೋರಾಟ ಮುನ್ನೆಡಿಸುತ್ತಿರುವ ಅಖಿಲ ಭಾರತ ಮುಖಂಡತ್ವದ ಜೊತೆ ಚರ್ಚಿಸಿ ಈ ಬೆಳವಣಿಗೆಗಳು ಏನು ಎಂಬುದನ್ನು ತಿಳಿಯಬೇಕಾಗಿದೆ, ಎಂದು ರೈತ ಸಂಘದ ಬಡಗಲಪುರ ನಾಗೇಂದ್ರ ಹಾಗೂ ಜಿ ಸಿ ಬಯ್ಯಾರೆಡ್ಡಿ ಜಂಟಿ ಹೇಳಿಕೆ ನೀಡಿದ್ದಾರೆ.

“ರಾಜ್ಯದ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವಂತೆ ನಮ್ಮ ಹೋರಾಟವನ್ನು ಮುಂದುವರೆಸಬೇಕಾಗಿದೆ. ಈ ಬಗ್ಗೆ ಸಂಯುಕ್ತ ಹೋರಾಟ ಕರ್ನಾಟಕ ತೀರ್ಮಾನ ತೆಗೆದುಕೊಂಡು ತಿಳಿಸುವವರೆಗೆ ನವೆಂಬರ್ 26ರ ಹೋರಾಟದ ತಯಾರಿ ಮುಂದುವರೆಸುತ್ತೇವೆ,” ಎಂದು ಹೇಳಿದ್ದಾರೆ.

Tags: BJPFarmers lawprotestಬಿಜೆಪಿ
Previous Post

ಎಲ್ಲಾ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ಮೋದಿ ನೇತೃತ್ವದ ಕೇಂದ್ರ ಸರ್ಕಾರ

Next Post

ಕೊವ್ಯಾಕ್ಸಿನ್ ದರೋಡೆ? ಕೇಂದ್ರ ಸರ್ಕಾರ ಮತ್ತು ಭಾರತ್ ಬಯೋಟೆಕ್ ನಡುವಿನ ರಹಸ್ಯ ಒಪ್ಪಂದ, ರಾಯಲ್ಟಿ ಹಣದಲ್ಲಿ ಭಾರಿ ಗೋಲ್‌ಮಾಲ್!

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ಕೊವ್ಯಾಕ್ಸಿನ್ ದರೋಡೆ? ಕೇಂದ್ರ ಸರ್ಕಾರ ಮತ್ತು ಭಾರತ್ ಬಯೋಟೆಕ್ ನಡುವಿನ ರಹಸ್ಯ ಒಪ್ಪಂದ, ರಾಯಲ್ಟಿ ಹಣದಲ್ಲಿ ಭಾರಿ ಗೋಲ್‌ಮಾಲ್!

ಕೊವ್ಯಾಕ್ಸಿನ್ ದರೋಡೆ? ಕೇಂದ್ರ ಸರ್ಕಾರ ಮತ್ತು ಭಾರತ್ ಬಯೋಟೆಕ್ ನಡುವಿನ ರಹಸ್ಯ ಒಪ್ಪಂದ, ರಾಯಲ್ಟಿ ಹಣದಲ್ಲಿ ಭಾರಿ ಗೋಲ್‌ಮಾಲ್!

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada