ಬೆಂಗಳೂರು: ಕರ್ನಾಟಕದ ವಿವಿಧ ವಿಶ್ವವಿದ್ಯಾನಿಲಯಗಳ ವ್ಯಾಪ್ತಿಯ ಸಂಗ್ರಹದಲ್ಲಿರುವ ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ಡಿಜಿಟಲೀಕರಣಗೊಳಿಸುವ(digitization) ಬಗ್ಗೆ ರಾಜ್ಯ ಸರ್ಕಾರದಿಂದ ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಸೂಚನಾ ಪತ್ರ ಹೊರಡಿಸಲಾಗಿದ್ದು, ರಾಜ್ಯದಲ್ಲಿರುವ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕುರಿತಂತೆ ಮಾಹಿತಿಗಳನ್ನು ನೀಡುವಂತೆ ಕೋರಲಾಗಿದೆ.

ಈ ಬಗ್ಗೆ ಪತ್ರದಲ್ಲಿ ವಿವರಿಸಿರುವ ಸರ್ಕಾರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು, ಜ್ಞಾನಭಾರತ್ ಮಿಷನ್ ಅಡಿಯಲ್ಲಿ ಭಾರತ ದೇಶಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳನ್ನು ಸಮೀಕ್ಷೆಯನ್ನು ಕೈಗೊಂಡು. ಇಂದಿನ ತಂತ್ರಜ್ಞಾನ ಬಳಸಿಕೊಂಡು ಸಂರಕ್ಷಣೆ ಮತ್ತು ಡಿಜಿಟಲೀಕರಣಗೊಳಿಸುವ ಮೂಲಕ ಭವಿಷ್ಯದ ಪೀಳಿಗೆಗೆ ಅವುಗಳ ಜ್ಞಾನ ಸಂಪತ್ತಿನ ಸಂರಕ್ಷಣೆ ಮತ್ತು ಬಳಕೆಗೆ ಈ ಕೆಳಕಂಡಂತೆ ಪರಂಪರೆ ಮತ್ತು ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ಡಿಜಿಟಲೀಕರಣ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮಾನ್ಯ ಪ್ರಧಾನ ಮಂತ್ರಿಗಳ ಅಧ್ಯಕ್ಷತೆಯಲ್ಲಿ 5ನೇ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಈ ವಿಷಯವಾಗಿ ಚರ್ಚಿಸಲಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕುರಿತಂತೆ ಮಾಹಿತಿ ನೀಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪತ್ರದಲ್ಲಿರುವ ವಿವರಗಳೇನು..?
*ರಾಷ್ಟ್ರೀಯ ಸಮೀಕ್ಷೆಯ ಮೂಲಕ ರಾಜ್ಯಗಳಲ್ಲಿರುವ ಹಸ್ತಪ್ರತಿಗಳ ದಾಖಲೀಕರಣ ಕೈಗೊಳ್ಳುವ ಸಲುವಾಗಿ Gyan Bharatam Web & mobile portal ಅನ್ನು ಅಭಿವೃದ್ಧಿಗೊಳಿಸಿದೆ.
*ದೇಣಿಗೆಯ ಮೂಲಕ ಹಸ್ತಪ್ರತಿಗಳ ಸಂಗ್ರಹಣೆ ಮಾಡಲು ಉದ್ದೇಶಿಸಿದೆ.
*ರಾಷ್ಟ್ರೀಯ ಹಸ್ತಪ್ರತಿಗಳ ಮಹೋತ್ಸವ ಮತ್ತು ವಸ್ತುಪ್ರದರ್ಶನ ಆಯೋಜನೆ
*Podcast on Indian Manuscripts ಆಯೋಜನೆ
* International Conference on Manuscript Conservation ಆಯೋಜನೆ
* ರಾಜ್ಯಗಳಲ್ಲಿರುವ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣವನ್ನು ರಾಜ್ಯಗಳ ಸಹಭಾಗಿತ್ವದಲ್ಲಿ ಕೈಗೊಳ್ಳಲು ಎಲ್ಲಾ ರೀತಿಯ ನೆರವು ಮತ್ತು ಸಹಕಾರವನ್ನು ನೀಡಲಿರುವರು.

ಭಾರತದ ಹಸ್ತಪತಿ ಸಂಗ್ರಹವು ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ಮಹತ್ವದ್ದಾಗಿದ್ದು, ಸಾವಿರಾರು ವರ್ಷಗಳಿಂದ, ನಮ್ಮ ಪೂರ್ವಜರು ಬೂರ್ಜ ಪತ್ರ, ತಾಳೆಗರಿ, ಕಾಗದ ಹಾಗೂ ಕಡತಗಳ ಬರವಣಿಗೆಯ ದಾಖಲೆಗಳಾಗಿವೆ. ಕರ್ನಾಟಕ ಹಸ್ತಪ್ರತಿಗಳು ಹಳೆಯ ಕನ್ನಡ, ತುಳು, ಮೋದಿ (ತಿಗಳಾರಿ), ದೇವನಾಗರಿ ಮತ್ತು ಉರ್ದು ಸಂಸ್ಕೃತ, ತೆಲುಗು, ಪರ್ಷಿಯನ್, ಇಂಗ್ಲಿಷ್ ಮತ್ತು ಸಂಸ್ಕೃತ ಭಾಷೆಗಳಲ್ಲಿ ಕಂಡುಬರುತ್ತವೆ.
ಹಸ್ತಪ್ರತಿ ಸಂರಕ್ಷಣೆ ಮತ್ತು ಡಿಜಿಟಲೀಕರಣವು ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸುವ ಎರಡು ಪೂರಕ ಪ್ರಕ್ರಿಯೆಗಳಾಗಿದ್ದು, ಈ ಅಮೂಲ್ಯ ಪರಂಪರೆಯನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿರುತ್ತದೆ.
ಹಸ್ತಪ್ರತಿಗಳ ಸಂರಕ್ಷಣೆಯು ಲ್ಯಾಮಿನೇಷನ್, ಆಮೀಕರಣವನ್ನು ಕಡಿಮೆ ಮಾಡುವುದು ಮತ್ತು ಪರಿಸರ ನಿಯಂತ್ರಣಗಳಂತಹ ಬಳಸಿಕೊಂಡು ಭೌತಿಕ ಸಂರಕ್ಷಣೆಯನ್ನು ಒಳಗೊಂಡಿರುತ್ತದೆ. ತಂತ್ರಗಳನ್ನು ಡಿಜಿಟಲೀಕರಣವು ವ್ಯಾಪಕ ಪ್ರವೇಶ, ಹುಡುಕಾಟ ಮತ್ತು ದೀರ್ಘಕಾಲೀನ ಸಂಗ್ರಹಣೆಗಾಗಿ ಡಿಜಿಟಲ್ ಪ್ರತಿಗಳನ್ನು ಸೃಷ್ಟಿಸುತ್ತದೆ, ಭೌತಿಕ ನಿರ್ವಹಣೆಯಿಂದ ದುರ್ಬಲವಾದ ಮೂಲಗಳನ್ನು ರಕ್ಷಿಸುತ್ತದೆ.

ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಒಂದೇ ರಾಷ್ಟ್ರೀಯ ವೇದಿಕೆಯ ಮೂಲಕ ಸಾರ್ವಜನಿಕ ಪ್ರವೇಶವನ್ನು ಒದಗಿಸುವ ಸಲುವಾಗಿ ಡಿಜಿಟಲೀಕರಣಗೊಳಿಸಲು ಮತ್ತು ಸಂಯೋಜಿಸಲು ಕೇಂದ್ರ ಸಂಸ್ಕೃತಿ ಸಚಿವಾಲಯವು ಸಮಗ್ರ ಯೋಜನೆಯನ್ನು ರೂಪಿಸುತ್ತಿದ್ದು, ಪ್ರಾಚೀನ ಹಸ್ತಪ್ರತಿಗಳ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅವುಗಳ ಜ್ಞಾನವನ್ನು ಶಾಶ್ವತವಾಗಿ ಉಳಿಸಲು ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಅಗತ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ತಮ್ಮ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಶೈಕ್ಷಣಿಕ ಸಂಸ್ಥೆಗಳು ಹಾಗೂ ವಸ್ತುಸಂಗ್ರಹಾಲಯಗಳ ಸಂಗ್ರಹದಲ್ಲಿರುವ ಹಸ್ತಪ್ರತಿಗಳನ್ನು ವಿವರಗಳನ್ನು ಮತ್ತು ಇವುಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣಗೊಳಿಸುವ ಮತ್ತು ಡಿಜಿಟಲೀಕರಣಗೊಳಿಸಿರುವ ಮಾಹಿತಿಯನ್ನು ಕಳುಹಿಸಿಕೊಡುವಂತೆ ಪತ್ರದಲ್ಲಿ ತಿಳಿಸಲಾಗಿದೆ.






