ಕರೋನ ಲಾಕ್ ಡೌನ್ ಘೋಷಣೆ ಮಾಡಿದ ದಿನದಿಂದ ಮುಚ್ಚಿದ್ದ ಸಬ್ ರಿಜಿಸ್ಟರ್ ಕಚೇರಿಗಳು ಇವತ್ತಿನಿಂದ (ಸೋಮವಾರ) ಕಾರ್ಯನಿರ್ವಹಿಸಲಿವೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜೂ 7 ರಿಂದ 14 ವರಗೆ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಿದ್ದಾರೆ. ಆದರೆ ರಾಜ್ಯದಲ್ಲಿರುವ 243 ಸಬ್ ರಿಜಿಸ್ಟರ್ ಕಚೇರಿಗಳು ಸೋಮವಾರದಿಂದ ತೆರೆಯಲು ಭಾನುವಾರ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಲಾಕ್ ಡೌನ್ ನಿಂದಾಗಿರು ಆರ್ಥಿಕ ಬಿಕ್ಕಟ್ಟನ್ನು ಸರಿದೂಗಿಸಲು ಈಗಾಗಲೇ ರಫ್ತು ಆದಾರಿದ ಕೈಗಾರಿಕೆಗಳಿಗೆ ಅನುಮತಿ ನೀಡಿದ್ದು. ಸರ್ಕಾರ ಪ್ರಮುಖ ಆದಾಯ ತಂದುಕೊಡುವ ಸಬ್ ರಿಜಿಸ್ಟರ್ ಕಚೇರಿ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಇಂದಿನಿಂದ ರಾಜ್ಯಾದ್ಯಂತ ಬಸ್ ಸಂಚಾರವನ್ನು ಆರಂಭಿಸಲಾಗಿದೆ. ಇಂದಿನಿಂದ ಕೈಗಾರಿಕೆಗಳಿಗೆ ಲಾಕ್ಡೌನ್ ನಿಯಮದಿಂದ ವಿನಾಯಿತಿ ನೀಡಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲು ಸೂಚನೆ ನೀಡಲಾಗಿದೆ. ಈ ಮೂಲಕ ಒಂದು ತಿಂಗಳಿನಿಂದ ಸ್ಥಗಿತಗೊಂಡಿದ್ದ ಆರ್ಥಿಕ ಚಟುವಟಿಕೆಗಳು ಕರ್ನಾಟಕದಲ್ಲಿ ಮತ್ತೆ ಚುರುಕು ಪಡೆದಿವೆ.
ಭಾನುವಾರದ ವರದಿಯಂತೆ 12,209 ಹೊಸ ಪ್ರಕರಣ ದಾಖಲಾಗಿದೆ. 320 ಸೋಂಕಿತರು ಸಾವನ್ನಪ್ಪಿದ್ದಾರೆ.