• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕರ್ನಾಟಕ ಸರ್ಕಾರದ ವಿನೂತನ ಯೋಜನೆ, ತೆರೆಯಲಿದೆ ಜಾಗತಿಕ ಶಿಕ್ಷಣದ ಹೆಬ್ಬಾಗಿಲು

ಪ್ರತಿಧ್ವನಿ by ಪ್ರತಿಧ್ವನಿ
August 13, 2025
in Top Story, ಕರ್ನಾಟಕ, ದೇಶ, ವಿದೇಶ, ಸ್ಟೂಡೆಂಟ್‌ ಕಾರ್ನರ್
0
ಕರ್ನಾಟಕ ಸರ್ಕಾರದ ವಿನೂತನ ಯೋಜನೆ, ತೆರೆಯಲಿದೆ ಜಾಗತಿಕ ಶಿಕ್ಷಣದ ಹೆಬ್ಬಾಗಿಲು
Share on WhatsAppShare on FacebookShare on Telegram

ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ವಿಶೇಷ ಮೇಳ

ADVERTISEMENT

ಬೆಂಗಳೂರು, ಆಗಸ್ಟ್ 13: ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ.

ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ‌ ಸರ್ಕಾರದ ಹೊಸ ಯೋಜನೆಯಿಂದ. ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮವರ್ಗದ ಹಿನ್ನೆಲೆಯ ವಿದ್ಯಾರ್ಥಿಗಳು ಸಹ ಈಗ ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಯಾವುದೇ ತೊಂದರೆಯಿಲ್ಲದೇ ಪಡೆಯಬಹುದಾಗಿದೆ.

ಕೌಶಲ್ಯ ಅಭಿವೃದ್ಧಿ ಇಲಾಖೆ ಅಡಿಯ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ) ಆಗಸ್ಟ್ 17 ರ ಭಾನುವಾರ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ಅಂತಾರಾಷ್ಟ್ರೀಯ ವಿದೇಶದಲ್ಲಿ ಅಧ್ಯಯನ ಮೇಳ – 2025 ಅನ್ನು ಆಯೋಜಿಸಿದೆ.

Assembly session:  ಬಿಜೆಪಿ ನಾಯಕರ ವಿರುದ್ಧ ಸ್ಫೀಕರ್‌ ಗರಂ..! #lakshmihebbalkar #bjp #siddaramaiah

ಈ ವಿಶೇಷ ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಸಂಸ್ಥೆಗಳು ವಿಶ್ವದ ಟಾಪ್ 500 ರಲ್ಲಿ ಸ್ಥಾನ ಪಡೆದಿವೆ.

ಈ ಕುರಿತು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ಹೆಚ್ಚಿನ ಮಾಹಿತಿ ನೀಡಿದರು.

“ಸಮಾಜದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನ ಮಾಡುವ ಅವಕಾಶವನ್ನು ಒದಗಿಸಲಾಗುವುದು. ಇದೇ ಮೊದಲ ಬಾರಿಗೆ ಈ ರೀತಿಯ ಯೋಜನೆಯನ್ನು ದೇಶದಲ್ಲಿ ಜಾರಿಗೆ ತರಲಾಗುತ್ತಿದೆ” ಎಂದು ತಿಳಿಸಿದರು.

ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಇದು “ಜಾಗತಿಕ ಶಿಕ್ಷಣದ ಹೆಬ್ಬಾಗಿಲು” ಎಂದು ಸಚಿವರು ತಿಳಿಸಿದರು.

Assembly Session: ಡಿಕೆಗೆ ಮುನಿರತ್ನ ಸವಾಲ್​- ಒಂದೇ ಮಾತಲ್ಲಿ ಮುನಿರತ್ನ ಬಾಯಿ ಮುಚ್ಚಿಸಿದ ಡಿಕೆ #pratidhvani

ವಿದ್ಯಾರ್ಥಿಗಳು ವಿದೇಶದಲ್ಲಿ ವ್ಯಾಸಂಗ ಮಾಡಲು ಭಾರತದಿಂದ ತೆರಳಿದ ನಂತರ ಅವರಿಗೆ ಎಲ್ಲ ರೀತಿಯ ಬೆಂಬಲ ಒದಗಿಸುವುದು ನಮ್ಮ ಗುರಿಯಾಗಿದೆ. ಈ ಸರ್ಕಾರಿ ಬೆಂಬಲಿತ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಹೆಚ್ಚು ಆಪ್ತವಾಗಿರಲಿದೆ. ಶೈಕ್ಷಣಿಕ ಪ್ರಗತಿ ಮತ್ತು ಕಾನೂನು ನೆರವು ಎಲ್ಲವೂ ದೊರೆಯಲಿದೆ ಎಂದು ಸಚಿವರು ವಿವರಿಸಿದರು.

ಈ ಎಕ್ಸ್‌ಪೋದಲ್ಲಿ ಹೆಚ್ಚು ವಿಶ್ವಾಸಾರ್ಹತೆ ಮತ್ತು ಪಾರದರ್ಶಕತೆ ನೀಡುತ್ತದೆ. ವಿಶ್ವವಿದ್ಯಾಲಯದ ಆಯ್ಕೆ, ಏಜೆನ್ಸಿ ಶುಲ್ಕವಿಲ್ಲದೆ ಉಚಿತ ಮಾರ್ಗದರ್ಶನವನ್ನು ನಾವು ನೀಡುತ್ತೇವೆ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದರು.

ಎಕ್ಸ್‌ಪೋದ ಪ್ರಮುಖ ಅಂಶಗಳು

ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ಒನ್-ಆನ್-ಒನ್ ಸೆಷನ್‌; ಸ್ಪಾಟ್ ವಿದ್ಯಾರ್ಥಿವೇತನಗಳು ಮತ್ತು ಅರ್ಹತಾ ಮೌಲ್ಯಮಾಪನಗಳು; ವೀಸಾ ಪ್ರಕ್ರಿಯೆ, ಹಣಕಾಸು ಯೋಜನೆ, ಆರೋಗ್ಯ ವಿಮೆ, ಭಾಷಾ ಪ್ರಾವೀಣ್ಯತೆ ಮತ್ತು ಇತರೆ ಮಾರ್ಗದರ್ಶನ.

ಆಸ್ಟ್ರೇಲಿಯಾ, ಯುನೈಟೆಡ್‌ ಕಿಂಗ್‌ಡಮ್‌, ಅಮೆರಿಕ, ಐರ್ಲೆಂಡ್, ನ್ಯೂಜಿಲೆಂಡ್ ಮತ್ತು ಮಧ್ಯಪ್ರಾಚ್ಯ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಇರಲಿದ್ದಾರೆ.

ಎಕ್ಸ್‌ಪೋದಲ್ಲಿ ಭಾಗವಹಿಸಲು http://studyabroad.ksdckarnataka.com ನಲ್ಲಿ ನೋಂದಾಯಿಸಿಕೊಳ್ಳಬಹುದು

ಪ್ರಮುಖ ವಿಶ್ವವಿದ್ಯಾಲಯಗಳು ಮತ್ತು ಕೊಡುಗೆಗಳು

  • ಬ್ಯಾಂಗೋರ್ ವಿಶ್ವವಿದ್ಯಾಲಯ (ಯುಕೆ): ₹3–5 ಲಕ್ಷದವರೆಗಿನ ವಿದ್ಯಾರ್ಥಿವೇತನ, ಒಂದು ಆರ್ಥಿಕ ದರ್ಜೆಯ ವಿಮಾನ ಟಿಕೆಟ್, ಜೊತೆಗೆ ಎರಡು 50% ಬೋಧನಾ ಶುಲ್ಕ ವಿದ್ಯಾರ್ಥಿವೇತನಗಳು
  • ಉತ್ತರ ಟೆಕ್ಸಾಸ್ ವಿಶ್ವವಿದ್ಯಾಲಯ (ಅಮೆರಿಕ): ₹8–10 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು
  • ಜೇಮ್ಸ್ ಕುಕ್ ವಿಶ್ವವಿದ್ಯಾಲಯ (ಆಸ್ಟ್ರೇಲಿಯಾ): ₹8–10 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು
  • ಕರ್ಟಿನ್ ವಿಶ್ವವಿದ್ಯಾಲಯ (ಸಿಂಗಾಪುರ): ₹5 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು
  • ಮುರ್ಡೋಕ್ ದುಬೈ (ಅಮೆರಿಕ): ₹5 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು
  • GISMA ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ (ಜರ್ಮನಿ): ₹10 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು
Tags: average to topperday in the life of an ai engineerdhruv rathee shortseducationgovernment funding for startupsgovernment incubator supporthow to become cloud architecthow to get startup fundinghow to record video with android phonehow to remember what you studyhow to start online classeshow to start online teachinghow to start online teaching classeshow to study effectivelyinnovationstrategy to studywhat to learn for cloud computing
Previous Post

ಕರಳೆ ಸಿನಿಮಾ ತಂಡದಿಂದ ಐ ಫೋನ್ ಉಡುಗೊರೆ

Next Post

ಸಣ್ಣ ಉಕ್ಕು ಕ್ಷೇತ್ರದ ಕ್ಷಮತೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ

Related Posts

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?
ಇದೀಗ

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

by ಪ್ರತಿಧ್ವನಿ
January 18, 2026
0

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 12ರ ಗ್ರ್ಯಾಂಡ್‌ ಫಿನಾಲೆಗೆ ಕ್ಷಣಗಣನೆ ಶುರುವಾಗಿದ್ದು, ವಿನ್ನರ್‌ ಯಾರಾಗಲಿದ್ದಾರೆ ಎಂಬುವುದು ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಸ್ಪರ್ಧಿಗಳ ಅಭಿಮಾನಿಗಳು...

Read moreDetails
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
Next Post
ಸಣ್ಣ ಉಕ್ಕು ಕ್ಷೇತ್ರದ ಕ್ಷಮತೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ

ಸಣ್ಣ ಉಕ್ಕು ಕ್ಷೇತ್ರದ ಕ್ಷಮತೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada