• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

Covid-19: ಸ್ವಂತ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಸರ್ಕಾರದಿಂದ ಅನುಮತಿ

by
April 23, 2021
in ಕರ್ನಾಟಕ
0
Covid-19: ಸ್ವಂತ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಸರ್ಕಾರದಿಂದ ಅನುಮತಿ
Share on WhatsAppShare on FacebookShare on Telegram

ರಾಜ್ಯದಲ್ಲಿ ಕರೋನಾ ಸೋಂಕಿನ ತೀವ್ರತೆ ಹೆಚ್ಚಾಗಿರುವುದರಿಂದ ಸಾವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ. ಈಗ ಮೃತರ ಅಂತ್ಯಸಂಸ್ಕಾರಕ್ಕೂ ಸ್ಥಳಾವಕಾಶದ ಕೊರತೆ ಉಂಟಾಗಿರುವುದು ನಿಜಕ್ಕೂ ಆತಂಕಕಾರಿಯಾಗಿದೆ. ಬೆಂಗಳೂರು ನಗರದ ಪ್ರಮುಖ ಚಿತಾಗಾರಗಳಲ್ಲಿ ಬಿಡುವಿಲ್ಲದೇ ಅಂತ್ಯಸಂಸ್ಕಾರಗಳು ನಡೆಯುತ್ತಿವೆ. ಆದರೂ ಮೃತರ ದೇಹಗಳು ಶವಾಗಾರದ ಮುಂದೆ ಸಾಲುಗಟ್ಟಿ ನಿಂತಿವೆ.

ADVERTISEMENT

ಕೋವಿಡ್‌ನಿಂದ ಮೃತಪಟ್ಟವರಿಗೆ ಗೌರವಯುತ ಅಂತ್ಯಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯೂ ಮಾಡಿಲ್ಲ ಎಂದು ಜೆಡಿಎಸ್‌ ನಾಯಕ ಹೆಚ್‌ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೂ ಮೊದಲು ಇದೇ ರೀತಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್‌ ಅವರು ಕೂಡಾ ಆರೋಪವನ್ನು ಮಾಡಿದ್ದರು. ಇದು ಸರ್ಕಾರದ ವೈಫಲ್ಯ ಎಂದು ಕಿಡಿ ಕಾರಿದ್ದರು.

ಈಗ ಎಚ್ಚೆತ್ತುಕೊಂಡ ಸರ್ಕಾರ ಬೆಂಗಳೂರು ನಗರದ ಆಸುಪಾಸಿನಲ್ಲಿ ಅಂತ್ಯಸಂಸ್ಕಾರಕ್ಕೆ ಸ್ಥಳವನ್ನು ಹುಡುಕುತ್ತಿದೆ. ತಾವರೆಕೆರೆ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ಸ್ಮಶಾನದ ಸಿದ್ದತೆ ಕಾರ್ಯವನ್ನು ಕಂದಾಯ ಸಚಿವ ಆರ್‌ ಅಶೋಕ್‌ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಗುರುವಾರ ರಾತ್ರಿ ಪರಿಶೀಲಿಸಿದ್ದಾರೆ.

50 ಎಕರೆ ಪ್ರದೇಶದಲ್ಲಿ ಏಕಕಾಲಕ್ಕೆ 20 ಶವಗಳನ್ನು ದಹನ ಮಾಡುವ ಸಾಮರ್ಥ್ಯದ ಸ್ಮಶಾನ ನಿರ್ಮಾಣವಾಗುತ್ತಿದೆ. 100 ಟನ್‌ಗೂ ಅಧಿಕ ಪ್ರಮಾಣದ ಕಟ್ಟಿಗೆಯನ್ನು ಸಂಗ್ರಹಿಸಿ ಇಡಲಾಗಿದ್ದು, ಬೋರ್‌ವೆಲ್‌ ಸೇರಿದಂತೆ ಇತರೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.

ಸ್ವಂತ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಅನುಮತಿ:

ಮಾಧ್ಯಮಗಳೊಂದಿಗೆ ಮಾತನಾಡಿರುವ ಕಂದಾಯ ಸಚಿವ ಆರ್‌ ಅಶೋಕ್‌ ಅವರು ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಲು ಸ್ವಂತ ತೋಟ, ಜಮೀನಿನಲ್ಲೂ ಅನುಮತಿ ನೀಡಲಾಗಿದೆ ಎಂದಿದ್ದಾರೆ.

“ಕೋವಿಡ್‌ ಮಾರ್ಗಸೂಚಿಗಳನ್ನು ಪಾಲನೆ ಮಾಡಿ ಅಂತ್ಯಸಂಸ್ಕಾರ ನಡೆಸಲು ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ,” ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನ ಸುತ್ತಮುತ್ತಲಿನ ಸುಮಾರು 20 ಕಿಲೋಮೀಟರ್‌ ವ್ಯಾಪ್ತಿಯ ಜನರು ಶವ ಸಂಸ್ಕಾರಕ್ಕೆಂದು ನಗರಕ್ಕೆ ಬರುತ್ತಿದ್ದಾರೆ. ಆ ಕಾರಣದಿಂದಾಗಿ ಮೃತದೇಹಗಳ ಸಂಖ್ಯೆ ದಿಢೀರನೆ ಹೆಚ್ಚಾಗಿದೆ, ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Previous Post

ಒಂದೇ ಲಸಿಕೆಯನ್ನು ವಿವಿಧ ದರಗಳಲ್ಲಿ ಮಾರುತ್ತಿರುವ ಕೇಂದ್ರದ ಉದ್ದೇಶವೇನು?: ಮಮತಾ ಬ್ಯಾನರ್ಜಿ ಪ್ರಶ್ನೆ

Next Post

ಹೆಮ್ಮೆಯಿಂದ ನೆನೆಯಬಹುದಾದ ಡಾ. ರಾಜ್

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಹೆಮ್ಮೆಯಿಂದ ನೆನೆಯಬಹುದಾದ ಡಾ. ರಾಜ್

ಹೆಮ್ಮೆಯಿಂದ ನೆನೆಯಬಹುದಾದ ಡಾ. ರಾಜ್

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada