ಹನ್ನೊಂದು ವರ್ಷಗಳಿಂದ ಸೌಜನ್ಯಾ ಪ್ರಕರಣಕ್ಕೆ ನ್ಯಾಯ ಸಿಗುವಂತೆ ಬೆನ್ನು ಬಿಡದೆ ಹೋರಾಡುತ್ತಿರುವ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 1) ಖಡಕ್ ಎಚ್ಚರಿಕೆಯನ್ನು ನೀಡಿದೆ.
![ಮಹೇಶ್ ಶೆಟ್ಟಿ ತಿಮರೋಡಿ](https://pratidhvani.com/wp-content/uploads/2023/09/handa-714x1024.jpeg)
ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶಿಸಿದೆ. ಹಲವು ಸಭೆ, ಪ್ರತಿಭಟನೆಗಳಲ್ಲಿ ಹೆಗ್ಗಡೆ ಕುಟುಂಬ ಹಾಗೂ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅವಹೇಳನ ಹೇಳಿಕೆ ಹಿನ್ನಲೆ ಅವಹೇಳನಕಾರಿ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶಿಸಿದೆ.
ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಸರಕಾರ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಈ ಬಗ್ಗೆ ಕೋರ್ಟ್ ಆದೇಶವನ್ನು ನೀಡಿದೆ. ಕೋರ್ಟ್ ಆದೇಶ ಉಲ್ಲಂಘಿಸದಂತೆ ಮಹೇಶ್ ಶೆಟ್ಟಿಯವರಿಗೆ ಹೈಕೋರ್ಟ್ ಎಚ್ಚರಿಕೆಯನ್ನು ನೀಡಿದೆ