ಮಹಾರಾಷ್ಟ್ರ ಹಾಗೂ ಕರ್ನಾಟಕ ನಡುವಿನ ಗಡಿ ವಿವಾದ ಮತ್ತಷ್ಟು ಕಾವು ಪಡೆಯತೊಡಗಿದೆ. ಕರ್ನಾಟಕದ ಗಡಿಯಲ್ಲಿನ 865 ಹಳ್ಳಿಗಳ ಒಂದಿಂಚೂ ಭೂಮಿಯನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸವಾಲು ಹಾಕಿದ್ದಾರೆ.
ಈ ಕುರಿತು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾತನಾಡಿರುವ ಅವರು, “ಕರ್ನಾಟಕ ನಮಗೆ ಸವಾಲು ಹಾಕಬಾರದು. ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಸೇರಿದಂತೆ 865 ಹಳ್ಳಿಗಳ ಒಂದು ಇಂಚು ಭೂಮಿಯನ್ನು ನಾವು ಬಿಟ್ಟುಕೊಡುವುದಿಲ್ಲ. ಅದಕ್ಕಾಗಿ ನಾವು ಕಾನೂನು ರೀತಿಯಲ್ಲಿ ಏನು ಬೇಕಾದರೂ ಮಾಡಲು ಸಿದ್ಧ. ಗಡಿ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದ ಒಂದಿಂಚೂ ಭೂಮಿಯನ್ನು ಬಿಟ್ಟುಕೊಡುವ ಪ್ರಶ್ನೆ ಇಲ್ಲ ಎಂದು ಬೆಳಗಾವಿಯಲ್ಲಿ ಹೇಳಿದ ಬಳಿಕ, ಮತ್ತೆ ಮಹಾರಾಷ್ಟ್ರ ಮುಖ್ಯಮಂತ್ರಿ ಮಹಾರಾಷ್ಟ್ರದ ಅಧಿವೇಶನದಲ್ಲಿ ಈ ಮಾತು ಹೇಳಿದ್ದಾರೆ.
ಮೌಂಟ್ ಎವರೆಸ್ಟ್ ನಲ್ಲಿ ರಾಶಿ ರಾಶಿ ಕಸ ! ಹಿಮದಲ್ಲಿ ಹುದುಗಿಹೋದ ಚಾರಣಿಗರು !
ಪ್ರಪಂಚದ ಅತಿ ಎತ್ತರದ ಪರ್ವತ ಮೌಂಟ್ ಎವರೆಸ್ಟ್ (Mount everest) ಈಗ ಕಸದ ಮಡುವಿನಲ್ಲಿದೆ ಭೂಮಿಯ ಮೇಲೆ ಕಡಲ ಆಳದಲ್ಲಿ ಪ್ಲಾಸ್ಟಿಕ್ (Plastic) ಮತ್ತು ಕಸ ಪತ್ತೆಯಾಗಿದ್ದನ್ನು...
Read more