• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಗುತ್ತಿಗೆದಾರರಿಗೆ 15ಸಾವಿರ ಕೋಟಿಗೂ ಹೆಚ್ಚು ಬಿಲ್‌ ಪಾವತಿಸಲು ಬಾಕಿ ಉಳಿಸಿಕೊಂಡ ರಾಜ್ಯ ಸರಕಾರ

ಪ್ರತಿಧ್ವನಿ by ಪ್ರತಿಧ್ವನಿ
July 12, 2021
in ಕರ್ನಾಟಕ
0
ಗುತ್ತಿಗೆದಾರರಿಗೆ 15ಸಾವಿರ ಕೋಟಿಗೂ ಹೆಚ್ಚು ಬಿಲ್‌ ಪಾವತಿಸಲು ಬಾಕಿ ಉಳಿಸಿಕೊಂಡ ರಾಜ್ಯ ಸರಕಾರ
Share on WhatsAppShare on FacebookShare on Telegram

ʼಆರ್ಥಿಕ ಬಿಕ್ಕಟ್ಟಿನ ಕಾರಣದಿಂದ ರಾಜ್ಯ ಸರಕಾರವು ₹ 15 ಸಾವಿರ ಕೋಟಿಗೂ ಹೆಚ್ಚು ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಬಿಲ್ ಪಾವತಿಸದೇ ಬಾಕಿ ಉಳಿಸಿಕೊಂಡಿದೆʼ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿದೆ.

ADVERTISEMENT

ʼಬೃಹತ್ ಬೆಂಗಳೂರು ಮಹಾನಗರಪಾಲಿಕೆ (ಬಿಬಿಎಂಪಿ) ಮತ್ತು ಜಲ ಸಂಪನ್ಮೂಲ ಇಲಾಖೆಯಲ್ಲಿ ಅಂದಾಜು ತಲಾ ₹ 3,000 ಕೋಟಿ ,ಲೋಕೋಪಯೋಗಿ ಇಲಾಖೆಯಲ್ಲಿ₹ 4,500 ಕೋಟಿಯಷ್ಟು ಬಿಲ್‌ ಪಾವತಿಸಲು ಬಾಕಿ ಇದೆʼ  ಎಂದು ಮೂಲಗಳು ತಿಳಿಸಿದೆ.

ʼ2019 ರ ಜುಲೈ ತಿಂಗಳಲ್ಲಿ ಲೋಕೋಪಯೋಗಿ ಇಲಾಖೆಯು ಗುತ್ತಿಗೆದಾರರಿಗೆ ಪಾವತಿಸಬೇಕಾದ ಮೊತ್ತ ಸುಮಾರು ₹ 1,300 ಕೋಟಿಯಿಂದ ₹ 1,500 ಕೋಟಿಯಷ್ಟಿತ್ತು. ಕಳೆದ ಎರಡು ವರ್ಷಗಳಲ್ಲಿ ಈ ಮೊತ್ತ ಮೂರು ಪಟ್ಟು ಹೆಚ್ಚಿದೆ. ಅತೀ ಹೆಚ್ಚು ಮೊತ್ತ ಪಾವತಿಗೆ ಬಾಕಿ ಇರುವ ಇಲಾಖೆಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಕೂಡಾ ಸೇರಿದೆʼ ಎಂದು ತಿಳಿಸಿದೆ.

ʼಕುಮಾರಸ್ವಾಮಿ ನೇತೃತೃತ್ವದ ಜೆಡಿಎಸ್‌– ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಪತನಗೊಳ್ಳುವ ವೇಳೆಗೆ ವಿವಿಧ ಕಾಮಗಾರಿಗಳನ್ನು ನಿರ್ವಹಿಸಿದ ಗುತ್ತಿಗೆದಾರರ ಬಾಕಿ ಮೊತ್ತ ₹ 4,500 ಕೋಟಿಯಿಂದ ₹ 5,000 ಕೋಟಿಯಷ್ಟಿತ್ತು. ನಂತರದ ದಿನಗಳಲ್ಲಿ ಈ ಮೊತ್ತ ಹೆಚ್ಚುತ್ತಲೇ ಹೋಗಿದೆ. ಅಲ್ಲದೆ, ಕೋವಿಡ್‌ ಮತ್ತು ಲಾಕ್‌ಡೌನ್‌ ಕಾರಣ ವರಮಾನದಲ್ಲಿ ಕುಸಿತ ಉಂಟಾಗಿದೆ. ಅದರಲ್ಲೂ ಕಳೆದ ಎರಡು ಆರ್ಥಿಕ ವರ್ಷಗಳಲ್ಲಿ ಭಾರಿ ಕೊರತೆ ಆಗಿದೆ. ಹೀಗಾಗಿ, ಬಿಲ್‌ ಪಾವತಿಗೆ ಉಳಿದ ಮೊತ್ತವೂ ಏರಿಕೆ ಆಗಿದೆʼ ಎಂದು ವಿವರಿಸಿದೆ..

ʼಹಿಂದೆಂದೂ ಇಷ್ಟೊಂದು ದೊಡ್ಡ ಮೊತ್ತ  ಬಾಕಿ ಇರಲಿಲ್ಲ. ‘ಬಿಲ್‌ ಬಾಕಿ ಸಾಮಾನ್ಯವಾಗಿದ್ದು, ಪಾವತಿಗೆ ಉಳಿದುಕೊಂಡಿರುವ ಮೊತ್ತವನ್ನು ಪಾವತಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ. 2018–19 ರಿಂದಲೇ ಬಿಲ್‌ ಬಾಕಿ ಉಳಿದುಕೊಂಡಿದೆ’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಪ್ರತಿನಿಧಿಗಳು ತಿಳಿಸಿದ್ದಾರೆ. ʼಈ ಹಿಂದಿನ ವರ್ಷಗಳಲ್ಲಿ ಬಿಲ್‌ ಪಾವತಿ ವಿಳಂಬವಾಗುತ್ತಿದ್ದರೂ ಇಷ್ಟೊಂದು ದೊಡ್ಡ ಪ್ರಮಾಣಕ್ಕೆ ತಲುಪಿದ ಬಗ್ಗೆ ನನಗಂತೂ ಗೊತ್ತಿಲ್ಲ’ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ‘ಬಿಲ್‌ಗಳು ಪಾವತಿಗೆ ಬಾಕಿ ಇದ್ದರೂ, ಇದು ಸಹಜ ಪ್ರಕ್ರಿಯೆ. ಪಾವತಿಗೆ ಬಾಕಿ ಇರುವ ₹ 15 ಸಾವಿರ ಕೋಟಿಯಲ್ಲಿ ಬಹುತೇಕ ಬಿಲ್‌ಗಳು ಹಿಂದಿನ ಸರ್ಕಾರದ ಅವಧಿಯದ್ದು. ಎಲ್ಲ ಬಾಕಿ ಬಿಲ್‌ಗಳನ್ನು ನಾವು ಪಾವತಿಸುತ್ತಿದ್ದೇವೆ. ವಿವಿಧ ಮೂಲಗಳಿಂದ ಬರಬೇಕಾಗಿದ್ದ ರಾಜ್ಯದ ವರಮಾನದಲ್ಲಿ ಕುಂಠಿತವಾಗಿದೆ. ಇದು  ಆರ್ಥಿಕ ಪರಿಸ್ಥಿತಿಯ ಮೇಲೆ ಪರಿಣಾಮ ಬೀರಿದ್ದು, ಬಿಲ್‌ ಪಾವತಿಯ ಮೇಲೆಯೂ ಪರಿಣಾಮ ಬೀರಿದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.



Tags: BBMPBS Yeddyurappagovt of karnatakaLakshman Savadi
Previous Post

ಬಿಯಾಂಡ್ ಬೆಂಗಳೂರು ಮೂಲಕ ಹುಬ್ಬಳ್ಳಿಯಲ್ಲಿ ಹೆಚ್ಚು ಕೈಗಾರಿಕೆಗಳ ಸ್ಥಾಪನೆ: ಡಿಸಿಎಂ

Next Post

ರಜನಿಕಾಂತ; ಹೆಸರಿಗೆ ಸೂಪರ್ ಸ್ಟಾರ್, ರಾಜಕೀಯದಲ್ಲಿ ಮಹಾ ಪುಕ್ಕಲ

Related Posts

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
0

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು( Bhagavad Gita) ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

Read moreDetails
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

December 17, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

December 17, 2025
Next Post
ರಜನಿಕಾಂತ; ಹೆಸರಿಗೆ ಸೂಪರ್ ಸ್ಟಾರ್, ರಾಜಕೀಯದಲ್ಲಿ ಮಹಾ ಪುಕ್ಕಲ

ರಜನಿಕಾಂತ; ಹೆಸರಿಗೆ ಸೂಪರ್ ಸ್ಟಾರ್, ರಾಜಕೀಯದಲ್ಲಿ ಮಹಾ ಪುಕ್ಕಲ

Please login to join discussion

Recent News

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
Top Story

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada