• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗುತ್ತಿಗೆದಾರರಿಗೆ 15ಸಾವಿರ ಕೋಟಿಗೂ ಹೆಚ್ಚು ಬಿಲ್‌ ಪಾವತಿಸಲು ಬಾಕಿ ಉಳಿಸಿಕೊಂಡ ರಾಜ್ಯ ಸರಕಾರ

ಪ್ರತಿಧ್ವನಿ by ಪ್ರತಿಧ್ವನಿ
July 12, 2021
in ಕರ್ನಾಟಕ
0
ಗುತ್ತಿಗೆದಾರರಿಗೆ 15ಸಾವಿರ ಕೋಟಿಗೂ ಹೆಚ್ಚು ಬಿಲ್‌ ಪಾವತಿಸಲು ಬಾಕಿ ಉಳಿಸಿಕೊಂಡ ರಾಜ್ಯ ಸರಕಾರ
Share on WhatsAppShare on FacebookShare on Telegram

ʼಆರ್ಥಿಕ ಬಿಕ್ಕಟ್ಟಿನ ಕಾರಣದಿಂದ ರಾಜ್ಯ ಸರಕಾರವು ₹ 15 ಸಾವಿರ ಕೋಟಿಗೂ ಹೆಚ್ಚು ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಬಿಲ್ ಪಾವತಿಸದೇ ಬಾಕಿ ಉಳಿಸಿಕೊಂಡಿದೆʼ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿದೆ.

ADVERTISEMENT

ʼಬೃಹತ್ ಬೆಂಗಳೂರು ಮಹಾನಗರಪಾಲಿಕೆ (ಬಿಬಿಎಂಪಿ) ಮತ್ತು ಜಲ ಸಂಪನ್ಮೂಲ ಇಲಾಖೆಯಲ್ಲಿ ಅಂದಾಜು ತಲಾ ₹ 3,000 ಕೋಟಿ ,ಲೋಕೋಪಯೋಗಿ ಇಲಾಖೆಯಲ್ಲಿ₹ 4,500 ಕೋಟಿಯಷ್ಟು ಬಿಲ್‌ ಪಾವತಿಸಲು ಬಾಕಿ ಇದೆʼ  ಎಂದು ಮೂಲಗಳು ತಿಳಿಸಿದೆ.

ʼ2019 ರ ಜುಲೈ ತಿಂಗಳಲ್ಲಿ ಲೋಕೋಪಯೋಗಿ ಇಲಾಖೆಯು ಗುತ್ತಿಗೆದಾರರಿಗೆ ಪಾವತಿಸಬೇಕಾದ ಮೊತ್ತ ಸುಮಾರು ₹ 1,300 ಕೋಟಿಯಿಂದ ₹ 1,500 ಕೋಟಿಯಷ್ಟಿತ್ತು. ಕಳೆದ ಎರಡು ವರ್ಷಗಳಲ್ಲಿ ಈ ಮೊತ್ತ ಮೂರು ಪಟ್ಟು ಹೆಚ್ಚಿದೆ. ಅತೀ ಹೆಚ್ಚು ಮೊತ್ತ ಪಾವತಿಗೆ ಬಾಕಿ ಇರುವ ಇಲಾಖೆಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಕೂಡಾ ಸೇರಿದೆʼ ಎಂದು ತಿಳಿಸಿದೆ.

ʼಕುಮಾರಸ್ವಾಮಿ ನೇತೃತೃತ್ವದ ಜೆಡಿಎಸ್‌– ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಪತನಗೊಳ್ಳುವ ವೇಳೆಗೆ ವಿವಿಧ ಕಾಮಗಾರಿಗಳನ್ನು ನಿರ್ವಹಿಸಿದ ಗುತ್ತಿಗೆದಾರರ ಬಾಕಿ ಮೊತ್ತ ₹ 4,500 ಕೋಟಿಯಿಂದ ₹ 5,000 ಕೋಟಿಯಷ್ಟಿತ್ತು. ನಂತರದ ದಿನಗಳಲ್ಲಿ ಈ ಮೊತ್ತ ಹೆಚ್ಚುತ್ತಲೇ ಹೋಗಿದೆ. ಅಲ್ಲದೆ, ಕೋವಿಡ್‌ ಮತ್ತು ಲಾಕ್‌ಡೌನ್‌ ಕಾರಣ ವರಮಾನದಲ್ಲಿ ಕುಸಿತ ಉಂಟಾಗಿದೆ. ಅದರಲ್ಲೂ ಕಳೆದ ಎರಡು ಆರ್ಥಿಕ ವರ್ಷಗಳಲ್ಲಿ ಭಾರಿ ಕೊರತೆ ಆಗಿದೆ. ಹೀಗಾಗಿ, ಬಿಲ್‌ ಪಾವತಿಗೆ ಉಳಿದ ಮೊತ್ತವೂ ಏರಿಕೆ ಆಗಿದೆʼ ಎಂದು ವಿವರಿಸಿದೆ..

ʼಹಿಂದೆಂದೂ ಇಷ್ಟೊಂದು ದೊಡ್ಡ ಮೊತ್ತ  ಬಾಕಿ ಇರಲಿಲ್ಲ. ‘ಬಿಲ್‌ ಬಾಕಿ ಸಾಮಾನ್ಯವಾಗಿದ್ದು, ಪಾವತಿಗೆ ಉಳಿದುಕೊಂಡಿರುವ ಮೊತ್ತವನ್ನು ಪಾವತಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ. 2018–19 ರಿಂದಲೇ ಬಿಲ್‌ ಬಾಕಿ ಉಳಿದುಕೊಂಡಿದೆ’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಪ್ರತಿನಿಧಿಗಳು ತಿಳಿಸಿದ್ದಾರೆ. ʼಈ ಹಿಂದಿನ ವರ್ಷಗಳಲ್ಲಿ ಬಿಲ್‌ ಪಾವತಿ ವಿಳಂಬವಾಗುತ್ತಿದ್ದರೂ ಇಷ್ಟೊಂದು ದೊಡ್ಡ ಪ್ರಮಾಣಕ್ಕೆ ತಲುಪಿದ ಬಗ್ಗೆ ನನಗಂತೂ ಗೊತ್ತಿಲ್ಲ’ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ‘ಬಿಲ್‌ಗಳು ಪಾವತಿಗೆ ಬಾಕಿ ಇದ್ದರೂ, ಇದು ಸಹಜ ಪ್ರಕ್ರಿಯೆ. ಪಾವತಿಗೆ ಬಾಕಿ ಇರುವ ₹ 15 ಸಾವಿರ ಕೋಟಿಯಲ್ಲಿ ಬಹುತೇಕ ಬಿಲ್‌ಗಳು ಹಿಂದಿನ ಸರ್ಕಾರದ ಅವಧಿಯದ್ದು. ಎಲ್ಲ ಬಾಕಿ ಬಿಲ್‌ಗಳನ್ನು ನಾವು ಪಾವತಿಸುತ್ತಿದ್ದೇವೆ. ವಿವಿಧ ಮೂಲಗಳಿಂದ ಬರಬೇಕಾಗಿದ್ದ ರಾಜ್ಯದ ವರಮಾನದಲ್ಲಿ ಕುಂಠಿತವಾಗಿದೆ. ಇದು  ಆರ್ಥಿಕ ಪರಿಸ್ಥಿತಿಯ ಮೇಲೆ ಪರಿಣಾಮ ಬೀರಿದ್ದು, ಬಿಲ್‌ ಪಾವತಿಯ ಮೇಲೆಯೂ ಪರಿಣಾಮ ಬೀರಿದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.



Tags: BBMPBS Yeddyurappagovt of karnatakaLakshman Savadi
Previous Post

ಬಿಯಾಂಡ್ ಬೆಂಗಳೂರು ಮೂಲಕ ಹುಬ್ಬಳ್ಳಿಯಲ್ಲಿ ಹೆಚ್ಚು ಕೈಗಾರಿಕೆಗಳ ಸ್ಥಾಪನೆ: ಡಿಸಿಎಂ

Next Post

ರಜನಿಕಾಂತ; ಹೆಸರಿಗೆ ಸೂಪರ್ ಸ್ಟಾರ್, ರಾಜಕೀಯದಲ್ಲಿ ಮಹಾ ಪುಕ್ಕಲ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ರಜನಿಕಾಂತ; ಹೆಸರಿಗೆ ಸೂಪರ್ ಸ್ಟಾರ್, ರಾಜಕೀಯದಲ್ಲಿ ಮಹಾ ಪುಕ್ಕಲ

ರಜನಿಕಾಂತ; ಹೆಸರಿಗೆ ಸೂಪರ್ ಸ್ಟಾರ್, ರಾಜಕೀಯದಲ್ಲಿ ಮಹಾ ಪುಕ್ಕಲ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada